Advertisement

ಅಂಕಣ

ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

read more
ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

read more

ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ

ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

read more
ಸಸ್ಯ ನೆಡುವವರ ಸಂತಸದ ಘಳಿಗೆಗಳು: ವಿನತೆ ಶರ್ಮ ಅಂಕಣ

ಸಸ್ಯ ನೆಡುವವರ ಸಂತಸದ ಘಳಿಗೆಗಳು: ವಿನತೆ ಶರ್ಮ ಅಂಕಣ

ಚಕ್ರಮುನಿ ಸೊಪ್ಪಿನ ಗಿಡ ಖರೀದಿಗಿದ್ದದ್ದು ನೋಡಿ ನನ್ನ ಕಣ್ಣರಳಿತು! ಬೆಂಗಳೂರು, ಮೈಸೂರಿನಲ್ಲಿ ಈ ಚಕ್ರಮುನಿ ಎಲೆಗಳನ್ನು ತಿನ್ನುವ ಅಭ್ಯಾಸವಿತ್ತು. ಬ್ರಿಸ್ಬೇನ್ನಿನಲ್ಲಿ ಅಪರೂಪಕ್ಕೆ ವಾರಾಂತ್ಯ ತರಕಾರಿ-ಹಣ್ಣು ಮಾರ್ಕೆಟ್ಟಿನಲ್ಲಿ ವಿಯೆಟ್ನಮೀಸ್ ಮಾರಾಟಗಾರರು ತರುತ್ತಿದ್ದ ಚಕ್ರಮುನಿ ಸೊಪ್ಪನ್ನು ಕಂಡು ಸಂಭ್ರಮಿಸಿದ್ದೆ. ಅದನ್ನು ಕೊಂಡು ಅದರ ಕೊಂಬೆಗಳನ್ನು ನೆಟ್ಟು ಎರಡು ಬಾರಿ ಇದನ್ನು ಬೆಳೆಯಲು ಪ್ರಯತ್ನಿಸಿ ಸೋತಿದ್ದೆ. ಜೆರ್ರಿ ಅವರ ಸ್ವಾವಲಂಬಿ ಕೈತೋಟದಲ್ಲಿ ಚೆನ್ನಾಗಿ ಬೆಳೆದಿದ್ದ ಗಿಡವನ್ನು ನೋಡಿ ಸಂತೋಷವಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

read more
ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್‌ ಅಂಕಣ

ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್‌ ಅಂಕಣ

“ಕೆಲವೊಮ್ಮೆ ಈ ಗಂಡ, ಮಗು, ಸಂಸಾರ, ದುಡಿಮೆ, ಸಂಪಾದನೆ, ಕೊಂಕು ಮಾತು, ಅನಾರೋಗ್ಯ ಎಲ್ಲದರಿಂದ ಬಹಳ ದೂರ ಹೋಗಿ, ನಾನೊಬ್ಬಳೇ ಪ್ರಶಾಂತವಾಗಿ ಕೆಲಕಾಲ ಕಳೆಯಬೇಕನ್ನಿಸುತ್ತೆ. ಆದರೆ ಎಲ್ಲಿ ಹೋಗುವುದು? ಹೀಗೆ ವಾಸ್ತವ ಹಿಂಸೆಯೆನಿಸಿದಾಗೆಲ್ಲ, ಬೇಸರದಲ್ಲೇ ಕತ್ತಲಕೋಣೆಯಲ್ಲಿ ಉಳಿಯುವುದರ ಬದಲು, ಮನೆತುಂಬ ಬೆಳಕಾಗುವಂತೆ ಝಗಮಗಿಸಿ, ಸ್ನಾನ ಮಾಡಿ, ನಾನು ಹೊಸದಾಗಿ ಕೊಂಡ ಬಟ್ಟೆ ತೊಟ್ಟು, ನನಗೇ ಹೆಮ್ಮೆಯಾಗುವಷ್ಟು ಚೆಂದಕ್ಕೆ ಅಲಂಕರಿಸಿಕೊಂಡು ಅರ್ಧಗಂಟೆ ಕನ್ನಡಿಯ ಮುಂದೆ ನಗುಮುಖದಲ್ಲಿ ಕೂತಿರುತ್ತೇನೆ.”
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ

read more
150 ವರ್ಷಗಳ ಕ್ರಿಕೆಟ್ ಟೆಸ್ಟ್‌ಗಳಲ್ಲಿ ಎರಡೇ ‘ಟೈ’ ಮ್ಯಾಚುಗಳು!: ಇ.ಆರ್. ರಾಮಚಂದ್ರನ್ ಅಂಕಣ

150 ವರ್ಷಗಳ ಕ್ರಿಕೆಟ್ ಟೆಸ್ಟ್‌ಗಳಲ್ಲಿ ಎರಡೇ ‘ಟೈ’ ಮ್ಯಾಚುಗಳು!: ಇ.ಆರ್. ರಾಮಚಂದ್ರನ್ ಅಂಕಣ

ಕೊನೆಯ ರನ್ – ಗೆಲುವಿನ ರನ್ ಇಯನ್ ಮೆಕಿಫ್ ಓಡುತ್ತಿದ್ದಾಗ ಜೊ ಸೊಲೊಮನ್ ಬಾಲನ್ನು ಅಟ್ಟಿಸಿಕೊಂಡು ಹೋಗಿ ಹಿಡಿದು ಅದನ್ನು ವಿಕೆಟ್‌ಗೆ ಎಸೆದು ಮೆಕಿಫ್‌ಅನ್ನು ರನ್ ಔಟ್ ಮಾಡಿದರು. ಸೋಲೊಮನ್ ಬಾಲ್ ಎಸೆದಾಗ ಮೂರು ವಿಕೆಟ್‌ಗಳಿದ್ದರೂ ಅವರು ಸ್ಕೊಯರ್ ಲೆಗ್‌ನಲ್ಲಿ ಇದ್ದುದ್ದರಿಂದ ಆ ಜಾಗದಿಂದ ಅವರಿಗೆ ಕಾಣಿಸುತ್ತಿದ್ದ ವಿಕೆಟ್ ಒಂದೇ! ಅವರು ಗುರಿ ಇಟ್ಟು ಹೊಡೆದು ವಿಕೆಟ್‌ಗೆ ಬಿದ್ದು ಮೆಕಿಫ್ ರನ್ ಔಟಾದರು. ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟೆಸ್ಟ್‌ಮ್ಯಾಚ್‌ಗಳಲ್ಲಿ ಇದುವರೆಗೂ ಆದ ಎರಡು ಟೈ ಮ್ಯಾಚುಗಳ ಕುರಿತ ಬರಹ ನಿಮ್ಮ ಓದಿಗೆ

read more
ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳು ಹೇಳಿದಂತೆ ಯೂನಿವರ್ಸಿಟಿಯ ಸಹಪಾಠಿಯೊಬ್ಬರು ತಮ್ಮ ಕಾರಿನಲ್ಲಿ ಬದುಕುತ್ತಿದ್ದರಂತೆ. ರಾತ್ರಿ ಸಮಯ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿರುವುದು, ಒಳಗೆ ಮುದುರಿಕೊಂಡು ಮಲಗುವುದು. ಬೆಳಿಗ್ಗೆ ಎದ್ದು ಯೂನಿವರ್ಸಿಟಿಗೆ ಬಂದು ಅಲ್ಲಿದ್ದ ಟಾಯ್ಲೆಟ್, ಶವರ್ ಸೌಲಭ್ಯಗಳನ್ನು ಬಳಸಿಕೊಂಡು, ಕೆಫೆಯಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕುವ ರಿಯಾಯ್ತಿ ದರದಲ್ಲಿ ಕಾಫಿ, ಸ್ಯಾಂಡ್ವಿಚ್ ಮತ್ತು ಉಚಿತ ಹಣ್ಣು ಪಡೆಯುವುದು. ದಿನಪೂರ್ತಿ ಯೂನಿವರ್ಸಿಟಿ ಕಟ್ಟಡದೊಳಗೇ ಇದ್ದುಕೊಂಡು ಒಂದಷ್ಟು ವ್ಯಾಸಂಗ, ನಿದ್ದೆ ಮಾಡುವುದು. ರಾತ್ರಿ ಪುನಃ ಕಾರಿಗೆ ವಾಪಸ್.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ