Advertisement

ಅಂಕಣ

ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ

ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ

ಇವೆಲ್ಲವನ್ನು ಹಿಂದಿನ, ಎಂದಿನ ಕುತೂಹಲದಿಂದ ನೋಡುತ್ತಾ ನಿಲ್ಲುವ ನನ್ನನ್ನು ಅನುಮಾನದಿಂದ ನೋಡುವ ಜನರು ಜಾಸ್ತಿಯಾಗಿರುವುದು ಗಮನಕ್ಕೆ ಬರುತ್ತದೆ. ಯಾರು ನೀವು, ಇಲ್ಲಿ ಯಾಕೆ ನಿಂತು ನಮ್ಮನ್ನು ನೋಡುತ್ತಿದ್ದೀರಿ, ನಿಮ್ಮಷ್ಟಕ್ಕೆ ನೀವು ನಿಮ್ಮ ಕೆಲಸ ನೋಡಿಕೊಂಡು ಮುಂದೆ ಸಾಗಿ, ಎಂದು ಕೆಲವರು ಕೇಳುವಾಗ ಜನಜೀವನದ ಮನಸ್ಸುಗಳ ಬೇರುಗಳಿಗೆ ಅಂಟಿಕೊಂಡಿರುವ ಮಣ್ಣು ಸಡಿಲವಾಗಿರುವುದು ಕಾಣುತ್ತದೆ. ನಮ್ಮಷ್ಟಕ್ಕೆ ನಾವು, ನಿಮ್ಮಷ್ಟಕ್ಕೆ ನೀವು ಎನ್ನುವ ಮಾತನ್ನು ಕೇಳಿದಾಗ ಯಾಕೋ ಮುಂದುವರೆದ ಪಾಶ್ಚಾತ್ಯ ದೇಶ-ಸಮಾಜಗಳ ಬಂಡವಾಳಶಾಹಿ ಧೋರಣೆ ನೆನಪಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

read more
ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

read more
ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

read more
ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

read more
ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್‌ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ

read more
ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

read more
ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

read more

ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ

ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ