Advertisement

ಅಂಕಣ

ಮನೆಗೆ ಮಾರಿ… ಊರಿಗೆ ಉಪಕಾರಿ: ಎಸ್.‌ ನಾಗಶ್ರೀ ಅಜಯ್ ಅಂಕಣ

ಮನೆಗೆ ಮಾರಿ… ಊರಿಗೆ ಉಪಕಾರಿ: ಎಸ್.‌ ನಾಗಶ್ರೀ ಅಜಯ್ ಅಂಕಣ

ಪ್ರಪಂಚದ ಕಣ್ಣಿಗೆ ಬೀಳುವಾಗಿನ ನಾಟಕವನ್ನಾದರೂ ಸಹಿಸಬಹುದು. ಕುಟುಂಬದೊಳಗೂ ಸಹಜವಾಗಿ ಬೆರೆಯಲಾಗದ ಸ್ಥಿತಿಯೀಗ ಪ್ರತಿ ಮನೆಯ ದುರಂತ. ತೊಟ್ಟಿಲ ಕೂಸು ಕಿಟಾರೆಂದರೆ ಗೂಗಲ್ ರಿಸರ್ಚ್ ಮಾಡುವ, ನಿಂಗೇನ್ಗೊತ್ತು ಈ ಕಾಲದ ಕಷ್ಟಸುಖ ಸುಮ್ಮನಿರಮ್ಮ ಎಂದು ಮೂರು ಮಕ್ಕಳು ಹೆತ್ತಾಕೆಯನ್ನೇ ಮೂಲೆಗೆ ಕೂರಿಸುವ ದಿನ. ಮೊಮ್ಮಕ್ಕಳಿಗೆ ಬಾಯಿಪಾಠ ಹೇಳಿಕೊಡಲು, ಚದುರಂಗ, ಚೌಕಾಬಾರ, ಹುಲಿ ಕರಡಿ ಆಡಿಸಲು, ಅಡುಗೆಯ ಪ್ರಾಥಮಿಕ ತರಬೇತಿ ನೀಡಲು, ರಂಗೋಲಿ, ಕಸೂತಿ, ಹಾಡುಹಸೆ ಕಲಿಸಲು ಹಾತೊರೆಯುವ ಅಜ್ಜ ಅಜ್ಜಿಯರು ಇನ್ನೂ ಇದ್ದಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

read more
ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ

ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ

ವಿಮಾನ ಡಿಕ್ಕಿ ಹೊಡೆದ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿದ್ದ ಕೆಲವರು ಏನಾಗುತ್ತಿದೆ ಎಂದು ಕೇಳುತ್ತಾ ಆ ಪ್ರಶ್ನೆಗೊಂದು ಕೊನೆ ಚುಕ್ಕೆ ಇಡದೆಯೆ ಹೋಗಿದ್ದಾರೆ. ರೆಸ್ಟ್ ಇನ್ ಪೀಸ್. ಆತ್ಮಕ್ಕೆ ಶಾಂತಿ ಸಿಗಲಿ. ಕಣ್ಣೀರು, ದಿಗ್ಭ್ರಮೆ, ಪುಂಖಾನುಪುಂಖ ಪ್ರಶ್ನೆಗಳು, ಎಲ್ಲರೂ ಹುಡುಕುತ್ತಿರುವ ಉತ್ತರಗಳ ಸಾಗರ ಅಪ್ಪಳಿಸಿದೆ. ಅದ್ಯಾವುದೊ ಕರುಣಾಳು ಬೆಳಕು ಒಬ್ಬನೇ ಒಬ್ಬ ಪ್ರಯಾಣಿಕನನ್ನು ಕೈಹಿಡಿದು ನಡೆಸಿ ಕಾಪಾಡಿದೆ. ಅವನ ಕಥೆ ಅಪನಂಬಿಕೆಗಳ ಲೋಕದಲ್ಲಿ ಉಳಿದ ಒಂದೇ ಒಂದು ಹುಲ್ಲುಕಡ್ಡಿ ಸತ್ಯವಾಗಿದೆ. ಇದೇನಿದು ಮಿಥ್ಯ-ಸತ್ಯಗಳ ಲೋಕವಿದು!
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ನಾರಿ ಮತ್ತು ವಾಹನ ಸವಾರಿ – ಸಬಲೀಕರಣದ ಪರಿಣಾಮಕಾರಿ ದಾರಿ!: ಡಾ.ಎಲ್.ಜಿ.ಮೀರಾ ಅಂಕಣ

ನಾರಿ ಮತ್ತು ವಾಹನ ಸವಾರಿ – ಸಬಲೀಕರಣದ ಪರಿಣಾಮಕಾರಿ ದಾರಿ!: ಡಾ.ಎಲ್.ಜಿ.ಮೀರಾ ಅಂಕಣ

ನಮ್ಮ ಜೀವನವೆಂಬ ವಾಹನದ ಚಾಲಕಪೀಠದಲ್ಲಿ ಯಾರಿದ್ದಾರೆ? ನಾವೋ ಅಥವಾ ಬೇರೆ ಯಾರಾದರೂ ಅಧಿಕಾರಸ್ಥರೋ? ಗಂಡಾಳಿಕೆಯ ಸಮಾಜಗಳಲ್ಲಿ ಹೆಣ್ಣು ತನ್ನ ಜೀವನದ ಚಾಲಕ ಪೀಠದಲ್ಲಿ ಕುಳಿತಿದ್ದು ತೀರಾ ಅಪರೂಪ. ಅವಳು ಏನು ತಿನ್ನಬೇಕು, ಕುಡಿಯಬೇಕು, ಯಾವ ಬಟ್ಟೆ ತೊಡಬೇಕು ಮುಂತಾದ ಸಾಧಾರಣ, ದೈನಿಕ ಸಂಗತಿಗಳಿಂದ ಹಿಡಿದು ಓದು, ಕೆಲಸ, ಮದುವೆ, ಆಸ್ತಿಗಳಿಕೆಗಳಂತಹ ಮುಖ್ಯ ವಿಷಯಗಳ ತನಕ ಮನೆಯ ಗಂಡಸರೋ ಅಥವಾ ಅವರ ಪ್ರತಿನಿಧಿಗಳಾದವರೋ ನಿರ್ಧರಿಸುವ ಕಾಲ ಅನೇಕ ಶತಮಾನಗಳ ತನಕ ಇತ್ತಲ್ಲ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more
ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
ಹೆಣ್ಣಿನ ನಾಲ್ಕು ಕಷ್ಟಗಳು – ಅಂದು, ಇಂದು: ಡಾ. ಎಲ್. ಜಿ. ಮೀರಾ ಅಂಕಣ

ಹೆಣ್ಣಿನ ನಾಲ್ಕು ಕಷ್ಟಗಳು – ಅಂದು, ಇಂದು: ಡಾ. ಎಲ್. ಜಿ. ಮೀರಾ ಅಂಕಣ

ಪಿತೃಪ್ರಧಾನ ವ್ಯವಸ್ಥೆಯ ಬೇರುಗಳು ನಾವು ಅಂದುಕೊಂಡದ್ದಕ್ಕಿಂತ ಬಹಳ ಆಳವಾಗಿರುತ್ತವೆ. ಅವು ಗಂಡಸರ ಮನಸ್ಸಿನಲ್ಲಿ ಮಾತ್ರವಲ್ಲ ಹೆಂಗಸರ ಮನಸ್ಸಿನಲ್ಲೂ ಇರುತ್ತವೆ! ಏಕೆಂದರೆ ಸಾಮಾಜಿಕ ಮೌಲ್ಯಗಳ ಅಂತರಂಗೀಕರಣದ ಸ್ವರೂಪ ಹಾಗಿರುತ್ತದೆ. ಹೀಗಾಗಿ `ಉರಿಯದ ಒಲೆ, ಏಳದ ದೋಸೆ, ಬಯ್ಯುವ ಗಂಡ, ಅಳುವ ಮಗು’, ಪದಪುಂಜಗಳು ಇಂದಿನ ಹೆಣ್ಣಿನ ಮಟ್ಟಿಗೆ ಅನ್ವಯಿಸುತ್ತವೆಯೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತನೆಯ ಬರಹ

read more
ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ

read more
ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ

ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ

ಆಕೆ ಸಿಕ್ಕದಿದ್ದರೂ ಊರು ನಿಧಾನಕ್ಕೆ ಅಮ್ಮನನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಪೊರೆಯುತ್ತಿತ್ತು. ಆದರೆ ಜಯಮ್ಮನ ಸ್ನೇಹದ ರುಚಿ ಸಿಗದೆ ನಷ್ಟವಾಗುತ್ತಿತ್ತು. ಯಾವುದೋ ಊರಿನ ಹೆಂಗಸು ಇಲ್ಲಿ ಬಂದಿಳಿದರೆ ನನಗೇನಾಗಬೇಕು? ನೆಂಟರಾ? ಇಷ್ಟರಾ? ಎಂದಾಕೆ ದೂರವುಳಿಯಬಹುದಿತ್ತು. ಹೊಸ ಊರಿನಲ್ಲಿ ಮನೆತನಕ ಬಂದು ಮಾತನಾಡುತ್ತಾ ಕೂರುವ ಈ ಹೆಂಗಸಿಗೆ ನನ್ನಿಂದ ಏನಾದರೂ ಸಹಾಯದ ನಿರೀಕ್ಷೆಯಿದೆಯೆ? ನಂಬಿಸಿ ಮೋಸ ಮಾಡಿದರೇನು ಗತಿ? ಎಳೆಮಗುವನ್ನು ಇವಳ ಕೈಗಿತ್ತು ಹೇಗೆ ಹೋಗಲಿ? ಎಂದೆಲ್ಲ ಅನುಮಾನಿಸಿ ಅಮ್ಮನೂ ಚಿಪ್ಪಿನೊಳಗೆ ಸೇರಬಹುದಿತ್ತು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ

read more
ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ