Advertisement

ಸಾಹಿತ್ಯ

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ

read more
ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ

ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ

ಗುಂಡನಿಗೆ ನಿದ್ರೆಯೇ ಬರುತ್ತಿಲ್ಲ. ಆತ ಏನೇನೋ ಯೋಚಿಸುತ್ತಾ ಎಚ್ಚರವಾಗೇ ಇದ್ದಾನೆ. ನಿದ್ದೆ ತಾನೇ ಅವನಿಗೆ ಎಲ್ಲಿಂದ ಬರಬೇಕು? ಅವನ ಮನಸ್ಸಿನ ತುಂಬೆಲ್ಲಾ ಅವನ ಅಪ್ಪ ಅಮ್ಮರೇ ತುಂಬಿಹೋಗಿದ್ದಾರೆ. ಅವನಿಗೆ ಏನನ್ನಿಸಿತೋ ಏನೋ? ಮೆಲ್ಲಗೆ ಎದ್ದು ಮಲಗಿದ್ದ ಅಪ್ಪನನ್ನೇ ಕಣ್ತುಂಬಿಕೊಳ್ಳುತ್ತಾ ಅಪ್ಪನ ಮಟ್ಟಗುಂಜಿನಂತಿದ್ದ ತಲೆಗೂದಲ ಮೇಲೆ ಕೈಯಾಡಿಸುತ್ತಾನೆ. ಅವನ ಚಕ್ಕಳವಾದ ದೇಹ. ಅವನ ನೋವಿನ ಕಾಲು. ಇತ್ತ ತನ್ನ ಮಗ್ಗುಲಲ್ಲೇ ಮಲಗಿದ್ದ ಅವ್ವನನ್ನು ನೋಡುತ್ತಾನೆ.
ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ “ಸುಟ್ಟಿರದೇ ಮೂರ್ ದ್ವಾಸ…” ನಿಮ್ಮ ಓದಿಗೆ

read more
ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ

ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”

read more
ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…

ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…

ಕೆ.ಜಿ.ಎಫ್‌ ಎಂಬ ನೆಲದಲ್ಲಿ, ಚಿನ್ನದ ಅದಿರಿನ ಶೋಧನೆಯ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾರ್ಮಿಕರು ಅನುಭವಿಸಿದ ತಲ್ಲಣಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” (ಕೆಜಿಎಫ್ ಗಣಿಗಳ ತವಕ ತಲ್ಲಣಗಳು) ಕಾದಂಬರಿ ಪ್ರತಿ ಶನಿವಾರಗಳಂದು‌ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

read more
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ

ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ

ಅವರೇನಾದರೂ ಅಸೂಯೆಯಿಂದ ನಿಂದಿಸಿದರೆ ನಾನು ಸಿಟ್ಟುಗೊಳ್ಳುವುದಿಲ್ಲ ಮತ್ತೆ ಗುಡ್ಡದ ತರ ಸ್ತಬ್ಧನಾಗುತ್ತೇನೆ. ಮತ್ತೆ ಅವರಿಗೆ ನಿಲುಕದ ಪರ್ವತವಾಗುತ್ತೇನೆ. ಇದು ಇಷ್ಟು ದಿನ ಅವರು ನನ್ನನ್ನು ತಯಾರು ಮಾಡಿದ ರೀತಿಗೆ ನನ್ನ ಪ್ರತಿಭಟನೆ. ಇದರಲ್ಲಿ ಅವರ ರೀತಿಯಲ್ಲಿ ಬದುಕುವುದು ನಾನೆಯಾದರು ಸೋಲುವುದು ಮಾತ್ರ ಅವರು, ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ, ನಾನು ನಿಸರ್ಗದ ತತ್ವಕ್ಕೆ ತಕ್ಕನಾಗಿ ನಾನು ನಿಸರ್ಗವಾಗಿದ್ದೇನೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ “ಓಡುವವನ ಅಂತರಾಳ”

read more
ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ

ಆಕೆಯ ಗಂಡ ಬಂದು ಅಂಗಡಿಯ ಚಾರ್ಜ್ ವಹಿಸಿಕೊಂಡಾಗಲೇ ಡ್ರೈವರ್ ನೋಟ ಕಿತ್ತು ಬಾಳೆ ಹಣ್ಣೊಂದನ್ನು ಸುಲಿದನು. ಪೊಲೀಸ್ ವ್ಯಾನ್ ಹಾಗೂ ಅಂಬ್ಯುಲೆನ್ಸ್‌ನ ಕೂಗಿಗೆ ಜನರು ಗಾಬರಿಯಾಗಿದ್ದರು. ಕುತೂಹಲದಿಂದ ಆಕೆ ಸಡಿಲವಾದ ಸೆರಗನ್ನು ಹೆಗಲಮೇಲೊಗೆದು ಕುಂಟುತ್ತ ಹೆಜ್ಜೆ ಹಾಕಿದ್ದು, ಆಕೆಯ ಗಂಡನು ಮರಾಠಿಯಲ್ಲೇನೋ ಹೇಳಿದ್ದು, ಅರ್ಥೈಸದೆ ಡ್ರೈವರ್ ಜನರತ್ತ ಪಾದ ಬೆಳೆಸಿದನು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ “ತೇರಾಮೈಲ್”

read more
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ