ಬದುಕಿನ ಪಯಣದಲ್ಲಿ ತಂಗುದಾಣಗಳೂ ಇರಲಿ: ಎಸ್. ನಾಗಶ್ರೀ ಅಜಯ್ ಅಂಕಣ
ನಮಗೇನು ಬೇಕು? ಒಂದು ಒಳ್ಳೆಯ ಬಿಡುವು, ನಮ್ಮದೆನ್ನುವ ಸ್ವಲ್ಪ ಸಮಯ, ಜೀವನಕ್ಕೊಂದು ಗುರಿ, ಹತ್ತಿರದವರ ಮೆಚ್ಚುಗೆ ಮತ್ತು ಅಹಂಕಾರಕ್ಕಿಂತ ವಿನಮ್ರತೆಯಲ್ಲಿ ಸುಖ ಕಾಣುವ ಮನಃಸ್ಥಿತಿ. ಪ್ರತಿದಿನವೂ ಅರ್ಧಗಂಟೆಯಾದರೂ ವ್ಯಾಯಾಮ, ನಡಿಗೆ, ಯೋಗ ಇತ್ಯಾದಿಗೆ ಸಮಯ ಮೀಸಲಿಡುವುದು, ಮರೆತುಹೋದ ಹವ್ಯಾಸಗಳೊಂದಿಗೆ ಮತ್ತೆ ಸಖ್ಯ ಬೆಳೆಸುವುದು, ಹೊಸತನ್ನು ಕಲಿಯುವುದು, ಉದ್ಯೋಗ ಮತ್ತು ವೈಯಕ್ತಿಕ ಬದುಕಿನ ನಡುವೆ ಅಂತರ ಕಾಯ್ದುಕೊಳ್ಳುವುದು ಹಾಗೂ ನಮ್ಮ ಇಂದಿನ ಬದುಕು ಹಲವರ ಕನಸೆಂಬುದನ್ನು ಮನಗಾಣುವುದು ಸಹಾಯ ಮಾಡಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ
ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ
ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್ಟ್ರೇಲಿಯನ್ ನಗರಗಳ ಹೊರವಲಯಗಳಲ್ಲಿ ವಾಸಿಸುತ್ತಿರುವ ವಲಸಿಗ ಸಮುದಾಯಗಳಿಗೆ ಭೇಟಿಕೊಟ್ಟು, ಭರವಸೆಗಳನ್ನು ಕೊಡುತ್ತಿದ್ದಾರೆ. ತಾವು ವಲಸಿಗರ ‘ಆಸ್ಟ್ರೇಲಿಯನ್ ಕನಸು’ ಎಂಬುದಕ್ಕೆ ಬೆಂಬಲ ಕೊಟ್ಟು, ವಲಸಿಗರ ಜೀವನವನ್ನು ಹಸನು ಮಾಡುವ ಮಾತನ್ನು ಆಡುತ್ತಿದ್ದಾರೆ. ವಲಸಿಗರೂ ಅಷ್ಟೇ, ಬಹಳ ಆಸಕ್ತಿಯಿಂದ ಚುನಾವಣಾ ವಿಷಯಗಳಲ್ಲಿ ಭಾಗವಹಿಸುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣ
ಸ್ತ್ರೀತ್ವವನ್ನು, ಅದರಿಂದ ಹೊಮ್ಮುವ ಅರಿವನ್ನು ತಾತ್ವಿಕವಾಗಿ ನಿರ್ವಚಿಸುವುದು ಒಂದು ಬಗೆಯಾದರೆ, ಪ್ರಸ್ತುತ ಬದುಕನ್ನು ಕಾಣುವ-ಕಟ್ಟುವ ಕ್ರಮವೊಂದನ್ನು ಅದು ನೀಡುವುದೇ ಎಂದು ಅನ್ವಯಕ್ರಮದಿಂದ ನೋಡುವುದು ಇನ್ನೊಂದು ಬಗೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಸ್ತ್ರೀಯ ಅಸ್ಮಿತೆಯು ಎದುರಿಸುತ್ತಿರುವ ಸವಾಲುಗಳನ್ನು ಚೇತನಾ ಗುರುತಿಸಿದ್ದಾರೆ ……. ಮಹಿಳೆಯರು ತಮ್ಮನ್ನು ಸ್ವಯಂ ಸಂಘಟಿಸಿಕೊಳ್ಳಲು ತಮ್ಮ ಅಸ್ಮಿತೆಯ ಮೂಲ ಸ್ವರೂಪ ಹಾಗೂ ಶಕ್ತಿ ಸಾಧ್ಯತೆಗಳನ್ನು ಅರಿಯುವುದು ಮೊದಲ ಹೆಜ್ಜೆ. ಇದು ಸಾಮಾಜಿಕ ಚಲನೆಗೂ ಪ್ರೇರಣೆಯಾಗುವ ಸಂಗತಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನಾರನೆಯ ಬರಹ
ಆಟ ಕಟ್ಟಲು ಕಣದ ಸಿದ್ಧತೆ: ಡಾ. ವಿನತೆ ಶರ್ಮ ಅಂಕಣ
ಪಕ್ಕದ ಮನೆಯ ಅಂಗಳದಲ್ಲಿರುವ ನಮ್ಮನೆ ಬೇಲಿಗೆ ಆತುಕೊಂಡಿರುವ ಮುರಯ (Murraya) ಮರ ಮೈತುಂಬಾ ಬಿಳಿ ಹೂ ಧರಿಸಿ ನಗುತ್ತಿದೆ. ಶುಭ್ರ ಬಿಳಿ ಹೂ ರಾಶಿ, ಕಡು ಹಸಿರು ಎಲೆಗಳು ಒಂದಕ್ಕೊಂದು ಅಪ್ಪಿಕೊಂಡು ಆ ಬಿಳಿಹಸಿರು ಚಾದರವನ್ನು ಅಪ್ಪಿಕೊಳ್ಳುವ ಆಸೆಯಾಗುತ್ತದೆ. ಹೂಗಳ ಘಮಘಮದಿಂದ ಮೂಗು ಅರಳುತ್ತದೆ. ಹೂಗೊಂಚಲಿನಲ್ಲಿ ಮೊಗ್ಗುಗಳೆ ಹೆಚ್ಚಿರುವುದಕ್ಕೊ ಏನೋ ಅವಕ್ಕೆ ಇನ್ನೂ ಜೇನ್ನೊಣಗಳ ಆಗಮನವಾಗಿಲ್ಲ. ಜೇನ್ನೊಣಗಳ ದಂಡು ಬಂದಾಗ ಅವುಗಳ ಝೇಂಕಾರದ ನಿನಾದ, ಮುರಯ ಹೂ ಗೊಂಚಲುಗಳ ಅಂದ, ತಂಪೇರಿದ ಸಂಜೆ ಮತ್ತು ತರಿಸುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಹೆಣ್ಣಿನ ಉಡುಪು ಎಂಬ ಯುದ್ಧಭೂಮಿ: ಡಾ.ಎಲ್.ಜಿ.ಮೀರಾ
ನಾವು ಹೆಂಗಸರು ಹಲವು ಬಗೆಯಲ್ಲಿ ಸೃಷ್ಟಿಯಾಗಿರುತ್ತೇವೆ, ಅಲ್ಲದೆ ವಯಸ್ಸು, ಕಾಲ, ಸಂದರ್ಭ ಬದಲಾದಂತೆ ನಮ್ಮ ಆಯ್ಕೆಗಳು ಬದಲಾಗುತ್ತಿರುತ್ತವೆ. ನಮ್ಮಲ್ಲಿ ಅಲಂಕಾರದ ಗಾಢ ಅಭಿರುಚಿ ಇರುವವರು ಇದ್ದಂತೆ ಅದರ ಬಗ್ಗೆ ಅಷ್ಟೇನೂ ಆಸಕ್ತಿ ಇಲ್ಲದವರೂ ಇರುತ್ತೇವೆ. ನಮಗೆ ಬೇಸರ ತರಿಸುವ ವಿಷಯ ಏನೆಂದರೆ ನಮ್ಮ ಒಳಗಿನ ಗುಣ, ಜೀವನದೃಷ್ಟಿ, ಚಿಂತನೆ ಇವುಗಳಿಗೆ ಪ್ರಾಮುಖ್ಯ ಕೊಡದೆ ಕೇವಲ ಸೀರೆ, ಒಡವೆ, ಮುಖಬಣ್ಣಗಳಿಂದ ನಮ್ಮನ್ನು ಅಳೆದುಬಿಡುವ ಸಮಾಜದ ಧೋರಣೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ಇದ್ದಷ್ಟು ಇರಲಿ…: ಎಸ್ ನಾಗಶ್ರೀ ಅಜಯ್ ಅಂಕಣ
ತೀರ ಅತಿಯೆನಿಸುವಷ್ಟು ಅಲ್ಲದಿದ್ದರೂ ನಾವೆಲ್ಲರೂ ಒಂದಿಲ್ಲೊಮ್ಮೆ ಈಗಿರುವುದೇ ಚೆಂದ ಎಂದುಕೊಳ್ಳಲು ಆಸೆಪಟ್ಟವರೇ. ಬಡತನ, ಅನಾರೋಗ್ಯ, ಅಜ್ಞಾನಗಳನ್ನು ರಮ್ಯವಾಗಿ ಚಿತ್ರಿಸುತ್ತಾ ಪರಿಶ್ರಮದಿಂದ ಮೇಲೇರಿದವರ ಸಾಧನೆಯನ್ನು ಕಡೆಗಣಿಸಿ ಮಾತನಾಡುತ್ತಾ ಹುಸಿ ಆನಂದ ಹೊಂದಿದವರೇ. ಬಹಳಷ್ಟು ಸಲ ಎದುರಿನವರ ಮೂಗಿನ ನೇರಕ್ಕೆ ಮಾತನಾಡಿ ‘ಒಳ್ಳೆಯವರಾಗಿ’ ಕಾಣುವ ಆಸೆಯೇ ಡೋಂಗಿಗಳ ಬಡಾಯಿಗೆ ಜೈಹೋ ಎನ್ನುವಂತೆ ಮಾಡಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ
ಬಂದೇ ಬಿಟ್ಟ ಆಲ್ಫ್ರೆಡ್: ಡಾ. ವಿನತೆ ಶರ್ಮ ಅಂಕಣ
ನಾಲ್ಕು ದಿನಗಳ ಹಿಂದೆ ಅಂದರೆ ಮಂಗಳವಾರದಿಂದ ನಮ್ಮ ಸ್ಥಳೀಯ ನಗರಪಾಲಿಕೆಗಳು ನೂರಾರು ನಿರ್ಧಾರಗಳನ್ನು ತೆಗೆದುಕೊಂಡಿವೆ. ‘ಸೇಫ್ಟಿ ಫಸ್ಟ್’ ಎನ್ನುವ ಮಂತ್ರವನ್ನು ಜಪಿಸಿ ನಮ್ಮ ಯೂನಿವರ್ಸಿಟಿಗಳು, ಶಾಲೆಗಳು, ಅಂಗಡಿ ವಹಿವಾಟುಗಳು, ಕಚೇರಿಗಳು ಬಾಗಿಲು ಮುಚ್ಚಿದವು. ಅದಕ್ಕೆ ಮುನ್ನ ಮಂಗಳವಾರದಿಂದ ಎಲ್ಲಾ ಅಂಗಡಿ, ಸೂಪರ್ ಮಾರ್ಕೆಟ್ಗಳಲ್ಲಿ ಜನರ ನೂಕುನುಗ್ಗಲು. ಆಹಾರ ಪದಾರ್ಥ, ಕುಡಿಯುವ ನೀರು, ಟಾಯ್ಲೆಟ್ ಪೇಪರ್ ರೋಲ್, ಇತ್ಯಾದಿಗಳು ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಮಾಯ! ಬ್ರೆಡ್, ಹಾಲು, ಮೊಟ್ಟೆಗಳು ಸಿಕ್ಕುವುದೇ ಇಲ್ಲ ಅನ್ನೋ ಪರಿಸ್ಥಿತಿಯಲ್ಲಿ ನಾವು ಗುರುವಾರ ಅಲ್ಲಿಇಲ್ಲಿ ಹುಡುಕಾಡಿದ್ದಾಯ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಮನೆವಾಳ್ತೆ ಎಂಬ ಹೊನ್ನ ಸಂಕೋಲೆ: ಎಲ್.ಜಿ.ಮೀರಾ ಅಂಕಣ
ಅವಳ ಗಂಡನ ಮನೆಯವರು, ಸೊಸೆ ತಮ್ಮ ಮನೆಯನ್ನು ಬಿಟ್ಟು ಹೋದದ್ದು ದೊಡ್ಡ ವಿಷಯವೇನಲ್ಲ ಎಂಬಂತೆ ಇನ್ನೊಂದು ಹುಡುಗಿಯನ್ನು ಸೊಸೆಯಾಗಿ ತಂದುಕೊಳ್ಳುತ್ತಾರೆ! ಸಿನಿಮಾ ಕೊನೆಯಾಗುವ ಹೊತ್ತಿನಲ್ಲಿ ಈ ಹೊಸಹುಡುಗಿಯ ಮೂಕದುಡಿಮೆ ಪ್ರಾರಂಭವಾಗಿರುತ್ತದೆ! ಅಲ್ಲಿಗೆ `ಒಬ್ಬ ಸೊಸೆಯ `ಪ್ರತಿಭಟನೆ’ಯಿಂದ ಅಸೂಕ್ಷ್ಮ, ಪುರಾತನ, ಹಾಗೂ ಕೋಣನ ಚರ್ಮದ ಗಂಡಾಳಿಕೆಯ ವ್ಯವಸ್ಥೆಗೆ ಏನೂ ಪರಿಣಾಮವಾಗುವುದಿಲ್ಲ, ಅದರ ಕೂದಲು ಸಹ ಕೊಂಕುವುದಿಲ್ಲ, ಅದು ಮಾಡಿಟ್ಟಿರುವ `ಮನೆ’ಗಳಲ್ಲಿ ಮನೆವಾಳ್ತೆ ದುಡಿತ ಮಾಡಲು ಒಬ್ಬ ಮೂಗಬಸವಿ ಹೋದರೆ ಇನ್ನೊಬ್ಬ ಮೂಗಬಸವಿ ಬರುತ್ತಾಳೆ, ಮೂಗಬಸವಿಯರಿಗೇನೂ ಕೊರತೆ ಇಲ್ಲ ನಮ್ಮ ಸಮಾಜದಲ್ಲಿ’ ಎಂಬ ನಿರ್ದಯಿ ಸಂದೇಶ ಸಿಗುತ್ತದೆ ನೋಡುಗರಿಗೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ಆತಿಥ್ಯದ ಮುಖಗಳು: ಎಸ್. ನಾಗಶ್ರೀ ಅಜಯ್ ಅಂಕಣ
ಮಾತಾಡಿದರೂ ಅಂತಸ್ತು ಪ್ರದರ್ಶಿಸುವ, ತಾವೆಷ್ಟು ಅನುಕೂಲಸ್ಥರು, ಬುದ್ಧಿವಂತರು, ಜಗದ ಎಲ್ಲ ಸಮಾಚಾರ ಬಲ್ಲವರು ಎಂಬ ಒಣಪ್ರತಿಷ್ಠೆ ತೋರ್ಪಡಿಸುವ ಪ್ರಚಾರತಂತ್ರದ ಗಿಮಿಕ್ಕು ಮಾತ್ರವೇ. ಗಂಡ-ಹೆಂಡತಿ ಮನೆಯಲ್ಲಿ ಕಾದಾಡುವ ಬದಲು ಅಲ್ಲಿ ಕಣ್ಣಲ್ಲೇ ಗುರಾಯಿಸ್ತಾ, ‘ನಿಂಗಿದು ಬೇಕಿತ್ತಾ ಮಗನೆ?’ ಎಂಬ ಸಂದೇಶ ರವಾನಿಸುತ್ತಾ ಕಾಲ ತಳ್ಳಬೇಕು. ಸದ್ಯ ಗಂಟೆಗೆ ಅರವತ್ತೇ ನಿಮಿಷ ಅನ್ನಿಸುವಾಗಲೇ ತರಬೇತುಗೊಂಡ ನಾಯಿಯಂತೆ ಊಟ, ತಿಂಡಿ, ಕಾಫಿ ವಾಸನೆ ಹಿಡಿದು ಊಟದ ಆಟ ಮುಗಿಸಿ, ತಾಂಬೂಲ ಪಡೆದು ‘ಬರ್ತೀವಿ’ ಎನ್ನಬೇಕು. ’ಸಂತೋಷ’ ಎನ್ನುವರು. ಅದು ಬಂದಿದ್ದಕ್ಕೋ ಹೊರಟಿದ್ದಕ್ಕೋ ಯೋಚಿಸದೆ ಮನೆಯ ದಾರಿ ಹಿಡಿಯಬೇಕು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ









