ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ
ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ
ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ
ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ
ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”
ಆನಂದ ಭೋವಿ ಬರೆದ ಈ ಭಾನುವಾರದ ಕತೆ
ಅದ್ಯಾವ ಪುಣ್ಯಾತಗಿತ್ತಿ ಅಬ್ಬರಿಸಿದಳೋ ಗೊತ್ತಿಲ್ಲ “ಯಲ್ಲವ್ವ ಬಂಗಾರದ ಮಳೆ ಹರಸಾಕತ್ತಾಳ ಯಾರಿಗೆ ಸಿಗತೈತಿ ಅವರ ಬಾಳು ಬಂಗಾರ ಆಗತೈತಿ” ಇದೊಂದು ಮಾತು ಬರಸಿಡಿಲು ಬಡಿದಂಗ ಆತು. ಸೀಟಿನ ಚಿಂತ್ಯಾಗ ಮುಕರಿಬಿದ್ದಿದ್ದ ಮಂದಿ ಹುಯ್ಯಂತ ಮ್ಯಾಲಕ್ಕೆತ್ತು. ಅವಳು ಇವಳು ಯಾರಿಗೂ ಯಾರು ಕಾಣಲಿಲ್ಲ. ಹಾರಾಡಿ ಬೀಳುತ್ತಿದ್ದ ಸರದ ಗುಂಡು ಆರಿಸಲಿಕ್ಕ ಮುಗಿಬಿದ್ದರು. ಅವರ ಮ್ಯಾಲ ಇವರು ಇವರ ಮ್ಯಾಲ ಅವರು ನೋಡ ನೋಡುವದ್ರೊಳಗ ಕಾಲ್ತುಳಿದ ಗದ್ದಲ ಬಸ್ಸನ್ನು ನುಂಗಿಕೊಂಡಿತು. ಬಿಸಲಿನ ಜಳದೊಳಗ ರಕ್ತದ ವಾಸನೆ ಬಡಿಯತೊಡಗಿತು.
ಆನಂದ ಭೋವಿ ಬರೆದ ಈ ಭಾನುವಾರದ ಕತೆ “ದೇವರಿಗೂ ಒಂದು ಟಿಕಿಟು”
ಗಣಿ ಇತಿಹಾಸದ ಪುಸ್ತಕ ಸೇರಿಕೊಂಡ ಮಣಿಯ ಸಿಲಿಕೋಸಿಸ್ ಸಾವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಮಣಿ, “ಸ್ವಾಮಿ ಇಲ್ಲೇ ಹುಟ್ಟಿದ್ದು. ಇಲ್ಲೇ ಸಾಯುವುದು. ಆ ಕಾಲದಲ್ಲಿ ನಾವು ಮೈನಿಂಗ್ ಕಾಲೋನಿಗಳನ್ನು ಬಿಟ್ಟು ಹೊರಕ್ಕೆ ಹೋಗ್ತಾ ಇರಲಿಲ್ಲ. ಈಗ ಆಗಲ್ಲವಲ್ಲ. ಕಾಲೋನಿಗಳಲ್ಲಿ ಇರುವವರೆಲ್ಲ ಕನ್ನಡ ಮಾತಾಡ್ತಾರೆ. ಕನ್ನಡ ಕಲಿತುಕೊಂಡಿದ್ದಾರೆ. ಸಾವಿರಾರು ಜನ ಬೆಂಗಳೂರಿನಲ್ಲಿ ಸೆಟ್ಲ್ ಆಗಿದ್ದಾರೆ. ಅದೇ ರೀತಿ ಸಾವಿರಾರು ಹೆಣ್ಣುಮಕ್ಕಳು ಗಂಡುಮಕ್ಕಳು ಕೆಜಿಎಫ್ನಿಂದ ಬೆಂಗಳೂರಿಗೆ ದಿನನಿತ್ಯ ರೈಲ್ಗಳಲ್ಲಿ ಕೆಲಸಕ್ಕೆ ಹೋಗಿಬರ್ತಾರೆ. ಕಾಲ ಬದಲಾಗಿದೆ ಸ್ವಾಮಿ” ಎಂದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್ ಬರೆದ ಕತೆ
ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್ಕಾಮ್ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್ ಬರೆದ ಕತೆ “ಹಾವಾಡಿಗ”
ಫೋಟೋದಲ್ಲಿ ಬಂಧಿಯಾದ ಸೆಲ್ವಂ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಶಿಲಾಸ್ಫೋಟವಾದಾಗ ಬಹುಶಃ ನೀರಿನ ಮಟ್ಟ ಒಮ್ಮೆಲೆ ಮೇಲಕ್ಕೆ ಬಂದು ಮತ್ತೆ ಕೆಳಕ್ಕೆ ಹೋದಾಗ ಮೂವರೂ ಕಳ್ಳರನ್ನು ನೀರಿನ ಅಲೆಗಳು ಸುರಂಗಗಳಲ್ಲಿ ಎಲ್ಲೋ ಆಳಕ್ಕೆ ಎಳೆದುಕೊಂಡು ಹೋಗಿರಬೇಕು. ಆಗ ಅವರ ದೇಹಗಳು ಎಲ್ಲೋ ಆಳದ ಸುರಂಗಗಳಲ್ಲಿ ಇಲ್ಲ ಸ್ಟೋಪ್ಗಳಲ್ಲಿ ಶಿಲೆಗಳ ಮಧ್ಯೆ ಸಿಕ್ಕಿಕೊಂಡಿರಬೇಕು ಎಂದು ಊಹಿಸಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ
ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ







