ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…
‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”
ಲೇಡೀಸ್ ಹಾಸ್ಟೆಲ್ ದಯ್ಯ ಬಿಡಿಸಿದ ಭಟ್ಕಳದ ಬಾಲೆ
ನನ್ನಲ್ಲಿ ಲೇಡೀಸ್ ಹಾಸ್ಟೆಲ್ ಬಗೆಗೊಂದು ಅಸೀಮ ಕುತೂಹಲ ಬೆಳೆದಿತ್ತು. ಹಾಸ್ಟೆಲ್ ನಲ್ಲಿ ಹುಡುಗಿಯರ ಸಾಮ್ರಾಜ್ಯ ಹೇಗಿದ್ದೀತು? ಹರಟೆಯ ಹೊತ್ತಲ್ಲಿ ಏನೆಲ್ಲ ವಾಗ್ವಾದ ನಡೀಬಹುದು? ಅಡುಗೆ ಸರೀಗಿಲ್ಲ ಅಂದ್ರೆ ಅಡುಗೆಯವ್ರಿಗೆ ಕ್ಲಾಸ್ ತಗೋತಾರಾ? ಪೊಲಿಟಿಕ್ಸ್ ಬಗ್ಗೆ ಮಾತಾಡ್ತಾರಾ? ಹೊಡೆದಾಟಗಳು ನಡೆದ್ರೆ ಹೇಗೆ ನಡೀತದೆ? ಸಂಚುಗಳು ಹೆಂಗೆ ಎಕ್ಸಿಕ್ಯೂಟ್ ಆಗ್ತವೆ? ರೂಮು ಗಲೀಜು ಇಟ್ಕೊಂಡಿರ್ತಾರಾ ಅಥವಾ ಸಿಕ್ಕಾಪಟ್ಟೆ ನೀಟಾಗಿರ್ತದಾ?… ಹೀಗೆ ತರಹೇವಾರಿ ತರ್ಕಗಳು -ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ ನಿಮ್ಮ ಓದಿಗೆ.
ಸಮಬೆಸಗಳ ಸರಿಗಮ ತಪ್ಪಿದ್ದಲ್ಲ
ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’
ಒಬ್ಬರೊಳಗೊಬ್ಬರು ಮಾಯವಾಗುವ ಬಗೆ
‘ದಿ ವೈಟ್ ಕ್ಯಾಸಲ್’ ಕಾದಂಬರಿ ಟರ್ಕಿಯ ಆಟಮನ್ ಸಾಮ್ರಾಜ್ಯದಲ್ಲಿ ಗುಲಾಮನಾಗಿರುವ ಇಟಲಿ ದೇಶದ ವಿದ್ಯಾರ್ಥಿಯೊಬ್ಬನ ಪ್ರವರ. ಇದು ಹದಿನೇಳನೆಯ ಶತಮಾನದ ಕತೆ. ಇಟಲಿಯ ವೆನಿಸ್ ನಗರದಿಂದ ನೇಪಲ್ಸ್ ನಗರಕ್ಕೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದಾಗ ಈತ ಟರ್ಕರ ಸೈನ್ಯಕ್ಕೆ ಸೆರೆ ಸಿಕ್ಕವನು. ಜೀವ ಹೋದರೂ ತಾನು ಹುಟ್ಟಿದ ಕ್ರಿಶ್ಚಿಯನ್ ಧರ್ಮವನ್ನು ಬಿಡಲಾರೆ ಎಂಬ ಪಣ ತೊಟ್ಟವನು. ತೊಟ್ಟ ಪಣವನ್ನು ಕಾಯ್ದುಕೊಳ್ಳುವುದು ಸುಲಭವೇ ? ಧರ್ಮದ ಈ ನಂಟು ಅವನನ್ನು ಎತ್ತ ಕೊಂಡೊಯ್ಯುವುದು?”
ಹಾಗಾದರೆ ದೇವರು ಮನುಷ್ಯನನ್ನು ಪೂಜಿಸುತ್ತಾನೆಯೇ..
ಅವನು ನನ್ನನ್ನು ಒಂದು ಸುಂದರ ಸ್ಮಶಾನದಲ್ಲಿ ಭೇಟಿಯಾದ. ಇಂಗ್ಲೆಂಡಿನ ಸ್ಮಶಾನಗಳು ಭಾರತದ ಪಾರ್ಕ್ ಗಳಿಗಿಂತ ಸುಂದರವಾಗಿರುತ್ತದೆ. ಕೂತು ನಾವಿಬ್ಬರೆ ಏನೇನೊ ಮಾತನಾಡಿದೆವು, ನಾನು ಅವನ ಹಳ್ಳಿಯ ಬಗ್ಗೆ ಕೇಳತೊಡಗಿದೆ. ಅವನ ಹಳ್ಳಿಯನ್ನು ನೋಡುವ ಆಸೆ ತಿಳಿಸಿದೆ. ನನ್ನ ಜೊತೆಗೆ ಒಳ್ಳೆಯ ಸ್ನೇಹ ಬೆಳೆದ ಕಾರಣ ಅವನು ಸಲುಗೆಯಿಂದ ಮಾತನಾಡುತ್ತಾ ಹೋದ. ತನ್ನ ಕಥೆಯನ್ನು ಹೇಳತೊಡಗಿದ. ಸುರಳೀತ ದುಡಿಮೆಯಿಲ್ಲದ, ಸಂಗಾತಿಯಿಲ್ಲದ ಅವನ ಬದುಕೇ ಕಷ್ಟಗಳ ಸುಳಿಯಲ್ಲಿ ಸಿಲುಕಿತ್ತು.
ಪ್ರಶಾಂತ್ ಬೀಚಿ ಅಂಕಣ
ಇಂಗ್ಲೆಂಡಿನ ಕ್ರಿಕೆಟ್ ಲೋಕದ ಹುಮ್ಮಸ್ಸು
ಇಂಗ್ಲೆಂಡ್ ನಲ್ಲಿ ಪ್ರತಿ ಕ್ರಿಕೆಟ್ ಕ್ಲಬ್ಬಿಗೂ ಕ್ರಿಕೆಟ್ಟಿಗೆಂದೇ ಮೀಸಲಾದ ಮೈದಾನಗಳು ಇರುತ್ತವೆ. ಪ್ರತಿ ಕ್ಲಬ್ಬಿಗೂ ಸದಸ್ಯರಾಗಲು ವಾರ್ಷಿಕ ಚಂದಾ ಕೊಡಬೇಕು. ಒಂದು ಆಡಳಿತದ ತಂಡ ಇರುತ್ತದೆ. ಚಿಕ್ಕದಾದರೂ ಸರಿ, ಮೈದಾನಕ್ಕೆ ಅಂಟಿಕೊಂಡಂತೆ ಒಂದು ಕಟ್ಟಡವಿರುತ್ತದೆ, ಅದರೊಳಗೆ ಚಿಕ್ಕ ಪಬ್ಬು ಕೂಡ ಇರುತ್ತದೆ, ಮ್ಯಾಚು ನೋಡಲು ಬಂದವರು, ಮ್ಯಾಚು ಮುಗಿಸಿದ ಮೇಲೆ ತಿಂದು ಕುಡಿದು ಹೋಗಲು ಅಲ್ಲಿ ಅವಕಾಶವಿರುತ್ತದೆ. ಕ್ಲಬ್ಬಿನಲ್ಲಿ ಆಗಾಗ ಡಿನ್ನರ್ ಗಳನ್ನೂ ಬಾರ್ಬಿಕ್ಯೂಗಳನ್ನೂ ಇಟ್ಟುಕೊಂಡಿರುತ್ತಾರೆ ಮತ್ತು ಕ್ಲಬ್ಬಿಗೆ ದುಡ್ಡಿನ ಅವಶ್ಯಕತೆ ಇದ್ದಾಗ ಕೆಲವು ಕಾರ್ಯಕ್ರಮಗಳನ್ನೂ ಇಟ್ಟುಕೊಳ್ಳುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್ ಪತ್ರ’
ಸಂಸ್ಕೃತಿಗಳ ಮರುಜೇವಣಿಯಲ್ಲಿ ತೊಡಗಿರುವ ಶಿವಪ್ರಕಾಶರ ಕಾವ್ಯ
ಈ ಬಹುಮುಖಿ ಸಂವಾದದ ಮೂಲಕ ಶಿವಪ್ರಕಾಶರ ಕಾವ್ಯ ಕನ್ನಡ ಸಂಸ್ಕೃತಿಯ ಅಷ್ಟೇ ಏಕೆ ಭಾರತೀಯ ಸಂಸ್ಕೃತಿಯ ಮುಖ್ಯಗುಣವಾದ ಬಹುರೂಪಿತನವನ್ನು ಆವಾಹಿಸಿಕೊಂಡಿದೆ. ಕನ್ನಡ ಸಂವೇದನೆಯ ಅಸಲೀ ಗುಣವೆಂದರೆ ಅದು ಆದಿಮ ಕಾಲದಿಂದಲೂ ಅಂದರೆ ಶಂಗಂ ಸಾಹಿತ್ಯ, ಕವಿರಾಜ ಮಾರ್ಗದ ಕಾಲದಿಂದಲೂ ಹಲವು ಭಾಷೆ-ಸಂಸ್ಕೃತಿ-ಮೌಲ್ಯಗಳನ್ನು ಪ್ರತಿನಿಧಿಸುವ ಮಾರ್ಗ. ದೇಸಿ ಲೌಕಿಕ ಸಾಮಾಜಿಕ ಅನುಭಾವಿಕ ಧಾರ್ಮಿಕ ತತ್ವಶಾಸ್ತ್ರೀಯ ಅನುಭವಗಳೆಲ್ಲವನ್ನೂ ಏಕೀಭವಿಸಿಕೊಳ್ಳುವ ಗುಣವನ್ನು ಹೊಂದಿದೆ.
ಎಚ್.ಎಸ್. ಶಿವಪ್ರಕಾಶ್ ಅವರ ಕಾವ್ಯದ ಕುರಿತು ಎಸ್. ಸಿರಾಜ್ ಅಹಮದ್ ಬರಹ
ಸಂಸರ ‘ಬಿಂಬ’ ವನ್ನು ಕಂಡುಕೊಳ್ಳಬೇಕಾದ ಬಗೆಗೆ ಚಿಂತಿಸುತ್ತ…
ರಂಗಶಾಲೆಗಳು ಮತ್ತು ರಂಗಸಂಸ್ಥೆಗಳು ಮಾತ್ರ ಕಟ್ಟಿ ನಿಲ್ಲಿಸಬಹುದಾದ ಪ್ರಯೋಗಗಳು. ಅಮೇಚೂರ್ ಗಳಿಗೆ ಸಂಸರು ನಿಲುಕುವುದು ಕಷ್ಟ. ಕೈಲಾಸಂ ಮತ್ತು ಸಂಸರು ಒಂದೇ ಕಾಲಮಾನದವರಾದರೂ ಇವರ ಭಾಷಾ ಪ್ರಯೋಗದ ಅನನ್ಯತೆ ದೊಡ್ಡದು. ಕೈಲಾಸಂ ಕಟ್ಟಿರುವ ಭಾಷೆ- ಅದನ್ನು ಒಡೆದು ಓದುವ ಕ್ರಮ ತಿಳಿಯದಿದ್ದರೆ ಅವರ ನಾಟಕಗಳು ದಕ್ಕುವುದಿಲ್ಲ. ಸಂಸರನ್ನು ಓದಬೇಕಾದರೆ ಹಳಗನ್ನಡದ ಅಥವಾ ನಡುಗನ್ನಡದ ಟಚ್ ಇರಿಸಿಕೊಂಡಿರಬೇಕು. ಶಾಸ್ತ್ರೀಯವಾಗಿ ಅಭ್ಯಸಿಸಬೇಕು.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ
ಕಳ್ಳರ ಸಹವಾಸದಲ್ಲಿ ಕಳೆದ ಎರಡು ಸಾಹಸಿ ದಿನಗಳು
ಮೊಬೈಲ್ ಕಳ್ಳನನ್ನು ಬೆನ್ನತ್ತಿದ ತಕ್ಷಣ ಅದೆಲ್ಲ ನೆನಪಾಗಿ, ನಾನೊಬ್ಬ ಖೋ ಖೋ ಆಟದ ರೈಡರ್ ಆಗಿ ಬದಲಾಗಿಬಿಟ್ಟಿದ್ದೆ. ಆತ, ಎಡ-ಬಲ ತಡಕುತ್ತ, ಹೊಯ್ದಾಡುತ್ತ ಒಂದೇ ಸಮ ಓಡುತ್ತಿದ್ದ; ನಾನು ಅವನನ್ನಷ್ಟೇ ದಿಟ್ಟಿಸುತ್ತ ನೇರದಿಕ್ಕಿನಲ್ಲಿ ಓಡುತ್ತಿದ್ದೆ. ಇಬ್ಬರ ವೇಗವೂ ನೂರು ಮೀಟರ್ ಓಟಗಾರರ ವೇಗದಷ್ಟೇ ಇತ್ತು. ಇನ್ನೂರೈವತ್ತು ಮೀಟರ್ ಓಡಿರಬಹುದು. ಕಳ್ಳ ಓಡುತ್ತಲೇ ಹಿಂದಕ್ಕೊಮ್ಮೆ ತಿರುಗಿನೋಡಿದ. ಆತನ ಮೊಗದಲ್ಲಿ ಭಯ ಕಡಿಮೆ ಆದಂತಿತ್ತು.
-‘ಸೊಗದೆ’ ಅಂಕಣದಲ್ಲಿ ಕಳ್ಳರ ಚಮತ್ಕಾರಗಳನ್ನು ಬರೆದಿದ್ದಾರೆ ಸಹ್ಯಾದ್ರಿ ನಾಗರಾಜ್









