Advertisement

ಅಂಕಣ

ನ್ಯಾಯದೇವತೆಯ ತಕ್ಕಡಿಯಲ್ಲಿ ಹೊಸ, ಹಳೆ ಅಹವಾಲು: ವಿನತೆ ಶರ್ಮ ಅಂಕಣ

ನ್ಯಾಯದೇವತೆಯ ತಕ್ಕಡಿಯಲ್ಲಿ ಹೊಸ, ಹಳೆ ಅಹವಾಲು: ವಿನತೆ ಶರ್ಮ ಅಂಕಣ

ಇದೆಲ್ಲವನ್ನೂ ನೋಡುತ್ತಿರುವಾಗ ಇಗೋ ಜನವರಿ ೨೬ ಬರುತ್ತಿದೆ. ಅಂದು ಆಸ್ಟ್ರೇಲಿಯಾ ಡೇ – ಕ್ಯಾಪ್ಟನ್ ಜೇಮ್ಸ್ ಕುಕ್ ಸಿಡ್ನಿ ಸಮುದ್ರತೀರಕ್ಕೆ ಬಂದು, ಅವನ ಹಡಗು ಅಲ್ಲಿ ಲಂಗರು ಹಾಕಿ, ಓಹೋ ಈ ಜಾಗದಲ್ಲಿ ಯಾರೂ ಮನುಷ್ಯರು ಇಲ್ಲ, ಆದ್ದರಿಂದ ಇದು ತಮಗೆ ಸೇರಿದ್ದು, ಬ್ರಿಟಿಷರಿಗೆ ಸೇರಿದ ನಾಡು, ಎಂದು ಘೋಷಿತವಾದ ದಿನ. ಅಲ್ಲಿಂದ ಹೊಸ ಆಸ್ಟ್ರೇಲಿಯದ ಹುಟ್ಟು, ಬೆಳವಣಿಗೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
ಉನ್ನತ ವಿಜ್ಞಾನ ಶಿಕ್ಷಣದಲ್ಲಿ ಕನ್ನಡ ಭಾಷೆ: ಡಾ.ಎಲ್.ಜಿ.ಮೀರಾ ಅಂಕಣ

ಉನ್ನತ ವಿಜ್ಞಾನ ಶಿಕ್ಷಣದಲ್ಲಿ ಕನ್ನಡ ಭಾಷೆ: ಡಾ.ಎಲ್.ಜಿ.ಮೀರಾ ಅಂಕಣ

ಮಾತೃ಼ಭಾಷೆ/ಪ್ರಾದೇಶಿಕ ಭಾಷೆಯಲ್ಲಿನ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಈ ವಿಷಯದಲ್ಲಿ ಹೊಸ ಬಾಗಿಲುಗಳನ್ನು ತೆರೆಯುವ ಸಾಧ್ಯತೆಯನ್ನು ತೋರಿಸಿದೆ. ವಿಶ್ವೇಶ್ವರಯ್ಯ ತಂತ್ರಜ್ಞಾನ ವಿಶ್ವವಿದ್ಯಾಲಯ (ವಿಟಿಯು)ದ ಉಪಕುಲಪತಿಗಳಾದ ಡಾ.ಕರಿಸಿದ್ಧಪ್ಪನವರ ಮುಂಚೂಣಿಯಲ್ಲಿ ಯಂತ್ರಜ್ಞಾನಗಳ (ಇಂಜಿನಿಯರಿಂಗ್) ವಿಷಯಗಳಲ್ಲಿ ಕನ್ನಡ ವಿಜ್ಞಾನ ಬೋಧನೆಯ ಪ್ರಯತ್ನಗಳು ಪ್ರಾರಂಭವಾಗಿವೆ. ಇಲ್ಲಿನ ಮೊದಲನೆಯ ವರ್ಷದ ಯಂತ್ರಜ್ಞಾನ ಶಿಕ್ಷಣದ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕಗಳನ್ನು ಮುತುವರ್ಜಿ ವಹಿಸಿ ತಯಾರಿಸುತ್ತಿರುವುದು ಒಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more
ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ

read more
ಎರಡು-ನಾಲಿಗೆಗಳ ನಡುವೆ ನಾನು!: ಸುಕನ್ಯಾ ಕನಾರಳ್ಳಿ ಅಂಕಣ

ಎರಡು-ನಾಲಿಗೆಗಳ ನಡುವೆ ನಾನು!: ಸುಕನ್ಯಾ ಕನಾರಳ್ಳಿ ಅಂಕಣ

ಕರ್ನಾಟಕದಲ್ಲಿ ಕಲಿಯುವ ಮಕ್ಕಳ ಜೊತೆ ಒಂದು ಭಾವನಾತ್ಮಕ ಸಂಬಂಧವನ್ನು ಕಟ್ಟಿಕೊಳ್ಳುವುದಕ್ಕೆ ನನ್ನ ಕನ್ನಡ ಇನ್ನಿಲ್ಲದಂತೆ ಸಹಾಯ ಮಾಡಿದೆ. ಕೆಲವೊಮ್ಮೆ ಪರಿಕಲ್ಪನೆಗಳನ್ನ ಅರ್ಥಮಾಡಿಸುವಾಗ ಬಳಸಿಕೊಳ್ಳುತ್ತಿದ್ದ ದಿನನಿತ್ಯದ ಉದಾಹರಣೆಗಳಿಗೆ ಮತ್ತು ಹಾಸ್ಯಕ್ಕೆ ಕನ್ನಡವೇ ಜೀವವಾಗಿರುತ್ತಿತ್ತು. ಅದನ್ನೇ ಇಂಗ್ಲೀಷಿನಲ್ಲಿ ಹೇಳಿದ್ದಿದ್ದರೆ ಮಕ್ಕಳು ನಗುವುದಿರಲಿ, ನನಗೇ ಅಳು ಬರುತ್ತಿತ್ತೋ ಏನೋ. ಆದರೂ ಹೊರನಾಡಿನಿಂದ ಬಂದಿದ್ದ ಕೆಲವು ಮಕ್ಕಳಿಗೆ ಇಂಗ್ಲೀಷಿನಲ್ಲೂ ಹೇಳುವ ಪ್ರಯತ್ನ ಮಾಡುತ್ತಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೊಂದನೆಯ ಬರಹ

read more
ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು” ಇಂದಿನಿಂದ

ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು” ಇಂದಿನಿಂದ

ಕೇವಲ ಕೆಲ ಬೇಸಿಗೆ ಶಿಬಿರಗಳು, ಅರೆ ವಾರ್ಷಿಕ ಕೋರ್ಸುಗಳು, ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳು ಆಡುವ ನಾಟಕಗಳು ಮಾತ್ರವಿದ್ದರೆ ಸಾಲದು. ಇದನ್ನೂ ಮೀರಿ ಮಕ್ಕಳ ರಂಗಭೂಮಿ ಬೆಳೆಯಬೇಕಿದೆ. ಕೇವಲ ಕಲೆಯ ದೃಷ್ಟಿಯಿಂದ ಮಾತ್ರವಲ್ಲ, ಮಕ್ಕಳೊಳಗಿನ ಆತ್ಮವಿಶ್ವಾಸ ಹೆಚ್ಚಾಗಲು, ಭಾಷಾ ಕಲಿಕೆಗೆ, ಸ್ಪಷ್ಟ ಉಚ್ಚಾರಣೆಗೆ, ಪಾತ್ರಗಳ ಮೂಲಕ ಭಿನ್ನ ವ್ಯಕ್ತಿತ್ವಗಳನ್ನು ಅರಿಯುವುದಕ್ಕೆ, ನಾಲ್ಕು ಜನರೊಂದಿಗೆ ಬೆರೆಯುವುದಕ್ಕೆ, ಆರೋಗ್ಯಕರ ಮನಸ್ಥಿತಿ ಬೆಳೆಸಿಕೊಳ್ಳುವುದಕ್ಕೆ ಮಕ್ಕಳ ರಂಗಭೂಮಿ ಪೂರಕವಾಗಬಲ್ಲದು. ಬಣ್ಣ ಮತ್ತು ಬೆಳಕಿನ ಜೋಡಿಯ ಮೋಡಿ ಸಮಸ್ತ ಪ್ರಜೆಗಳ ಮೇಲಾಗಲಿ.
ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು”

read more
‘ಹೊಸ’ ಅಲೆ  ಮತ್ತು ‘ಹಗರಣ’: ಸುಕನ್ಯಾ ಕನಾರಳ್ಳಿ ಅಂಕಣ

‘ಹೊಸ’ ಅಲೆ  ಮತ್ತು ‘ಹಗರಣ’: ಸುಕನ್ಯಾ ಕನಾರಳ್ಳಿ ಅಂಕಣ

‘ಸಂಸ್ಕಾರ’ ಕಾದಂಬರಿಯ ಕರ್ತೃ ಯು ಆರ್ ಅನಂತಮೂರ್ತಿ ಚಿತ್ರಕಥೆಯಲ್ಲಿ ಮಾಡಿಕೊಂಡಿದ್ದ ಬದಲಾವಣೆಗಳ ಬಗ್ಗೆ ಹೇಳಿದ್ದ ಮಾತುಗಳನ್ನು ಗಮನಿಸಿದರೆ ‘ಸ್ವ-ಸೆನ್ಸಾರಿಕರಣ’ ಅಲ್ಲಿಯೂ ಸಹ ಕೆಲಸ ಮಾಡಿದ್ದನ್ನು ಗಮನಿಸಬಹುದು. ನಾರಣಪ್ಪನ ಸಂಸ್ಕಾರ ಕಾದಂಬರಿಯ ಅರ್ಧದಲ್ಲಿಯೇ ಒಬ್ಬ ಮುಸ್ಲಿಮ್ ವ್ಯಕ್ತಿಯಿಂದ ನಡೆದು ಹೋಗಿರುತ್ತದೆ. ಆದರೆ ಚಿತ್ರ ಅದರ ಬಗ್ಗೆ ಮೌನ ತಳೆಯುತ್ತದೆ. ಈ ‘ದಿವ್ಯಮೌನ’ ಪ್ರಾಣೇಶಾಚಾರ್ಯರ ತುಮುಲಕ್ಕೆ ಇನ್ನೊಂದು ಆಯಾಮ ನೀಡುವುದರ ಜೊತೆಗೆ ಹಾಗೇನಾದರೂ ಚಿತ್ರದಲ್ಲಿ ತೋರಿಸಿದ್ದಿದ್ದರೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೇ ಇರುತ್ತಿರಲಿಲ್ಲ ಎನ್ನುವುದೂ ನಿಜ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

read more
ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more
ಹೊಸ, ಹಳೇ ಕಥೆಗಳಾಗುವ ನಾವು: ವಿನತೆ ಶರ್ಮ ಅಂಕಣ

ಹೊಸ, ಹಳೇ ಕಥೆಗಳಾಗುವ ನಾವು: ವಿನತೆ ಶರ್ಮ ಅಂಕಣ

ಹೊಸ ವರ್ಷದ ಮೊದಲ ದಿನದಂದು ಸಿಡ್ನಿ ಆಕಾಶದಲ್ಲಿ ಮೋಡಗಳು, ಸಣ್ಣನೆ ಮಳೆ, ಚಳಿ. ಸಮುದ್ರ ಭುಸುಗುಡುತ್ತಿತ್ತು. ಅಲೆಗಳ ರಭಸವನ್ನು ನೋಡಿದಾಗ ಮನುಷ್ಯರು ಮಾಡಿಕೊಂಡಿದ್ದ ಹಿಂದಿನ ದಿನದ ಪಾರ್ಟಿಯ ಗಮ್ಮತ್ತು ಅವಕ್ಕೆ ಇಷ್ಟವಾಗಲಿಲ್ಲವೇನೋ ಎಂಬಂತಿತ್ತು. ಅಲೆಗಳ ಹೊರಳಾಟ ಯಾಕೋ ನನ್ನಲ್ಲಿ ದುಃಖ ಉಕ್ಕಿಸಿತ್ತು. ನಗರದ ಪೂರ್ವ ತೀರದಲ್ಲಿರುವ ಸುಂದರ ಸಮುದ್ರತೀರದ ಸುಮಾರು ಮೂವತ್ತಕ್ಕೂ ಹೆಚ್ಚು ಬೀಚ್‌ಗಳನ್ನ ಮುಚ್ಚಿದ್ದರು. ಹೊಸವರ್ಷದ ಆಗಮನವನ್ನು ಅತಿಯಾಗೆ ಆಚರಿಸಲು ಹೋಗಿ ಹಲವಾರು ಕಡೆ ಸಮುದ್ರಕ್ಕಿಳಿದ್ದಿದ್ದ ಜನರು ಆಪತ್ತಿಗೀಡಾಗಿದ್ದು ವರದಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
 ಲೋಕೋಭಿನ್ನ ರುಚಿಃ – ಲೋಕೋಭಿನ್ನ ಖುಷಿಃ!: ಎಲ್.ಜಿ. ಮೀರಾ ಅಂಕಣ

 ಲೋಕೋಭಿನ್ನ ರುಚಿಃ – ಲೋಕೋಭಿನ್ನ ಖುಷಿಃ!: ಎಲ್.ಜಿ. ಮೀರಾ ಅಂಕಣ

ಒಬ್ಬೊಬ್ಬರ ಖುಷಿಯ ನಿರ್ವಚನವೂ ಬೇರೆ ಬೇರೆ. ಒಬ್ಬರಿಗೆ ಮಾತಿನಲ್ಲಿ ಖುಷಿ, ಇನ್ನೊಬ್ಬರಿಗೆ ಮೌನದಲ್ಲಿ. ಒಬ್ಬರ ಖುಷಿ ಹಾಡು ಕೇಳುವುದರಲ್ಲಾದರೆ, ಇನ್ನೊಬ್ಬರ ಖುಷಿ ಪದಬಂಧ ಬಿಡಿಸುವುದರಲ್ಲಿ. ಒಬ್ಬರ ಖುಷಿ ಹೊಸರುಚಿಯ ಅಡುಗೆಗಳನ್ನು ಸವಿಯುವುದರಲ್ಲಾದರೆ ಇನ್ನೊಬ್ಬರ ಖುಷಿ ಹೊಸ ಅಡುಗೆಗಳನ್ನು ಕಲಿತು ಮಾಡುವುದರಲ್ಲಿ. ಒಬ್ಬರಿಗೆ ದೇಶವಿದೇಶ ತಿರುಗುವ ಪ್ರವಾಸ ಇಷ್ಟ, ಇನ್ನೊಬ್ಬರಿಗೆ ಮನೆಯ ಆರಾಮಕುರ್ಚಿಯಲ್ಲಿ ಕುಳಿತು ದೇಶವಿದೇಶಗಳ ಬಗ್ಗೆ ಓದುವುದು ಇಷ್ಟ! ಖುಷಿಗಳು ವೈವಿಧ್ಯಮಯ. ಆದರೆ ಇವೆಲ್ಲದರ ಮೂಲದಲ್ಲಿರುವ ಒಂದು ಪ್ರಧಾನ ಸಂಗತಿಯು ಬಹುತೇಕ ಜನರ ಗಮನಕ್ಕೆ ಬರುವುದಿಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ