Advertisement

ಸಾಹಿತ್ಯ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

read more

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

read more

ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ

read more

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

read more
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ‍್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’

read more
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

read more
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ  ತೆಲುಗಿನ ಎಸ್.ವಿ. ಕೃಷ್ಣ ಕತೆ

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ