ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ
ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ
ಎಗ್ ರೈಸ್ ತಿಂತೀರಿ ಸರ್ರ…?
ಮನೆ ಸೇರಿದಾಗ ಹಲವು ಯೋಚನೆಗಳು ಮುತ್ತಿಕೊಂಡವು. ಪಟ್ಟಣದಲ್ಲಿ ಇದ್ದ ನಾವುಗಳು ಅಲ್ಲಿನ ಒತ್ತಡದ ಬದುಕು ಸಾಕಾಗಿ, ಒಂದಿಷ್ಟು ಶುದ್ಧ ಹವೆ, ಹಸಿವಾದಾಗ ವಿಷರಹಿತ ಆಹಾರ ಸಿಕ್ಕರೆ ಅದೇ ಸ್ವರ್ಗ ಅಂತ ಅಲ್ಲಿಂದ ಇಲ್ಲಿಗೆ ನೆಮ್ಮದಿಯನ್ನು ಅರಸಿ ಬರುತ್ತೇವೆ. ಆದರೆ ಶ್ಯಾಮನಂತಹ ಗ್ರಾಮವಾಸಿ ಯುವಕರು ಕೈತುಂಬಾ ದುಡ್ಡು ಮಾಡಿದರೆ ಮಾತ್ರ ಸುಖ ಅಂತ ಅಂದುಕೊಳ್ಳುತ್ತಾರೆ. ಹೌದು ದುಡ್ಡು ಬೇಕು.. ಆದರೆ ಬೆಂಝ್ ಕಾರೆ ಆಗಬೇಕೇ? ಇದ್ದುದರಲ್ಲೇ ಸುಖ ನೆಮ್ಮದಿ ಕಾಣಲು ಸಾಧ್ಯವಿಲ್ಲವೇ?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ
ಸಂಬಂಧಗಳಿಗೂ ಒಂದು ಕೊನೆಯ ದಿನ ಇದ್ದರೆ….!
ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಮತ್ತಷ್ಟು ಆತ್ಮೀಯ, ಅಪ್ಯಾಯ ಬಂಧವಾಗಿ ಬದುಕು ಹಿತವೆನಿಸುವ ದಿನಗಳಲ್ಲಿ ಯಾರಿಗಾದರೂ ಅಂತಹದ್ದೊಂದು ಸಂಬಂಧ ಜಡವಾಗಬಹುದೆಂಬ ಸುಳಿವು ಸಿಕ್ಕಿರುವುದಿಲ್ಲ. ಈ ದಿನ, ಈ ಕ್ಷಣ, ಈ ಕಾಲ ಸದಾ ಹೀಗೆಯೇ ಇರುವುದೆಂಬ ನಂಬಿಕೆ, ಆಶಯದ ಬುನಾದಿಯ ಮೇಲೆ ಕಟ್ಟಿದ ಕನಸಿನ ಗೋಪುರ ಕುಸಿಯತೊಡಗಿದಾಗ ಶುರು ಸತ್ವಪರೀಕ್ಷೆ. ಜೊತೆಯಾಗಿ ಎದುರಿಸಿದ ಕಷ್ಟ ಸುಖ, ಕೂಡಿಟ್ಟ ನೆನಪುಗಳು, ಜೋಳಿಗೆ ತುಂಬಿದ ಅನುಭವಗಳು ಮಸುಕಾಗುವವರೆಗೂ ಮುಗಿಯದ ಉಮ್ಮಳಿಕೆ. ಇದು ಬರಿಯ ಪ್ರೇಮಿಗಳಿಗೆ ಸಂಬಂಧಿಸಿದ ವಿಷಯವಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ
ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ
ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ
ನಿನ್ನೆ ಇದ್ದದ್ದು ಇವತ್ತು ಮಂಗಮಾಯ!
ಒಮ್ಮಿಂದೊಮ್ಮೆಲೆ ಮೂಡುತ್ತಿದ್ದ ಆ ಕಳೆ ನಮ್ಮಲ್ಲಿ ಚಿಂತೆ ಉಂಟುಮಾಡಿದ್ದು ಹೌದು. ಅಂತಹ ಗಿಡಗಳು ಬೆಳೆಯುವಂತೆ ಯಾರಾದರೂ ಬೇಕಂತಲೇ ಒಂದಿಷ್ಟು ಬೀಜಗಳನ್ನು ನಮ್ಮ ಭತ್ತದ ಬೆಳೆಗಳ ನಡುವೆ ಎಸೆದಿರಬೇಕು ಎಂಬ ಸಂಶಯ ನಾಗಣ್ಣ ಅವರಿಗೆ ಮೂಡಿತು. ಇದ್ದರೂ ಇದ್ದೀತು ಅಂತ ನನಗೂ ಅನಿಸಿತು. ಆದರೆ ನಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡೋಣ ಅಂತ ಸುಮ್ಮನಾದೆ. ಒಂದು ಮೂಟೆ ಭತ್ತ ಬಂದರೂ ಸಾಕು, ಒಂದಿಷ್ಟು ದಿನ ವಿಷರಹಿತ ಅನ್ನ ಉಣ್ಣಬಹುದು ಎಂಬ ಸಣ್ಣ ಆಸೆ ನಮಗಿತ್ತು ಅಷ್ಟೇ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ
ಮಹಿಳಾ ಕ್ರಿಕೆಟ್ ಲೋಕದ ತಾರೆಯರು….
ಅವರ ಕ್ರಿಕೆಟ್ ಜೀವನದಲ್ಲಿ ಕೋಚ್ ಆಗಿದ್ದ ರಮೇಶ್ ಪವಾರ್ ಅವರ ಜೊತೆ ಹೊಂದಾಣಿಕೆ ಇಲ್ಲದೆ ಕೆಲವು ಘರ್ಷಣೆಗಳಾದವು. ಬಿಸಿಸಿಐ ತನಕ ದೂರುಗಳು ಹೋದವು. ಅವರ ಮತ್ತು ಈಗಿನ ಕಪ್ತಾನ್ರ ಹರ್ಮನ್ಪ್ರೀತ್ ಕೌರ್ ಮಧ್ಯೆಯೂ ಅಷ್ಟು ಹೊಂದಾಣಿಕೆ ಇರಲಿಲ್ಲ. ಆದರೂ ವೃತ್ತಿಪರ ಸಂಬಂಧವನ್ನು ಬದಿಗಿಟ್ಟು ತಂಡದ ಹಿತಕ್ಕಾಗಿ ಜೊತೆಗೆ ಚೆನ್ನಾಗಿ ಆಡುತ್ತಿದ್ದಾರೆ. ಇದು ಬಹಳ ಮುಖ್ಯ. ವೈಯುಕ್ತಿಕವಾಗಿ ಏನೇ ಒಡಕು ತೊಡಕುಗಳಿರಲಿ ಅದನ್ನು ಬದಿಗಿಟ್ಟು ತಂಡದ ಏಳಿಗೆಗಾಗಿ ಶ್ರಮಿಸುವವರ ಕೊಡುಗೆ ಬಹಳ ಮಹತ್ತರವಾದದ್ದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ
ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….
ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ
‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ
ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
“ಸರ್ವೆ” ಜನಾಃ ದುಃಖಿನೋಭವಂತು!
ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ









