Advertisement

ಅಂಕಣ

ಆಸ್ಟ್ರೇಲಿಯದ ಮಳೆ ಪ್ರವಾಹಗಳು, ಸೋಲುಗೆಲುವುಗಳು

ಆಸ್ಟ್ರೇಲಿಯದ ಮಳೆ ಪ್ರವಾಹಗಳು, ಸೋಲುಗೆಲುವುಗಳು

ಈ ಬಾರಿ ವಿಕ್ಟೊರಿಯಾ ರಾಜ್ಯವಷ್ಟೇ ಅಲ್ಲ ಅದರ ಕೆಳಗಿನ ಟಾಸ್ಮೆನಿಯಾ ರಾಜ್ಯದ ಭಾಗಗಳಲ್ಲೂ ಪ್ರವಾಹವುಂಟಾಗಿದೆ. ಟಾಸ್ಮೆನಿಯಾವು ಕಡಿಮೆ ಜನಸಂಖ್ಯೆ, ಎಲ್ಲೆಲ್ಲೂ ಕಂಗೊಳಿಸುವ ಪುರಾತನ ಹಸಿರು ಕಾಡುಗಳಿಗೆ ಹೆಸರಾದದ್ದು. ಹಾಗಾಗಿ ಪ್ರವಾಹದ ವಿಷಯ ಇನ್ನೂ ಅಪರೂಪದ ಸಂಗತಿ ಇಲ್ಲಿ. ಹೆಚ್ಚು ಕಡಿಮೆ ದೇಶದ ಇಡೀ ಪೂರ್ವಭಾಗದಲ್ಲಿ ಮಳೆಮೋಡಗಳ ಜೊತೆ ಚಿಂತೆಮೋಡಗಳು ಕೂಡ ಕವಿದಿವೆ. ದೇಶದ ಆಚೆಕಡೆಯ ಮರುಭೂಮಿಗಳು ಬೆಂದು ಕಾದು ಅಲ್ಲಿನ ಕಾವುಮೋಡಗಳು ಮರುಭೂಮಿಯನ್ನು ದಾಟಿಬಿಟ್ಟಿವೆ.
ಡಾ. ವಿನತೆ ಶರ್ಮ ಅಂಕಣ

read more
ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ‌ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ‌. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

read more
ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?

ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?

ಇರುವ ಚೆಂದವನ್ನು ಕಾಪಾಡಿಕೊಳ್ಳಬೇಕೆಂಬ ಒತ್ತಡ ಸೃಷ್ಟಿಸುವ ತಾಕಲಾಟ ಬಲ್ಲೆ. ಒಂದೇ ಘಟ್ಟದಲ್ಲಿ ಹೆಚ್ಚು ಕಾಲ ಇರಲಾಗದು. ನಿಧಾನಕ್ಕೆ ಈ ಜತನ ಮಾಡುವ ಉಸಾಬರಿ ಸಾಕೆನ್ನಿಸಿತು. ಹೊರಗೆ ‘ಕಾಣುವ’ ಚೆಂದಕ್ಕಿಂತ ನಾನು ಬೇರೆ ಅನ್ನಿಸಿತು. ಎಷ್ಟೇ ಕಷ್ಟಪಟ್ಟರೂ ಕಾಲನ ಹೊಡೆತ ತನ್ನ ಕೆಲಸ ಮಾಡಿಯೇ ತೀರುತ್ತದೆ. ಕಾಲದೊಂದಿಗೆ ಹೋರಾಡುವುದಕ್ಕಿಂತ ನನ್ನ ವ್ಯಕ್ತಿತ್ವ, ಪ್ರತಿಭೆ, ಬುದ್ಧಿ, ಮನಸ್ಸಿನ ಜೊತೆ ಗುದ್ದಾಡುತ್ತಾ ಬೆಳೆಯುವುದರಲ್ಲಿ ಬದುಕಿನ ಸೌಂದರ್ಯವಿದೆ. ಈ ಸಮಯ ಮತ್ತೆ ಬರಲಾರದು. ಈ ಅವಕಾಶ ಮತ್ತೆ ಸಿಗಲಾರದು. ಹಠಕ್ಕೆ ಬಿದ್ದಂತೆ ಸಂಗೀತ ಮುಂದುವರೆಸಿದೆ.
ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

read more
ಅವಳನ್ನು ಅನ್ಯಗ್ರದ ಏಲಿಯನ್‌ಳಂತೆ ನೋಡತೊಡಗಿದ್ದರು

ಅವಳನ್ನು ಅನ್ಯಗ್ರದ ಏಲಿಯನ್‌ಳಂತೆ ನೋಡತೊಡಗಿದ್ದರು

ಆಧುನಿಕತೆಯ ಬಣ್ಣ ಅಷ್ಟೊಂದು ಮೆತ್ತಿಕೊಂಡಿರದಿದ್ದ ನಮ್ಮ ಕಾಲೇಜಿಗೆ ಆಗ ಒಂದು ಹುಡುಗಿ ಜೀನ್ಸ್ ತೊಟ್ಟು ಬಂದಿರುವುದೇ ದೊಡ್ಡ ವಿಷಯ ಆಗಿಹೋಯಿತು. ಅಂದು ಅವಳನ್ನು ಯಾವುದೋ ಅನ್ಯಗ್ರಹವೊಂದರಿಂದ ಬಂದಿಳಿದ ಏಲಿಯನ್‌ಳಂತೆ ಎಲ್ಲಾ ಹುಡುಗರು ಅವಳನ್ನೆ ದಿಟ್ಟಿಸತೊಡಗಿದ್ದರು. ಅವಳ ಆ ಬಟ್ಟೆ ಕಂಡು ಆಡಿಕೊಂಡು ನಗುವುದು ಕೊಂಕು ಮಾತನಾಡುವುದು ಶುರು ಮಾಡಿದ್ದರು. ಹುಡುಗರ ವರ್ತನೆ ಎಷ್ಟು ಅತಿರೇಕಕ್ಕೆ ಹೋಯಿತೆಂದರೆ ಆ ಹುಡುಗಿ ತಾನೇನೋ ಮಹಾಪರಾಧ ಮಾಡಿ ಸಿಕ್ಕಿಬಿದ್ದಳೇನೋ ಎನ್ನುವ ಮನೋಭಾವನೆಯಲ್ಲಿ ಕಾಲೇಜು ಮುಗಿಯುವವರೆಗೂ ತಲೆ ತಗ್ಗಿಸಿಕೊಂಡೆ ಕೂಡಬೇಕಾಯಿತು.
ಇಸ್ಮಾಯಿಲ್‌ ತಳಕಲ್‌ ಅಂಕಣ

read more
ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಪುಣ್ಯ ಕೊನೆಯ ಬಾರಿ ಮಾತನಾಡಿದ್ದು ಇದೆ ಒಂದು ವಾರದ ಕೆಳಗೆ. ಅವನ ಶಾಲಾ ವಾರ್ಷಿಕೋತ್ಸವದಲ್ಲಿ… ಈ ರಗಳೆಗಳೆಲ್ಲ ಶುರುವಾದದ್ದು ಸುರಭಿಯಿಂದಲೇ ಎನ್ನಬೇಕು. ಆರನೇ ತರಗತಿ ಓದುತ್ತಿದ್ದ ಸುರಭಿ, ಒಂದು ದಿನ ಶಾಲೆಯಿಂದ ಬಂದದ್ದೆ ಜೋರಾಗಿ ಅಳತೊಡಗಿದಳು. ‘ಅಣ್ಣ ಹುಡುಗಿ ತರ ಆಡ್ತಾನೆ ಅಂತ ಎಲ್ಲರು ನಂಗೆ ಹೆಣ್ಣಿಗನ ತಂಗಿ ಅಂತ ಆಡ್ಕತಾರೆ…ಕಾಡಿಸ್ತಾರೆ. ನಾಳೆಯಿಂದ ಶಾಲೆಗೇ ಹೋಗಲ್ಲ!’ ಎಂದು ರಂಪ ಮಾಡತೊಡಗಿದ್ದಳು. ಅಂದಿನಿಂದಲೇ ಪ್ರತಾಪ್ ಇವನನ್ನ ಸರಿ ಮಾಡಲು ಶುರುಮಾಡಿದ್ದು… ಪುಣ್ಯನ ದನಿ ಹುಡುಗಿಯ ದನಿಯನ್ನು ಹೋಲುತ್ತಿತ್ತು. ದಾದಾಪೀರ್‌ ಜೈಮನ್‌ ಬರೆಯುವ ʻಜಂಕ್ಷನ್‌ ಪಾಯಿಂಟ್‌ʼ ಅಂಕಣದ ಹೊಸ ಬರಹ

read more
ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

read more
ಒಣಎಲೆ ಗೊಬ್ಬರದ ಕಿರು ಕಥೆಗಳು

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

read more
ಕಾಡುವ ಕತೆಗಳ ರೂವಾರಿ….

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

read more
ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ನಾವಿದ್ದ ಅಪಾರ್ಟ್‌ಮೆಂಟಿನ ಮನೆಯನ್ನು ಸ್ವಚ್ಛ ಮಾಡಲು ಬರುತ್ತಿದ್ದ ಹದಿನೈದೋ ಹದಿನಾರೋ ಪ್ರಾಯದ ಬೆಂಗಾಲಿ ಹುಡುಗಿಯ ಬದುಕುವ ದರ್ದಿಗೆ ನಾನು ಬೆರಗಾಗಿದ್ದೆ. ಮಾತನಾಡಿಸಿದರೆ ಏನೊಂದೂ ಮಾತನಾಡದ, ಏನಾದರೂ ಪ್ರಶ್ನೆ ಕೇಳಿದರೆ ಸುಮ್ಮನೆ ನಕ್ಕುಬಿಡುತ್ತಿದ್ದ ಆ ಹುಡುಗಿ ತನ್ನ ತಾಯಿಯ ಜೊತೆಗೆ ಇಬ್ಬರು ತಂಗಿಯರನ್ನೂ ಬಂಗಾಳದ ಯಾವುದೋ ಹಳ್ಳಿಯಿಂದ ಕರೆದುಕೊಂಡು ಬಂದು ತಾನೊಬ್ಬಳೇ ದುಡಿಯುತ್ತಾ ಅವರನ್ನೆಲ್ಲಾ ಸಾಕುತ್ತಿದ್ದ ಪರಿ ನನ್ನಲ್ಲಿ ಸೋಜಿಗ ಹುಟ್ಟಿಸುತ್ತಿತ್ತು. ಮುಂಬೈಯಂತಹ ನಗರಗಳಲ್ಲಿ ಒಂಟಿ ಮಹಿಳೆಯರು ಒಂಟಿ ಹುಡುಗಿಯರು ಜೀವ ಕೈಯಲ್ಲಿ ಹಿಡಿದೆ ದುಡಿಯುತ್ತಿರುತ್ತಾರೆ.
ʻತಳಕಲ್‌ ಡೈರಿʼಯಲ್ಲಿ ಮುಂಬೈ ಮಹಾನಗರಿಯ ಬೆರಗಿನ ದಿನಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ