Advertisement

ಅಂಕಣ

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್‌ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

read more
ಎದೆ ಹಿಂಡುವ ನೆನಪು…: ಎಸ್. ನಾಗಶ್ರೀ ಅಜಯ್ ಅಂಕಣ

ಎದೆ ಹಿಂಡುವ ನೆನಪು…: ಎಸ್. ನಾಗಶ್ರೀ ಅಜಯ್ ಅಂಕಣ

ಮಧ್ಯಾಹ್ನದ ಊಟಕ್ಕೆ ಆರಾಮಾಗಿ ಮನೆಗೆ ಹೋಗಿ ಬರಬಹುದಿತ್ತು. ಕೆಲವು ಮಕ್ಕಳ ತಾಯಂದಿರು ಮಾತ್ರ ಪ್ರತಿದಿನ ತಮ್ಮ ಮಕ್ಕಳ ಡಬ್ಬಿ ಹಿಡಿದು ಮಧ್ಯಾಹ್ನ ಶಾಲೆಗೆ ಬಂದು ತಿನ್ನಿಸಿ ಹೋಗುತ್ತಿದ್ದರು. ಒಂದು ಮಳೆಮಧ್ಯಾಹ್ನ ನನ್ನ ಅಮ್ಮನೂ ಡಬ್ಬಿ ತಂದು, ತಿನ್ನುವವರೆಗೂ ಜೊತೆಯಿದ್ದು ಹೋದಾಗ ಒಂದು ಬಗೆಯ ಜಂಬ. ಸಂತೋಷ. ನನ್ನ ಗೆಳತಿಯೊಬ್ಬಳನ್ನು ಕೇಳಿದ್ದೆ, “ಇವತ್ತು ನಮ್ಮಮ್ಮ ಬಂದಿದ್ರು. ನೋಡಿದ್ಯೇನೇ?” ಅವಳು ಅಷ್ಟೇ ಸಹಜವಾಗಿ, “ಎಷ್ಟು ಜೋರು ಮಳೆ ಬಂದರೂ ನಮ್ಮಮ್ಮ ಬರಲ್ಲ ಕಣೆ. ನಾನು ಹುಟ್ಟಿದಾಗಲೇ ಅವರು ಸತ್ತೋದ್ರು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

read more
ನಿಯಂತ್ರಿಸುವ ಬುದ್ಧಿಯನ್ನು ನಿಯಂತ್ರಿಸೋಣವೇ?: ಮಾಲತಿ ಶಶಿಧರ್‌ ಅಂಕಣ

ನಿಯಂತ್ರಿಸುವ ಬುದ್ಧಿಯನ್ನು ನಿಯಂತ್ರಿಸೋಣವೇ?: ಮಾಲತಿ ಶಶಿಧರ್‌ ಅಂಕಣ

ಈಗ ಹೆಜ್ಜೆ ಹೆಜ್ಜೆಗೂ ನಿಯಂತ್ರಣ ಹೇರುತ್ತಿದ್ದ ಗಂಡನಿಲ್ಲ. ಹೆಂಡತಿಗೆ ಕಟ್ಟು ಪಾಡು ಹೇರುವವರಿಲ್ಲ, ಆಕೆ ಮಗಳ ಜೊತೆ ಶಾಶ್ವತವಾಗಿ ತನ್ನ ತವರು ಸೇರಿದ್ದಾರೆ. ಈಗ ಹೀಗೆ ಇರು ಹಾಗೆ ಇರು ಎಂದು ಹೇಳುವವರಿಲ್ಲ. ಆಕೆ ಹೇಗೆ ಬೇಕಾದರೂ ಇರಬಹುದು. ಗಂಡನಿಲ್ಲದ ನೋವಿದೆ ಆದರೀಗ ಉಸಿರುಗಟ್ಟುತ್ತಿಲ್ಲ. ಇಷ್ಟಕ್ಕೇಕೆ ಆತ ಅಷ್ಟೆಲ್ಲಾ ಹೆಂಡತಿಯನ್ನ ಹಿಡಿತದಲ್ಲಿಟ್ಟುಕೊಳ್ಳಬೇಕಿತ್ತು. ಆತನಿಗೆ ಒಂದು ದಿನ ಎಲ್ಲವನ್ನೂ ಎಲ್ಲರನ್ನೂ ಬಿಟ್ಟು ಇದ್ದಕ್ಕಿದ್ದ ಹಾಗೆ ಅನಾಥನಾಗಿ ಹೊರಟು ಬಿಡಬೇಕು ಎಂಬ ಅರಿವಿದ್ದರೆ ನಿಜಕ್ಕೂ ಆತ ಹಾಗೆಲ್ಲ ಮಾಡುತ್ತಿದ್ದರ?
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”

read more
ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ

ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ

ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

read more
ಆಸ್ಟ್ರೇಲಿಯಾದಲ್ಲಿ ಮಹಿಳಾ ಫುಟ್ಬಾಲ್ ವಿಶ್ವಕಪ್ 2023: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಮಹಿಳಾ ಫುಟ್ಬಾಲ್ ವಿಶ್ವಕಪ್ 2023: ವಿನತೆ ಶರ್ಮ ಅಂಕಣ

ಪ್ರಾಪಂಚಿಕ ಮಟ್ಟದಲ್ಲಿ ನಡೆಯುವ ಮಹಿಳಾ ಫುಟ್ಬಾಲ್ ಈ ಬಾರಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲ್ಯಾಂಡ್ ದೇಶಗಳ ಮಡಿಲು ಸೇರಿದೆ. ವಿಶ್ವ ಕಪ್ ಗೆಲ್ಲಲು ಬರೋಬ್ಬರಿ ೩೨ ತಂಡಗಳು ಸೆಣಸಾಡುತ್ತಿವೆ. ದೇಶದ ಮುಖ್ಯ ರಾಜಧಾನಿ ನಗರಗಳಾದ ಅಡಿಲೈಡ್, ಮೆಲ್ಬೋರ್ನ್, ಸಿಡ್ನಿ, ಬ್ರಿಸ್ಬೇನ್, ಪರ್ತ್ ಗಳಲ್ಲಿ ವಿವಿಧ ಗುಂಪುಗಳು ತಮ್ಮ ಕಾಲ್-ಚಳಕ ತೋರಲಿವೆ. ಇದಲ್ಲದೆ ನ್ಯೂಝಿಲ್ಯಾಂಡ್ ದೇಶದ ನಾಲ್ಕು ಕಡೆ ಪಂದ್ಯಗಳು ನಡೆಯಲಿವೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

read more
ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

read more
ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

read more
ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರು: ಇ.ಆರ್. ರಾಮಚಂದ್ರನ್ ಅಂಕಣ

ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆದಿಶೇಷರನ್ನು ಆಯ್ಕೆ ಮಾಡಲಾಗಿತ್ತು. ಆ ದಿನಗಳಲ್ಲಿ ಹೆಚ್ಚು ಕಡಿಮೆ ತಂಡದ ಸದಸ್ಯರೆಲ್ಲಾ ಬೊಂಬಾಯಿನವರಾಗಿದ್ದರು. ಬೇರೆ ರಾಜ್ಯಗಳಿಂದ ಒಬ್ಬರೋ ಇಬ್ಬರನ್ನೋ ಆಯ್ಕೆ ಮಾಡುತ್ತಿದ್ದರು. ಆಗ ತಂಡದಲ್ಲಿ ತಾರತಮ್ಯ ಮತ್ತು ಭೇದ ಭಾವನೆಗಳಿದ್ದು ಎಷ್ಟೋಸಲ ಬೇರೆ ರಾಜ್ಯದವರು ಟೀಮಿನ ಜೊತೆಗೆ ಪ್ರವಾಸಕ್ಕೆ ಹೋಗಲು ಹಿಂಜರಿಯುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರ ಕುರಿತ ಬರಹ ನಿಮ್ಮ ಓದಿಗೆ

read more
ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ