ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಕ್ರಮ ತಪ್ಪಿದ ನಗರ”
“ನೀವು ಎಂದಾದರೂ ಆಕಾಶದ ನಕ್ಷತ್ರಗಳನ್ನು ಗಮನಿಸಿದ್ದೀರಾ?” ಅವನು ಕೇಳಿದ. ಅವನ ಧ್ವನಿ ಹಳೆಯ ರೇಡಿಯೋ ಸ್ಟೇಷನ್ನಿಂದ ಬರುವ ಸಿಗ್ನಲ್ನಂತೆ ಇತ್ತು. ಅದಕುತ್ತರವಾಗಿ “ಹೌದು, ನೋಡಿದ್ದೇನೆ.” ಎಂದೆ. “ಆಕಾಶದಲ್ಲಿ ನಕ್ಷತ್ರಗಳು ಸುಮ್ಮನೆ ಬಿದ್ದಿಲ್ಲ” ಅವನು ಹೇಳುತ್ತಾ ಒಂದು ನೋಟಿನ ಮೇಲೆ ಒಂದು ನಾಣ್ಯವನ್ನು ಇಟ್ಟ. “ಅವುಗಳಿಗೊಂದು ಕ್ರಮವಿದೆ. ಆ ಕ್ರಮ ತಪ್ಪಿದರೆ ಈ ಜಗತ್ತು ಕುಸಿದು ಬೀಳುತ್ತದೆ. ಈ ಸ್ಕೈವಾಕ್ ಕೆಳಗೆ ಹರಿಯುವ ಸಾವಿರಾರು ಕಾರುಗಳು, ಈ ದೊಡ್ಡ ದೊಡ್ಡ ಬಿಲ್ಡಿಂಗ್ಗಳು, ನಿಮ್ಮ ಕೈಯಲ್ಲಿರುವ ಈ ಕಾಫಿ ಕಪ್… ಎಲ್ಲವೂ ಒಂದು ನಿಖರವಾದ ಜಾಗದಲ್ಲಿ ಇರಬೇಕು.”
ಕಾರ್ತಿಕ್ ಕೃಷ್ಣ ಬರೆದ ಕತೆ “ಕ್ರಮ ತಪ್ಪಿದ ನಗರ” ನಿಮ್ಮಈ ಭಾನುವಾರದ ಬಿಡುವಿನ ಓದಿಗೆ
ಸ್ವಾಮಿ ಪೊನ್ನಾಚಿ ಬರೆದ ಈ ಭಾನುವಾರದ ಕತೆ “ವೃತ್ತ”
ಭಯಗೊಂಡ ವೆಂಕಯ್ಯ ಪಂಜು ಬಿಸಾಡಿ ದೂರ ಓಡಿದ. ಪಂಜು ಕಂಡ ಮಸೀದಿಯವರು ಇದು ಮೇಲಿನ ಕೇರಿಯವರದ್ದೇ ಕಿತಾಪತಿ ಎಂದು ತಾವೂ ನಾಲ್ಕಾರು ಕೊಳ್ಳಿ ತೆಗೆದುಕೊಂಡು ಮೇಲಿನ ಕೇರಿಯತ್ತ ಧಾವಿಸಿದರು. ಹಿಂದೂ ಮುಸ್ಲಿಂ ಕೋಮುಗಲಭೆ ಎಂದು ಪ್ರಚಾರಗೊಂಡ ಅದು ಟೀವಿ ಪೇಪರಿನಲ್ಲಿ ಸುದ್ದಿಯಾಯಿತು. ಯಾವ ಯುದ್ಧಕ್ಕೆ ತಾನೆ ಕೊನೆಯಿರುವುದಿಲ್ಲ? ಮತ್ತೆ ಯಾವ ಯುದ್ಧಕ್ಕೆ ತಾನೆ ನಿರ್ಧಿಷ್ಟವಾದ ಕಾರಣ ಬೇಕಿದೆ? ಕಾರಣವಿಲ್ಲದೆ ಎಷ್ಟೋ ಯುದ್ಧಗಳಾಗಿಲ್ಲವೇ? ಮತ್ತು ಅವು ಇದ್ದಕ್ಕಿದ್ದಂತೆ ನಿಂತೂ ಹೋಗಿಲ್ಲವೇ ?
ಸ್ವಾಮಿ ಪೊನ್ನಾಚಿ ಬರೆದ ಕತೆ “ವೃತ್ತ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ಡಾ. ದಿಲೀಪ್ ಎನ್ಕೆ ಬರೆದ ಈ ಭಾನುವಾರದ ಕತೆ “ಭೈರೂಪ”
ಎದ್ದು ಬಿದ್ದು ತಕಥೈ ಕುಣಿದು, ನೆಗೆದು, ಹತ್ತಿರ ಸುಳಿದು ಒಂದೊಂದೂ ಒಂದೊಂದು ಆತ್ಮಗಳಂತೆ ಪೀಡಿಸುತ್ತಿರುವ ವಂದನಾಳ ಬಟ್ಟೆಬರೆಗಳು, ದಿನೋಪಯೋಗಿ ವಸ್ತುಗಳು, ಆಕೆಯ ಸಹಜವಾದ ವಿವಿಧ ಭಂಗಿಗಳು…… ತಲೆಯನ್ನು ಆ್ಯಸಿಡ್ಗೆ ಅಜ್ಜಿದಂತೆ. ಅಸಂಖ್ಯ ಸುತ್ತಿಗೆಗಳು ಹೃದಯಕ್ಕೆ ಗುಕ್ಕು ಗುಕ್ಕನೆ ಗುದ್ದಿದಂತೆ. ಯಪ್ಪಾ… ಎನ್ನುತ್ತಾ ರೆಪ್ಪೆಯನ್ನು ಬಿಗಿಹಿಡಿದು ಅಭಿ ಹೊರಳಾಡಿದ. ಆದರೇನು? ವಂದನಾಳ ಮಾತುಕತೆಗಳು, ನಗು-ರಾಗ-ರಗಳೆಗಳು ಈ ಎಲ್ಲಕ್ಕೂ ರೆಕ್ಕೆ ಬಂದು ಅವು ಅಭಿಯ ಸುತ್ತ ಗಸ್ತು ಹೊಡೆಯುತ್ತಲೇ ಇದ್ದವು.
ಡಾ. ದಿಲೀಪ್ ಎನ್ಕೆ ಕತೆ “ಭೈರೂಪ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”
ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ.
ಸುಧಾ ಆಡುಕಳ ಬರೆದ ಕತೆ “ಆರೂವರೆ ಅಡಿಯ ಮನುಷ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”
ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”
ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ
ಸ. ಹರೀಶ್ ಬರೆದ ಈ ಭಾನುವಾರದ ಕತೆ
ಎಲ್ಲವನ್ನು ಕೇಳಿಸಿಕೊಂಡಿದ್ದ ಅವಿನಾಶ್ ಡಾಕ್ಟರಿಗೆ ಕೈ ಮುಗಿದ. ಅಲ್ಲಿ ಮಾಧವಿಗೆ ಮನಸ್ಸು ತೀರಾ ತಲ್ಲಣಿಸಿ ಹೋಯಿತು. ಯಾವಾಗ ಕೇರ್ ಟೇಕರ್ ತನ್ನ ಸುತ್ತಾಟ ಮುಗಿಸಿ ಮನೆ ಒಳಗೆ ಕಾಲಿಟ್ಟಳೊ, ಅವಳಿಗೆ ಮನುಷ್ಯರ ಬಗ್ಗೆ ನಂಬಿಕೆಯೇ ಹೊರಟು ಹೋಯಿತು. ಅವಳ ಮುಖದ ಮೇಲೆ ದುಡ್ಡು ಬಿಸಾಕಿ, `ಮುಖ ತೋರಿಸಬೇಡ, ನಿನಗೆ ಪೊಲೀಸಿಗೆ ಕೊಡದೇ ಬಿಟ್ಟಿದ್ದೀನಿ, ಗೆಟ್ ಲಾಸ್ಟ್’ ಅಂತ ನರನಾಡಿ ಕಿತ್ತುಬರುವಂತೆ ಅರಚಿದಳು.
ಸ. ಹರೀಶ್ ಕಥಾ ಸಂಕಲನ “ಅಮ್ಮ ಅಂದ್ರೆ ಭೂಮಿ”ಯ ಶೀರ್ಷಿಕೆ ಕತೆ, ನಿಮ್ಮ ಈ ಭಾನುವಾರದ ಓದಿಗೆ
ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”
ನಾನು ಬಣ್ಣ ಹಚ್ತಾ, ಮೊಳೆ ಹೊಡೀತಾ, ಲೈಟು ಕಟ್ತಾ ಬೆಳೆಯತೊಡಗಿದೆ. ಹರಿದ ಒಳ ಅಂಗಿಯ ಮೇಲೆ ರಾಜಕುಮಾರನ ಗರಿಗರಿ ಉಡುಪು..! ತಲ್ಲಣಗಳಲ್ಲಿ ಕುಸಿಯುವ ಮನಸ್ಸನ್ನು ಮೀರಿ ಹೊರಗೆ ಹಾಸ್ಯೋತ್ಸಾಹದ ಸಂಭಾಷಣೆಗಳ ಹೊನಲು..! ಒಮ್ಮೊಮ್ಮೆ ಇದು ತಿರುಗುಮುರುಗೂ ಆಗುವುದುಂಟು..! ನಾಟಕವಲ್ಲವೇ..!? ಎಷ್ಟೋ ಬಾರಿ ನಾನು ವಾಸ್ತವ ಸಂಗತಿಗಳಿಗೆ ಪ್ರತಿಕ್ರಿಯಿಸಿದರೆ, ಅದು ದಿಟವಾ ಅಥವಾ ನಾಟಕ ಆಡುತ್ತಿದ್ದೇನೆಯಾ ಅಂತ ನನಗೇ ಗುಮಾನಿ ಅನ್ನಿಸುವಷ್ಟು ಅಭಿನಯ ಕಲೆ ನನಗೆ ಒಲಿಯಿತು. ನಡೆಯುತ್ತಿದ್ದವನಿಗೆ ಸೈಕಲ್ ಬಂತು.
ಆಶಾ ರಘು ಬರೆದ “ಕೆಂಪು ದಾಸವಾಳ” ಕಥಾ ಸಂಕಲನದ ಕತೆ “ನೇಪಥ್ಯ” ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ
ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”









