ಆವರ್ತನ…
ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್ ಜೈಮನ್ ಬರೆಯುವ ಜಂಕ್ಷನ್ ಪಾಯಿಂಟ್ ಅಂಕಣ
ವಸತಿ ಸಮಸ್ಯೆ, ರಾಜಕೀಯ ಪ್ರಶ್ನೆಗಳ ಕಥೆಗಳು
ಆಸ್ಟ್ರೇಲಿಯಾದಲ್ಲಿ ಕೋವಿಡ್-೧೯ ನಂತರದ ಪರಿಸ್ಥಿತಿ ಸುಧಾರಿಸಿದೆ, ಜನರ ಹರಿದಾಟ ಸುಗಮವಾಗಿದೆ. ಆದರೆ ಧುತ್ತೆಂದು ದೇಶದಾದ್ಯಂತ, ಅದರಲ್ಲೂ ನಮ್ಮ ರಾಣಿರಾಜ್ಯದಲ್ಲಿ ಇನ್ನೂ ನಿಚ್ಚಳವಾಗಿ, ವಸತಿ ಸಮಸ್ಯೆ ಎನ್ನುವುದು ಹೊಸದಾಗಿ ತಲೆದೋರಿದೆ. ಪ್ರಪಂಚದ ಬೇರೆಬೇರೆ ಭಾಗಗಳಿಂದ ದೇಶದೊಳಕ್ಕೆ ಬರುತ್ತಿರುವವರ ಮತ್ತು ಅಂತರಾಜ್ಯ ವಲಸೆಗಾರರ ಸಂಖ್ಯೆ ಹೆಚ್ಚಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದ ಕೇಂದ್ರ ಸರಕಾರವು ಇತ್ತೀಚೆಗೆ ಹೆಚ್ಚು ಸಂಖ್ಯೆಯ ವಿದ್ಯಾರ್ಥಿ ಮತ್ತು ಉದ್ಯೋಗ ವೀಸಾಗಳನ್ನು ಕೊಡುತ್ತ ಉತ್ತೇಜನಕಾರಿಯಾಗಿದೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”
ಅಂತಃಕರಣದ ಹಣತೆ ಬೆಳಗುವ ಸಮಯ
ಮಕ್ಕಳು ಈಗಲ್ಲದೆ ಮತ್ಯಾವಾಗ ತಂಟೆ ಮಾಡಬೇಕು? ಇನ್ನೆಂದು ಮನಸೋ ಇಚ್ಚೆ ತಿಂದು ಕುಡಿದು ಖುಷಿಪಡಬೇಕು? ಎಂದು ಅಪ್ಪನಿಗೆ ಎದುರಾಡುತ್ತಿದ್ದ ಅವಳಿಗೆ ನಮ್ಮ ಬಾಲ್ಯ ಅವಳ ಬಾಲ್ಯದ ಕಿಟಕಿಯಾಗಿತ್ತು. ಮಕ್ಕಳನ್ನು ಓದಿಸುವ, ಬೆಳೆಸುವ, ಜವಾಬ್ದಾರಿಯಲ್ಲಿ ಮುಳುಗಿಹೋದ ಆಕೆ ಬಿಡುವು ಮಾಡಿಕೊಂಡು ಹೊಲಿಯುತ್ತಿದ್ದ ಬಟ್ಟೆ, ಹಾಕುತ್ತಿದ್ದ ರಂಗೋಲಿ, ಕಸೂತಿ, ಓದುತ್ತಿದ್ದ ಪುಸ್ತಕಗಳು ದಿನಕಳೆದಂತೆ ಕಡಿಮೆಯಾಯಿತು. ಸ್ವಂತಕ್ಕೆ ಸಮಯ ಕೊಟ್ಟುಕೊಳ್ಳಲಾಗದ ಸಾದಾ ಗೃಹಿಣಿಯಾಗಿ ಹಲವು ಕಾಲ ಕಳೆದಳು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ
ಉದ್ದೇಶಪೂರ್ವಕವಲ್ಲದ ಒಂದು ಮಾತು ಕೊಲ್ಲಬಹುದು
ನಮ್ಮಲ್ಲಿನ್ನೂ ಮಾನವೀಯ ಸಂಬಂಧಗಳಿಗೆ ಬಹಳಷ್ಟು ಮೌಲ್ಯವಿದೆ, ಅರ್ಥವಿದೆ. ಯಾವುದೋ ಒಂದು ಅಪನಂಬಿಕೆ, ತಪ್ಪುಕಲ್ಪನೆ, ಅಪಾರ್ಥ ಎಲ್ಲವನ್ನು ಮುರಿದು ಹಾಕಬಾರದು. ಸಂಬಂಧಗಳೇನು ಪಟಕ್ಕನೇ ಕತ್ತರಿಸುವಷ್ಟು ತೆಳುವಾಗಿರುತ್ತವೆಯೇ? ತಾಳ್ಮೆಯಿಂದ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಯುದ್ಧಗಳೆ ನಿಂತಿರುವ ಉದಾಹರಣೆಗಳು ಕಣ್ಣಮುಂದಿವೆ. ಸಣ್ಣ ಪುಟ್ಟ ತಪ್ಪುಗಳಿಗೆ, ಜಗಳಗಳಿಗೆ, ಮುನಿಸುಗಳಿಗೆ ಮತ್ಯಾವುದೋ ಉದ್ದೇಶಪೂರ್ವಕವಲ್ಲದ ಮಾತಿಗೆ ಸಂಬಂಧಗಳು ಮುರಿದು ಬೀಳುತ್ತವೆ ಎಂದರೆ ಸಂಬಂಧಗಳಿಗೆ ಬೆಲೆ ಏನು?
ಇಸ್ಮಾಯಿಲ್ ತಳಕಲ್ ಅಂಕಣ
“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…
ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ
ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ
ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ
ಆಸ್ಟ್ರೇಲಿಯದ ಮಳೆ ಪ್ರವಾಹಗಳು, ಸೋಲುಗೆಲುವುಗಳು
ಈ ಬಾರಿ ವಿಕ್ಟೊರಿಯಾ ರಾಜ್ಯವಷ್ಟೇ ಅಲ್ಲ ಅದರ ಕೆಳಗಿನ ಟಾಸ್ಮೆನಿಯಾ ರಾಜ್ಯದ ಭಾಗಗಳಲ್ಲೂ ಪ್ರವಾಹವುಂಟಾಗಿದೆ. ಟಾಸ್ಮೆನಿಯಾವು ಕಡಿಮೆ ಜನಸಂಖ್ಯೆ, ಎಲ್ಲೆಲ್ಲೂ ಕಂಗೊಳಿಸುವ ಪುರಾತನ ಹಸಿರು ಕಾಡುಗಳಿಗೆ ಹೆಸರಾದದ್ದು. ಹಾಗಾಗಿ ಪ್ರವಾಹದ ವಿಷಯ ಇನ್ನೂ ಅಪರೂಪದ ಸಂಗತಿ ಇಲ್ಲಿ. ಹೆಚ್ಚು ಕಡಿಮೆ ದೇಶದ ಇಡೀ ಪೂರ್ವಭಾಗದಲ್ಲಿ ಮಳೆಮೋಡಗಳ ಜೊತೆ ಚಿಂತೆಮೋಡಗಳು ಕೂಡ ಕವಿದಿವೆ. ದೇಶದ ಆಚೆಕಡೆಯ ಮರುಭೂಮಿಗಳು ಬೆಂದು ಕಾದು ಅಲ್ಲಿನ ಕಾವುಮೋಡಗಳು ಮರುಭೂಮಿಯನ್ನು ದಾಟಿಬಿಟ್ಟಿವೆ.
ಡಾ. ವಿನತೆ ಶರ್ಮ ಅಂಕಣ
ಜಿ.ಟಿ. ನಾರಾಯಣರಾವ್ ಹೇಳುವ ಎನ್ಸಿಸಿ ದಿನಗಳ ಕಥೆಗಳು
ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್ ಗುಂಜಗೋಡು ಬರೆಯುವ ಓದುವ ಸುಖ ಅಂಕಣ
ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?
ಇರುವ ಚೆಂದವನ್ನು ಕಾಪಾಡಿಕೊಳ್ಳಬೇಕೆಂಬ ಒತ್ತಡ ಸೃಷ್ಟಿಸುವ ತಾಕಲಾಟ ಬಲ್ಲೆ. ಒಂದೇ ಘಟ್ಟದಲ್ಲಿ ಹೆಚ್ಚು ಕಾಲ ಇರಲಾಗದು. ನಿಧಾನಕ್ಕೆ ಈ ಜತನ ಮಾಡುವ ಉಸಾಬರಿ ಸಾಕೆನ್ನಿಸಿತು. ಹೊರಗೆ ‘ಕಾಣುವ’ ಚೆಂದಕ್ಕಿಂತ ನಾನು ಬೇರೆ ಅನ್ನಿಸಿತು. ಎಷ್ಟೇ ಕಷ್ಟಪಟ್ಟರೂ ಕಾಲನ ಹೊಡೆತ ತನ್ನ ಕೆಲಸ ಮಾಡಿಯೇ ತೀರುತ್ತದೆ. ಕಾಲದೊಂದಿಗೆ ಹೋರಾಡುವುದಕ್ಕಿಂತ ನನ್ನ ವ್ಯಕ್ತಿತ್ವ, ಪ್ರತಿಭೆ, ಬುದ್ಧಿ, ಮನಸ್ಸಿನ ಜೊತೆ ಗುದ್ದಾಡುತ್ತಾ ಬೆಳೆಯುವುದರಲ್ಲಿ ಬದುಕಿನ ಸೌಂದರ್ಯವಿದೆ. ಈ ಸಮಯ ಮತ್ತೆ ಬರಲಾರದು. ಈ ಅವಕಾಶ ಮತ್ತೆ ಸಿಗಲಾರದು. ಹಠಕ್ಕೆ ಬಿದ್ದಂತೆ ಸಂಗೀತ ಮುಂದುವರೆಸಿದೆ.
ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ









