ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ
ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ
ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ಒಂದು ಸಮಸ್ಯೆ, ಸಾಂಘಿಕ ಬಹು-ಉತ್ತರಗಳು: ಡಾ. ವಿನತೆ ಶರ್ಮಾ ಅಂಕಣ
ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ಬಲವಾದ ಅಸ್ಮಿತೆ ಇಲ್ಲದಿರುವುದು, ಎಲ್ಲಾ ವಿಷಯಗಳಲ್ಲೂ ದೂರದ ಬ್ರಿಟನ್, ಅಮೆರಿಕಾ, ಯುರೋಪ್ ರಾಷ್ಟ್ರಗಳ ನಡೆ-ನುಡಿಗಳನ್ನು ಚಾಚೂತಪ್ಪದೆ ಪಾಲಿಸುತ್ತಾ, ಅವರ ನಿಲುವುಗಳನ್ನೆ ತನ್ನದಾಗಿಸಿಕೊಂಡು ಗುಲಾಮಗಿರಿ ತೋರುವುದು, ತಾವಿರುವ ಏಷ್ಯಾ-ಪೆಸಿಫಿಕ್ ವಲಯದಲ್ಲಿ ತಮ್ಮನ್ನು ಗುರುತಿಸಿಕೊಳ್ಳದೆ ಹೇಡಿತನ ತೋರುವುದು ಕೂಡ ಸಮಸ್ಯೆಯೆ. ಆಸ್ಟ್ರೇಲಿಯಾ ಅಧಿಕೃತವಾಗಿ ಬ್ರಿಟನ್ನಿನ ಅಧಿಪತ್ಯವನ್ನು ಒಪ್ಪಿಕೊಂಡು ಅದರ ಒಂದು ತುಣುಕಾಗಿದ್ದು, ವಸಾಹತುಶಾಹಿ ಬಿಳಿಯರ ದೇಶವಾಗಿದ್ದುಕೊಂಡೆ ಬಾಳುತ್ತಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ
ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ
ಮಕ್ಕಳ ಶೋಷಣೆಯ ಪಾಪಿಷ್ಟರು: ಡಾ. ವಿನತೆ ಶರ್ಮಾ ಅಂಕಣ
ಹದಿನೆಂಟು ವರ್ಷವಾದಾಗ ಒಬ್ಬ ವ್ಯಕ್ತಿ ‘adult’ ಎಂದು ಸರ್ಕಾರ ಹೇಳುತ್ತದೆ. ಇವರು ತಮ್ಮ ಜೀವನಕ್ಕೆ ತಾವೇ ಸಂಪೂರ್ಣವಾಗಿ ಜವಾಬ್ದಾರರು. ಪೂರ್ಣಾವಧಿ ಉದ್ಯೋಗದಲ್ಲಿದ್ದು ಮುಂದೆ ತಮ್ಮದೇ ಕುಟುಂಬ ಆರಂಭಿಸಿದಾಗ ಇವರ ಮಕ್ಕಳು ಚೈಲ್ಡ್ ಕೇರ್ ಸೆಂಟರ್ಗೆ ಹೋಗುವುದು ಅನಿವಾರ್ಯವಾಗುತ್ತದೆ. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತೀವಿ ಎಂದರೆ ಅವರ ಕೆರಿಯರ್ಗೆ ದೊಡ್ಡ ಹೊಡೆತ. ಅಲ್ಲದೆ ಒಂದೂವರೆ ಸಂಬಳವಿದ್ದರೆ ಇತ್ತ ಕಡೆ ಕುಟುಂಬದ ಖರ್ಚುಗಳನ್ನು ತೂಗಿಸಲು ಕಷ್ಟ. ಅತ್ತ ಕಡೆ ಸರಕಾರದಿಂದ welfare ಸಹಾಯ ಸಿಗುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಕಾಡು, ಪುಸ್ತಕ, ಅಭಿಮಾನ ಹಾಗೂ ಅಂತರ್ಜಾಲ ಸಮುದಾಯಗಳ ಆಹ್ಲಾದಕರ ಲೋಕ: ಎಲ್.ಜಿ.ಮೀರಾ ಅಂಕಣ
ಮನುಷ್ಯ ಎಂಬ ಜೀವಿ ಈ ಭೂಮಿಯ ಮೇಲೆ ವಿಕಾಸಗೊಂಡಾಗಿನಿಂದ ಒಂದಲ್ಲ ಒಂದು ರೀತಿಯ ಸಮುದಾಯಗಳನ್ನು ಕಟ್ಟಿಕೊಂಡು ಬದುಕುತ್ತಿದ್ದಾನೆ. ಎಷ್ಟೇ ಜಗಳ, ಭಿನ್ನಾಭಿಪ್ರಾಯ, ಇರಿಸುಮುರಿಸು, ವೈಯಕ್ತಿಕ ಇಚ್ಛೆಗಳ ಬಲ್ಮೆ ಇದ್ದರೂ ನೆರೆಹೊರೆಯೋ, ವೃತ್ತಿ ಸಮುದಾಯವೋ, ಸ್ನೇಹಿತರ ಬಳಗವೋ, ನೆಂಟರಿಷ್ಟರ ಜೊತೆಗಾರಿಕೆಯೋ, ವಠಾರವೋ, ಅನೇಕ ಮನೆಘಟಕಗಳಿರುವ ಸಮುಚ್ಚಯಗಳೋ(ಅಪಾರ್ಟ್ಮೆಂಟ್)… ಒಟ್ಟಿನಲ್ಲಿ ಮನುಷ್ಯರಿಗೆ ಮನುಷ್ಯರ ಸಂಗ-ಸಹವಾಸ ಬೇಕು ಅಷ್ಟೆ. ಇದನ್ನು ಹೆಚ್ಚು ವಿವರಿಸುವ ಅಗತ್ಯ ಇಲ್ಲ ಅನ್ನಿಸುತ್ತೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ನಾಲ್ಕನೆಯ ಬರಹ
ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ
ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ
ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ಆಸ್ಟ್ರೇಲಿಯಾದ ಐತಿಹಾಸಿಕ ಮೈಲಿಗಲ್ಲು: ಡಾ. ವಿನತೆ ಶರ್ಮಾ ಅಂಕಣ
ಒಂದೆಡೆಯಿಂದ ಇನ್ನೊಂದು ಎಡೆಗೆ ಹೋಗುವ ದಾರಿಯ ಬಗ್ಗೆ ಹೇಳಲು ಕರಾರುವಾಕ್ಕಾದ ಸೂಚನೆಗಳನ್ನು ಹಾಡುಗಳಲ್ಲಿ ಅಡಕಿಸಿದ್ದಾರೆ. ಎಲ್ಲಿ ಕುಡಿಯಲು ನೀರು ಸಿಗುತ್ತದೆ, ತಿನ್ನಲು ಗೆಡ್ಡೆಗೆಣಸು, ತಂಗಲು ಸ್ಥಳ ಸಿಗುತ್ತದೆ, ಅನ್ನುವುದೂ ಈ ಹಾಡುಗಳಲ್ಲಿ ತಿಳಿಯುತ್ತದೆ. ಆಕಾಶದಲ್ಲಿ ಬೆಳಗಿನ ಸೂರ್ಯರಶ್ಮಿ ಇನ್ನೂ ಕೆಳಗಿರುವಾಗ ಈ ನೀರಿನ ತೊರೆಯಿಂದ ನಡೆಯುತ್ತಾ, ಓಡುತ್ತಾ ಹೊರಟು ಆ ದೊಡ್ಡ ಗಮ್ ಮರದ ಉತ್ತರಕ್ಕಿರುವ ಕುರುಚಲು ಪೊದೆಕಾಡು ದಾಟಿ ಬಿಸಿಲು ನಡುನೆತ್ತಿಯ ಮೇಲಿದ್ದಾಗ ಆ ಕಿರುದಿಣ್ಣೆ ಸಿಗುತ್ತದೆ. ಅದೇ ದಾರಿಯಲ್ಲಿ ಸೂರ್ಯನ ಇಳಿಬಿಸಿಲಿನ ಜಾಡನ್ನು ಹಿಂಬಾಲಿಸುತ್ತಾ ಹೋದರೆ ಬಂಡೆರಾಶಿ ಕಾಣುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”








