ಕಾಸರವಳ್ಳಿ, ಕಾಯ್ಕಿಣಿ ಮತ್ತು ಟ್ರಾಫಿಕ್!: ಸುಕನ್ಯಾ ಕನಾರಳ್ಳಿ ಅಂಕಣ
ನಮ್ಮ ಅಪಾರ್ಟ್ಮೆಂಟಿನ ತನಕವೂ ಇದ್ದ ಪೊಲೀಸರನ್ನು ಕಂಡಾಗ ಮಾತ್ರ ಇದು ಜಯಂತ ಎಫೆಕ್ಟ್ ಅಲ್ಲ ಅಂತ ಅರಿವಾಗಿತ್ತು. ಸೆಕ್ಯೂರಿಟಿ ಹತ್ತಿರ ನಿಲ್ಲಿಸಿ ಏನ್ರೀ ಇದು ಅವಾಂತರ ಎಂದು ವಿಚಾರಿಸಿದೆ. ‘ಅಯ್ಯೋ, ಮೇಡಮ್. ಸಿಎಂ ಬರ್ತಾ ಇದಾರೆ. ಪಕ್ಕದ ಹೋಟೆಲ್ಲಿನಲ್ಲಿ ಪ್ರಜಾವಾಣಿ ವಾರ್ಷಿಕ ಸಾಧಕಿಯರಿಗೆ ಅಭಿನಂದನೆ ಸಮಾರಂಭ ಇದೆ. ನಿಮ್ಮ ಹೆಸರು ಸಹ ಒಂದಲ್ಲಾ ಒಂದು ದಿನ ಬರುತ್ತೆ ನೋಡ್ತಾ ಇರಿ,’ ಎಂದು ರೇಗಿಸಿದಾಗ, ‘ಆ ಹೊತ್ತಿಗೆ ನಾನು ಇರೊಲ್ಲ. ಇದ್ದರೂ ಹೋಗೊಲ್ಲ,’ ಎಂದು ಉಡಾಫೆಯಿಂದ ನಕ್ಕು ಗೇಟನ್ನು ದಾಟಿ ಒಳಹೊಕ್ಕು ಸಮಾಧಾನದ ನಿಟ್ಟುಸಿರು ಬಿಟ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
ಮೊಬೈಲ್ ಬಂದುದು...: ವಿನಾಯಕ ಅರಳಸುರಳಿ ಅಂಕಣ
ದೂರವಿದ್ದಷ್ಟೂ ನಕ್ಷತ್ರದ ಅಂದ ಜಾಸ್ತಿಯಂತೆ. ಪಕ್ಕದ ಮನೆಯಲ್ಲಿದ್ದಾಗ ಯಕ್ಷಲೋಕದ ಮಾಯಾಗೋಲದಂತೆ ಭಾಸವಾಗುತ್ತಿದ್ದ, ಮರದ ಕೊರಡಿನಲ್ಲಿ ಕೆತ್ತಿ ಆಡುವಂತೆ ಪ್ರೇರೇಪಿಸಿದ್ದ ಮೊಬೈಲು ತನ್ನದೇ ಅಂಗೈಗೆ ಬಂದ ಕೆಲವೇ ದಿನಗಳಲ್ಲಿ ಮರದ ಕೊರಡಿನಷ್ಟೇ ಸಾಮಾನ್ಯ ಸಂಗತಿಯಾಗಿಹೋಯಿತು. ಅದರಲ್ಲಿ ಬರುತ್ತಿದ್ದ ಮೆಸೇಜ್, ಕಾಲ್ಗಳ ಜೊತೆ ಆಚೆ ಬದಿಯಿಂದ ಅವನ್ನು ಕಳಿಸುತ್ತಿದ್ದ ವ್ಯಕ್ತಿಗಳೂ ಹಳಸಿಹೋಗಿದ್ದರಿಂದ ಮೊಬೈಲು ಹಳೆಯ ಹೆಂಡತಿ/ಹಳೆಯ ಗಂಡನಂತೆ ತನ್ನಲ್ಲಿನ ಹೊಸತನವನ್ನು ಕಳೆದುಕೊಂಡುಬಿಟ್ಟಿತು.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ
ಆಸ್ಟ್ರೇಲಿಯಾದಲ್ಲಿ ಪರಿಸರ ಹೋರಾಟ ಮತ್ತೂ…: ಡಾ. ವಿನತೆ ಶರ್ಮ ಅಂಕಣ
ಅವರ ಈ ಎಲ್ಲಾ ನಡೆಗಳಿಂದ ನಾಶವಾಗಿದ್ದು ಆಸ್ಟ್ರೇಲಿಯಾದ ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳ ಜನಪಂಗಡಗಳಲ್ಲಿ ಇದ್ದ ಬಹುಭಾಷೆಗಳು, ಬಹುಸಂಸ್ಕೃತಿಗಳು ಮತ್ತು ಬಹುತ್ವವನ್ನು ಅಪ್ಪಿಕೊಂಡಿದ್ದ ನೆಲ-ನಾಡುಗಳ ಸಂಬಂಧಗಳು, ಅಸ್ಮಿತೆ, ಪ್ರಾಪಂಚಿಕ ದೃಷ್ಟಿಕೋನಗಳು. ಅದೃಷ್ಟಕ್ಕೆ, ಅವು ಸಂಪೂರ್ಣವಾಗಿ ನಿರ್ನಾಮವಾಗದೆ, ನಿಧಾನವಾಗಿ ಮೂಲವಾಸಿಗಳು ಸುಧಾರಿಸಿಕೊಂಡರು. ನ್ಯಾಯಕ್ಕಾಗಿ, ತಮ್ಮ ನೆಲಕ್ಕಾಗಿ, ಅಸ್ತಿತ್ವಕ್ಕೆ, ಅಸ್ಮಿತೆಗೆ ಹೋರಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಕನ್ನಡ ವಿಜ್ಞಾನ ಸಂವಹನಕ್ಕೆ ಡಾ. ಕೆ. ಶಿವರಾಮ ಕಾರಂತರ ಕೊಡುಗೆ: ಎಲ್. ಜಿ. ಮೀರಾ ಅಂಕಣ
ಇಂತಹ ವಿಚಾರ ಮನಸ್ಸಿಗೆ ಬಂದ ಮೇಲೆ ಕಾರಂತರು ಸುಮ್ಮನೆ ಕೂರುವ ಜಾಯಮಾನದವರಲ್ಲ. ಮಕ್ಕಳಿಗೆ ತಮ್ಮ ಜಿಲ್ಲೆಯಾದ ದಕ್ಷಿಣಕನ್ನಡದ ಪರಿಚಯವನ್ನು ಸ್ವಾರಸ್ಯಕರವಾಗಿ ಮತ್ತು ಚಿತ್ರಸಹಿತವಾಗಿ ಮಾಡಿಕೊಡುವ `ಚಿತ್ರಮಯ ದಕ್ಷಿಣಕನ್ನಡ’ ಕೃತಿಯನ್ನು ರಚಿಸಿಯೇಬಿಟ್ಟರು. ಇದಕ್ಕಾಗಿ ಜಿಲ್ಲೆಯ ತುಂಬ ಓಡಾಡಿ ಅನೇಕ ಛಾಯಾಚಿತ್ರಗಳನ್ನು ತೆಗೆದರು, ಚಿತ್ರಗಳನ್ನು ಸ್ವತಃ ಬರೆದರು! ಮುಂದೆ ಮಕ್ಕಳಿಗಾಗಿ ಮತ್ತು ಆಸಕ್ತ ದೊಡ್ಡವರಿಗಾಗಿ `ದಕ್ಷಿಣ ಹಿಂದೂಸ್ಥಾನ’ ಕೃತಿಯನ್ನು ಹಾಗೂ `ಬಾಲಪ್ರಪಂಚ’, `ವಿಜ್ಞಾನ ಪ್ರಪಂಚ’ ಎಂಬ ವಿಶ್ವಕೋಶಗಳನ್ನು ರಚಿಸಿದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೈದನೆಯ ಬರಹ
ಮನೆಯೊಳಗಿನ-ಈಕೆ ಮತ್ತು ಹೊರಗಿನ-ಆಕೆ!: ಸುಕನ್ಯಾ ಕನಾರಳ್ಳಿ ಅಂಕಣ
ಮನೆಯೊಳಗಿನ ಈಕೆ ಮನೆಯಿಂದ ಆಚೆ ಹೋಗಿ ದುಡಿದರೂ ಸಹ ಮನೆಯನ್ನು ನಿಭಾಯಿಸುವುದು ಕೊನೆಗೂ ಈಕೆಯ ಹೊಣೆಯಾಗಿ ಉಳಿದುಕೊಂಡಿದೆ ಎನ್ನುವುದೂ ಸಹ ನಿಜ. ಅಲ್ಲೋ ಇಲ್ಲೋ ಗಂಡ ಮಕ್ಕಳಿಂದ ಸಹಾಯ ಸಿಗಬಹುದೇನೋ. ಅದು ಕೇವಲ ಸಹಾಯ ಅಷ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೊಂದನೆಯ ಬರಹ
ಪದವಿರಲಿ ಎದೆಯಲ್ಲಿ, ಪ್ರೀತಿ ಹರಿದೀತು!: ಸುಕನ್ಯಾ ಕನಾರಳ್ಳಿ ಅಂಕಣ
ಬದುಕಿನ ಸಂಕಷ್ಟಗಳ ಸಮಯದಲ್ಲಿ ಹೈಸ್ಕೂಲಿನಲ್ಲಿ ಕಲಿತ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು’ ಎಂಬ ಬಿ ಎಂ ಶ್ರೀ ಅವರ ಅನುವಾದಿತ ಇಂಗ್ಲಿಷ್ ಕವಿತೆಯನ್ನು ಆರ್ತತೆಯಿಂದ ನೆನಪಿಸಿಕೊಂಡಿದ್ದೇನೆ. ಕೆ. ಎಸ್. ನರಸಿಂಹಸ್ವಾಮಿಯವರ ‘ದೀಪವೂ ನಿನ್ನದೇ, ಗಾಳಿಯೂ ನಿನ್ನದೇ, ಆರದಿರಲಿ ಬೆಳಕು’ ಎಂದು ಬೇಡಿಕೊಂಡಿದ್ದೇನೆ. ಊರಿನಲ್ಲಿ ಗಣಪತಿ ಕೂರಿಸುತ್ತಿದ್ದ ಒಂದು ತಿಂಗಳಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ಪಿ. ಕಾಳಿಂಗರಾಯರ ‘ಬಾರಯ್ಯ ಬೆಳದಿಂಗಳೇ…’ ಕೇಳುತ್ತಾ ಸುತ್ತಮುತ್ತಲ ಹಳ್ಳಿಗಳಿಂದ ಗಾಡಿ ಹೂಡಿಕೊಂಡು ಬರುತ್ತಿದ್ದ ಮಂದಿ ಬೀದಿಯಲ್ಲಿ ಕಿಕ್ಕಿರಿದು ನಿಂತು ಬೆಳದಿಂಗಳಲ್ಲಿ ತೊಯ್ದಂತೆ ತನ್ಮಯರಾಗಿ ನಿಂತಿದ್ದನ್ನು ಕಂಡಿದ್ದೇನೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
ದೇವ್ರು ಶಾಣ್ಯಾ ಅದಾನ್ರೀ… : ವಿನಾಯಕ ಅರಳಸುರಳಿ ಅಂಕಣ
ಹೌದಲ್ಲವೇ? ಎಲ್ಲಾ ಸರಿಯಾಗಿರುವ ಹೊತ್ತಿನಲ್ಲೂ ಯಾವುದೋ ಒಂದು ಕೊರಗು ನಮ್ಮನ್ನು ಕಾಡುತ್ತಲೇ ಇರುತ್ತದೆ. ಮಧ್ಯಾಹ್ನದ ನೆರಳಿನಲ್ಲಿ ಯಾರದೋ ಹುಡುಕಾಟ… ಸಂಜೆಯ ತಂಪಲ್ಲಿ ಯಾವುದೋ ನೆನಪು.. ರಾತ್ರೆಯ ಕನವರಿಕೆಯಲ್ಲಂತೂ ಎಂಥದ್ದೋ ದುಃಖ… ಇವೆಲ್ಲಾ ಏಕೆ? ಕಳೆದ ನೆನ್ನೆಗಳೇ ಅದೇಕೋ ಚಂದ ಎನಿಸುತ್ತವೆ. ಇಂದು ಎನ್ನುವುದು ಯಾವಾಗಲೂ ಕಹಿ ಕಹಿ. ಈ ಕ್ಷಣಕ್ಕೆ ಮೈ ಚಾಚಿ ಮಲಗಿರುವ ಹಂಸತೂಲಿಕಾ ತಲ್ಪದಲ್ಲೂ ಹಿಂದೆಂದೋ ಅರೆನಿದಿರೆ ಹೊತ್ತು ತಂದಿದ್ದ ಗುಡಿಸಲಿನ ಒರಟು ನೆಲದ್ದೇ ಕನವರಿಕೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ
ಸಂತೆಯಲ್ಲಿ ಸಂತರು ರಚಿಸಿದ ನುಡಿರತ್ನಗಳು : ಕನ್ನಡದ ತತ್ವಪದಗಳು: ಡಾ. ಎಲ್.ಜಿ.ಮೀರಾ
ಹೀಗೆ ಹಾಡುತ್ತಿರುವಾಗ ಕೆಲವರು ಮೂಲಕವಿಯ ಅಂಕಿತವನ್ನು ಬದಲಿಸಿ ತಮ್ಮ ನಡುವಿನ ಇಲ್ಲವೆ ದೇವರ ಹೆಸರುಗಳನ್ನು ಸೇರಿಸುವುದುಂಟು. ಆದರೆ ಇವು ಜನಪದರು ಹಾಡುತ್ತಿದ್ದ ಹಾಡುಗಳು ಎಂಬ ಕಾರಣದಿಂದಾಗಿ ಪಂಡಿತರು ಇವನ್ನು ಉಪೇಕ್ಷೆ ಮಾಡುತ್ತಿದ್ದರು. ಹೀಗಾಗಿ ಇವುಗಳ ಸಂಗ್ರಹಕಾರ್ಯ ವಿಳಂಬವಾಯಿತು. ಅವು ಹಾಡಿನ ರೂಪದಲ್ಲಿ ಇದ್ದುದರಿಂದ ಜನರ ಬಾಯಲ್ಲಿ ಹೇಗೋ ಉಳಿದುಕೊಂಡು ಅಳಿಯದೆ ಪ್ರಸಾರವಾಗುತ್ತಾ ಬಂದಿವೆ. ಜಾತಿಧರ್ಮಗಳನ್ನು ಮೀರಿ, ಈ ನೆಲದ ತತ್ವಚಿಂತನೆಯನ್ನು ನಿಸರ್ಗ ವಿವೇಕದ ಜೊತೆ ಬೆರೆಸುತ್ತ ಸಮಾಜದ ಚಿಂತನಾಕ್ರಮವನ್ನು ಆರೋಗ್ಯಕರವಾಗಿರುವಂತೆ ಈ ತತ್ವಪದಗಳು ನೋಡಿಕೊಂಡಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ಭಾವಾತಿರೇಕ ಎಂಬ ಖಾಯಿಲೆ: ಸುಕನ್ಯಾ ಕನಾರಳ್ಳಿ ಅಂಕಣ
ಈಗ ಬದುಕಿನ ಈ ಹಂತದಲ್ಲಿ ಅವರ ಕಾಳಜಿ ಒಂದೇ. ಬದುಕಿನುದ್ದಕ್ಕೂ ತಮ್ಮ ತಂಗಿಯರ ಬದುಕನ್ನು ದಡ ಹತ್ತಿಸಲು ಕಳೆದಾಗಿದೆ. ಅವರೆಲ್ಲ ತನ್ನನ್ನು ಪ್ರೀತಿಯಿಂದ ನೋಡಿಕೊಂಡರೂ ಸಹ ಈಗ ತನ್ನದೇ ಒಂದು ನೆಲೆ ಬೇಕೆನ್ನಿಸಿದೆ. ತನಗೆ ನಾಲ್ಕು ಗೋಡೆ, ಒಂದು ತಾರಸಿಯಾದರೂ ಇರುವ ಮನೆ ಕಟ್ಟಿಕೊಂಡು ಉಳಿದ ಬದುಕನ್ನು ಒಬ್ಬಳೇ ಕಳೆಯಲು ಒಂದು ಸೈಟು ಬೇಕು, ಅಷ್ಟೇ. ಅಸಂಖ್ಯಾತ ವಿದ್ಯಾರ್ಥಿಗಳು, ಸಾಹಿತ್ಯ ವಲಯದ ಹಲವಾರು ಆಪ್ತರು, ಭೋಪರಾಕ್ ಹೇಳುತ್ತಿರುವ ಅಪಾರವಾದ ಸ್ನೇಹಿತರ ಬಳಗ… ಇಷ್ಟೆಲ್ಲ ಇದ್ದು ಸುಮಾರು ಎಪ್ಪತ್ತರ ದಶಕದ ವಯಸ್ಸಿನ ಆಕೆ ಹೀಗೆ ಬಹಿರಂಗವಾಗಿ ಹೇಳಿಕೊಳ್ಳಬೇಕಾಯಿತೆ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ










