ಜೋಡಿಯ ಜೊತೆ, ಪ್ರಧಾನಿಯ ಮದುವೆ: ವಿನತೆ ಶರ್ಮ ಅಂಕಣ
ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಬದಲಾಗಿದೆ ಕನ್ನಡ ನಾಡು, ಡಿಜಿಟಲ್ ಕರ್ನಾಟಕದ ಹಾಡು ಪಾಡು: ಎಲ್.ಜಿ.ಮೀರಾ ಅಂಕಣ
ಇಪ್ಪತ್ತೊಂದನೇ ಶತಮಾನದ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಎಲ್ಲ ನಾಡುಗಳಂತೆ ನಮ್ಮ ಕನ್ನಡ ನಾಡು ಸಹ ಬದಲಾಗುತ್ತಿದೆ. ನಮಗೆ ಬೇಕೋ ಬೇಡವೊ ನಮಗೆ ಪರಿಚಿತವಾಗಿದ್ದ ಬದುಕಿನ ಲಯಗಳು ನಿಧಾನವಾಗಿ ಮರೆಯಾಗುತ್ತಾ, ಅಪರಿಚಿತ, ನೂತನ ಲಯಗಳು ನಮ್ಮ ದಾರಿಯಲ್ಲಿ ಪ್ರತ್ಯಕ್ಷವಾಗುತ್ತಿವೆ. `ಅಯ್ಯೋ, ಹೇಗಿದ್ದದ್ದು ಹೇಗಾಯ್ತಪ್ಪ! ಎಲ್ಲ ಹಾಳಾಗಿ ಹೋಯಿತಲ್ಲ! ಮನುಷ್ಯ ಪ್ರಪಂಚ ಇನ್ನು ಮುಳುಗಿ ಹೋಗುತ್ತೆ! ಪ್ರಳಯವಾಗುತ್ತೆ!!’ ಎಂದು ಗೋಳಾಡುತ್ತಾ ಕೂರುವುದು ವಿವೇಕದ ಆಯ್ಕೆಯಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೆರಡನೆಯ ಬರಹ
ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ
ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ
ಆಧ್ಯಾತ್ಮಿಕ ಶಿಬಿರ-ಮಹಿಳೆಯರಿಗೆ: ಸುಕನ್ಯಾ ಕನಾರಳ್ಳಿ ಅಂಕಣ
ನಾನು ನೋಡಿದ್ದ ಒಂದು ಅದ್ಭುತ ತಾಳಮದ್ದಳೆ ನೆನಪಿಗೆ ಬಂತು. ಕೃಷ್ಣ ತಾನು ಸಂಧಾನಕ್ಕೆ ಹೋಗುವ ಮುನ್ನ ದ್ರೌಪದಿಯನ್ನು ಭೇಟಿ ಮಾಡುತ್ತಾನೆ. ತುಂಬಿದ ಸಭೆಯಲ್ಲಿ ತನಗೆ ಆದ ಅವಮಾನದ ಗತಿ ಏನು? ಬಿಚ್ಚಿದ ಮುಡಿಯ ಗತಿಯೇನು? ಈಗ ಆ ಗಂಡ ಧರ್ಮರಾಜ ನಿನ್ನನ್ನ ಸಂಧಾನಕ್ಕೆ ಕಳುಹಿಸುತ್ತಿದ್ದಾನೆ. ಯಾಕೆಂದರೆ ಅದು ಕೇವಲ ಹೆಣ್ಣಿಗಾದ ಅವಮಾನ ಅಲ್ಲವಾ ಕೃಷ್ಣ? ನೀನೂ ಆರಾಣೆ ಗಂಡಸಾಗಿಬಿಟ್ಟೆಯಾ? ಎಂದು ಚುಚ್ಚಿ ಕೇಳುತ್ತಾಳೆ. ಸುಮಾರು ಒಂದು ಗಂಟೆ ಅವರ ನಡುವೆ ಸಂವಾದ ನಡೆಯುತ್ತದೆ. ಅವರ ನಡುವಿನ ಆತ್ಮೀಯ ಸಲಿಗೆ, ಒಬ್ಬರಿಗೊಬ್ಬರು ಸ್ಪಂದಿಸುವ ರೀತಿ, ಚತುರ ಸಂಭಾಷಣೆಗಳನ್ನು ಬಿಟ್ಟ ಬಾಯಿ ಬಿಟ್ಟಂತೆಯೇ ನೋಡಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
ಕಾಫಿ ಮತ್ತು ಕಾಫಿರರ ಕಥೆ!: ದರ್ಶನ್ ಜಯಣ್ಣ ಸರಣಿ
ಕ್ರಿಶ್ಚಿಯನ್ ದೇಶವಾದ ಇಥಿಯೋಪಿಯಾದಲ್ಲಿ ಕಾಫಿ ಉಗಮವಾದರೂ ಅದು ಪ್ರವರ್ಧಮಾನಕ್ಕೆ ಬಂದದ್ದು ಇಂದಿನ ಕಾಫಿಯಾಗಿ ರೂಪುಗೊಂಡಿದ್ದು ಮಾತ್ರ ಇಸ್ಲಾಮಿಕ್ ದೇಶಗಳಲ್ಲಿ ಅಂದರೆ ದಕ್ಷಿಣ ಅರೇಬಿಯಾ ಇಂದಿನ ಯೆಮೆನ್, ಸೌದಿಯ ದಕ್ಷಿಣನ ಅಭಾ ಪ್ರಾಂತ್ಯಗಳಲ್ಲಿ. ಒಟ್ಟೋಮನ್ ಸುಲ್ತಾನ ಕಾಫಿಯ ಶಕ್ತಿಯನ್ನು ಬಲ್ಲವನು ಈ ಬೀಜಗಳನ್ನು ರಫ್ತು ಮಾಡಬೇಕಾದರೆ ಹುರಿದೇ ಮಾಡಬೇಕೆಂಬ ಗಟ್ಟಿ ಫರ್ಮಾನು ಹೊರಡಿಸಿದ್ದ ಮತ್ತದು ಶತಮಾನಗಳ ಕಾಲ ಚಾಲ್ತಿಯಲ್ಲಿತ್ತು. ಇದಕ್ಕೆ ಕಾರಣ ಕಾಫಿ ಬೇರೆಲ್ಲೂ ಬೆಳೆಯಲು ಆಗಬಾರದು ಎಂಬ ಆಲೋಚನೆ.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಹನ್ನೆರಡನೆಯ ಕಂತು
ಗುರು ಮತ್ತು ಹಕ್ಕಿಗೂಡು: ಸುಕನ್ಯಾ ಕನಾರಳ್ಳಿ ಅಂಕಣ
ಗಾಂಧೀಜಿ ಒಮ್ಮೆ ಯರವಾಡ ಜೈಲಿನಲ್ಲಿದ್ದಾಗ ಒಂದು ರಾತ್ರಿ ಬರಿಯ ದುಃಸ್ವಪ್ನಗಳೇ ಬಿದ್ದು ಬೆಚ್ಚಿದ್ದಾಗ ವಿಚಾರಿಸಿದರಂತೆ. ಹಿಂದಿನ ರಾತ್ರಿಯ ಅಡಿಗೆಯನ್ನು ಒಬ್ಬ ಕೊಲೆಗಡುಕ ಅಪರಾಧಿ ಮಾಡಿದ್ದಾನೆಂದು ತಿಳಿದು ಅಂದಿನಿಂದ ರಾತ್ರಿಯ ಊಟವನ್ನೇ ಬಿಟ್ಟರಂತೆ. ನಮ್ಮ ಸೂಕ್ಷ್ಮ ಶರೀರದ ಚೈತನ್ಯ ಇನ್ನೊಬ್ಬರಿಗೂ ಅನುಭವಕ್ಕೆ ಬರುತ್ತದೆ ಎಂದು ಅರಿವಾಗುವುದು ಬ್ರಹ್ಮವಿದ್ಯೆಯೇನೂ ಅಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ
ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”
ನಿಜ ಆಸ್ಟ್ರೇಲಿಯಾ ಎಂಬ ಪ್ರಶ್ನೆ: ವಿನತೆ ಶರ್ಮಾ ಅಂಕಣ
ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ
ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ









