Advertisement

ಸಾಹಿತ್ಯ

ನನಸಾಗದ ಕನಸುಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನನಸಾಗದ ಕನಸುಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ವಿಜಯ ಮತ್ತು ಅಯ್ಯಪ್ಪನಿಗೆ ವಿಷಯದ ಗಾತ್ರ ಅರ್ಥವಾಯಿತು. ಕನಕ ಟೀ ಮಾಡಿಕೊಟ್ಟು ಕುಡಿದರು. ಅಷ್ಟರಲ್ಲಿ ಮಣಿ ಬಂದ. ಸಮತಿಯನ್ನು ಕರೆದು ಒಂದು ತಟ್ಟೆಯಲ್ಲಿ ತೆಂಗಿನಕಾಯಿ ಜೊತೆಗೆ ಎಲ್ಲವನ್ನು ಇಟ್ಟು ಕೊಟ್ಟಳು. ವಿಜಯ ತೆಗೆದುಕೊಳ್ಳುತ್ತ ಈಹೊತ್ತಿನಿಂದ “ನೀವು ನಾವು ನೆಂಟರಾದೆವು” ಎಂದಳು. ಸುಮತಿ ಎಲ್ಲವನ್ನೂ ಒಂದು ಸಣ್ಣ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಟ್ಟಳು. ವಿಜಯ, ಸುಮತಿಯನ್ನು ನೋಡುತ್ತ ಮನಸ್ಸಿನಲ್ಲಿ ಏನೋ ಲೆಕ್ಕಾಚಾರ ಹಾಕಿಕೊಳ್ಳುತ್ತಾ ಹಾಗೇ ಕುಳಿತುಕೊಂಡಿದ್ದಳು. ಅಯ್ಯಪ್ಪ, “ಹೋಗೋಣವ?” ಎಂದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

read more
ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ  ಕತೆ

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

read more
ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ

“ಆ ಧೂಪದ ಹೈಕಳನ್ನು ಯಾರೂ ಹತ್ತಿಸಿಕೊಂಡು ಹೊಬ್ಗ್ಯಾಡ್ರಿ” ಎಂದು ಹೇಳಿದರೆ; ಎರಡು ದಿನ ಹೈಕಳು ಇಸ್ಕೂಲಿಗೆ ಬಂದರೆ ಮೂರನೆ ದಿನಕ್ಕೆ ಮತ್ತೆ ಅದೇ ರಾಗ ಅದೇ ಹಾಡು. ರೋಸಿ ಹೋದ ಮೇಷ್ಟ್ರು ಒಮ್ಮೆ ಬೆಟ್ಟದ ಇನ್ಸಪೆಕ್ಟ್ರು ಊರಿಗೆ ಬಂದಾಗ “ಯಾರಿಗೂ ಹೆದರದ ಇವರು ಪೋಲಿಸ್ನೋರ‍್ಗೆ ಖರೇ ಹೆದ್ರೂದು” ಎಂದು ಸ್ವಾಲಿಗ್ರ ಕೇರಿಗೆ, ಹೊಲೇರಕೇರಿಗೆ ಕರ್ಕೊಂಡೋಗಿ “ಮಕ್ಕಳನ್ನ ತಾಳುಬೆಟ್ಟಕ್ಕೆ ಧೂಪ ಮಾರುವುದಕ್ಕೆ ಕಳುಹಿಸಿದರೆ ಜೇಲಿಗೆ ಹಾಕಿಸ್ತೀನಿ ಎಂದು ರೋಪ್ ಹೊಡೆಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ “ಧೂಪದ ಮಕ್ಕಳು”

read more
ಶ್ರೀಲೋಲ ಸೋಮಯಾಜಿ ಬರೆದ ಈ ಭಾನುವಾರದ ಕತೆ

ಶ್ರೀಲೋಲ ಸೋಮಯಾಜಿ ಬರೆದ ಈ ಭಾನುವಾರದ ಕತೆ

ಕುಟುಂಬಕ್ಕೆ ಆಗಮಿಸಿದ ಹೊಸ ಸದಸ್ಯೆಯ ಆಗಮನದ ಸಂತೋಷ ಬರಿಯ ಹದಿನೈದು ದಿನಗಳಲ್ಲಿ ಕಮರಿಹೋಯಿತು. ಆಸ್ಪತ್ರೆಯಿಂದ ಹೊರಬರುವ ಮೊದಲೇ ಮೊದಲ ಬಾರಿಗೆ ದಪ್ಪ ಸೂಜಿಯಿಂದ ಚುಚ್ಚಿಸಿಕೊಂಡು ರಕ್ತವನ್ನು ದೇಹದ ಒಳಗೆ ದಾಟಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಅಳುತ್ತಿದ್ದ ಮಗುವನ್ನು ನೋಡಲಾಗದ ರಮ್ಯಾ ಕೋಣೆಯಿಂದ ಹೊರಗೆ ಓಡಿಬಂದು ಬಿಕ್ಕಿಬಿಕ್ಕಿ ಅಳತೊಡಗಿದಳು.
ಶ್ರೀಲೋಲ ಸೋಮಯಾಜಿ ಬರೆದ “ಮೊನಾಲಿಸಾಳ ನಗು” ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್‌ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್‌ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ

read more
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

read more
ಬದುಕಿನ ತಿರುವುಗಳು….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಬದುಕಿನ ತಿರುವುಗಳು….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಬೀದಿಯಲ್ಲಿ ಬರುವವರು ಹೋಗುವವರು ಹುಡುಗಿಯರನ್ನು ನೋಡಿಕೊಂಡು ಹೋಗುತ್ತಿದ್ದರು. ಕೆಲವು ಹೆಣ್ಣುಮಕ್ಕಳು ಅವರಿಬ್ಬರ ಸುತ್ತಲೂ ನಿಂತುಕೊಂಡು ಹೂವಿನ ಜಡೆಗಳನ್ನು ಮತ್ತು ಅವರಿಬ್ಬರನ್ನೂ ನೋಡಿ ಒಳಗೊಳಗೆ ನಾವೂ ಇಂತಹ ಮಲ್ಲಿಗೆ ಮೊಗ್ಗಿನ ಜಡೆಗಳನ್ನ ಹಾಕಿಕೊಂಡರೆ ಹೇಗಿರುತ್ತದೆ ಎನ್ನುವ ಕನಸಿನಲ್ಲಿ ನಿಂತಕಡೆಯೇ ತೇಲಾಡುತ್ತಿದ್ದರು. ಪಕ್ಕದ ಮನೆಗಳ ಕೆಲವು ಮಹಿಳೆಯರು ಬಂದು “ಯಾರು ಈ ಮೊಗ್ಗಿನ ಜಡೆಗಳನ್ನು ಹಾಕಿದ್ದು?” ಎಂದಾಗ ಪಕ್ಕದಲ್ಲಿದ್ದ ಮಹಿಳೆಯೊಬ್ಬರು “ಇನ್ಯಾರು ಅಲಮೇಲು. ವೆಲ್ಲೂರು ಕಡೆಯವರು ಹೂಕಟ್ಟುವುದರಲ್ಲಿ ತುಂಬಾ ಫೇಮಸ್ ಅಲ್ಲವೇ?” ಎಂದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತನೆಯ ಕಂತು ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ

ಅಪ್ಪ- ಮಗ ಮತ್ತೆ ಎಂದಿನಂತೆ ಕೂದಲು ಕತ್ತರಿಸಿಕೊಳ್ಳಲು ಹೋದರು. ಅಲ್ಲಿಗೆ ಹೋದಾಗ ಪ್ರಭಾತ ಅವಾಕ್ಕಾದ. ಯಾವಾಗಲೂ ಕಚಾಕಚ್‌ ತುಂಬಿರುತ್ತಿದ್ದ ಮನಿಷಾ ಹೇರ್‌ ಆರ್ಟ್‌ ಖಾಲಿಯಾಗಿತ್ತು. ಅದರ ಗಾಜುಗಳೆಲ್ಲ ಛಿದ್ರವಾಗಿ ಅವಶೇಷಗಳು ಮಾತ್ರ ಕಾಣುತ್ತಿದ್ದವು. ಒಂದೇಒಂದು ಕನ್ನಡಿ, ಒಂದು ಎತ್ತರದ ಕುರ್ಚಿ ಹಾಗೂ ನೆಲದ ಮೇಲೆ ಕುಕ್ಕರಗಾಲಿನಲ್ಲಿ ಕೂತಿದ್ದ ಕಳಾಹೀನ ಮುಖದ ಒಂಟಿ ವ್ಯಕ್ತಿ. ಅವನ ಮುಖ ನೋಡಿದಾಗ ಪ್ರಭಾತನಿಗೆ ನೆನಪಾಯಿತು – ಅಷ್ಟೂ ದಿನ ತಮ್ಮಿಂದ ಹಣ ಪಡೆಯುತ್ತಿದ್ದ ವ್ಯಕ್ತಿ ಈತನೇ. ಮೊದಲು ಮಗ, ನಂತರ ಅಪ್ಪ ಹೀಗೆ ಇಬ್ಬರೂ ಒಬ್ಬರಾದ ನಂತರ ಒಬ್ಬರು ಕತ್ತರಿಗೆ ತಲೆಯನ್ನೊಡ್ಡಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ “ತೇಲ್ ಮಾಲಿಶ್”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ