Advertisement

ಸಾಹಿತ್ಯ

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಶ್ರೀಧರ ಬನವಾಸಿ ಕತೆ

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಶ್ರೀಧರ ಬನವಾಸಿ ಕತೆ

ಜಿನದತ್ತ ತಿಮ್ಮಪ್ಪನ ಮಾತುಗಳಿಗೆ ಉತ್ತರಿಸಲು ಧೈರ್ಯ ತೋರಲಿಲ್ಲ. ಕಥೆಗಾರನ ಕಲ್ಪನೆ, ಸ್ವಾತಂತ್ರ್ಯವೇನು ಎಂಬುದು ಆ ಪಾತ್ರಕ್ಕೇನು ಗೊತ್ತು? ಒಂದು ಕತೆಯ ಎಲ್ಲ ಪಾತ್ರಗಳು ಕತೆಗಾರ ಹೇಳಿದಂತೆ ಕೇಳಬೇಕು ಅನ್ನುವ ಸತ್ಯ ಆ ತಿಮ್ಮಪ್ಪನಂತವನಿಗೆ ಎಲ್ಲಿ ತಾನೇ ಅರ್ಥವಾಗಬೇಕು. ಅವನಿಗೆ ಇದನ್ನು ಬಿಡಿಸಿ ಹೇಳಿದರೂ ಅರ್ಥ ಮಾಡಿಕೊಳ್ಳುತ್ತಾನೆಯೇ?
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಶ್ರೀಧರ ಬನವಾಸಿ ಬರೆದ ಕತೆ `ಜಿನದತ್ತನೆಂಬ ಕಥೆಗಾರನೂ…’ ನಿಮ್ಮ ಈ ಭಾನುವಾರದ ಓದಿಗೆ

read more
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ

ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ

ಮುಂದಿನ ಬೆಟ್ಟವನ್ನು ತೋರಿಸಿ ಗುಡದಪ್ಪ ಇದನ್ನು ದಾಟಬೇಕು ಎಂದ. ನಾನು ಹೌಹಾರಿದೆ. ಮತ್ತೆ ಮುಂದಿನ ಬೆಟ್ಟ ಏರತೊಡಗಿದೆವು. ಮೊದಲಿಗಿಂತಲೂ ಸ್ವಲ್ಪ ಕಡಿದಾಗೇ ಇತ್ತು. ದಾರಿಯಿಲ್ಲದ ಕಲ್ಲುಗಳ ನಡುವೆ ದಾರಿ ಹುಡುಕುತ್ತಾ ನಡೆಯುವುದು ಕಷ್ಟವಾಯಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ “ಡಾಲ್ಮೆನ್‌ಗಳು” ನಿಮ್ಮ ಓದಿಗೆ

read more
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

read more
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅಲ್ಲಿದ್ದ ಟೀಪಾಯಿಯತ್ತ ನೋಡಿದರೆ ಚಹಾದ ಲೋಟ ಇಲ್ಲ. ಹೆಂಡತಿಯಲ್ಲಿ ಕೇಳೋಣ ಎಂದುಕೊಂಡ ಅವರು ಮನೆಯೊಳಗೆ ಹೋದರೆ ಅಲ್ಲಿ ಅವರ ಹೆಂಡತಿ ಇನ್ನೂ ಕೂಡಾ ಫೋನ್‌ನಲ್ಲಿ ಮಾತನಾಡುತ್ತಿದ್ದಾಳೆ. ಡೈನಿಂಗ್ ಟೇಬಲ್ ಮೇಲೆ ಚಹಾದ ಲೋಟ ಇದೆ. ಲೋಟ ಎತ್ತಿಕೊಳ್ಳಹೋದಾಗ ಕೃಷ್ಣಾಚಾರ್ಯರ ಕೈತಗುಲಿ ಲೋಟ ಬಿದ್ದು, ಒಂದು ಲೋಟ ಚಹಾ ಎಲ್ಲ ಚೆಲ್ಲಿಹೋಯಿತು. ಅದನ್ನು ನೋಡಿದ ಅವರ ಹೆಂಡತಿ “ಸರಿ ಕಂದಾ, ನಾನೇ ಮತ್ತೆ ಕಾಲ್ ಮಾಡುತ್ತೇನೆ” ಎಂದು ಹೇಳಿ, ಕಾಲ್ ಕಟ್ ಮಾಡಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಒಂದು ಲೋಟ ಚಹಾ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ

ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಮುಗಿದ ನಂತರ, ಮೆರವಣಿಗೆ ಹೈಸ್ಕೂಲಿಗೆ ಹೊರಟಿತು. ನಿನ್ನೆಯಷ್ಟೇ ಜೋರಾಗಿ ಮಳೆಬಂದು ಹೋಗಿತ್ತಾದರೂ ಬಿಸಿಲು ಬಹಳ ತೀಕ್ಷ್ಣವಾಗಿತ್ತು. ನುಣ್ಣಗೆ ಬೋಳಿಸಿದ ತಲೆ, ತುಂಡು ಪಂಜೆಯಲ್ಲಿರುವ ಗಾಂಧೀಜಿ, ಪ್ರಾಥಮಿಕ ಶಾಲೆಯಿಂದ ದೂರದ ಹೈಸ್ಕೂಲು ತಲುಪುವುದರಲ್ಲಿ ಬಿಸಿಲಿನ ಬೇಗೆಯಲ್ಲಿ ಬೆಂದು ಬಸವಳಿದ. ಕೈಯಲ್ಲಿ ಬರೀ ಒಂದು ಕೋಲನ್ನು ಮಾತ್ರ ಹೊಂದಿದ್ದ ಆತ ಆಗಾಗ ಬಗ್ಗಿ ಬಗ್ಗಿ ಪಂಚೆಯಿಂದಲೇ ಬೆವರು ಒರೆಸಿಕೊಳ್ಳುತ್ತಿದ್ದ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ “ಹೇ ರಾಮ್!” ನ

read more
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ

ಮಳೆಗಾಲವಾದ್ದರಿಂದ ಅಂಗಳದಲ್ಲಿ ಜಾರಿಕೆಯಾಗಿತ್ತು. ಎಚ್ಚರಿಕೆಯಿಂದ ನಡೆದು, ಬಾಗಿಲ ಮುಂದೆ ನಿಂತು, ಅತ್ತಿದ್ದ ಕಣ್ಣುಗಳನ್ನೆಲ್ಲ ಚೊಕ್ಕವಾಗಿ ಒರೆಸಿಕೊಂಡು “ಅತ್ತೆ..” ಎಂದು ಕರೆದೆ. ಎಷ್ಟೇ ತಡೆ ಹಿಡಿದಿದ್ದರೂ ಧ್ವನಿ ನಡುಗಿತು. ಬಾಗಿಲ ತೆಗೆದ ಅತ್ತೆ ಒಳಗೆ ಕರೆದು ಒಂದುಸಲ ನನ್ನ ಮೆಲಿಂದ ಕೆಳಗಿನವರೆಗೆ ನೋಡಿದವಳೇ “ಅಪ್ಪ ಹೊಡೆದ್ನಾ..?” ಕೇಳಿದಳು. ಮಾತಾಡಿದರೆ ಎಲ್ಲಿ ಅಳು ಬಂದು ಬಿಡುತ್ತದೇನೋ ಎಂದು `ಹೌದು’ ಎಂಬಂತೆ ತಲೆ ಅಲ್ಲಾಡಿಸಿ ಕೇಪಿನಡಬ್ಬ ಕೊಟ್ಟೆ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ “ಕೇಪಿನ ಡಬ್ಬಿ”

read more
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ

‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ

ನೀನು ಪುಟ್ಟ ಮಗುವಿದ್ದಾಗ ಎಂಥ ರಚ್ಚೆ ಹಿಡಿದು ಅಳುತ್ತಿದ್ದರೂ ಮನೆಯ ಮುಂದಿನ ಕೈತೋಟದಲ್ಲಿ ಪರ‍್ರೆಂದು ಹಾರುತ್ತ ಚೀಂವ್ ಚೀಂವ್ ಎನ್ನುತ್ತಿದ್ದ ಪುಟ್ಟ ಗುಬ್ಬಚ್ಚಿಗಳನ್ನು ನೋಡುತ್ತಲೇ ಅಳು ನಿಲ್ಲಿಸಿ ಜೋರಾಗಿ ನಗುತ್ತಿದ್ದೆ. ಈಗಲೂ ಕಿಟಕಿಯ ಹೊರಗೆ ಅವೇ ಸುಂದರ ಗುಬ್ಬಚ್ಚಿಗಳು ಚಿಲಿಪಿಲಿಗುಟ್ಟುತ್ತ ನಿನ್ನ ನೆನಪನ್ನು ಉಕ್ಕೇರಿಸುತ್ತಿವೆ. ನೀನು ನನ್ನ ತೋಳಲ್ಲೆ ಇದ್ದೀಯೇನೋ ಎಂಬ ಭ್ರಮೆಯನ್ನು ಹುಟ್ಟಿಸುತ್ತಿವೆ. ತೋಟದಲ್ಲಿ ಅರಳಿರುವ ಬಣ್ಣ ಬಣ್ಣದ ಹೂಗಳು ಕಣ್ಣುಗಳು ಹೋದಲ್ಲೆಲ್ಲ ನನ್ನನ್ನೇ ನಿಟ್ಟಿಸುತ್ತಿವೆ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ “ಬಲಿಪಶುಗಳು”

read more

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ