Advertisement

ಅಂಕಣ

ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1

ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1

ಪ್ರಸನ್ನ ಬೋಲಿಂಗ್‌ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್‌ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

read more
ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

read more
ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು

ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು

ಇನ್ನೊಂದು ಕುತೂಹಲಕರ ವಿಷಯ ಅಂದರೆ, ಆ ಕಾಲದ ಸಾಮಾಜಿಕ ಜೀವನದ ಮೇಲೆ ಬೆಳಕು ಚೆಲ್ಲುವ ಕೃತಿಗಳನ್ನು ರಚಿಸಿರುವ, ತಮ್ಮ ಪ್ರವಾಸದ ಕಥೆ ಹೇಳುತ್ತ ಅಂದಿನ ಜೀವನದ ಬಗ್ಗೆ ತಿಳಿಸುವ ಕಲಣ, ಬಿಲ್ಲಣ ಮುಂತಾದವರ ಕೃತಿಗಳಲ್ಲೂ ಕೂಡ ಯಾವ ಕಾರಣಕ್ಕೆ ದೇವಾಲಯಗಳಲ್ಲಿ ಮಿಥುನ ಶಿಲ್ಪಗಳನ್ನು ಕೆತ್ತುತ್ತಾರೆ ಎನ್ನುವುದರ ಬಗ್ಗೆ ಏನೂ ಮಾಹಿತಿ ಸಿಗುವುದಿಲ್ಲ. ಹಾಗಾಗಿ ಇದು ಅಂದಿನ ಸಾಮಾಜಿಕ ಜೀವನದಲ್ಲಿ ತುಂಬಾ ಸಹಜವಾದ ಭಾಗವಾಗಿರಬಹುದು.
‘ದೇವಸನ್ನಿಧಿ’ ಅಂಕಣದಲ್ಲಿ ಪುರಾತನ ದೇವಸ್ಥಾನಗಳಲ್ಲಿ ಕಾಣಸಿಗುವ ಮಿಥುನ ಶಿಲ್ಪಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

read more
ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಮನುಷ್ಯ ಮಾಗಿದಷ್ಟೂ ಅವನ ಬರಹ ಪಕ್ವವಾಗುತ್ತದೆ ಎಂಬ ಮಾತು ಕೆಲವರಿಗೆ ಅಪವಾದವಾಗುತ್ತದೆ. ಸಮಾಜದ ತಲ್ಲಣಗಳಿಗೆ ಸ್ಪಂದಿಸುವ ಕವಿ ಮತ್ತು ಆತನ ಬರವಣಿಗೆಗಳು ಇಂಥ ದುರಿತ ಕಾಲಕ್ಕೆ ಖಂಡಿತ ಅವಶ್ಯಕತೆ ಇದೆ. ವಿಶಾಲ್ ಅವರ ಬರಹದ ನಡಿಗೆಯೂ ಸಮಸಮಾಜದ ನಿರ್ಮಿತಿಯ ಕಡೆಗೇ ಇದೆ. ಒಂದೊಂದು ಕವಿತೆಯಲ್ಲೂ ಅವರೇ ಕಂಡು, ಅನುಭವಿಸಿದ ನೋವುಗಳನ್ನು ಕಾವ್ಯದ ಮೂಲಕ ಹೊರಹಾಕಿದ್ದಾರೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ವಿಶಾಲ್‌ ಮ್ಯಾಸರ್‌ ಕವನ ಸಂಕಲನ ‘ಬಟ್ಟೆಗಂಟಿದ ಬೆಂಕಿ’ಯ ಕುರಿತ ಬರಹ ಇಲ್ಲಿದೆ

read more
ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ನಿಮ್ಮ ಜಾತಿ ಯಾವುದು!

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

read more
ರಷ್ಯಾದ ಭೌಗೋಳಿಕ ಕಥನ…

ರಷ್ಯಾದ ಭೌಗೋಳಿಕ ಕಥನ…

ಒಂದುವೇಳೆ ಬೆಂಗಳೂರು ಸಮುದ್ರಮಟ್ಟಕ್ಕಿಂತ ಒಂದು ಮುನ್ನೂರು ಮೀಟರ್ ಕೆಳಗಿದ್ದಿದ್ದರೆ? ಅರಬ್ಬೀ ಸಮುದ್ರದ ಮೂಲಕ ಬಂದ ಗಾಳಿ ಪಾಲ್ಘಾಟ್ ಗ್ಯಾಪಿನ ಕಾರಣ ಪಶ್ಚಿಮ ಘಟ್ಟಗಳಿಗೆ ಅಪ್ಪಳಿಸದೇ ಊಟಿ ತಲುಪಿ ಅಲ್ಲಿ ತಂಪುಗೊಂಡು ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿ ಈಗಿನ ಎತ್ತರಕ್ಕೆ ತಡೆಯಿರದ ಕಾರಣ ಮುಂದೆ ಹೋಗಿಬಿಡುತ್ತಿತ್ತು. ಈಗಿನ ಅತ್ಯುತ್ತಮ ಹವಾಮಾನ ಇರುತ್ತಲೇ ಇರಲಿಲ್ಲ. ಹೈದರಾಲಿ ಮತ್ತು ಟಿಪ್ಪು ಲಾಲ್‌ಬಾಗ್ ನಿರ್ಮಿಸುತ್ತಲೇ ಇರಲಿಲ್ಲ. ಮೈಸೂರು ಅರಸರಿಗೆ ಪ್ರಿಯವಾದ ಜಾಗವಾಗುತ್ತಲೇ ಇರಲಿಲ್ಲ. ಬ್ರಿಟಿಷರಿತೆ ತಮ್ಮ ಊರನ್ನು ನೆನಪಿಸುವ ಪ್ರದೇಶವೂ ಆಗುತ್ತಿರಲಿಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

read more
ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

read more
ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್‌ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್‌ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ