Advertisement

ಸಾಹಿತ್ಯ

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ‍್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’

read more
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

read more
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ  ತೆಲುಗಿನ ಎಸ್.ವಿ. ಕೃಷ್ಣ ಕತೆ

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ

read more
ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

read more
ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

read more
ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ