ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ
ಕೂರಾಪುರಾಣ ೧೨: ಹಿಡಿ ಪ್ರೀತಿಗೆ ಹಂಬಲಿಸುತ್ತ, ಹೃದಯ ಕರಗುವಷ್ಟು ಪ್ರೀತಿಸುತ್ತ..
ಬೆನ್ನು ಸವರತೊಡಗಿದರೆ ಅಡ್ಡ ಬಿದ್ದು ಹೊಟ್ಟೆಯನ್ನು ಕೆರೆ ಎಂಬಂತೆ ಮುಂದಿನ ಎರಡು ಕಾಲುಗಳನ್ನು ಮಡಚಿದಾಗ ಮುದ್ದುಕ್ಕದೇ ಹೇಗೆ ಸಾಧ್ಯ? ಒಂದು ವೇಳೆ ನಾನು ಏಳುವುದು ತಡವಾದರೆ ನನ್ನ ಹಾಸಿಗೆಯ ಪಕ್ಕದಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಕೂತು ಬಿಡುತ್ತಿದ್ದ. ಬೆಳಿಗ್ಗೆ ಎದ್ದ ಕೂಡಲೇ ಇವನದೇ ದಿವ್ಯದರ್ಶನ. ಈಗ ಹಾಗಿಲ್ಲ, ದೊಡ್ಡವನಾಗಿದ್ದಾನೆ. ಎದ್ದು ತನ್ನ ಕೆಲಸಗಳತ್ತ ಗಮನ ಕೊಡುತ್ತಾನೆ. ಆದರೆ ಆಗಾಗ ಮೈ ಕೆರೆಸಿಕೊಳ್ಳುವುದು, ಕಿವಿಗಳನ್ನು ಮಸಾಜ್ ಮಾಡಿಸಿಕೊಳ್ಳುವುದನ್ನು ಬಿಟ್ಟಿಲ್ಲ. ನಾವಷ್ಟೇ ಅಲ್ಲ, ನಮ್ಮ ಮನೆಗೆ ಯಾರೇ ಬಂದರೂ ಅವರು ಸಹ ಅದನ್ನೆಲ್ಲ ಮಾಡಲೇಬೇಕು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ
ವೃದ್ಧಾಶ್ರಮದ ಅಂಗಳ ತಮ್ಮ ಮನೆ. ಆವತ್ತು ಭಾವನಾಳೊಡನೆ ಮನೆ ಬಿಟ್ಟು ಹೋಗುವಾಗ ಅಪ್ಪ ಆರಾಮ ಕುರ್ಚಿಯ ಮೇಲೆ ನಿರ್ಲಿಪ್ತವಾಗಿ ಕೂತಿದ್ದರು. ಅಮ್ಮ ಕಣ್ಣಿನಲ್ಲಿ ನೀರು ತುಂಬಿಕೊಂಡು ನೋಡುತ್ತ ನಿಂತಿದ್ದರು. ಹದಿಮೂರು ಜನ ವೃದ್ಧ-ವೃದ್ಧೆಯರೂ ನಮ್ಮನ್ನೆ ನೋಡುತ್ತ ನಿಂತಿದ್ದರು. ಏಕೋ ನನ್ನಲ್ಲಿ ಅಳುಕು. ಭಾವನಾ ಸರಸರನೇ ಹೆಜ್ಜೆ ಹಾಕಿ ಕಾರಿನಲ್ಲಿ ಕುಳಿತುಬಿಟ್ಟಿದ್ದಳು. ಲಚ್ಚಿ ಆಗ ಗರ್ಭಿಣಿ. ನನ್ನೆಡೆಗೆ ದುರದುರನೆ ದಿಟ್ಟಿಸುತ್ತಿದ್ದಳು.
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಕೊ ಕ್ಕೊ ಕ್ಕೊ…” ನಿಮ್ಮ ಓದಿಗೆ
ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ
ಹಾಲುಸೇವೆ ಮುಗಿಸಿಕೊಂಡು ಗೋಪಾಲಿ ನಾಗೇನಹಳ್ಳಿಗೆ ಮರಳುತ್ತಾನೆ ಎಂದು ನಂಬಿಕೆಯೇ ಇಟ್ಟುಕೊಂಡಿರದ ಜನಕ್ಕೆ ಆಗಬಾರದಷ್ಟು ನಿರಾಶೆಯಾಯಿತು. ‘ಇಂಥ ಪಾಖಂಡಿಯೊಬ್ಬ ಹಾಲುಸೇವೆ ಮಾಡಿ ಮರಳಿಬರುತ್ತಾನೆ ಅಂದರೆ ಅದರರ್ಥ ಏನು?’ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಏಕಕಾಲಕ್ಕೆ ಮೂಡಿತು. ಸತ್ಯವಂತದೇವರಾದ ನಾಗಲಿಂಗಸ್ವಾಮಿ ಗೋಪಾಲಿಯಂಥ ಅಪವಿತ್ರ ದೇಹಿಯಿಂದ ಸ್ಪರ್ಷಕ್ಕೆ ಒಳಗಾಗಿ ಅದ್ಹೇಗೆ ಪರಿಣಾಮ ತೋರಿಸಲಿಲ್ಲ? ಸಾಯುವ ಘಳಿಗೆಯಲ್ಲಿ ಗುರುಶಾಂತಯ್ಯನವರು ಹಾಗೇಕೆ ಎಚ್ಚರಿಸುವ ದನಿಯಲ್ಲಿ, ಶಾಪ ಹಾಕುವ ರೀತಿಯಲ್ಲಿ ನುಡಿದರು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ “ಹಾಲುಸೇವೆ” ನಿಮ್ಮ ಓದಿಗೆ
ಮನುಷ್ಯನ ಪ್ರಸ್ತಾಪನೆ ದೇವರ ನಿರಾಕರಣೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಮಣಿ ಅವಳನ್ನು ತಬ್ಬಿಕೊಂಡು ಮಲಗೇ ಇದ್ದನು. ಸೆಲ್ವಿ, “ಇದಕ್ಕೆ ನಾನು, ನಿನ್ನನ್ನು ಹತ್ತಿರಕ್ಕೆ ಸೇರಿಸ್ತಾಇರಲಿಲ್ಲ” ಎಂದಳು. ಆದರೆ ಅವನು ಅವಳನ್ನು ಬಿಡಲಿಲ್ಲ. ಸೆಲ್ವಿ ಮಣಿಯಿಂದ ಬಿಡಿಸಿಕೊಳ್ಳಲು ಹರಸಾಹಸ ಮಾಡಬೇಕಾಯಿತು. ಸೆಲ್ವಿ ಮತ್ತೆ, “ನಿನ್ನನ್ನ ಮನೆಗೆ ಸೇರಿಸಿಕೊಂಡಿದ್ದೆ ತಪ್ಪಾಯಿತು” ಎಂದು ಅವನಿಂದ ಬಿಡಿಸಿಕೊಂಡು ಎದ್ದು ಬಾಗಿಲನ್ನು ನಿಧಾನವಾಗಿ ತೆರೆದು ಹೊರಕ್ಕೆ ನೋಡಿದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ
ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ
ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”
ದಾರಿ ತಪ್ಪಿದ ಪ್ರೀತಿ ಬದುಕು ಕಟ್ಟಿಕೊಳ್ಳುವುದನ್ನು ತಪ್ಪಿಸುವುದೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಕಾಲಿನ ಹೆಬ್ಬೆರಳಲ್ಲಿ ರಕ್ತ ಒಸರುತ್ತಿದೆ. ಕನಕ, “ಅಯ್ಯೋ ಏನ್ರಿ ಇದು?” ಎಂದಳು. ಸೆಲ್ವಮ್, “ಏನೂ ಇಲ್ಲ. ಅಲ್ಲೊಂದು ಕಲ್ಲು ಹೊಡೆದುಬಿಟ್ಟಿತು. ಒಂದಷ್ಟು ಅರಿಶಿನ, ಒದ್ದೆಬಟ್ಟೆ ತೆಕೊಂಡು ಬಾ” ಎಂದ. ಕನಕ ಮನೆ ಒಳಕ್ಕೆ ಹೋಗಿ ಚೆಂಬಿನಲ್ಲಿ ನೀರು ತಂದು “ಸುಮತಿ ನೀರಾಕು ನಿಮ್ಮಪ್ಪ ಬೆರಳುಗಳನ್ನು ತೊಳೆದುಕೊಳ್ಳಲಿ. ನಾನು ಅರಿಶಿನ ಬಟ್ಟೆ ತರ್ತೀನಿ” ಎಂದು ಮತ್ತೆ ಮನೆ ಒಳಕ್ಕೆ ಹೋದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಐದನೆಯ ಕಂತು ನಿಮ್ಮ ಓದಿಗೆ





