Advertisement

ಅಂಕಣ

ಅವಳನ್ನು ಅನ್ಯಗ್ರದ ಏಲಿಯನ್‌ಳಂತೆ ನೋಡತೊಡಗಿದ್ದರು

ಅವಳನ್ನು ಅನ್ಯಗ್ರದ ಏಲಿಯನ್‌ಳಂತೆ ನೋಡತೊಡಗಿದ್ದರು

ಆಧುನಿಕತೆಯ ಬಣ್ಣ ಅಷ್ಟೊಂದು ಮೆತ್ತಿಕೊಂಡಿರದಿದ್ದ ನಮ್ಮ ಕಾಲೇಜಿಗೆ ಆಗ ಒಂದು ಹುಡುಗಿ ಜೀನ್ಸ್ ತೊಟ್ಟು ಬಂದಿರುವುದೇ ದೊಡ್ಡ ವಿಷಯ ಆಗಿಹೋಯಿತು. ಅಂದು ಅವಳನ್ನು ಯಾವುದೋ ಅನ್ಯಗ್ರಹವೊಂದರಿಂದ ಬಂದಿಳಿದ ಏಲಿಯನ್‌ಳಂತೆ ಎಲ್ಲಾ ಹುಡುಗರು ಅವಳನ್ನೆ ದಿಟ್ಟಿಸತೊಡಗಿದ್ದರು. ಅವಳ ಆ ಬಟ್ಟೆ ಕಂಡು ಆಡಿಕೊಂಡು ನಗುವುದು ಕೊಂಕು ಮಾತನಾಡುವುದು ಶುರು ಮಾಡಿದ್ದರು. ಹುಡುಗರ ವರ್ತನೆ ಎಷ್ಟು ಅತಿರೇಕಕ್ಕೆ ಹೋಯಿತೆಂದರೆ ಆ ಹುಡುಗಿ ತಾನೇನೋ ಮಹಾಪರಾಧ ಮಾಡಿ ಸಿಕ್ಕಿಬಿದ್ದಳೇನೋ ಎನ್ನುವ ಮನೋಭಾವನೆಯಲ್ಲಿ ಕಾಲೇಜು ಮುಗಿಯುವವರೆಗೂ ತಲೆ ತಗ್ಗಿಸಿಕೊಂಡೆ ಕೂಡಬೇಕಾಯಿತು.
ಇಸ್ಮಾಯಿಲ್‌ ತಳಕಲ್‌ ಅಂಕಣ

read more
ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಪುಣ್ಯ ಕೊನೆಯ ಬಾರಿ ಮಾತನಾಡಿದ್ದು ಇದೆ ಒಂದು ವಾರದ ಕೆಳಗೆ. ಅವನ ಶಾಲಾ ವಾರ್ಷಿಕೋತ್ಸವದಲ್ಲಿ… ಈ ರಗಳೆಗಳೆಲ್ಲ ಶುರುವಾದದ್ದು ಸುರಭಿಯಿಂದಲೇ ಎನ್ನಬೇಕು. ಆರನೇ ತರಗತಿ ಓದುತ್ತಿದ್ದ ಸುರಭಿ, ಒಂದು ದಿನ ಶಾಲೆಯಿಂದ ಬಂದದ್ದೆ ಜೋರಾಗಿ ಅಳತೊಡಗಿದಳು. ‘ಅಣ್ಣ ಹುಡುಗಿ ತರ ಆಡ್ತಾನೆ ಅಂತ ಎಲ್ಲರು ನಂಗೆ ಹೆಣ್ಣಿಗನ ತಂಗಿ ಅಂತ ಆಡ್ಕತಾರೆ…ಕಾಡಿಸ್ತಾರೆ. ನಾಳೆಯಿಂದ ಶಾಲೆಗೇ ಹೋಗಲ್ಲ!’ ಎಂದು ರಂಪ ಮಾಡತೊಡಗಿದ್ದಳು. ಅಂದಿನಿಂದಲೇ ಪ್ರತಾಪ್ ಇವನನ್ನ ಸರಿ ಮಾಡಲು ಶುರುಮಾಡಿದ್ದು… ಪುಣ್ಯನ ದನಿ ಹುಡುಗಿಯ ದನಿಯನ್ನು ಹೋಲುತ್ತಿತ್ತು. ದಾದಾಪೀರ್‌ ಜೈಮನ್‌ ಬರೆಯುವ ʻಜಂಕ್ಷನ್‌ ಪಾಯಿಂಟ್‌ʼ ಅಂಕಣದ ಹೊಸ ಬರಹ

read more
ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

read more
ಒಣಎಲೆ ಗೊಬ್ಬರದ ಕಿರು ಕಥೆಗಳು

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

read more
ಕಾಡುವ ಕತೆಗಳ ರೂವಾರಿ….

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

read more
ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ನಾವಿದ್ದ ಅಪಾರ್ಟ್‌ಮೆಂಟಿನ ಮನೆಯನ್ನು ಸ್ವಚ್ಛ ಮಾಡಲು ಬರುತ್ತಿದ್ದ ಹದಿನೈದೋ ಹದಿನಾರೋ ಪ್ರಾಯದ ಬೆಂಗಾಲಿ ಹುಡುಗಿಯ ಬದುಕುವ ದರ್ದಿಗೆ ನಾನು ಬೆರಗಾಗಿದ್ದೆ. ಮಾತನಾಡಿಸಿದರೆ ಏನೊಂದೂ ಮಾತನಾಡದ, ಏನಾದರೂ ಪ್ರಶ್ನೆ ಕೇಳಿದರೆ ಸುಮ್ಮನೆ ನಕ್ಕುಬಿಡುತ್ತಿದ್ದ ಆ ಹುಡುಗಿ ತನ್ನ ತಾಯಿಯ ಜೊತೆಗೆ ಇಬ್ಬರು ತಂಗಿಯರನ್ನೂ ಬಂಗಾಳದ ಯಾವುದೋ ಹಳ್ಳಿಯಿಂದ ಕರೆದುಕೊಂಡು ಬಂದು ತಾನೊಬ್ಬಳೇ ದುಡಿಯುತ್ತಾ ಅವರನ್ನೆಲ್ಲಾ ಸಾಕುತ್ತಿದ್ದ ಪರಿ ನನ್ನಲ್ಲಿ ಸೋಜಿಗ ಹುಟ್ಟಿಸುತ್ತಿತ್ತು. ಮುಂಬೈಯಂತಹ ನಗರಗಳಲ್ಲಿ ಒಂಟಿ ಮಹಿಳೆಯರು ಒಂಟಿ ಹುಡುಗಿಯರು ಜೀವ ಕೈಯಲ್ಲಿ ಹಿಡಿದೆ ದುಡಿಯುತ್ತಿರುತ್ತಾರೆ.
ʻತಳಕಲ್‌ ಡೈರಿʼಯಲ್ಲಿ ಮುಂಬೈ ಮಹಾನಗರಿಯ ಬೆರಗಿನ ದಿನಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

read more
ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

read more
ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…

ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…

ಕೆಲವು ಕೆಟ್ಟ ಸನ್ನಿವೇಶಗಳಲ್ಲಿ ಈ ಪ್ರಪಂಚವೇ ನಮ್ಮ ವಿರುದ್ಧ ನಿಂತಿದೆಯೇನೋ ಎನ್ನಿಸುವ ಹೊತ್ತಿನಲ್ಲಿ ಇಂತಹ ಹಚ್ಚನೆಯ ಹಿತವನ್ನು ಸವರಿದ ಸಂದರ್ಭಗಳನ್ನು ಮೆಲುಕು ಹಾಕಬೇಕು. ಬಹುಶಃ ಈ ಪ್ರಪಂಚ ನಡೆಯುತ್ತಿರುವುದೇ ಇಂತಹ ಅಜ್ಞಾತ ಕೈಗಳ ಅಭಯದಿಂದ. ಪ್ರತಿದಿನವೂ ಸಿಗುವ ಅವಕಾಶ ಇರುವ, ಸಂಬಂಧಗಳಿಂದ ಅಂಟಿಕೊಂಡ, ಸ್ನೇಹ-ವ್ಯವಹಾರ-ವಿಶ್ವಾಸ- ಪರಿಚಯದ ಮುಸುಕು ಹೊದ್ದ ದಿನನಿತ್ಯದ ಕೊಡು-ಕೊಳ್ಳುವಿಕೆಗೆ ಒಂದು ತೂಕವಾದರೆ, ಮತ್ತೊಮ್ಮೆ ಸಿಗುವ ಸಾಧ್ಯತೆಯೇ ಕ್ಷೀಣವಾಗಿರುವ ಅಪ್ಪಟ ಮನುಷ್ಯಸಂಬಂಧವಾಗಿ ಎದುರಾಗುವ ಉಪಕಾರಗಳದ್ದು ಮತ್ತೊಂದು ವಜನು.

read more
ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ