Advertisement

ಅಂಕಣ

ಕನ್ನಡ –ಇಂಗ್ಲಿಷ್ ಅನುವಾದಗಳಲ್ಲಿ ಪದ ಕಚಗುಳಿ: ಸುಮಾವೀಣಾ ಸರಣಿ

ಕನ್ನಡ –ಇಂಗ್ಲಿಷ್ ಅನುವಾದಗಳಲ್ಲಿ ಪದ ಕಚಗುಳಿ: ಸುಮಾವೀಣಾ ಸರಣಿ

ಇತ್ತೀಚೆಗೆ ಕೆಪಿಎಸ್ಸಿ ಪೂರ್ವಭಾವೀ ಪರೀಕ್ಷೆ ನಡೆಯಿತು. ಆ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅಚ್ಚಾಗಿದ್ದ ಪ್ರಶ್ನೆಗಳು ಸರಿ ಇದ್ದವು. ಅವೇ ಪ್ರಶ್ನೆಗಳು ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳು ಸಂಭವಿಸಿದ್ದವು. ಆದಕಾರಣ ಪರೀಕ್ಷೆಯನ್ನೆ ರದ್ದುಮಾಡಿ ಇಲ್ಲವಾದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರನ್ನು ಪಾಸು ಮಾಡಿ ಎನ್ನುವ ಬೇಡಿಕೆಗಳು ಬಂದವು. ಕಳೆದ ಶನಿವಾರದ ವರದಿಯ ಪ್ರಕಾರ ಪೂರ್ವಭಾವಿ ಪರೀಕ್ಷೆಯ ಗೊಂದಲಗಳು ಇತ್ಯರ್ಥವಾಗುವವರೆಗೆ ಮುಖ್ಯ ಪರೀಕ್ಷೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

read more
ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ತಂತಿ ಮೇಲೆ ನಡೆದು ಮುಳ್ಳು ತೆಗೆದವರು: ಎಲ್.ಜಿ.ಮೀರಾ ಅಂಕಣ

ತಂತಿ ಮೇಲೆ ನಡೆದು ಮುಳ್ಳು ತೆಗೆದವರು: ಎಲ್.ಜಿ.ಮೀರಾ ಅಂಕಣ

ಮಾರನೆಯ ದಿನ ಬೆಳಿಗ್ಗೆ ಮಹೇಶ್ ನಾಯ್ಡು ಬಂದಾಗ ಅವನನ್ನು ಕಾಲೇಜಿನ ಮೈದಾನದ ದೂರದ ಒಂದು ಕಲ್ಲುಬೆಂಚಿಗೆ ಕರೆದುಕೊಂಡು ಹೋಗಿ ಆತ ಮಾಡಿದ ತಪ್ಪು ಕೆಲಸದ ಬಗ್ಗೆ ಮತ್ತು ಇದು ಇಡೀ ಕಾಲೇಜಿಗೆ ಗೊತ್ತಾದರೆ ತಾನು ಯಾವ ಪರಿಸ್ಥಿತಿಯಲ್ಲಿರಬಹುದು ಎಂದು ಊಹಿಸುವಂತೆ ಅವನಿಗೆ ಹೇಳಿದರು. ಮೊದಮೊದಲು ತಾನು ಏನೂ ತಪ್ಪು ಮಾಡಿಲ್ಲ ಎಂದು ವಾದಿಸಿದ ಆತ ನಂತರ ಕಾಂತಿ ಮೇಡಂರ ಗಂಭೀರ ಮುಖ ಮತ್ತು ತೂಕವಾದ ಮಾತುಗಳ ಮುಂದೆ ನಿರುತ್ತರನಾದ, ಮತ್ತು ತಾನು ಆ ಪದ ಬಳಸಿದ್ದು ತಪ್ಪು ಎಂದು ಒಪ್ಪಿಕೊಂಡ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿಮೂರನೆಯ ಬರಹ

read more
ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ನಾನೇನೋ ಒಂದಷ್ಟು ಹನಿ ಬಿತ್ತು ಅಂದೆ ಸರಿ. ಆದರೆ ಸಣ್ಣ ಮಳೆ ಬಿದ್ದದ್ದು ಬ್ರಿಸ್ಬೇನ್, ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ. ಇದನ್ನು ಅಪಹಾಸ್ಯ ಮಾಡುವಂತೆ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿರುವ (ಬ್ರಿಸ್ಬೇನ್ ನಗರದಿಂದ ೧,೪೦೦ ಕಿಮೀ ದೂರ) Townsville ನಗರ ಮತ್ತು ಅದರ ಆಸುಪಾಸಿನಲ್ಲಿ ಭಾರಿ ಮಳೆ ಬಿದ್ದು, ಪ್ರವಾಹ ಸ್ಥಿತಿ ಉದ್ಭವಿಸಿ ಈಗ ಅದನ್ನು ಕ್ವೀನ್ಸ್‌ಲ್ಯಾಂಡ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿವೆ. ಸಾವಿರಾರು ಜನರು ಪ್ರವಾಹಪೀಡಿತ ಸಂತ್ರಸ್ತರು ಎಂದು ನೋಂದಾಯಿಸಿಕೊಂಡಿದ್ದಾರೆ. ಅನೇಕ ಕಡೆ ರಸ್ತೆಗಳು ಮುಚ್ಚಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಯಾಕೆ ಮಾಡುತ್ತೇವೆ ನಾವು ಮನುಷ್ಯರು ಬದುಕಿನೊಂದಿಗೆ ಇಷ್ಟೊಂದು ಚೌಕಾಸಿ!?: ಎಲ್.ಜಿ.ಮೀರಾ ಅಂಕಣ

ಯಾಕೆ ಮಾಡುತ್ತೇವೆ ನಾವು ಮನುಷ್ಯರು ಬದುಕಿನೊಂದಿಗೆ ಇಷ್ಟೊಂದು ಚೌಕಾಸಿ!?: ಎಲ್.ಜಿ.ಮೀರಾ ಅಂಕಣ

ಕೋತಿಗಳನ್ನು ಹಿಡಿಯುವವರು ಒಂದು ಉಪಾಯ ಮಾಡುತ್ತಾರಂತೆ. ಚಿಕ್ಕ ಬಾಯಿಯುಳ್ಳ ಒಂದು ತಂಬಿಗೆಯಂತಹ ಪಾತ್ರೆಯೊಳಗೆ ಒಂದಿಷ್ಟು ಕಡಲೆಕಾಯಿಗಳನ್ನು ತಾವು ಹಿಡಿಯಬಯಸುವ ಕೋತಿಗೆ ಕಾಣಿಸುವ ಹಾಗೆ ಹಾಕುತ್ತಾರಂತೆ. ಕೋತಿ ಆ ಕಡಲೆಕಾಯಿಗಳನ್ನು ತಿನ್ನುವ ಆಸೆಯಿಂದ ಆ ತಂಬಿಗೆಯೊಳಕ್ಕೆ ಕೈಹಾಕುತ್ತದೆ, ತನ್ನ ಮುಷ್ಟಿಯಲ್ಲಿ ಆ ಕಡಲೆಕಾಯಿಗಳನ್ನು ಹಿಡಿದುಕೊಳ್ಳುತ್ತದೆ. ತಂಬಿಗೆಯಿಂದ ತನ್ನ ಕೈ ಹೊರತೆಗೆಯದಿದ್ದರೆ ಕೋತಿಗೆ ತಪ್ಪಿಸಿಕೊಂಡು ಓಡಿಹೋಗಲಾಗುವುದಿಲ್ಲ, ಆದರೆ ಕಡಲೆಕಾಯಿಯ ಮೇಲಿನ ಆಸೆಯು ಅವುಗಳನ್ನು ವಾಪಸ್ ತಂಬಿಗೆಗೆ ಹಾಕಲು ಕೋತಿಗೆ ಬಿಡುವುದಿಲ್ಲ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more
ಭಾರತೀಯ-ಬ್ರಿಟಿಷ್ ಸಂಧಿಯಾದ ಸೆಂಚುರಿ ಕ್ಲಬ್: ವಿನತೆ ಶರ್ಮ ಅಂಕಣ

ಭಾರತೀಯ-ಬ್ರಿಟಿಷ್ ಸಂಧಿಯಾದ ಸೆಂಚುರಿ ಕ್ಲಬ್: ವಿನತೆ ಶರ್ಮ ಅಂಕಣ

ನಾನು ಇದನ್ನೆಲ್ಲಾ ಕಲ್ಪಿಸಿಕೊಳ್ಳುತ್ತಾ ನಡೆದಾಡುತ್ತಾ, ಫೋಟೋಗಳನ್ನ ತೆಗೆಯುತ್ತಾ ಇತಿಹಾಸದ ಕಾಲಘಟ್ಟಗಳಲ್ಲಿ ಕಳೆದುಹೋಗಲು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದೆ. ಅತ್ತ ಕಡೆ ನನ್ನ ಗಂಡ, ‘ನಾವಿಲ್ಲಿ ಕೂತಿದ್ದು, ಅಲ್ಲಿ ಆ ಲಾನ್‌ನಲ್ಲಿ ಒಂದು ಆನೆ ಕುಟುಂಬ ಓಡಾಡುತ್ತಿದ್ದಾರೆ ಎಷ್ಟು ಚೆನ್ನ, ಅಲ್ವಾ’ ಎಂದರು. ನನ್ನ ಬ್ರಿಟಿಷ್ ಗಂಡನ ಮಾತು ಕೊಲೊನಿಯಲ್ ಟೈಮ್ಸ್ ಕಲ್ಪನೆಗಳಲ್ಲಿ ಮುಳುಗಿದ್ದ ನನ್ನ ಭಾರತೀಯ ಮನಸ್ಸನ್ನು ತಾಕಿತ್ತು. ಆ ಕ್ಷಣದಲ್ಲಿ ಅಲ್ಲೊಂದು ಭಾರತೀಯ-ಬ್ರಿಟಿಷ್ ಸಂಧಿ-ಸಮಾಗಮವಾಗಿತ್ತು. ಖಂಡಿಸಬೇಕೊ, ನಗಬೇಕೊ ತಿಳಿಯದೇ ಕಕ್ಕಾಬಿಕ್ಕಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಅಕ್ಕಮಹಾದೇವಿ ಮತ್ತು ಗೂಗಲ್ ಗುರು: ಎಲ್.ಜಿ.ಮೀರಾ ಅಂಕಣ

ಅಕ್ಕಮಹಾದೇವಿ ಮತ್ತು ಗೂಗಲ್ ಗುರು: ಎಲ್.ಜಿ.ಮೀರಾ ಅಂಕಣ

ಬದಲಾವಣೆಗಳಾಗುತ್ತಿರುವುದು ಕೇವಲ ಹೆಂಗಸರ ಬದುಕಿನಲ್ಲಲ್ಲ. ಕಳೆದ ಮೂವತ್ತು – ಮೂವತ್ತೈದು ವರ್ಷಗಳಲ್ಲಿ ಬದುಕಿನ ಎಲ್ಲ ಆಯಾಮಗಳಲ್ಲೂ ಪ್ರಾದೇಶಿಕ ಮತ್ತು ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳಾಗಿವೆ. ನಮ್ಮ ಕುಟುಂಬ ವ್ಯವಸ್ಥೆ ಸಹ ಈ ಬದಲಾವಣೆಗಳಿಗೆ ಹೊರತಾಗಿಲ್ಲ. ಹೊಸಹೊಸ ರೀತಿಯ ಆರೋಗ್ಯ ಸಮಸ್ಯೆಗಳು, ಜೀವನಶೈಲಿಯ ಕಾಯಿಲೆಗಳು, ಒಟ್ಟುಕುಟುಂಬಗಳಿರಲಿ, ಬೀಜಕೇಂದ್ರ ಕುಟುಂಬಗಳೇ(ನ್ಯೂಕ್ಲಿಯರ್ ಫ್ಯಾಮಿಲಿ ಎನ್ನುವ ಅರ್ಥದಲ್ಲಿ) ಒಡೆದು ಹೊಸ ರೀತಿಯ ಸಹಜೀವನದ ವ್ಯವಸ್ಥೆಗಳು ಉಗಮವಾಗಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹನ್ನೊಂದನೆಯ ಬರಹ

read more
ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

read more
ಆಸ್ಟ್ರೇಲಿಯನ್ ಬನ್ನಿಂಗ್ಸ್ ಸಂಸ್ಕೃತಿ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯನ್ ಬನ್ನಿಂಗ್ಸ್ ಸಂಸ್ಕೃತಿ: ವಿನತೆ ಶರ್ಮ ಅಂಕಣ

ರಜೆ ಮುಗಿದು ಕೆಲಸಕ್ಕೆ ವಾಪಸ್ಸಾದ ಸಹೋದ್ಯೋಗಿಗಳನ್ನು ‘ರಜೆಯಲ್ಲಿ ಏನೇನು ಮಾಡಿದಿರಿ’ ಎಂದು ಕೇಳುವುದು ಜನವರಿ ತಿಂಗಳ ಮೊದಲವಾರದ ಅತ್ಯಂತ ಮುಖ್ಯವಾದ ಕೆಲಸ. ಇದನ್ನು ಯಾರೂ ಮರೆಯುವಂತಿಲ್ಲ. ಹಾಗೆ ಕೇಳಿ ಅವರು-ನಾವು ಹೇಳುವ, ಹಂಚಿಕೊಳ್ಳುವ ಕಥೆಗಳು ರೋಚಕವೂ, ರಂಜನೀಯವೂ ಆಗಿರುತ್ತದೆ. ಈ ಬಾರಿ ಯಾತಕ್ಕೋ ಕೆಲವರು ರಜೆಯೆಲ್ಲ ಮನೆ ರಿಪೇರಿ ಕೆಲಸದಲ್ಲೇ ಕಳೆಯಿತು ಎಂದು ಉದ್ಗಾರವೆಳೆದರು. ಸ್ವಂತ ಮನೆಯಿದ್ದರೆ ನಾವು ಮಾಡುವ ರಿಪೇರಿ ಕೆಲಸಗಳಿಗೆ ಕೊನೆ-ಮೊದಲಿರುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ