Advertisement

ಸಾಹಿತ್ಯ

‘ನಾನು ಮೆಚ್ಚಿದ ನನ್ನ ಕಥೆ’: ಅಜಯ್‌ ವರ್ಮಾ ಅಲ್ಲುರಿ ಬರೆದ ಕಥೆ

‘ನಾನು ಮೆಚ್ಚಿದ ನನ್ನ ಕಥೆ’: ಅಜಯ್‌ ವರ್ಮಾ ಅಲ್ಲುರಿ ಬರೆದ ಕಥೆ

“ಪೌಲ್ ಆ ಕಿಟಕಿಯನ್ನೇ ನೋಡುತ್ತಾ ಹೊರಬಂದ. ಅಡುಗೆ ಮನೆಯ ಗೋಡೆಗೆ ಅಂಟಿಕೊಂಡೇ ದೇವರಕೋಣೆಯಿತ್ತು. ಅವನೇ ಬಾಗಿಲು ತಗೆದು ಒಳಗೆ ನಡೆದ ಅದು ಅಡುಗೆ ಮನೆಗಿಂತಲೂ ಚಿಕ್ಕದಾದ ಕೋಣೆ ತುಂಬಾ ಧೂಳು ಹಿಡಿದಿತ್ತು. ಕೋಣೆಯ ನಟ್ಟನಡುವೆ ಏಸುವಿನ ಶಿಲುಬೆಯಿತ್ತು. ಸುತ್ತಲೂ ಗೋಡೆಯ ಮೇಲೆ ಹಿಂದೂ ದೇವರುಗಳ ಪಟಗಳಿದ್ದವು. ಶಿಲುಬೆಯ ಒಂದು ಕೈಗೆ ಜೇಡರ ಬಲೆ ನೇಯ್ದುಕೊಂಡಿತ್ತು.”

read more
ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

“ತಲೆಯಿಂದ ಕಾಲವರೆಗೆ ಗಮನಿಸಿದ. ಅದೇ ರಶ್ಮಿ! ಗಾಢ ಹಳದಿ ವರ್ಣದ ಸೆಲ್ವಾರ್ ಕಮಿಜ್ ಧರಿಸಿದ್ದಾಳೆ. ತಲೆಯಿಂದ ನೀಳವಾಗಿ ಚಾಚಿ ಹೆಗಲು ಆವರಿಸಿರುವ ರೇಷ್ಮೆಯಂತಹ ಕೇಶ. ಅದೇ ಆಗ ತೀಡಿರುವ ಹುಬ್ಬು, ತುಟಿಯ ಕೆಂಪು ವರ್ಣ ಬೆಳಗಿನ ತಂಪಿಗೆ ನಳನಳಿಸುತ್ತಿದ್ದವು. ಗುಲಾಬಿ ಪಕಳೆಯಷ್ಟೇ ನಾಜೂಕಾದ ಅವಳ ಕೆನ್ನೆಯ ತ್ವಚೆಯಲ್ಲಿ ಮಂಜಿನ ಹನಿಗಳು ನಿಂತು ಮುತ್ತಿನಂತೆ ಮಿಂಚುತ್ತಿವೆ. ವಿಶಾಲವಾದ ಕಣ್ಣುಗಳಲ್ಲಿ ಆಪ್ತಭಾವ, ಅಂತಃಕರಣ ತುಂಬಿದೆ…”

read more
“ನಾನು ಮೆಚ್ಚಿದ ನನ್ನ ಕಥೆ” ಕಥಾ ಸರಣಿ ಆರಂಭ

“ನಾನು ಮೆಚ್ಚಿದ ನನ್ನ ಕಥೆ” ಕಥಾ ಸರಣಿ ಆರಂಭ

““ನೀನು ಹುಚ್ಚನಂತೆ ಮಾತಾಡಬೇಡ. ನಮ್ಮ ಊರಿನಲ್ಲಿ ಮನುಷ್ಯರು ಮಾತ್ರ ಇದ್ದಾರೆ. ಇಲ್ಲಿ ಯಾವ ಕ್ಷಣಕ್ಕೂ ದೊಂಬಿ, ಗಲಭೆ ನಡೆದಿಲ್ಲ. ಜಾತಿ ಮತ್ಸರದಿಂದ ಹೃದಯಗಳು ಹೊತ್ತಿ ಉರಿದಿಲ್ಲ. ನೀನು ವಿನಾಕಾರಣ ನಮ್ಮಗಳ ಬಾಂಧವ್ಯಕ್ಕೆ ಬೆಂಕಿ ಹಚ್ಚಬೇಡ”
ಸ. ರಘುನಾಥ್‌ ಹಾಗೂ ಆರ್. ವಿಜಯರಾಘವನ್‌ ಅವರ ಸಂಪಾದಕತ್ವದಲ್ಲಿ ರೂಪುಗೊಂಡ “ನಾನು ಮೆಚ್ಚಿದ ನನ್ನ ಕಥೆ” ಪುಸ್ತಕ ನಾಲ್ಕು ಸಂಪುಟಗಳಲ್ಲಿ ಮುದ್ರಣಗೊಂಡಿದೆ. ಈ ಭಾನುವಾರದಿಂದ ಹದಿನೈದು ದಿನಕ್ಕೊಮ್ಮೆ ಈ ಸಂಪುಟಗಳ ಕಥೆಗಳು…”

read more
ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

read more
ಈ ಕಡಲು ಹೆಂಗಸಾ… ಗಂಡಸಾ….: ನಾಗಶ್ರೀ ಶ್ರೀರಕ್ಷ ಬರೆದ ಕಥೆ

ಈ ಕಡಲು ಹೆಂಗಸಾ… ಗಂಡಸಾ….: ನಾಗಶ್ರೀ ಶ್ರೀರಕ್ಷ ಬರೆದ ಕಥೆ

“ಟೆರೇಸಿನ ಮೇಲೆ ತನ್ನ ಉದ್ವಿಗ್ನ ಕಥೆಗಳನ್ನು ಹೇಳುತ್ತಿದ್ದ ನಕುಲನ ಭುಜದ ಮೇಲೆ ಹಾರುತ್ತಿದ್ದ ನೀಳಕೂದಲು, ಕೆಳಗಿಂದ ಕೇಳುತ್ತಿದ್ದ ಮಕ್ಕಳ ಕೇಕೆ, ಮುಳಗುತ್ತಿರುವ ಸೂರ್ಯನನ್ನು ಹಿಂದಿಕ್ಕಿ ಕೆಂಪು ಬೆಳಕಿನಲ್ಲಿ ಪೂರ್ವದ ಕಡೆ ಹಾರುತ್ತಿರುವ ಹೆಸರು ಗೊತ್ತಿಲ್ಲದ ಹಕ್ಕಿಗಳ ಹಸಿವು ಬಾಯಾರಿಕೆ, ಬಣ್ಣಬಣ್ಣದ ರೆಕ್ಕೆಗಳ ಮೈಥುನದ ಆಸೆಗಳು, ಮೆಲ್ಲಗೆ ಪೂರ್ವದ ಕಡೆಯಿಂದ ಉದಯಿಸುತ್ತಿರುವ ಚಂದ್ರನ ಬೆಳಕ ಜೊತೆಯಲ್ಲೇ ಬೀಸಿ ಬರುತ್ತಿರುವ ತಂಗಾಳಿ..”

read more
ರಾಜು ಹೆಗಡೆ ಬರೆದ ಸಣ್ಣ ಕಥೆ ʼಲಾಕ್‌ ಡೌನ್‌ʼ

ರಾಜು ಹೆಗಡೆ ಬರೆದ ಸಣ್ಣ ಕಥೆ ʼಲಾಕ್‌ ಡೌನ್‌ʼ

“ಗಿರಿಜವ್ವ ಕೆಲಸದಲ್ಲಿ ಹುಷಾರ್ ಇದ್ದಳು. ಯಾವುದಕ್ಕೆ ಹೋದರೂ ಸೈ ಅನಿಸಿಕೊಳ್ಳಬಲ್ಲಳು. ಆರಂಭದಲ್ಲಿ ನಾಲ್ಕಾರು ಮನೆಗಳಿಗೆ ರೊಟ್ಟಿ ಮಾಡಲು ಹೋದಳು. ನಂತರ, ಹತ್ತಿರದ ಖಾನಾವಳಿ ಹಿಡಿದಳು. ಆಮೇಲೆ ಧರ್ಮಸ್ಥಳ ಸಂಘದಲ್ಲಿ ಸಾಲ ಮಾಡಿ ಸಣ್ಣ ತರಕಾರಿ ವ್ಯಾಪಾರ ಶುರು ಮಾಡಿದಳು. ಮೊದಮೊದಲು ಅಲ್ಲಿ ಇಲ್ಲಿ ರಸ್ತೆ ಬದಿಯಲ್ಲಿ ಕುಳಿತು ಮಾರುತ್ತಿದ್ದಳು. ನಂತರ ಯಾರನ್ನೋ ಹಿಡಿದು ಮೇನ್ ಮಾರ್ಕೆಟ್ ಆದ ಬಿಡ್ಕಿ ಬಯಲಿಗೆ ಹೋದಳು. ಹಾಗೆಂದು ತಾನು ರೊಟ್ಟಿ ಮಾಡುವ ಮನೆಗಳನ್ನಾಗಲಿ ಖಾನಾವಳಿಯನ್ನಾಗಲಿ ಬಿಡಲಿಲ್ಲ. ತಾಯಿಯ ಕಳಿಸಿದಳು. “

read more
ಎನ್.ಸಿ. ಮಹೇಶ್‌ ಬರೆದ ಈ ಭಾನುವಾರದ ಕಥೆ “ಅಥವಾ…”

ಎನ್.ಸಿ. ಮಹೇಶ್‌ ಬರೆದ ಈ ಭಾನುವಾರದ ಕಥೆ “ಅಥವಾ…”

“ಆಚಾರಿಯ ಜೇಬನ್ನ ಹಣ ಅಷ್ಟೊಂದು ತುಂಬಿಕೊಳ್ಳುತ್ತಿರುವುದು ಹೇಗೆ ಎಂದು ರುದ್ರಯ್ಯ ತನ್ನ ಶರ್ಟ್ ಜೇಬಿನಲ್ಲಿರುವ ಚಿಲ್ಲರೆ ತಡಕುವಾಗ ಕೇಳಿಕೊಂಡ. ಅರಿಶಿನದ ಹಾಲು ವರ್ಕ್ ಆಗದಿದ್ದರೂ ರಮ್ ಬೆಳಗ್ಗೆವರೆಗೂ ಕೈ ಕೊಡುವುದಿಲ್ಲ ಅನಿಸಿ ದುಡ್ಡಿನ ಲೆಕ್ಕಾಚಾರ ಹಾಕುತ್ತಿದ್ದ ವೇಳೆ ಆಚಾರಿಯ ಉಬ್ಬಿದ ಜೇಬು ಮತ್ತೆ ನೆನಪಾಗಿತ್ತು. ಮಗನಿಗೆ ಗೊತ್ತಾಗದಂತೆ ಚೂರುಪಾರು ಉಳಿಸಿ ಬ್ಯಾಂಕಲ್ಲಿ ಇಟ್ಟಿರುವ ಹಣ ತೆಗೆದರೆ ಅದು ಹೇಗೆ…”

read more
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

“ಜ್ವರದ ತಾಪದಿಂದ ನರಳುತ್ತಿದ್ದ ಅವ್ವಕ್ಕಗ ಹಣಿ ಮ್ಯಾಲೆ ತಣ್ಣೀರಿನ ಪಟ್ಟಿ ಹಾಕಿದ್ರಾತು ಅಂತ ಹಳೇ ಬಟ್ಟಿ ತುಂಡನ್ನು ಹುಡುಕಲು ಕಪಾಟಿನಲ್ಲಿ ತಡಕಾಡಿದ ಗಂಗವ್ವಜ್ಜಿಯ ಕೈಗೆ ಹೋದವರ್ಷ ಪಂಚಮಿಹಬ್ಬಕ್ಕಂತ ಹೊಲಿಸಿದ ಅವ್ವಕ್ಕನ ಲಂಗ ಸಿಕ್ಕಿತು. ಒಂದೆರಡೇ ಸಲ ಹಾಕಿಕೊಂಡಿದ್ದ ಲಂಗದ ಒಂದು ಭಾಗವನ್ನು ಕತ್ತರಿಯಿಂದ ಕತ್ತರಿಸಿದ್ದು ಕಂಡು ಗಂಗವ್ವಜ್ಜಿಯ ಎದಿ ಧಸಕ್ಕೆಂದಿತು. ಎಪ್ಪತ್ತು ವರ್ಷ ವಯಸ್ಸಿನ ಅನುಭವಿ ಮುದುಕಿ ಗಂಗವ್ವಗ ಏನೋ ಅನುಮಾನ ಬಂದು…”

read more
ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

“ಫೈಜ್ ಕ್ರಾಂತಿ ಮಾಡುತ್ತಾ, ಕ್ರಾಂತಿಯೊಳಗೆ ಪ್ರೀತಿಯನ್ನು ತೋರಿಸಿದವರು. ಕ್ರಾಂತಿಗೂ ಪ್ರೀತಿ ಪಾಠ ಹೇಳಿಕೊಟ್ಟವರು ನನ್ನ ಪ್ರೀತಿಯ ಫೈಜ್. ಅವರು ಜೈಲಿಗೆ ಹೋಗಿ, ಬಿಡುಗಡೆಗೊಂಡು, ಮತ್ತೆ ಜೈಲಿಂದ ಜೈಲಿಗೆ ಸ್ಥಳಾಂತರಗೊಂಡು, ಬಜಾರಿನ ಬೀದಿಯಲ್ಲಿ ಅವರನ್ನು ಮೆರವಣಿಗೆ ಮಾಡಿದರೂ ಸಹ ಅವನ ಮುಖದಲ್ಲಿ ಬುದ್ಧನ ನಗು ಕಾಣತ್ತಾ ಇತ್ತು. ಲೆನಿನ್ ಶಾಂತಿ ಪ್ರಶಸ್ತಿ ಬಂದಾಗಲೂ ‘ಇದು ನನಗಲ್ಲ…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ