ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ
“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”
ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಡಾ. ಸರಜೂ ಕಾಟ್ಕರ್ ಬರೆದ ಮಾತುಗಳು
“ಅಕ್ಷತಾ ನದಿ ಹಾಗೂ ಸಮುದ್ರ ಎರಡನ್ನು ಕಂಡವರು. ಕಾಳಿ ನದಿಯಲ್ಲಿ ಈಜಾಡಿದವರು. ಅರಬ್ಬೀ ಸಮುದ್ರವನ್ನು ಅಪ್ಪಿಕೊಂಡಿದ್ದವರು. ಕಾಳಿ ಅಣೆಕಟ್ಟು ಒಡೆದಿದೆ ಎಂಬ ಗಾಳಿ ಸುದ್ದಿ ಹರಡಿದಾಗ ಜನರಲ್ಲಿ ಎದ್ದ ಕೋಲಾಹಲವನ್ನು ಬಹಳ ಸಮರ್ಥವಾಗಿ ಕವಿತೆಯೊಂದರಲ್ಲಿ ಕಟ್ಟಿಕೊಟ್ಟಿದ್ದಾರೆ. ಅದೇ ಕಾಳಿಯನ್ನು ಅಣೆಕಟ್ಟಿನಲ್ಲಿ ಬಂಧಿಸಿ ಖೈದಿ ಮಾಡಿದ್ದನ್ನು ಅವರು ಇನ್ನೊಂದು ಕವಿತೆಯಲ್ಲಿ ಚಿತ್ರಿಸಿದ್ದಾರೆ.”
ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ
“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”
ಜಿ. ಎಸ್ ಅವಧಾನಿಯವರ ಪುಸ್ತಕದ ಕುರಿತು ಸುಧಾ ಆಡುಕಳ ಬರೆದ ಲೇಖನ
“ವರ್ತಮಾನದ ಸಂಗತಿಗಳಿಗೆ ಸದಾ ತುಡಿಯುವ ಅವಧಾನಿಯವರು ಸಾಕ್ಷರತಾ ಆಂದೋಲನ, ವಿಜ್ಞಾನ ಚಳುವಳಿಗಳ ಮುಂಚೂಣಿಯಲ್ಲಿದ್ದವರು. ಅನೇಕ ವಾದ, ವಿವಾದಗಳಿಗೆ ಮುಖಾಮುಖಿಯಾಗುತ್ತಲೇ ಮೌಢ್ಯ ಮತ್ತು ಕಂದಾಚಾರಗಳನ್ನು ಸದಾ ತಮ್ಮ ಮೊನಚು ಮಾತುಗಳಿಂದ ಟೀಕಿಸುತ್ತಿದ್ದರು. ಪ್ರಖರ ವೈಚಾರಿಕತೆಯನ್ನು ತಮ್ಮ ಶಿಷ್ಯವರ್ಗದಲ್ಲಿ ಬೆಳೆಸಲು ಅನೇಕ ಸೃಜನಶೀಲ…”
ನವೀನ್ ಮಧುಗಿರಿ ಬರೆದ ಕಥೆ “ಬೆಳಕು”
“ಇಷ್ಟೊತ್ತು ಗುಡುಗುತ್ತಿದ್ದ ಯಜಮಾನ ಈಗ ನಕ್ಕ. ‘ಎಲ್ಲಾ ನಂದೇ; ಇಲ್ಲಿರೋ ಕಾಡು, ಮರ, ಭೂಮಿ ಎಲ್ಲಾ ನಂದೇ..’ ಗಹಗಹಿಸಿ ಜೋರಾಗಿ ನಕ್ಕ. ಜೋರುಮಳೆ ಬಂದು ನಿಂತಂತೆ ಯಜಮಾನನ ನಗು ನಿಂತಿತು. ಐದಾರು ಬಾರಿ ಚಿಲುಮೆಯ ಕಿಡಿ ಕತ್ತಲಿನಲ್ಲಿ ಯಜಮಾನನ ಕೈ ಬಾಯಿಯ ಹಾದಿಯಲ್ಲಿ ಓಡಾಡಿತು. ಆ ಸಮಯ ಅಲ್ಲಿರುವ ಪ್ರತಿಯೊಬ್ಬರ ಉಸಿರಾಟದ ಶಬ್ದವು ಸ್ಪಷ್ಟವಾಗಿ ಕೇಳಿಸುವಷ್ಟು ನಿಶ್ಯಬ್ದ ಇತ್ತು. ಆ ನಿಶ್ಯಬ್ದವನ್ನು ಸೀಳಿ ಯಜಮಾನನ ಆಜ್ಞೆಯ ನುಡಿ ಬಂತು.”
ಮಂಜುಳ ಡಿ ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಲೇಖನ
“ಅಂಕಣ ಬರೆಯುವುದೆಂದರೆ, ಒಂದು ವಿಶಾಲಾರ್ಥವನ್ನು ನೀಡುವ ವಸ್ತುವನ್ನು ಕೆಲವೇ ಮಾತುಗಳಲ್ಲಿ ಹುದುಗಿಡುವಂತಹುದು. ಅಂದರೆ ಸಮುದ್ರವನ್ನು ಸಾಸಿವೆ ಕಾಳಲ್ಲಿ ತುಂಬಿದಂತೆ. ಏಕೆಂದರೆ ಒಂದೊಂದೂ ವಸ್ತುಗಳೂ ಸಹ ಕಾದಂಬರಿ ಬರೆಯುವಷ್ಟು ವಿಷಯಗಳನ್ನು ಹೊಂದಿರುತ್ತದೆ. ಉದಾಹರಣೆಗೆ ‘ಕಾಶ್ಮೀರದ ಕರಾಳತೆಯ ಹುದುಲಿನಲ್ಲಿ……’ ನಿಜಕ್ಕೂ ಇಂದಿನ ಕಾಶ್ಮೀರದ ಸ್ಥಿತಿಗೆ ಹಿಡಿದ ಕೈಗನ್ನಡಿ.”
ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ
“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”
ಸಾಹಿತ್ಯ ಸಮ್ಮೇಳನ ಮತ್ತು ಗೋಷ್ಠಿ: ಮಚ್ಚೇಂದ್ರ ಪಿ ಅಣಕಲ್ ಬರೆದ ಲಲಿತ ಪ್ರಬಂಧ
“‘ನನ್ ಹೆಸ್ರು ಕಾರ್ಡನ ಕವಿಗೊಷ್ಠಿಯಲ್ಲಿ ಕೊನೆಯದು’ ಅಂತ ಕಾರ್ಡಿನಲ್ಲಿ ಮುದ್ರಣಗೊಂಡಿತ್ತು. ಅದನ್ನು ಓದುತ್ತಾ ನಿರೂಪಣೆ ಮಾಡೊ ನಾಣಿಗೆ ‘ಅಣ್ಣಾ! ಇಲ್ಲಿ ಬಾ’ ಅಂತ ಮೆಲ್ಲಗೆ ಕರೆದು ಪರದಾ ಹಿಂದೆ ಯಾರಿಗೂ ಕಾಣದಂತೆ ಡಕ್ಕನೆ ಕಾಲ್ ಬಿದ್ದು “ಹ್ಯಾಂಗಾದ್ರು ಈ ಗೋಷ್ಠಿಯಿಂದ ನನ್ನ ಹೆಸ್ರು ಬೇಗ ಹೇಳಿ ಪಾರು ಮಾಡು ನಾಣಿ” ಅಂತ ಕೇಳ್ಕೊಂಡೆ.”
ಓ.ಎಲ್. ನಾಗಭೂಷಣಸ್ವಾಮಿ ಅನುವಾದಿಸಿದ ಒರ್ಹಾನ್ ಪಮುಕ್ ಕಾದಂಬರಿಯ ಆಯ್ದ ಭಾಗ
“ಜೂನ್ ತಿಂಗಳ ಮಧ್ಯಭಾಗದಲ್ಲಿ ಒಂದು ದಿನ ಪಕ್ಕದ ಜಮೀನಿಂದ ಜನ ಖುಷಿಯಾಗಿ ಕೂಗಾಡುವುದು, ಗುಂಡು ಹಾರಿಸುವುದು ಕೇಳಿಸಿತು. ಏನೆಂದು ನೋಡುವುದಕ್ಕೆ ಹೋದೆ. ಬಾವಿಯಲ್ಲಿ ನೀರು ಚಿಮ್ಮಿತ್ತು. ಆ ಒಳ್ಳೆಯ ಸುದ್ದಿ ಕೇಳಿದ ತಕ್ಷಣ ಜಮೀನಿನ ಯಜಮಾನ ಸಂಭ್ರಮಪಡುವುದಕ್ಕೆಂದು ರಯೀಸ್ ನಿಂದ ಬಂದಿದ್ದ. ಖುಷಿಯಲ್ಲಿ ಆಕಾಶಕ್ಕೆ ಗುಂಡು ಹಾರಿಸುತಿದ್ದ. ಗಾಳಿಯಲ್ಲಿ ಮದ್ದಿನ ಪುಡಿಯ ಘಾಟಿತ್ತು.”









