Advertisement

ಸಾಹಿತ್ಯ

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ.
ಸುಧಾ ಆಡುಕಳ ಬರೆದ ಕತೆ “ಆರೂವರೆ ಅಡಿಯ ಮನುಷ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more

ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”

ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

read more
ಸ. ಹರೀಶ್‌ ಬರೆದ ಈ ಭಾನುವಾರದ ಕತೆ

ಸ. ಹರೀಶ್‌ ಬರೆದ ಈ ಭಾನುವಾರದ ಕತೆ

ಎಲ್ಲವನ್ನು ಕೇಳಿಸಿಕೊಂಡಿದ್ದ ಅವಿನಾಶ್ ಡಾಕ್ಟರಿಗೆ ಕೈ ಮುಗಿದ. ಅಲ್ಲಿ ಮಾಧವಿಗೆ ಮನಸ್ಸು ತೀರಾ ತಲ್ಲಣಿಸಿ ಹೋಯಿತು. ಯಾವಾಗ ಕೇರ್ ಟೇಕರ್ ತನ್ನ ಸುತ್ತಾಟ ಮುಗಿಸಿ ಮನೆ ಒಳಗೆ ಕಾಲಿಟ್ಟಳೊ, ಅವಳಿಗೆ ಮನುಷ್ಯರ ಬಗ್ಗೆ ನಂಬಿಕೆಯೇ ಹೊರಟು ಹೋಯಿತು. ಅವಳ ಮುಖದ ಮೇಲೆ ದುಡ್ಡು ಬಿಸಾಕಿ, `ಮುಖ ತೋರಿಸಬೇಡ, ನಿನಗೆ ಪೊಲೀಸಿಗೆ ಕೊಡದೇ ಬಿಟ್ಟಿದ್ದೀನಿ, ಗೆಟ್ ಲಾಸ್ಟ್’ ಅಂತ ನರನಾಡಿ ಕಿತ್ತುಬರುವಂತೆ ಅರಚಿದಳು.
ಸ. ಹರೀಶ್‌ ಕಥಾ ಸಂಕಲನ “ಅಮ್ಮ ಅಂದ್ರೆ ಭೂಮಿ”ಯ ಶೀರ್ಷಿಕೆ ಕತೆ, ನಿಮ್ಮ ಈ ಭಾನುವಾರದ ಓದಿಗೆ

read more
ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”

ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”

ನಾನು ಬಣ್ಣ ಹಚ್ತಾ, ಮೊಳೆ ಹೊಡೀತಾ, ಲೈಟು ಕಟ್ತಾ ಬೆಳೆಯತೊಡಗಿದೆ. ಹರಿದ ಒಳ ಅಂಗಿಯ ಮೇಲೆ ರಾಜಕುಮಾರನ ಗರಿಗರಿ ಉಡುಪು..! ತಲ್ಲಣಗಳಲ್ಲಿ ಕುಸಿಯುವ ಮನಸ್ಸನ್ನು ಮೀರಿ ಹೊರಗೆ ಹಾಸ್ಯೋತ್ಸಾಹದ ಸಂಭಾಷಣೆಗಳ ಹೊನಲು..! ಒಮ್ಮೊಮ್ಮೆ ಇದು ತಿರುಗುಮುರುಗೂ ಆಗುವುದುಂಟು..! ನಾಟಕವಲ್ಲವೇ..!? ಎಷ್ಟೋ ಬಾರಿ ನಾನು ವಾಸ್ತವ ಸಂಗತಿಗಳಿಗೆ ಪ್ರತಿಕ್ರಿಯಿಸಿದರೆ, ಅದು ದಿಟವಾ ಅಥವಾ ನಾಟಕ ಆಡುತ್ತಿದ್ದೇನೆಯಾ ಅಂತ ನನಗೇ ಗುಮಾನಿ ಅನ್ನಿಸುವಷ್ಟು ಅಭಿನಯ ಕಲೆ ನನಗೆ ಒಲಿಯಿತು. ನಡೆಯುತ್ತಿದ್ದವನಿಗೆ ಸೈಕಲ್ ಬಂತು.
ಆಶಾ ರಘು ಬರೆದ “ಕೆಂಪು ದಾಸವಾಳ” ಕಥಾ ಸಂಕಲನದ ಕತೆ “ನೇಪಥ್ಯ” ಈ ಭಾನುವಾರದ ಬಿಡುವಿನ ಓದಿಗೆ

read more

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

read more
ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

read more
ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ

ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ

ನಿದ್ರೆಯಿಲ್ಲದೆ ಬಳಲಿಕೆಯಲ್ಲಿ ಅಸಾಧ್ಯ ಆಕಳಿಕೆ ಬರುತ್ತಿದ್ದರೂ ಕಣ್ರೆಪ್ಪೆ ಒಂದನ್ನೊಂದು ತಾಕುತ್ತಿರಲಿಲ್ಲ. ಯಾವಾಗಲೂ ನುಂಗುವ ನಿದ್ದೆ ಗುಳಿಗೆ ಕೂಡ ಈಗೀಗ ಕೆಲಸ ಮಾಡುತ್ತಿಲ್ಲ. ಹೀಗೆ ಎಲ್ಲ ಅಸಂಖ್ಯ ಕಾರ್ಮೋಡಗಳ ಮಧ್ಯೆ ಬೆಳ್ಳಿರೇಖೆಯೊಂದು ಮಿಂಚಿದಂತಾಗಿ ಗೆಲುವಾದರು. ತಮಗೆ ಹೊಳೆದ ವಿಚಾರಕ್ಕೆ ಖುಷಿಯಾಯಿತು.
ಆನಂದ ಈ. ಕುಂಚನೂರ ಹೊಸ ಕಥಾ ಸಂಕಲನ “ನಿರೂಪ”ದ ಒಂದು ಕತೆ “ನಕ್ಷತ್ರ ದಾನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ