ಕಬೂಲ್…..
ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್ ಜೈಮನ್ ಬರಹ
ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು
ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ
ಗುರುಪ್ರಸಾದ ಕುರ್ತಕೋಟಿ ಹೊಸ ಅಂಕಣ ‘ಗ್ರಾಮಡ್ರಾಮಾಯಣ’
ಸಾಕಷ್ಟು ಸಂಬಳ ಒದಗುವ ಐಟಿ ವಲಯದಲ್ಲಿ ಉದ್ಯೋಗ ನಿರ್ವಹಿಸುವಾಗ, ಕಂಪ್ಯೂಟರ್ ಗಳ ಪರದೆ ಕಣ್ಣು ಕೀಲಿಸಿ ಕುಳಿತು ದಣಿವಾದಾಗ ಹಳ್ಳಿ ಮನೆಯ, ಹೊಲಗದ್ದೆಗಳ ಕಂಪು ಮನಸ್ಸನ್ನು ಕಾಡುವುದುಂಟು. ಹಾಗೆಯೇ ತಾನೂ ಕೃಷಿ ಮಾಡುವ ಅವಕಾಶವಿದ್ದಿದ್ದರೆ ಎಷ್ಟು ಚೆನ್ನಾಗಿತ್ತು ಎಂಬ ಕನಸೂ ಮೊಳಕೆಯೊಡೆಯುವುದು. ಹೀಗೆ ಕನಸುಗಳ ಬೆನ್ನತ್ತಿ ಕೃಷಿ ಕ್ಷೇತ್ರದತ್ತ ಮುಖ ಮಾಡಿದವರು ಗುರುಪ್ರಸಾದ ಕುರ್ತಕೋಟಿ. ತಮ್ಮ ಕನಸಿನ ಹಾದಿಯಲ್ಲಿ ಕಂಡ ವಿಚಾರಗಳನ್ನು, ತಮ್ಮ ಅನುಭವಗಳನ್ನು ಅವರು ‘ಗ್ರಾಮ ಡ್ರಾಮಾಯಣ’ ಎಂಬ ಈ ಅಂಕಣದಲ್ಲಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.
ಚಿತ್ತಾಲರ ಕಾದಂಬರಿ ಪ್ರಪಂಚದಲ್ಲಿ ಒಂದೆರಡು ಹೆಜ್ಜೆ
ಕಥಾನಾಯಕ ಪುರುಷೋತ್ತಮ, ಆತನ ತಾಯಿ ಮತ್ತು ಬಳಗದ ನಡುವೆ ನಡೆಯುವ ಕಥಾನಕಗಳೇ ಈ ಕಾದಂಬರಿಯ ವಸ್ತು. ಜೊತೆಗೆ ಒಂದು ಮಹಾನಗರ ಮತ್ತೂ ದೊಡ್ಡದಾಗಿ ವಿಸ್ತರಣೆಯಾಗಬೇಕಾದರೆ ನಡೆಯುವ ತಲ್ಲಣಗಳು, ಹಣ ಅಧಿಕಾರದ ಮುಂದೆ ಮಾನವೀಯತೆ ಗೌಣವಾಗಿ ತನ್ನ ಸ್ವಾರ್ಥಕ್ಕಾಗಿ ಯಾವ ಕೆಲಸಕ್ಕೂ ಇಳಿಯಬಹುದಾದ ಮನುಜನ ಕ್ರೂರತನ, ತನ್ನ ಪ್ರೀತಿಯ ನೆಲವನ್ನು ಉಳಿಸಿಕೊಳ್ಳಲು ಎಲ್ಲಾ ಸ್ವಾರ್ಥಗಳ ಬಿಟ್ಟು ಮಾಡುವ ಹೋರಾಟ ಎಲ್ಲವೂ ಬಹಳ ಸುಂದರವಾಗಿ ನಿರೂಪಿತಗೊಂಡಿದೆ
ಓದುವ ಸುಖ ಅಂಕಣದಲ್ಲಿ ಯಶವಂತ ಚಿತ್ತಾಲರ ಮೂರು ಕೃತಿಗಳ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು
ವಿಯೆಟ್ನಾಮ್ ನಲ್ಲಿರುವ ಚಂಪಾ ಸಾಮ್ರಾಜ್ಯದ ನೋಟಗಳು
ನಾಲ್ಕನೇ ಶತಮಾನದಿಂದ ೧೩ ನೇ ಶತಮಾನದ ವರೆಗೂ ಆಳಿದ ಚಂಪಾ ಸಾಮ್ರಾಜ್ಯವು ಆಮೇಲೆ ಚೈನಿಸ್ , ಡ ವಿಯೆಟ್ ಹಾಗೂ ಪ್ರಬಲರಾದ ಕಾಂಬೋಡಿಯಾದ ಖ್ಮೇರ್ ರಾಜರುಗಳಿಗೆ ಮಣಿದು ಕೊನೆಗೆ ಅಳಿದೇಹೊಯಿತು. ಅವರ ಭೌಗೋಳಿಕ ಪ್ರದೇಶಗಳನ್ನು ಇಂದ್ರಪುರ, ಅಮರಾವತಿ, ವಿಜಯಾ ಕೌತುರಾ ಮತ್ತು ಪಾಂಡುರಂಗ ಎಂದು ಕರೆಯುತ್ತಿದ್ದರು. ಮಿಸಾನ್ ಕಣಿವೆಯು ಅಮರಾವತಿಯ ಭಾಗವಾಗಿತ್ತು. ಅಲ್ಲಿಂದ ಅವರು ಶತ್ರುಗಳಿಂದ ಹಿಮ್ಮೆಟ್ಟಿ ಹೋದಂತೆ ಕಣಿವೆಯೂ ಅನಾಥವಾಗುತ್ತಾ ಹೋಯಿತು. ‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ವಿಯೆಟ್ನಾಂ ಕುರಿತು ಬರೆದಿದ್ದಾರೆ.
ಪಿಜ್ಜಾ ಡೆಲಿವರಿ ಹುಡುಗನೂ ಹಾಗೂ ಓಲ್ಡ್ ಮಾಂಕ್ ಪರಮಾತ್ಮನೂ
ಹೊರಗಡೆಯಿಂದ ನಿಂತು ನಾವು ಸಾವಿರ ಹೇಳಬಹುದು. ಆದರೆ ಒಳಗಿದ್ದು ಕೆಂಡ ಹಾಯುತ್ತಿರುವವರ ಪರಿಸ್ಥಿತಿಗಳು ಭಿನ್ನವಾಗಿರುತ್ತವೆ. ಪ್ರೀತಿ ಮತ್ತು ಯುದ್ಧದಲ್ಲಿ ಎಲ್ಲವೂ ಹಿತ ಎನ್ನುವ ಹಾಗೆ; ಏಕ್ತಾ ಕಪೂರ್ ಸೀರಿಯಲ್ಲುಗಳಲ್ಲಿರುವಂತೆ ಅದೆಷ್ಟೋ ಬಾರಿ ಬೇರೆಯಾಗಿ ಮತ್ತೆ ಮತ್ತೆ ಕೂಡಿಕೊಳ್ಳಲೂಬಹುದು. ಮಾತಿನ ಕೊನೆಯಲ್ಲಿ ‘ಹೋಗ್ಲಿ ಬಿಡೋ ಯಣ. ಬಿಟ್ಟೆ ಬಿಡ್ತೀನಿ ಅತಾಗ. ಹೊಯ್ಕೋತ ಹೋಗ್ಲಿ!’ ಎಂದೇನೋ ಅಂದ. ದಾದಾಪೀರ್ ಜೈಮನ್ ಬರೆಯುವ ಜಂಕ್ಷನ್ ಪಾಯಿಂಟ್ ಅಂಕಣ
ದೂರದೂರಿನ ನೆಂಟತನವೂ, ನೆರೆಹೊರೆಯವರ ಸ್ನೇಹಹಸ್ತವೂ
ಆಸ್ಟ್ರೇಲಿಯ ವಸಾಹತುಶಾಹಿ ಆಡಳಿತದಿಂದ ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬದಲಾದರೂ ದೇಶವನ್ನು ಆಳುವುದು ಬಿಳಿಯ ರಾಜಕಾರಣಿಗಳೆ ಎನ್ನುವುದು ಸರ್ವೇಸಾಮಾನ್ಯ ಸತ್ಯ. ಇಂಗ್ಲಿಷ್ ಭಾಷೆಯ ಜೊತೆ ಆಮದಾಗಿ ಬಂದಿದ್ದು ವ್ಯವಸ್ಥೆ. ಹೀಗಾಗಿ ಆಸ್ಟ್ರೇಲಿಯಾವು ಇಂಗ್ಲಿಷ್ ಭಾಷೆಯ ಪಾಶ್ಚಾತ್ಯ ದೇಶ. ಈ ಪಟ್ಟದೊಡನೆ ಬಳುವಳಿಯಾಗಿ ಬಂದಿರುವುದು, ನಂಬಿರುವುದು ದೂರದೂರಿನ ನೆಂಟತನ. ಮಾತೃದೇಶ ಬ್ರಿಟನ್, ಅಣ್ಣನಾಗಿ ಅಮೆರಿಕ, ಕಿರಿತಂಗಿಯಾಗಿ ನ್ಯೂ ಝಿಲಂಡ್, ಬಂಧುಬಾಂಧವರು ಯುರೋಪಿಯನ್ ದೇಶದವರು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”
ಜೋಕು ಮಾಡಲು ಬಳಸುತ್ತಿದ್ದ ಪದದ ನಿಜ ಅರ್ಥ ತಿಳಿಯಿತು
ಮೋಹನ ಸ್ವಾಮಿ ಒಂದು ಕಥಾ ಸಂಕಲನವಾದರೂ ನಿಧಾನವಾಗಿ LGBT ಸಮುದಾಯದೆಡೆಗಿನ ನನ್ನ ಮನೋಭಾವನೆಯನ್ನು ಬದಲಾಯಿಸಿಕೊಳ್ಳಲು ಸಹಾಯಮಾಡಿತು. ನನ್ನೆದುರು ಆ ಸಮುದಾಯದ ವ್ಯಕ್ತಿಗಳು ಸಿಕ್ಕಾಗ ಮಾಮೂಲಿ ಗಂಡು ಹೆಣ್ಣುಗಳ ಹಾಗೇ ಮಾತನಾಡಲು, ಹರಟೆ ಹೊಡೆಯಲು ಸಾಧ್ಯವಾಯಿತು. ಹಾಗಾದರೆ ನಾನು ಈ ವಿಚಾರಲ್ಲಿ ನನ್ನ ಯೋಚನೆಯನ್ನು ನೂರಕ್ಕೆ ನೂರು ಬದಲಿಸಿಕೊಂಡೆನೇ? ಎಂದು ಕೇಳಿದರೆ ಉತ್ತರ ಗೊತ್ತಿಲ್ಲ, ಅಥವಾ ಇಲ್ಲವೆನ್ನಿಸುತ್ತದೆ.
ಓದುವ ಸುಖ ಅಂಕಣದಲ್ಲಿ ವಸುಧೇಂದ್ರರ “ಮೋಹನಸ್ವಾಮಿ” ಕೃತಿಯ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು
ನಂಬಿ ಬದುಕಿದವರ ಕಥೆ
ಝುಹೆಬಾನ್ ಎಂಬ ಮಧ್ಯವಯಸ್ಕನೊಬ್ಬರನ್ನು ಮಾತಿಗೆಳೆದಾಗ ಅವರು ದರ್ಗಾಹದ ಇತಿಹಾಸವನ್ನು ಬಿಚ್ಚಿಡುತ್ತಾ ಹೋದರು. ಸುಮಾರು ಎರಡುನೂರ ಎಪ್ಪತ್ತೈದು ವರ್ಷಗಳ ಹಿಂದೆ ಟಿಪ್ಪು ಮಸ್ತಾನ್, ಮಾಣಿಕ್ ಮಸ್ತಾನ್ ಮತ್ತು ತವಕ್ಕಲ್ ಮಸ್ತಾನ್ ಎಂಬ ಮೂವರು, ನವಾಬ್ ಹೈದರ್ ಆಲಿ ಕಟ್ಟಿಸುತ್ತಿದ್ದ ಕಲ್ಲಿನರಮನೆಯ ಕೆಲಸಕ್ಕೆಂದು ಬಂದರು. ಧರ್ಮನಿಷ್ಠರಿದ್ದ ಆ ಮೂವರೂ ಕೆಲಸವೇ ದೇವರೆಂದು ದುಡಿಯುತ್ತಿದ್ದರೂ ಪಗಾರದ ದಿನ ಮಾತ್ರ ಕಾಣೆಯಾಗಿಬಿಡುತ್ತಿದ್ದರಂತೆ!
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ









