Advertisement

ಸಾಹಿತ್ಯ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸಾಲಿಗೆ ಹೋಗೋ ಮಕ್ಕಳಿಗಂತೂ ಈ ಕೊಲೆ ಸುದ್ದಿ ತಾವು ನೋಡಿದ ಸಿನೆಮಾ ಕಥಿ ಹಂಗ ಕಂಡಿತು. ಕೆಲವೊಬ್ಬರಂತೂ ‘ಪುಟಾಣಿ ಏಜಂಟ್’ ಆಗಿಬಿಟ್ಟರು. ಕೊಲೆಗಾರರನ್ನು ಹಿಡಿಲಿಕ್ಕೆ ಪೊಲೀಸರು ನಾಯಿ ತೊಗೊಂಡು ಬಂದಾರಂತ, ಅವು ಅಪರಾಧಿಗಳ ವಾಸನಿ ಹಿಡಿದು ಹುಡಿಕಿಕೊಂಡು ಊರು ಹೊರಗ ಹರೀತಿದ್ದ ನದಿ ತನಕ ಹೋಗಿ ನಿಂತವು ಅಂತೆಲ್ಲ ಮಾತಾಡಿಕೊಂಡರು. ಅದೇ ಸಾಲಿಯೊಳಗ ಐದನೇತ್ತಿ ಓದ್ತಿದ್ದ ಪುಟ್ಟಿ ಈ ಮಾತುಗಳನ್ನೆಲ್ಲ ಕೇಳಿಸಿಕೊಂಡಾಗ ಆಕಿಗೆ ಹಿಂದಿನ ರಾತ್ರಿ ಸಬ್ ಇನ್ಸಪೆಕ್ಟರ್ ರವಿ ಅವರ ಮನಿಗೆ ಬಂದಿದ್ದು ನೆನಪಾಯಿತು.
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಶಿಕ್ಷೆ” ನಿಮ್ಮ ಓದಿಗೆ

read more
ಚೈತ್ರ ಬರೆದ ಈ ಭಾನುವಾರದ ಕಥೆ

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ

ಇದೇ ಗುಣವಿಶೇಷಣಗಳೂ ಹಾಗೂ ಅವನ ಅಯಸ್ಕಾಂತದಂತಹ ನಗುವೆ ಸಿಂಧೂಳನ್ನು ಅವನಿಗೆ ಕಚ್ಚಿಕೊಳ್ಳುವಂತೆ ಮಾಡಿದ್ದು. ಮ್ಯಾಗ್ನೆಟ್ಟಿನ ಎರಡು ಧ್ರುವಗಳು ಪರಸ್ಪರ ಆಕರ್ಷಣೆ, ವಿಕರ್ಷಣೆಗೊಳ್ಳುವಂತೆ ಒಮ್ಮೆ ಅವನಿಂದ ವಿಮುಖಗೊಂಡರೆ ಮತ್ತೊಮ್ಮೆ ಅವನನ್ನರಸಿ ಸೆಳೆತ ತೀವ್ರವಾಗಿ ಬಳಿಗೋಡುತ್ತಿದ್ದಳು. ಅವನಿಗೂ ಸಿಂಧುವಿನ ಅಗತ್ಯವಿಲ್ಲವೇನಂತಿಲ್ಲ. ಭೌತಿಕ ಅಗತ್ಯಗಳ ಜೊತೆಗೆ ಮಾನಸಿಕವಾಗಿಯೂ ಸಾಥಿಯವಳು. ಅವರಿಬ್ಬರಿಗೂ ತಮ್ಮ ಬೌದ್ಧಿಕ ಮಟ್ಟಕ್ಕೆ ಸಾಟಿಯಾಗುವಂತಹ ಗೆಳೆಯರು ಇಂತಹ ಊರಿನಲ್ಲೆಲ್ಲಿ ಸಿಗಬೇಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ

read more
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

read more
ಮಂಜುನಾಯಕ ಚಳ್ಳೂರು ಬರೆದ ಕತೆ “ಫೂ….”

ಮಂಜುನಾಯಕ ಚಳ್ಳೂರು ಬರೆದ ಕತೆ “ಫೂ….”

ಆ ಹೊತ್ತು ಅವಳು ಹುಚ್ಚಿಯಂತೆ ಕಾಣುತ್ತಿದ್ದಳು ನನಗೆ. ಮುಖದ ತುಂಬ ಕೈಯಾಡಿಸಿದಳು. ತಲೆ ಸವರಿದಳು. ಯಾಕೋ ಎಷ್ಟೊತ್ತಾದರೂ ನನ್ನ ಬಿಡಲೇ ಇಲ್ಲ. ಅವ್ವ ಅಲ್ಲಿಂದಲೇ, `ಸಾಕ್ ಹೋಗು ಚಂದ್ರಪ್ಪಾ. ಬುಟ್ರ ಲಂಗದಾಗ್ ಸುರುಗ್ಸ್ಯಂತಾಳ್ ಈ ಅಡಾವುಡಿ ನಿನ್ನಾ…’ ಎಂದಳು. ಅತ್ತೆ, `ಯೇ ಮಂಗಾ.. ಬಾಯೈತಂತ ಏನೇನರ ಬೊಗಳ್ಬ್ಯಾಡ. ನನ ಹೊಟ್ಯಾಗ್ ಹುಟ್ಬೇಕಾದದ್ ಇದು. ತಪ್ಪಿ ನಿನ್ ಹೊಟ್ಯಾಗ್ ಹುಟ್ಟೇತಿ.’ ಎಂದುತ್ತರಿಸಿದಳು. ಆಗವಳ ಕೈಗಳು ನಡುಗುತ್ತಿದ್ದವು. ಕೆಂಡದಂತೆ ಬೆಚ್ಚಗಾಗಿದ್ದವು.
ಮಂಜುನಾಯಕ ಚಳ್ಳೂರು ಅವರ “ಫೂ..” ಕಥಾಸಂಕಲನದ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಓದಿಗೆ

read more
ಮಂಜುನಾಯಕ ಚಳ್ಳೂರ ಕಥಾಲೋಕ…

ಮಂಜುನಾಯಕ ಚಳ್ಳೂರ ಕಥಾಲೋಕ…

“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ‌‌. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು‌. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ

ಇವಾ ಹಿಂಗ್ಯಾಕ ಇದ್ದಾನ? ನನ್ನ ನೋಡಿದ್ರ ನಗೋದಿಲ್ಲಾ ಮಾತಾಡೊದಿಲ್ಲಾ? ಅವ್ವನೂ ಯಾವಾಗ್ಲೂ ಹಿಂಗs ಇರತಾಳ…. ಬ್ಯಾಂಕಿನಿಂದ ಬಂದಾಕಿನs ಮಲಗಿ ಬಿಡತಾಳ…. ನಾ ಯಾರ ಕೂಡ ಮಾತಾಡಬೇಕು?…. ಮುಂಜಾನಿಂದ ಊಟಿಲ್ಲಾ…. ಹಂಗs ಕೂತಾಳ; ಅಪ್ಪಾ ತಾ ಮಾತ್ರ ಹೊರಗ ಊಟಾ ಮಾಡಿ ಬರತಾನ, ಆಕೀಗೆ ಊಟಾ ಮಾಡು ಅಂತ ಸುದ್ದಾ ಹೇಳೋದಿಲ್ಲಾ…. ಛೇ ಎಂಥಾ ಅಪ್ಪಾ ಇವಾ….?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ “ನಾ ಯಾಕ ಹುಟ್ಟಿದೆನೋ…… ?” ನಿಮ್ಮ ಓದಿಗೆ

read more
ರಾಮು ಮತ್ತು ‘ತಾಯಿ’: ಸವಿತಾ ನಾಗಭೂಷಣ ಬರಹ

ರಾಮು ಮತ್ತು ‘ತಾಯಿ’: ಸವಿತಾ ನಾಗಭೂಷಣ ಬರಹ

ಇದಾದ ಆರು ತಿಂಗಳ ನಂತರ ರಾಮು ಅವರ ಮನೆಗೆ ಹೋದಾಗ ಅವರು ಮೂಲೆ ಅಂಗಡಿಯಿಂದ ಕೊಬ್ಬರಿ ಮಿಠಾಯಿ ಖರೀದಿಸಿ ತಂದು ಕೊಟ್ಟರು. “ಅಲ್ರೀ.. ಮೂವರೂ ಶುಗರ್ ಪೇಷಂಟು…” ಅಂತ ನಾಗಭೂಷಣ ರಾಗ ಎಳೆಯಲು… “ತಿನ್ನಿ ಕಮ್ಮಿ ಆಗುತ್ತದೆ” ಎಂದು ರಾಮು ನಕ್ಕರು. ನಾನು, “ನನಗೆ ಅವಕಾಶ ಸಿಕ್ಕಾಗಲೆಲ್ಲಾ ಕವಿಗೋಷ್ಟಿ / ಕಾವ್ಯ ಕಮ್ಮಟಗಳಲ್ಲಿ ನಿಮ್ಮ ‘ತಾಯಿ’ ಕವನ ಓದುತ್ತಿರುವೆ” ಎಂದು ರಾಮುವಿಗೆ ಹೇಳಿದೆ. ನಾಗಭೂಷಣ ‘ಹೌದೌದು ನಿಮ್ಮ”ತಾಯಿ”ಯನ್ನು ಅಮರ ಮಾಡಬೇಕೆಂದು ಸಂಕಲ್ಪ ಮಾಡಿದ್ದಾಳೆ! ಎಂದರು.
ರಾಮು ಅವರ ಕುರಿತು ಸವಿತಾ ನಾಗಭೂಷಣ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ