ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು
ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್ ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ.
ಈ ಹೃದಯವೆಂಬ ಏಕಾಂಗಿ ಬೇಟೆಗಾರ
ಕೆಲ್ಲಿಯವರ ಮಗಳು ಹನ್ನೆರಡು ವರ್ಷದ ಮಿಕ್ಳೊಂದಿಗೆ ಸಿಂಗರ್ನ ಸ್ನೇಹ ಶುರುವಾಗುತ್ತದೆ. ಸಂಗೀತದಲ್ಲಿ ತೀವ್ರ ಆಸಕ್ತಿಯಿರುವ ಮಿಕ್ಳಿಗೆ ರೆಕಾರ್ಡ್ ಪ್ಲೇಟುಗಳನ್ನು ಉಡುಗೊರೆಯಾಗಿ ಕೊಡುತ್ತಾನೆ ಸಿಂಗರ್. ಆದರೆ ತನ್ನ ಸುತ್ತಲಿನ ಲೋಕದೊಂದಿಗೆ ಈತನ ಸಂವಹನವೇನಿದ್ದರೂ ಏಕ ಮುಖವಾದುದು. ಇವನ ಮನಸ್ಸು ಉಳಿದವರಿಗೆಲ್ಲ ಮುಚ್ಚಿದ ಬಾಗಿಲು. ಯಾರೇ ಮಾತನಾಡಬೇಕಿದ್ದರೂ, ಅವರ ತುಟಿಯ ಚಲನೆ ನೋಡಿದರೆ ಸಾಕು ಅವರು ಏನನ್ನು ಹೇಳುತ್ತಿದ್ದಾರೆ ಅನ್ನುವುದು ಸಿಂಗರ್ನಿಗೆ ತಿಳಿದು ಹೋಗುತ್ತದೆ.
ಯಾವುದನ್ನು ಬರೆದರೆ ಓದುಗರನ್ನು ತಲುಪಬಹುದೆಂಬ ಕುತೂಹಲ
ವಾಕ್ಯದ ಕೊನೆಗೆ ಎಲಿಪ್ಸನ್ನು ಉಪಯೋಗಿಸಿದರೆ, ಇನ್ನೂ ಏನೋ ಮಾತು ಉಳಿದಿದೆ ಎಂದು ಅರ್ಥ. ಸಂಭಾಷಣೆಯ ರೂಪದಲ್ಲಿರುವ ವಾಕ್ಯದ ನಡುವೆ ಎಲಿಪ್ಸ್ ಬರೆದರೆ, ಮಾತನಾಡುವ ವ್ಯಕ್ತಿ ಮಾತನ್ನು ನುಂಗಿದ ಎಂದು ಅರ್ಥ. ಒಟ್ಟಿನಲ್ಲಿ ಎಲಿಪ್ಸನ್ನು ಬಳಸಿದರೆ ಎಲ್ಲೋ ಏನೋ ಬಿಟ್ಟುಹೋಗಿದೆ ಎಂದು ಅರ್ಥ. ಆದ್ದರಿಂದ ಈ ಎಲಿಪ್ಸನ್ನು ಎಷ್ಟು ಕಡಿಮೆಯಾಗುತ್ತೋ ಅಷ್ಟು ಕಡಿಮೆ ಬಳಸುವುದು ಒಳ್ಳೆಯದು ಎನ್ನುತ್ತದೆ ಇಂಗ್ಲೀಷ್ ವ್ಯಾಕರಣ. ಎಲಿಪ್ಸ್ ಚಿಹ್ನೆಯನ್ನು ಎಲ್ಲಿ ಉಪಯೋಗಿಸಬೇಕು, ಎಲ್ಲಿ ಉಪಯೋಗಿಸಬಾರದು…”
ಕನ್ನಡವೆಂದರೆ ಕುಣಿದಾಡುವುದೆನ್ನೆದೆ..
ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್ ಬೀಚಿ ಬರೆಯುವ ಅಂಕಣ
ಲಾಂಡೇಯ್: ಅಫ್ಘನ್ ಹೆಣ್ಣುಮಕ್ಕಳ ಅಕ್ಷರಸಮರ
ಲಾಂಡೇಯ್ ಸುತ್ತಲಿನ ಲೋಕದ ಕುರಿತಾದ ಗಹನ ವಿಚಾರಗಳನ್ನು, ಕಟುವಾಸ್ತವಗಳನ್ನು ಹಿಡಿದಿಡುವ ಮತ್ತು ಇತರರೊಂದಿಗೆ ಹಂಚಿಕೊಳ್ಳುವ ಮಾಧ್ಯಮ. ಹಾಗಾಗಿ, ಲಾಂಡೇಯ್ ರಚನೆಗಳು ನೋವಿನಿಂದ ಕೂಡಿರಬಹುದು ಅಥವಾ ಕಠೋರ ಟೀಕೆಯಿಂದ; ಹಾಸ್ಯದಿಂದ ತುಂಬಿರಬಹುದು ಅಥವಾ ವ್ಯಂಗ್ಯದಿಂದ. ಹಾಗೆಂದು, ಲಾಂಡೇಯ್ ಕೇವಲ ಬಂಡಾಯ ಕಾವ್ಯವೆಂದೇನೂ ಅಲ್ಲ; ಶೋಕ, ಪ್ರೇಮ, ದುರಂತಗಳೂ ಅದಕ್ಕೆ ಗ್ರಾಸವಾಗುವ ವಿಷಯವಾಗಬಹುದು. ಎಲ್ಲ ಕಾವ್ಯವೂ ಮೂಲದಲ್ಲಿ ಲಾಂಡೇಯ್ ತರವೇ ಅಲ್ಲವೇ – ಕರೆಯುವುದು…”
ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..
ಸ್ಟ್ರೇಲಿಯಾದಲ್ಲಿ ಜೂಲಿಯಾ ಪ್ರಧಾನಮಂತ್ರಿಯಾದ ಹೊಸತರಲ್ಲೇ ಆಕೆಯ ಬಗ್ಗೆ ನಾನಾತರಹದ ಸುದ್ದಿಗಳು, ಅಪನಿಂದನೆಗಳು, ಅವಹೇಳನಕಾರಿ ಮಾತುಗಳು ಹುಟ್ಟಿದ್ದವು. ಉದಾಹರಣೆಗೆ, ಆಕೆಯ ಮನೆ ಅಡುಗೆಮನೆಯ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ, ‘ನೋಡಿ, ಅಡುಗೆಮನೆ ಎಷ್ಟು ಖಾಲಿಯಾಗಿ ಬರಡುಬರಡಾಗಿದೆ, ಆಕೆ ಅಡುಗೆ ಮಾಡುವುದಿಲ್ಲ, ಆಕೆಗೆ ತಾಯ್ತನವೂ ಇಲ್ಲ, ಇಂಥಾ ಹೆಣ್ಣು ನಮ್ಮ ಸಮಾಜಕ್ಕೆ ಮಾದರಿಯಾಗಬಲ್ಲರೇ ಎಂದು ವಿಡಂಬನೆ ಮಾಡಲಾಗಿತ್ತು’.
ಚಲಿಸುತ್ತಲೇ ಯೋಚಿಸುವ ಮೆವ್ಲುಟ್
ಮೂರು ವರ್ಷಗಳ ಈ ಪತ್ರ ವ್ಯವಹಾರದ ನಂತರ, ಇಬ್ಬರೂ ‘ಓಡಿಹೋಗುವುದು’ ಅಂತ ಓಲೆಗಳ ಮೂಲಕವೇ ತೀರ್ಮಾನವಾಗುತ್ತದೆ. ಕೃತಿಕಾರರೇ ಕಣ್ಣಿಗೆ ಕಟ್ಟುವ ಹಾಗೆ ವರ್ಣಿಸುವಂತೆ, ಅದೆಷ್ಟೋ ದೂರ ‘ಓಡಿ’ ಬಂದ ಮೇಲೆ ಮೆವ್ಲುಟನಿಗೆ ತಾನು ಮನಸೋತ ಹುಡುಗಿ ಇವಳಲ್ಲ ಎಂಬುದು ತಿಳಿಯುತ್ತದೆ. ಮೆವ್ಲುಟನೇ ಹೇಳುವಂತೆ, ಈ ಓಡಿಹೋಗುವುದೆಂದರೆ ಮಹಾ ತಂತ್ರಗಾರಿಕೆಯ ವ್ಯವಹಾರವಾದುದರಿಂದ, ಅವನು ತನ್ನ ಅಂತರಂಗದ ಜ್ವಾಲಾಮುಖಿಯನ್ನು ಅದುಮಿಟ್ಟು, ಮುಖ್ಯವಾಗಿ ಅದನ್ನು ಹೊರಗೆ ತೋರಗೊಡದೇ..”
ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…
ಭಾರತಕ್ಕೆ ಬಂದ ಮೇಲೆ ನಮ್ಮ ದೇಶಕ್ಕೆ ಮರಳಿದ ಸಂತಸ, ನಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ನೋಡಿದಾಗ ಆಗುವ ಆನಂದವೇ ಬೇರೆ. ಹಾಗಾಗಿ ನಮ್ಮ ದೇಶವೇ ನಮಗೆ ಸರಿ ಅನ್ನಿಸಿದ್ದು ಸುಳ್ಳಲ್ಲ. ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಬೇಕಾಯಿತು. ಸರ್ಕಾರಿ ಶಾಲೆಯಲ್ಲಿ ಊಟ ಉಚಿತ, ಆದರೆ ಶುಚಿತ್ವ ಇಲ್ಲ. ಓದು ಉಚಿತ, ಉತ್ತಮ ಸೌಲಭ್ಯವಿಲ್ಲ. ಸಣ್ಣ ಸಣ್ಣ ಕೆಲಸ ಮಾಡುವವರೂ, ದಿನಗೂಲಿ ಮಾಡುವವರೂ ಕೂಡ ಅವರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಕಡಿಮೆ ಫೀ ತೆಗೆದುಕೊಳ್ಳುವ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕಾಣ ಸಿಗದು.
ಪ್ರಶಾಂತ್ ಬೀಚಿ ಅಂಕಣ
ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು
ಆಗ ಲಾಸ್ಟ್ ಶೋ ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ.









