Advertisement

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ

ಹೋಗುತ್ತಾ ನನಗೆನೋ ಕೊಟ್ಟು ಒಂದಷ್ಟು ಕಸಿದುಕೊಂಡು ಟಾಟಾ ಬೈಬೈ ಹೇಳುತ್ತಾ ಕಣ್ಮರೆಯಾಯಿತು. ಮತ್ತೆ ಮನಸ್ಸಿಗೆ ಹೊಸ ತಳಮಳ. ಯಾವ್ಯಾವುದೋ ಮನುಷ್ಯ ಸಹಜ ಆಸೆಗಳು ಮೈತಳೆಯುತ್ತಿದ್ದವು. ಆದರೆ ಎಲ್ಲವೂ ಅಸ್ಪಷ್ಟ ಆಕೃತಿಗಳು. ಬಸಿರಿನಲ್ಲಿ ಕೈ ಕಾಲು ಮೂಡದ ಭ್ರೂಣಾವಸ್ತೆಯ ಹಂತದವು. ಕನಸಿನ ಮಂಜು ಮಂಜಾದ ಚಿತ್ರಪಟಗಳಂತಹವು. ಮನಸ್ಸು ಮತ್ತಷ್ಟು ಗೊಂದಲದ ಗೂಡಾಯಿತು. ಅಲ್ಲಿ ನನ್ನ ಜನರ ಮಧ್ಯದಿಂದ ಸುಂಯ್ಯ ಎಂದು ಹಾರಿದ ವಿಮಾನ ಇಲ್ಲಿ ನನ್ನವರಲ್ಲದ ಮತ್ತು ನನ್ನವರಾಗಲಿರುವವರ ಮಧ್ಯೆ ಸದ್ದಿಲ್ಲದೆ ಇಳಿಸಿತು.
ಕೃಷ್ಣ ದೇವಾಂಗಮಠ ಬರೆದ ಕತೆ “ಪೇಯಿಂಟಿಂಗ್ “

read more
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ಈಗ ಗೋಡೆಯ ಮೇಲಿನ ಚಿತ್ರಗಳು ಬದಲಾಗಿ ವಿಶಾಲವಾದ ಸಮುದ್ರ ಗೋಚರಿಸತೊಡಗಿದೆ. ಸಮುದ್ರದ ನಟ್ಟನಡುವೆ ಹಡಗಿನಲ್ಲಿ ರಮೇಶ, ಶೇಖರ ಹಾಗೂ ಹೆಂಗಸೊಬ್ಬಳು ನಿಂತಿದ್ದಾರೆ! ಹೆಂಗಸಿನ ಅಣತಿಯನ್ನು ಶಿರಸಾವಹಿಸಿ ಪಾಲಿಸುವಂತೆ ರಮೇಶ, ಶೇಖರನನ್ನು ಹಡಗಿನಿಂದ ಸಮುದ್ರಕ್ಕೆ ದೂಡಿದ! ಉರವಣಿಸಿ ಬಂದ ಅಲೆಗಳು ಶೇಖರನನ್ನು ತಮ್ಮೊಳಗೆ ಕರಗಿಸಿಕೊಂಡವು. ಶೇಖರ ಇನ್ನಿಲ್ಲವಾದ! ‘ಇಲ್ಲಾ, ಇಲ್ಲಾ! ನಾನು ಮದುವೇನೇ ಆಗಲ್ಲ!’ ಎಂದು ಚೀರಿ ಕನಸಿನ ಭ್ರಮಾಲೋಕದಿಂದ ವಾಸ್ತವ ಪ್ರಪಂಚಕ್ಕೆ ಮರಳಿದ ರಮೇಶ!
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ “ಸಹೋದರರ ಕನಸು” ಹೊಸ ವರ್ಷದ ಮೊದಲ ಓದಿಗೆ

read more
ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ಹೊಸ ಜೀವಸೆಲೆ ಮತ್ತು ಹೊಸ ಹೊಳಹುಗಳು….

ಹೊಸ ಜೀವಸೆಲೆ ಮತ್ತು ಹೊಸ ಹೊಳಹುಗಳು….

ರಾತ್ರಿ ನಿದ್ದೆಗೆಟ್ಟಿದ್ದಕ್ಕೆ ಬಂದಿದ್ದ ತಲೆಸುತ್ತೋ, ಹೊಟ್ಟೆಗಿಲ್ಲದೇ ಆದ ಆಯಾಸವೋ ಅಥವಾ ಹ್ಯಾಂಗೋವರೋ ಒಟ್ಟು ತಲೆ ಗಿಂ ಎಂದು ಬಹಳ ಜೋರಾಗಿ ಚಕ್ಕರ್ ಬಂದು ವಾಂತಿ ಬರುವ ಹಾಗಾಯಿತು. ಇನ್ನು ಒಂದೇ ಒಂದು ಕ್ಷಣ ನಿಂತಿದ್ದರೂ ಬಿದ್ದೇಬಿಡುತ್ತೇನೆ ಎಂದನಿಸಿತು. ಕೈಯಲ್ಲಿ ಹಸುಗೂಸಿದೆ ಎನ್ನುವುದನ್ನೂ ಮರೆತು ಮಗುವಿನ ತಲೆಯನ್ನು ಎದೆಗೆ ಅವುಚಿಸಿಕೊಂಡಿದ್ದ ಎಡಗೈಯಿಂದ ಅರವಿಂದನ ತೋಳನ್ನು ಹಿಡಿದುಕೊಳ್ಳಲು ಹೋದಳು. ಮಗುವಿನ ತಲೆಗೆ ಯಾವ ಆಧಾರವೂ ಇಲ್ಲದಂತಾಗಿ ಹಿಮ್ಮೀಟಿದಂತಾಗಿ ಜೋರಾಗಿ ಅಳತೊಡಗಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಕೊನೆಯ ಕಂತು ನಿಮ್ಮ ಓದಿಗಾಗಿ

read more
ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ

ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ

ಏನೊ ಆತಂಕ. ಒಂಟಿತನ. ಈ ಓದು ಕೂಡ ಉಪಯೋಗ ಇಲ್ಲ. ಬುದ್ದಿಗೆ ಬೆಲೆ ಇಲ್ಲ. ದಡ್ಡರಿಗೇ ಎಲ್ಲೆಡೆ ದೊಡ್ಡ ದೊಡ್ಡ ಪದವಿ. ಮೂರ್ಖರು ಮೂರ್ಖರನ್ನೆ ಬೆಳೆಸುತ್ತಾರೆ. ಈ ಜಾತಿ ಕೂಪದಲ್ಲಿ ನಾನು ಏನೇ ಆಗಿದ್ದರೂ ಅದೇ ಆಗಿರುತ್ತೇನೆ. ಅದಕ್ಕಾಗಿ ಯಾಕೆ ಇಷ್ಟೆಲ್ಲ ಹೋರಾಟ? ವಿದ್ವತ್ತು? ಮನುಷ್ಯತ್ವ… ಕೊನೆಗೂ ನನಗೇನು ಉನ್ನತ ಕೆಲಸ ಸಿಗುವುದಿಲ್ಲವಲ್ಲಾ ಎಂದು ಮಂಕಾಗಿದ್ದೆ. ವಿಶ್ವಾಸ ಕುಗ್ಗುತ್ತಿತ್ತು. ಅವನು ನನ್ನ ಅಪ್ಪ ನಾಲ್ಕನೆ ಬಾರಿಗೆ ಯಾವುದೊ ಒಂದು ಹೆಂಗಸ ಒಪ್ಪಿಸಿ ಕರೆತಂದು ಮನೆಯಲ್ಲಿ ಇಟ್ಟುಕೊಂಡಿದ್ದನಂತೆ.
ಮೊಗಳ್ಳಿ ಗಣೇಶ್ ಬರೆದ ಕಥೆ “ಅವಳು ಚಿಲುಮೆ”

read more
ಒಂದೇ ಮನೆಯ ಹಲವು ಮನಗಳು….

ಒಂದೇ ಮನೆಯ ಹಲವು ಮನಗಳು….

ಫೋನಿನಲ್ಲಿ ವಿನಯನ ಜತೆ ಮಾತಾಡುತ್ತಿದ್ದವನು ಅಲಿಶಾ ಉಸಿರಾಡುತ್ತಿದ್ದಾಳಾ? ಆಕೆ ಮಾತಾಡುತ್ತಿದ್ದಾಳಾ? ಮೂವತ್ತು ಸೆಕಂಡುಗಳ ಕಾಲ ಆಕೆಯ ಉಸಿರಾಟ ಮತ್ತು ನಾಡಿಬಡಿತ ನೋಡಿ ಹೇಳು ಎಂದು ಅವನ ಪ್ರೋಟೊಕಾಲಿನಲ್ಲಿದ್ದಂತೆ ವಿನಯನಿಗೆ ಹೇಳುತ್ತಿದ್ದ. ವಿನಯ ‘ನಾನೂ ಒಬ್ಬ ಡಾಕ್ಟರು. ನನ್ನ ಹೆಂಡತಿಯೂ ಡಾಕ್ಟರು. ಅವಳಿಗೇನೂ ಆಗಿಲ್ಲ. ಅವಳಿಗೆ ತಕ್ಷಣ ಹೆರಿಗೆಯಾಗಬೇಕು. ನೀನು ತಕ್ಷಣ ಆ್ಯಂಬುಲೆನ್ಸ್ ಕಳಿಸಲಿಲ್ಲ ಎಂದರೆ ನಾನೇ ಡ್ರೈವ್ ಮಾಡಿಕೊಂಡು ಆಸ್ಪತ್ರೆಗೆ ಹೋಗುತ್ತೇನೆ’…
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಏಳನೆಯ ಕಂತು ನಿಮ್ಮ ಓದಿಗಾಗಿ

read more
ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

read more
ದಡ ಮುಟ್ಟದ ದೋಣಿಗಳಲ್ಲಿ ಕೂತು…

ದಡ ಮುಟ್ಟದ ದೋಣಿಗಳಲ್ಲಿ ಕೂತು…

ಒಂದಾದ ನಂತರ ಒಂದರಂತೆ ಮೂರು ಮಕ್ಕಳನ್ನು ಮಾಡಿಕೊಂಡು ನಂತರ ತಮ್ಮತಮ್ಮ ಕೆಲಸ, ಕಾರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇವಲ ಒಂದು ದಿನದ ಹಿಂದೆ ಮಾತಾಡಿದ್ದಷ್ಟೇ ಅಲ್ಲ, ಮನೆಗೆ ಬಂದು ಸಹಾಯ ಮಾಡಬೇಕು ಎಂದು ನನ್ನನ್ನು ದುಂಬಾಲುಬಿದ್ದ ಅಪ್ಪಟ ಶ್ರೀಸಂಸಾರಿಯಂತೆ ಕಾಣುವ ವಿನಯ, ಅಲಿಶಾ ಜತೆ ನಿಜವಾಗಿಯೂ ಒಂದು ಬದ್ಧ ಸಂಬಂಧದಲ್ಲಿದ್ದಾನೆಯೇ?
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಆರನೆಯ ಕಂತು ನಿಮ್ಮ ಓದಿಗಾಗಿ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ಕಂತುಗಳನ್ನು ಸರಿಯಾಗಿ ಕಟ್ಟಲಿಲ್ಲವೆಂದು ಮನೆಯನ್ನು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕಿನವರು ಬಂದಾಗ ಆಶ್ಚರ್ಯವೆಂಬಂತೆ ತಾನೇ ಮುಂದೆ ನಿಂತು ಅವನ್ನೆಲ್ಲಾ ಅವರಿಗೆ ಬಿಟ್ಟುಕೊಟ್ಟ. ಅಡ್ಡಬಂದ ಹೆಂಡತಿಗೆ, ‘ಇಲ್ಲಿಗೆ ಬರುವಾಗ ಏನನ್ನೂ ತಂದಿರಲಿಲ್ಲ, ಹೋಗುವಾಗಲೂ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ..
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ