Advertisement

ಸಾಹಿತ್ಯ

ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”

ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”

ನಾನು ಬಣ್ಣ ಹಚ್ತಾ, ಮೊಳೆ ಹೊಡೀತಾ, ಲೈಟು ಕಟ್ತಾ ಬೆಳೆಯತೊಡಗಿದೆ. ಹರಿದ ಒಳ ಅಂಗಿಯ ಮೇಲೆ ರಾಜಕುಮಾರನ ಗರಿಗರಿ ಉಡುಪು..! ತಲ್ಲಣಗಳಲ್ಲಿ ಕುಸಿಯುವ ಮನಸ್ಸನ್ನು ಮೀರಿ ಹೊರಗೆ ಹಾಸ್ಯೋತ್ಸಾಹದ ಸಂಭಾಷಣೆಗಳ ಹೊನಲು..! ಒಮ್ಮೊಮ್ಮೆ ಇದು ತಿರುಗುಮುರುಗೂ ಆಗುವುದುಂಟು..! ನಾಟಕವಲ್ಲವೇ..!? ಎಷ್ಟೋ ಬಾರಿ ನಾನು ವಾಸ್ತವ ಸಂಗತಿಗಳಿಗೆ ಪ್ರತಿಕ್ರಿಯಿಸಿದರೆ, ಅದು ದಿಟವಾ ಅಥವಾ ನಾಟಕ ಆಡುತ್ತಿದ್ದೇನೆಯಾ ಅಂತ ನನಗೇ ಗುಮಾನಿ ಅನ್ನಿಸುವಷ್ಟು ಅಭಿನಯ ಕಲೆ ನನಗೆ ಒಲಿಯಿತು. ನಡೆಯುತ್ತಿದ್ದವನಿಗೆ ಸೈಕಲ್ ಬಂತು.
ಆಶಾ ರಘು ಬರೆದ “ಕೆಂಪು ದಾಸವಾಳ” ಕಥಾ ಸಂಕಲನದ ಕತೆ “ನೇಪಥ್ಯ” ಈ ಭಾನುವಾರದ ಬಿಡುವಿನ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

read more
ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

read more
ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ

ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ

ನಿದ್ರೆಯಿಲ್ಲದೆ ಬಳಲಿಕೆಯಲ್ಲಿ ಅಸಾಧ್ಯ ಆಕಳಿಕೆ ಬರುತ್ತಿದ್ದರೂ ಕಣ್ರೆಪ್ಪೆ ಒಂದನ್ನೊಂದು ತಾಕುತ್ತಿರಲಿಲ್ಲ. ಯಾವಾಗಲೂ ನುಂಗುವ ನಿದ್ದೆ ಗುಳಿಗೆ ಕೂಡ ಈಗೀಗ ಕೆಲಸ ಮಾಡುತ್ತಿಲ್ಲ. ಹೀಗೆ ಎಲ್ಲ ಅಸಂಖ್ಯ ಕಾರ್ಮೋಡಗಳ ಮಧ್ಯೆ ಬೆಳ್ಳಿರೇಖೆಯೊಂದು ಮಿಂಚಿದಂತಾಗಿ ಗೆಲುವಾದರು. ತಮಗೆ ಹೊಳೆದ ವಿಚಾರಕ್ಕೆ ಖುಷಿಯಾಯಿತು.
ಆನಂದ ಈ. ಕುಂಚನೂರ ಹೊಸ ಕಥಾ ಸಂಕಲನ “ನಿರೂಪ”ದ ಒಂದು ಕತೆ “ನಕ್ಷತ್ರ ದಾನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

read more
ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

read more
ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ

read more
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ