Advertisement

ಅಂಕಣ

ಇದು ಆಸ್ಟ್ರೇಲಿಯನ್ ಮಹಿಳಾ ಕ್ರೀಡಾಪಟುಗಳಿಗೆ ಸೇರಿದ ವರ್ಷ!

ಇದು ಆಸ್ಟ್ರೇಲಿಯನ್ ಮಹಿಳಾ ಕ್ರೀಡಾಪಟುಗಳಿಗೆ ಸೇರಿದ ವರ್ಷ!

ಇಪ್ಪತ್ತೊಂದನೇ ಶತಮಾನದಲ್ಲಿ ಕೂಡ ಹೊರದೇಶದವರಿಗೆ ಆಸ್ಟ್ರೇಲಿಯ ಅಂದರೆ ಆಂಗ್ಲೋ-ಆಸ್ಟ್ರೇಲಿಯಾ ಎಂಬ ಏಕತ್ವ ಮಾತ್ರ ಕಾಣುವುದು. ಎಲ್ಲವೂ ಆಂಗ್ಲೋ-ಯೂರೋಪಿಯನ್-ಅಮೇರಿಕನ್ ಆಗಿರುವ ಈ ದೇಶದಲ್ಲಿ ಈ ಮಣ್ಣಿನ ಮಕ್ಕಳಾದ ಅಬೊರಿಜಿನಲ್ ಜನರ ಸಂಸ್ಕೃತಿ ಮತ್ತು ತಿಳಿವಳಿಕೆಯ ಮಹತ್ವ ಬೆಳಕಿಗೆ ಬರಲು ಸಾಕಷ್ಟು ಅವಕಾಶವಾಗಿಲ್ಲ. ಇಂಥಾ ಸನ್ನಿವೇಶದಲ್ಲಿ ಮಹಿಳಾ ಕ್ರೀಡಾಪಟುವೊಬ್ಬರು ರೂಪುಗೊಳ್ಳುವುದು ಸರಳ ಮಾತಲ್ಲ.
ವಿನತೆ ಶರ್ಮಾ ಬರೆದ ‘ಆಸ್ಟ್ರೇಲಿಯ ಪತ್ರ’ ಇಲ್ಲಿದೆ.

read more
ಪ್ರದರ್ಶನ ಕಲೆಗಳಲ್ಲಿ ಸ್ತ್ರೀಯರ ಸ್ಥಾನ

ಪ್ರದರ್ಶನ ಕಲೆಗಳಲ್ಲಿ ಸ್ತ್ರೀಯರ ಸ್ಥಾನ

ಯುಗಧರ್ಮದ ಮನಸ್ಥಿತಿಯು ಆ ಸಮಾಜ ಸೃಷ್ಟಿಸಿದ ಘಟಕಗಳಲ್ಲಿ ಅಂತರ್ಗತವಾಗಿಯೆ ಇರುತ್ತದೆ. ಉದಾಹರಣೆಯಾಗಿ ಯಕ್ಷಗಾನವನ್ನೆ ತೆಗೆದುಕೊಂಡರೆ, ಅದರ ಎಲ್ಲ ಅಂಗಗಳಲ್ಲಿ, ರೂಪ-ಸ್ವರೂಪ, ಹಿಮ್ಮೇಳ-ಮುಮ್ಮೇಳ, ಮೌಲ್ಯ-ಔಚಿತ್ಯ, ರಸ-ರುಚಿ, ಪಠ್ಯ-ಸಂಕಲನ, ಅಥವಾ ತಾಳಮದ್ದಲೆಯಲ್ಲಿ ಬೆಳೆದು ಬಂದ ವಾಗ್ವಾದದ, ತರ್ಕದ ಪರಂಪರೆ ಇವೆಲ್ಲದರಲ್ಲೂ ನಾವು ಈ ಆಲೋಚನೆಯ ಒಂದು ಎಳೆಯು ನಿರಂತರವಾಗಿರುವುದನ್ನು ಕಾಣಬಹುದು.
ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯ ಸ್ಥಾನದ ಕುರಿತು ‘ಯಕ್ಷಾರ್ಥ ಚಿಂತಾಮಣಿ’ಯಲ್ಲಿ ಕೃತಿ ಪುರಪ್ಪೇಮನೆ ಲೇಖನ

read more
ಅಸಾಧ್ಯತೆಗಳ ಕಲ್ಪನೆಯಲ್ಲಿ ಕತೆಗಾರ: ಇಟಾಲೋ ಕ್ಯಾಲ್ವಿನೋ

ಅಸಾಧ್ಯತೆಗಳ ಕಲ್ಪನೆಯಲ್ಲಿ ಕತೆಗಾರ: ಇಟಾಲೋ ಕ್ಯಾಲ್ವಿನೋ

ಪುಸ್ತಕದ ಮೊದಲ ಮತ್ತು ಅಂತಿಮ ಭಾಗದಲ್ಲಿ ಹತ್ತು ಕಾಲ್ಪನಿಕ ನಗರಗಳ ವರ್ಣನೆಗಳಿದ್ದರೆ, ಮಧ್ಯದ ಭಾಗಗಳಲ್ಲಿ ಐದೈದು ನಗರಗಳ ವರ್ಣನೆಗಳಿವೆ. ಪೋಲೋ ವರ್ಣಿಸುವ 55 ನಗರಗಳನ್ನು, ನಗರ ಮತ್ತು ಸ್ಮೃತಿ, ನಗರ ಮತ್ತು ಬಯಕೆ, ನಗರ ಮತ್ತು ಸಂಜ್ಞೆ, ಸಪೂರ ನಗರ, ವ್ಯಾಪಾರದ ನಗರ, ಕಂಗಳು ಮತ್ತು ನಗರ, ಇತ್ಯಾದಿ ಹನ್ನೊಂದು ವಿಷಯ-ಕೇಂದ್ರಿತ ಗುಂಪುಗಳಾಗಿ ವರ್ಣಿಸಲಾಗಿದೆ. ಅಲ್ಲದೇ ಪ್ರತಿ ಅಧ್ಯಾಯದಲ್ಲಿಯೂ ಪೋಲೋ ಮತ್ತು ಕುಬ್ಲಾ ಖಾನರ ನಡುವಿನ..”

read more
ಈಕೆ ಕಲಿತಿದ್ದು ಪರ್ವತದ ನೀರವತೆಯಿಂದ

ಈಕೆ ಕಲಿತಿದ್ದು ಪರ್ವತದ ನೀರವತೆಯಿಂದ

ಮನೆಯವರೊಂದಿಗೆ ಹೋರಾಡಿ ತಾರಾ ಕಾಲೇಜೊಂದಕ್ಕೆ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಮುಂದೆ ಇಂಗ್ಲಂಡಿನ ಕೇಂಬ್ರಿಡ್ಜಿನಲ್ಲಿರುವ ಪ್ರತಿಷ್ಠಿತ ಟ್ರಿನಿಟಿ ಕಾಲೇಜಿನಲ್ಲಿ ಪಿಎಚ್‌ಡಿ ಪದವಿಯನ್ನೂ ಪಡೆಯುತ್ತಾಳೆ. ಈ ಪಯಣದಲ್ಲಿ ತಂದೆ ತಾಯಿಯರಿಂದ ಯಾವುದೇ ಭಾವನಾತ್ಮಕ ಆಶ್ರಯವೂ, ಸ್ಪಂದನೆಯೂ ಅವಳಿಗೆ ದಕ್ಕುವುದಿಲ್ಲ. ಹಿಂತಿರುಗಿ ನೋಡಿದಾಗ ತನ್ನ ತಂದೆ ಯಾವುದೋ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರಬಹುದೇ ಎಂದು ಅವಳಿಗೆ ಸಂದೇಹವಾಗುತ್ತದೆ. ಎಲ್ಲರಂತೆ ತನಗೂ ಒಂದು ಸಹಜ ಬಾಲ್ಯವಿರಬೇಕಿತ್ತು..”

read more
‘ಮೇಲು ಕೀಳಿನ ನಡತೆ ಹಾದಿ ತಪ್ಪಿದ ಜಡತೆ’

‘ಮೇಲು ಕೀಳಿನ ನಡತೆ ಹಾದಿ ತಪ್ಪಿದ ಜಡತೆ’

ಶತಮಾನಗಳು ಕಳೆದಂತೆ, ವೈಜ್ಞಾನಿಕ ಮತ್ತು ತಾಂತ್ರಿಕ ಬೆಳವಣಿಗೆಗಳು ಆದಂತೆ, ನಗರೀಕರಣ ಹೆಚ್ಚಾದಂತೆ, ಅಧೀಕೃತವಾಗಿ ಜನಾಂಗಭೇದವನ್ನು ನಿಷೇಧಿಸಲಾಗಿದೆ, ಜನಾಂಗಭೇದವನ್ನು ಮಾಡಿದವರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಕಾನೂನುಗಳು ಬಂದಿವೆ. ‘ಪಾಕಿʼಎನ್ನುವ ಶಬ್ದ, ಪಾಕಿಸ್ಥಾನೀ ಎನ್ನುವ ಅರ್ಥಕೊಡುತ್ತದೆ ಎಂದು ಕಂಡರೂ, ಅದೊಂದು ರೇಸಿಸ್ಟ್ ಶಬ್ದ, ಆ ಶಬ್ದವನ್ನು ಯಾರಾದರೂ ಭಾರತ-ಉಪಖಂಡದಿಂದ ಬಂದವರಿಗೆ ಹೇಳಿದರೆ…”

read more
ಕಾರು ಬಂಗಲೆಯ ಲೆಕ್ಕಾಚಾರ ಮೀರಿದ ಜೀವನದೃಷ್ಟಿ

ಕಾರು ಬಂಗಲೆಯ ಲೆಕ್ಕಾಚಾರ ಮೀರಿದ ಜೀವನದೃಷ್ಟಿ

ಪಾಶ್ಚಿಮಾತ್ಯದ ಜನರು ಯಾರೇ ಸಿಗಲಿ, ಅವರು ನನ್ನ ಹವ್ಯಾಸ ಗಳ ಬಗ್ಗೆ ಕೇಳುತ್ತಾರೆ, ನನ್ನ ಆಸಕ್ತಿ ಬಗ್ಗೆ ಕೇಳುತ್ತಾರೆ, ದೇಶ-ವಿದೇಶಗಳ ಪರ್ಯಟನೆ ಬಗ್ಗೆ ಕೇಳುತ್ತಾರೆ ವಿನಃ, ನನಗೆ ಮದುವೆ ಆಗಿದೆಯ? ಮಕ್ಕಳು ಎಷ್ಟು? ನನ್ನ ಸಂಬಳ ಎಷ್ಟು? ಈ ರೀತಿಯ ವೈಯಕ್ತಿಯ ವಿಷಯಗಳ ಮೇಲೆ ನನ್ನನ್ನು ಅಳೆಯುವುದೂ ಇಲ್ಲ ಮತ್ತು ಅದರ ಬಗ್ಗೆ ಅವರಿಗೆ ಆಸಕ್ತಿಯೂ ಇಲ್ಲ. ಪ್ರತಿಯೊಬ್ಬ ಮನುಷ್ಯನನ್ನು ಕೇವಲ ಮತ್ತು ಕೇವಲ ಮನುಷ್ಯನನ್ನಾಗಿ ನೋಡಬೇಕೆ ಹೊರತು ಅವನ ಆಸ್ತಿ ಅಂತಸ್ತಿನಿಂದಲ್ಲ ಎನ್ನುವುದನ್ನು ಕಲಿಸಿದರು.
ಪ್ರಶಾಂತ್‌ ಬೀಚಿ ಅಂಕಣ

read more
‘ಹೆರ್ಚಟಿಗಿ’ ಎಂಬ ನಾನು…

‘ಹೆರ್ಚಟಿಗಿ’ ಎಂಬ ನಾನು…

ಕೀಲೆಣ್ಣೆ ಅಥವಾ ಹೆರೆಣ್ಣಿ ಹಾಕುವ ಚಟಗಿ ಅಂದರೆ ಬಾಟಲಿಯು ಸಂಧಿಯೋ ಸಮಾಸವೋ ಆಗಿ ಈ ‘ಹೆರ್ಚಟಗಿ’ ಎಂಬ ಪದವೊಂದು ನಮ್ಮೂರ ಜನರ ಬಾಯಲ್ಲಿ ರೂಪುಗೊಂಡಿತ್ತು. ಊರಲ್ಲಿ ಹೀಗೆ ಎಲ್ಲರಿಗೂ ಒಂದೊಂದು ಅನ್ವರ್ಥ ನಾಮ ಅಂಟಿಕೊಂಡಿರುತ್ತದಲ್ಲ. ನನ್ನ ಅನ್ವರ್ಥನಾಮ ‘ಹೆರ್ಚಟಗಿ’. ಹಾಗೆ ಊರಲ್ಲಿ ಹಾಗೆ ಕರೆಸಿಕೊಂಡಾಗ,  ನನ್ನ ಮನದೊಳಗೆ ಮೂಡುವ ಭಾವಕ್ಕೆ ಮಾತ್ರ ನಾಮಕರಣ ಮಾಡುವುದು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಒಳಗೊಳಗೇ ನಗು ಮೂಡುತ್ತದೆ. -ವೀರಣ್ಣ ಮಡಿವಾಳರ ಬರೆಯುವ ತಾರೆಗಳ ಹಿಡಿಯುವೆವು ಅಂಕಣ ಇಂದಿನ ಓದಿಗಾಗಿ. 

read more
ಅಗಲಿದ ನಮ್ಮ ರಂಗಕಲಾವಿದರ ಜೊತೆಗೆ ರೊಟಿಮಿ ನೆನಪು…

ಅಗಲಿದ ನಮ್ಮ ರಂಗಕಲಾವಿದರ ಜೊತೆಗೆ ರೊಟಿಮಿ ನೆನಪು…

ಕಿಂಗ್ ಲಯಸ್ ಆಫ್ರಿಕದ ದೊರೆ ‘ಅಡೆಟುಸ’ ಆಗುತ್ತಾನೆ. ರಾಣಿ ಜೊಕಾಸ್ತ ಆಫ್ರಿಕದ ರಾಣಿ ‘ಒಜೋಲ’ ಆಗುತ್ತಾಳೆ. ಕ್ರಯಾನ್ ಅಡ್ರೆಪೊ ಆಗುತ್ತಾನೆ. ಟೈರೀಷಿಯಸ್ ಬಾಬ ಫಕನುಲ್ – ಕುರುಡು ತತ್ವಜ್ಞಾನಿ ಆಗುತ್ತಾನೆ. ಮೂಲ ಪಠ್ಯದಲ್ಲಿನ ಕುರಿಗಾಹಿ, ಘೂಂಕ ಆಗುತ್ತಾನೆ. ಥೀಬ್ಸ್ ಎನ್ನುವುದು ಆಫ್ರಿಕನ್ ಹಿನ್ನೆಲೆಯಲ್ಲಿ ಕುಟುಂಜೆ ಆಗಿ ‘ಇಡೆ’ ಎನ್ನುವುದು ಮಾತಾಪಿತೃಗಳ ವಧಾ ಸ್ಥಾನವಾಗುತ್ತದೆ.
ಎನ್‌.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

read more
ಸೊಂಟಕ್ಕೆ ಕೆಂಪು ದುಪಟ್ಟಾ ಕಟ್ಟಿಕೊಂಡ ಹುಡುಗಿ

ಸೊಂಟಕ್ಕೆ ಕೆಂಪು ದುಪಟ್ಟಾ ಕಟ್ಟಿಕೊಂಡ ಹುಡುಗಿ

ಅದ್ಯಾವ ಗಳಿಗೆಯಲ್ಲಿ ನಮ್ಮೂರಿನ ಮಂದಿಯ ತಲೆಯೊಳಗೆ ‘ಟೈಟಾನಿಕ್’ ಹುಳು ಬಿಟ್ಟಿದ್ದರೋ ಕಾಣೆ. “ಹಡಗು ಮುಳುಗೋ ಸಿನ್ಮಾ ನೋಡೋಕೆ ಹೋಗ್ತಿದ್ದೀವಿ,” ಅಂತ ಹಲ್ಕಿರಿಯುತ್ತ, ಕೂಲಿಯನ್ನೂ ಬಿಟ್ಟು ಬಸ್ಸು ಹತ್ತಿದ್ದ ನಮ್ಮೂರ ಮಂದಿಯ ಹುರುಪು ನೆನೆದರೆ ಹೆಮ್ಮೆ, ಪ್ರೀತಿ. ಆ ಸಿನಿಮಾ ತರೀಕೆರೆಯ ಟಾಕೀಸಿನಲ್ಲಿ ಇದ್ದ ಅಷ್ಟೂ ದಿನ ಊರಿನ ಒಂದಲ್ಲ ಒಂದು ತಲೆ ಮಾರ್ನಿಂಗ್ ಶೋ ಕಂಡದ್ದಿದೆ.
ಸೊಗದೆ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್ ಬರಹ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ