ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ
ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”
ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…
ಕೆ.ಜಿ.ಎಫ್ ಎಂಬ ನೆಲದಲ್ಲಿ, ಚಿನ್ನದ ಅದಿರಿನ ಶೋಧನೆಯ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾರ್ಮಿಕರು ಅನುಭವಿಸಿದ ತಲ್ಲಣಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” (ಕೆಜಿಎಫ್ ಗಣಿಗಳ ತವಕ ತಲ್ಲಣಗಳು) ಕಾದಂಬರಿ ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ
ಅವರೇನಾದರೂ ಅಸೂಯೆಯಿಂದ ನಿಂದಿಸಿದರೆ ನಾನು ಸಿಟ್ಟುಗೊಳ್ಳುವುದಿಲ್ಲ ಮತ್ತೆ ಗುಡ್ಡದ ತರ ಸ್ತಬ್ಧನಾಗುತ್ತೇನೆ. ಮತ್ತೆ ಅವರಿಗೆ ನಿಲುಕದ ಪರ್ವತವಾಗುತ್ತೇನೆ. ಇದು ಇಷ್ಟು ದಿನ ಅವರು ನನ್ನನ್ನು ತಯಾರು ಮಾಡಿದ ರೀತಿಗೆ ನನ್ನ ಪ್ರತಿಭಟನೆ. ಇದರಲ್ಲಿ ಅವರ ರೀತಿಯಲ್ಲಿ ಬದುಕುವುದು ನಾನೆಯಾದರು ಸೋಲುವುದು ಮಾತ್ರ ಅವರು, ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ, ನಾನು ನಿಸರ್ಗದ ತತ್ವಕ್ಕೆ ತಕ್ಕನಾಗಿ ನಾನು ನಿಸರ್ಗವಾಗಿದ್ದೇನೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ “ಓಡುವವನ ಅಂತರಾಳ”
ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ
ಆಕೆಯ ಗಂಡ ಬಂದು ಅಂಗಡಿಯ ಚಾರ್ಜ್ ವಹಿಸಿಕೊಂಡಾಗಲೇ ಡ್ರೈವರ್ ನೋಟ ಕಿತ್ತು ಬಾಳೆ ಹಣ್ಣೊಂದನ್ನು ಸುಲಿದನು. ಪೊಲೀಸ್ ವ್ಯಾನ್ ಹಾಗೂ ಅಂಬ್ಯುಲೆನ್ಸ್ನ ಕೂಗಿಗೆ ಜನರು ಗಾಬರಿಯಾಗಿದ್ದರು. ಕುತೂಹಲದಿಂದ ಆಕೆ ಸಡಿಲವಾದ ಸೆರಗನ್ನು ಹೆಗಲಮೇಲೊಗೆದು ಕುಂಟುತ್ತ ಹೆಜ್ಜೆ ಹಾಕಿದ್ದು, ಆಕೆಯ ಗಂಡನು ಮರಾಠಿಯಲ್ಲೇನೋ ಹೇಳಿದ್ದು, ಅರ್ಥೈಸದೆ ಡ್ರೈವರ್ ಜನರತ್ತ ಪಾದ ಬೆಳೆಸಿದನು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ “ತೇರಾಮೈಲ್”
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ
ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್ ಬಹುಮಾನ” ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ
ನನಗೆ ಕಾಲವೇ ನಿಂತಂತಾಗಿ ಬಿಟ್ಟಿತ್ತು. ಕೈಕಾಲುಗಳೆಲ್ಲ ತಣ್ಣಗೆ. ಅಣ್ಣನ ಸಾವು ಕಣ್ಣಿಗೆ ಚಿತ್ರ ಕಟ್ಟಿದಂತಾಯಿತು. ಇವನೇನಾಗಿ ಹೋದ? ಮೂರುವರೆ ಲಕ್ಷಕ್ಕೆ ಸಾಯುವಂಥವನಾ? ನಾವ್ಯಾರು ಇರಲಿಲ್ಲವೇ ಅವನಿಗೆ? ಯಾರನ್ನು ನೆನಪಿಸದಷ್ಟು ಬ್ಯಾಂಕಿನ ಕಿರುಕುಳವಿತ್ತಾ? ಆಡಳಿತ ಯಂತ್ರ ಅಧಿಕಾರ ವರ್ಗ ರೈತರ ಸಾವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲವೇ? ರಾಜ್ಯದಲ್ಲಿ ಅದೆಷ್ಟು ರೈತರ ಸಾವುಗಳು? ಅವರ ಕುಟುಂಬಗಳಿಗೆ ಯಾರು ದಿಕ್ಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ “ಕರಕಲಾದ ಅನ್ನದಗುಳು” ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶಾಂತಿ ಅಪ್ಪಣ್ಣ ಕತೆ
ನಾನು ಒಡೆದು ಬಿದ್ದ ವೇಸಿನ ಚೂರನ್ನೆತ್ತಿ ಅದರತ್ತ ಬಲವಾಗಿ ಎಸೆದೆ. ಅದು ಗೋಡೆಗೆ ತಗುಲಿ ಗೋಡೆಯ ಕಣ್ಣಿಂದ ರಕ್ತ ಸೋರತೊಡಗಿತು. ತನ್ನ ಮೇಲೆ ಬೀಳಬಹುದಾಗಿದ್ದ ವೇಸಿನ ಏಟನ್ನು ಸರಕ್ಕನೆ ತಲೆತಿರುಗಿಸಿ ತಪ್ಪಿಸಿಕೊಂಡ ಅದೀಗ ಗಹಗಹಿಸಿ ನಗತೊಡಗಿತು. “ಇದಕ್ಕೇ ನಾ ನಿನ್ನ ಮುಟ್ಠಾಳ ಅಂದದ್ದು. ಹೀಗೆ ಸಣ್ಣ ಸಣ್ಣದಕ್ಕೂ ಓವರ್ ರಿಯಾಕ್ಟ್ ಮಾಡೋದನ್ನ ಮೊದಲು ನಿಲ್ಲಿಸು.”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶಾಂತಿ ಅಪ್ಪಣ್ಣ ಕತೆ “ಬಾಹುಗಳು” ನಿಮ್ಮ ಓದಿಗೆ
ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ
‘ನೀನು ಏನು ಬೇಕಾದರೂ ಮಾಡು, ಆದರೆ ನಿನ್ನ ಅವೆರೆಡನ್ನು ಮಾತ್ರ ಸಾರ್ವಜನಿಕವಾಗಿ ತೋರಿಸಬೇಡ ಎಂದು ಎಷ್ಟೇ ಬೇಡಿಕೊಂಡರೂ ಸಾಕುಂತಲೆ ರೊಚ್ಚಿಗೆದ್ದಾಗಲೆಲ್ಲಾ ಬೇಕಂತಲೇ ಅವುಗಳನ್ನು ದೊಡ್ಡದಾಗಿ ತೋರಿಸಿ ನನ್ನನ್ನು ಬೆಂಕಿಯ ಬಾಣಲೆಯಲ್ಲಿ ಹುರಿಯುತ್ತಿದ್ದಳು. ಅವಳಿಗೆ ನಿಜವಾಗಿಯೂ ಸಿಟ್ಟು ಬಂದಿತ್ತು. ಆಕೆಗೆ ನಾನು ಅಂದರೆ ಬಹಳ ದೊಡ್ಡ ಎಡವಟ್ಟುಗಳ ಒಂದು ದೊಡ್ಡ ಮೊತ್ತ. ಒಂದು ಎಡವಟ್ಟಿನ ನಂತರ ಇನ್ನೊಂದು ಅದರ ನಂತರ ಮತ್ತೊಂದು ಮಗದೊಂದು ನೂರಾ ಒಂದು….
ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಒಂಟಿ ಪಿಶಾಚಿ” ನಿಮ್ಮ ಓದಿಗೆ









