ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು
ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ
ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ
ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”
ರಘುನಾಥ್ ಕೆ. ಅನುವಾದಿಸಿದ ಭೂಮಿಕಾ ರಾಜನ್ ಕಥೆ
ಅವಳು ಕಿರುನಿದ್ದೆಯಿಂದ ಎದ್ದಾಗ ಈಗಾಗಲೇ ಅಜ್ಜಯ್ಯನ ಅಂಗಡಿಗೆ ಸಾಮಾನಗಳ ಪಟ್ಟಿ ಕೊಟ್ಟು ನಾಲ್ಕು ಗಂಟೆಗಳಾದ ನೆನಪು ಆಯಿತು. ಮೊದಲು ತಡವಾಗಬಹುದೆಂದು ಅಮ್ಮನಿಗೆ ಬೇಕಾದ ಅಕ್ಕಿಯನ್ನು ತರಲು ಚೀಲ ಒಯ್ಯುವುದು ಎಂದುಕೊಂಡಳು. ಅಂಗಡಿಯವನು ಇನ್ನೊಂದು ಗಂಟೆಯಲ್ಲಿ ಸಾಮಾನು ತಂದುಕೊಡುವುದಾಗಿ ಹೇಳಿದ್ದರಿಂದ ಆ ಯೋಚನೆ ಕೈಬಿಟ್ಟಳು. ಕಿರಿಕಿರಿ ಉಂಟಾಗಿ ಅಂಗಡಿಗೆ ಫೋನ್ ಮಾಡಿದಳು “ತಲುಪಲು ಸಾಧ್ಯವಾಗುತ್ತಿಲ್ಲ” ಎಂಬ ಉತ್ತರ ಬಂದಿತು.
ರಘುನಾಥ್ ಕೆ. ಅನುವಾದಿಸಿದ ಭೂಮಿಕಾ ರಾಜನ್ ಕಥೆ “ಶಾಹೀನಳ ದುಃಸ್ವಪ್ನ” ನಿಮ್ಮ ಈ ಭಾನುವಾರದ ಓದಿಗೆ
ಪರಕೀಯತೆಯ ಪ್ರಜ್ಞೆ ಬಿಂಬಿಸುವ ತಿರುಮಲೇಶರ ಕತೆಗಳು
ಕವಿತೆ ಮತ್ತು ಕಾದಂಬರಿಗಳಲ್ಲಿ ನಡೆಸಿದ ವಾಸ್ತವ ನೆಲೆಯ ಹುಡುಕಾಟವನ್ನು ಅವರು ಇಲ್ಲೂ ನಡೆಸಿದ್ದಾರೆ. ‘ಜಾಗುವಾ ಮತ್ತು ಇತರರು’ ಕತೆಗಳಲ್ಲಿರುವಷ್ಟು ನವ್ಯದ ಪ್ರಖರತೆ ‘ಕೆಲವು ಕಥಾನಕಗಳ’ಲ್ಲಿ ಇಲ್ಲದಿದ್ದರೂ ಮುಖ್ಯ ಕಾಳಜಿಗಳು ಮಾತ್ರ ಮೊದಲಿನವೇ. ಜೀವನದ ಇರುವಿಕೆಯ ರೀತಿ, ರಹಸ್ಯಗಳ ಶೋಧನೆಗಳು ಮತ್ತು ಪರಕೀಯ ಪ್ರಜ್ಞೆಯ ಆಧಾರದಲ್ಲಿ ಮೂಡುವ ದಾರ್ಶನಿಕ ಒಳನೋಟಗಳು ಮುಖ್ಯವಾಗುತ್ತವೆ.
ಕೆ.ವಿ. ತಿರುಮಲೇಶರ ಕತೆಗಳ ಕುರಿತು ಬರೆದಿದ್ದಾರೆ ಡಾ. ಸುಭಾಷ್ ಪಟ್ಟಾಜೆ
ಕೆ.ವಿ. ತಿರುಮಲೇಶರು ಇನ್ನಿಲ್ಲ…
ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…
ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ
ಪೀರ್ಯಾಗ ಮತ್ತ ಹುರುಪೆದ್ದು ಯೋಳ್ನೆ ಪತ್ರ ಬರದಾಕಿದ್ದ. ಮ್ಯಾಲ ಒಂದ್ಲೈನು ಸರ್ಕಾರಿ ಕೇಲ್ಸ ದೇವ್ರ ಕೇಲ್ಸ ಅಂತಾ ಬರ್ದು ಕೆಳ್ಗ ತಮ್ಮ ಕಂಪ್ನಿ ಮಂಚಪ್ಪ ಮತ್ತ ಸರ್ಕಾರಿ ಲಂಚಪ್ಪನ ಇತಿಹಾಸನ ಬರ್ದಿದ್ದ. ಜೊತಿಗಿ ಅದ್ಕ ಸಂಭಂದಪಟ್ಟಂಗ ಎಕ್ಸೇಲ್ ಸಿಟ್ ಅಟ್ಯಾಚ್ ಮಾಡಿದ್ದ. ನಿನ್ನೆ ಅದು ಕಮೀಷನರ್ರ ಕೈಗಿ ಸಿಕ್ಕು ಲಂಚ್ಮಂಚ್ಚಪ್ಪರ್ನ ಸಿಕ್ಕ ಸಿಕ್ಕಾಂಗ ಉಗದಿದ್ರನ್ನಾದು ಸಹ ಗೊಣೇಶ ತುಂಬು ಹೃದಯದಿಂದ್ಲೇ ವಿವರ್ಸಿ, ಕುಷಿ ಪಟ್ಟಿದ್ದ. ಅಂವ್ಗ ಲೆರ್ಟ ಬರಿತಾರಂತ ಗೊತ್ತು ಆದ್ರ ಇವ್ನ ಬರಿತಾನಂತ ಮಾತ್ರ ಗೊತ್ತಿರ್ಲಿಲ್ಲ. ಪೀರ್ಯಾನೂ ಹೇಳಿದ್ದಿಲ್ಲ.
ಶಿವಕುಮಾರ ಚನ್ನಪ್ಪನವರ ಬರೆದ ಕಥೆ “ಲಂಚಪ್ಗೀರಿ ಲಂಚ್ಮಂಚ್ಚಪ್ಪೋರ ಕತಿ..”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ
ಮುಕಾಂಬಿಕಮ್ಮ ಇದ್ದುದರಲ್ಲೇ ಅಚ್ಚುಕಟ್ಟಾಗಿ ಸಂಸಾರ ನಡೆಸಿಕೊಂಡು ಬಂದ ನಿತ್ಯಸಂತೋಷಿ ಜೀವ. ಬೆಳಗ್ಗೆ ಐದುಗಂಟೆಗೆ ಅವರ ಮನೆಗೆಲಸದಚಕ್ರ ಸುತ್ತಲಾರಂಭಿಸಿದರೆ ನಿಂತು ಅಡ್ಡವಾಗುವುದು ಮಧ್ಯಾಹ್ನ ಎರಡುಗಂಟೆಗೆ. ಮತ್ತೆ ಐದುಗಂಟೆಗೆ ಎದ್ದು ಸುತ್ತತೊಡಗಿದರೆ ನಿಲ್ಲುವುದು ರಾತ್ರಿ ಒಂಭತ್ತು ಗಂಟೆಗೆ. ‘ಮುಕಾಂಬಮ್ಮನಂತೆ ಮನೆಯನ್ನು ಒಪ್ಪ ಓರಣವಾಗಿ ಇಟ್ಕೊಳ್ಳುವವರು ಹೊಸನಗರದಲ್ಲೇಕೆ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ “ಮೇಷ್ಟ್ರಮನೆ”
ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ
ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ
ಹೋಗುತ್ತಾ ನನಗೆನೋ ಕೊಟ್ಟು ಒಂದಷ್ಟು ಕಸಿದುಕೊಂಡು ಟಾಟಾ ಬೈಬೈ ಹೇಳುತ್ತಾ ಕಣ್ಮರೆಯಾಯಿತು. ಮತ್ತೆ ಮನಸ್ಸಿಗೆ ಹೊಸ ತಳಮಳ. ಯಾವ್ಯಾವುದೋ ಮನುಷ್ಯ ಸಹಜ ಆಸೆಗಳು ಮೈತಳೆಯುತ್ತಿದ್ದವು. ಆದರೆ ಎಲ್ಲವೂ ಅಸ್ಪಷ್ಟ ಆಕೃತಿಗಳು. ಬಸಿರಿನಲ್ಲಿ ಕೈ ಕಾಲು ಮೂಡದ ಭ್ರೂಣಾವಸ್ತೆಯ ಹಂತದವು. ಕನಸಿನ ಮಂಜು ಮಂಜಾದ ಚಿತ್ರಪಟಗಳಂತಹವು. ಮನಸ್ಸು ಮತ್ತಷ್ಟು ಗೊಂದಲದ ಗೂಡಾಯಿತು. ಅಲ್ಲಿ ನನ್ನ ಜನರ ಮಧ್ಯದಿಂದ ಸುಂಯ್ಯ ಎಂದು ಹಾರಿದ ವಿಮಾನ ಇಲ್ಲಿ ನನ್ನವರಲ್ಲದ ಮತ್ತು ನನ್ನವರಾಗಲಿರುವವರ ಮಧ್ಯೆ ಸದ್ದಿಲ್ಲದೆ ಇಳಿಸಿತು.
ಕೃಷ್ಣ ದೇವಾಂಗಮಠ ಬರೆದ ಕತೆ “ಪೇಯಿಂಟಿಂಗ್ “









