Advertisement

ಅಂಕಣ

ಕನ್ನಡ ಪ್ರಜ್ಞೆ: ಸುಕನ್ಯಾ ಕನಾರಳ್ಳಿ ಅಂಕಣ

ಕನ್ನಡ ಪ್ರಜ್ಞೆ: ಸುಕನ್ಯಾ ಕನಾರಳ್ಳಿ ಅಂಕಣ

ನನ್ನ ಮನೆಗೆ ಯಾವ ಮಕ್ಕಳು ಬಂದರೂ ಕನ್ನಡದಲ್ಲಿ ಮಾತಾಡೋದಾದ್ರೆ ಮಾತ್ರ ಒಳಗೆ ಬನ್ನಿ ಅಂತ ಯಾವ ಮುಲಾಜಿಲ್ಲದೆ ಹೇಳಿಬಿಡ್ತೀನಿ. ಮೊನ್ನೆ ಮಹಾ ತರಾತುರಿಯಲ್ಲಿ ನಾಲ್ಕು ಮಕ್ಕಳು ಬಾಗಿಲು ಬಡಿದ್ರು. ಎಲ್ರೂ ಇಂಗ್ಲೀಶಲ್ಲಿ ಒಟ್ಟಿಗೆ ಮಾತಾಡ್ತಾ ಇದ್ರು. ಅವರನ್ನ ತಡೆದು ನಿಲ್ಲಿಸಿ ‘ಕನ್ನಡದಲ್ಲಿ ಹೇಳಿ’ ಅಂದೆ. ತಟ್ಟನೆ ಮೌನ. ಅರೆ ಗಳಿಗೆಯ ನಂತರ ಒಂದು ಮಗು ಧೈರ್ಯ ಮಾಡಿ ‘ನಾವು ಪ್ಲೇ ಮಾಡ್ತಾ ಇದೀವಿ. ಅಲ್ಲಿ ಅಭಿ ಕೌಂಟ್ ಮಾಡ್ತಾ ಇದಾನೆ. ಅದಕ್ಕೆ ನಾವೆಲ್ಲ ರನ್ ಮಾಡಿಕೊಂಡು ಬಂದ್ವಿ. ನಿಮ್ಮನೇಲಿ ಹೈಡ್ ಮಾಡಿಕೊಬಹುದಾ?ʼನಾನು ಕೇಳಿದ್ದು ಕನ್ನಡದಲ್ಲಿ ಹೇಳಿ ಅಂತ, ಕಿಚಡಿಯಲ್ಲಿ ಅಲ್ಲ ಎಂದಿದ್ದು ಪಾಪ ಮಕ್ಕಳಿಗೆ ಅರ್ಥ ಆಗಲಿಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎರಡನೆಯ ಬರಹ

read more
ಅವಳ ಹೆಸರು ಗೀತ…: ವಿನಾಯಕ ಅರಳಸುರಳಿ ಅಂಕಣ

ಅವಳ ಹೆಸರು ಗೀತ…: ವಿನಾಯಕ ಅರಳಸುರಳಿ ಅಂಕಣ

ಇದೊಂದು ಚಿಕ್ಕ ಕಾಳಜಿ, ಉಳಿದವರೆಲ್ಲರ ಉಪೇಕ್ಷೆಯ ನಡುವೆ ಆಕೆ ಮೆರೆದ ಸಣ್ಣ ಸಮಯ ಪ್ರಜ್ಞೆ ಎಂದು ಅನಿಸಬಹುದೇನೋ? ಆದರೆ ನೂರಾರು ಕೆಲಸಗಳ ನಡುವೆ ಮುಳುಗಿದಾಕೆ ತನ್ನದಲ್ಲದ ಧಾವಂತಕ್ಕಾಗಿ ಅವನ್ನೆಲ್ಲ ಬದಿಗಿಟ್ಟು ಸ್ವತಃ ಆಕ್ಸಿಜನ್ ಅಳವಡಿಸಿದ ಬೆಡ್ಡನ್ನು ದೂಡಿಕೊಂಡು ಬರುವುದು ಎಷ್ಟು ವಿರಳ ಹಾಗೂ ದೊಡ್ಡ ಮಾನವೀಯತೆಯೆನ್ನುವುದು ತಿಂಗಳಾನುಗಟ್ಟಲೆ ಆಸ್ಪತ್ರೆಯಲ್ಲಿ ಕಳೆದ ಬಳಿಕವಷ್ಟೇ ಅರ್ಥವಾಗುವ ಸೂಕ್ಷ್ಮ ಸತ್ಯ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more
ಬೇಸಿಗೆ ತರಲಿರುವ ಅಸಹನೆ, ಆಕಾಂಕ್ಷೆ: ಡಾ. ವಿನತೆ ಶರ್ಮಾ ಅಂಕಣ

ಬೇಸಿಗೆ ತರಲಿರುವ ಅಸಹನೆ, ಆಕಾಂಕ್ಷೆ: ಡಾ. ವಿನತೆ ಶರ್ಮಾ ಅಂಕಣ

ಕ್ರಿಸ್ಮಸ್ ಲಂಚ್ ಮುಗಿಸಿಕೊಂಡು ವಾಪಸ್ ಬರುವಾಗ ನಾವು ‘ಕಂಟ್ರಿ ಸೈಡ್’ ದಾರಿ ಹಿಡಿದಿದ್ದೆವು. ನನಗೆ ಅದಾವುದರ ತಲೆಬುಡ ಗೊತ್ತಿರಲಿಲ್ಲ. ಕರೆದುಕೊಂಡು ಹೋದವರು ವಾಪಸ್ ಮನೆ ಸೇರಿಸುತ್ತಾರೆ ಎಂದು ನಿಶ್ಚಿಂತೆಯಿಂದ ಕಿಟಕಿಯಿಂದ ಕಾಣುತ್ತಿದ್ದ ಆಸ್ಟ್ರೇಲಿಯನ್ ಪೊದೆಕಾಡನ್ನು ನೋಡುತ್ತಾ ಕಳೆದುಹೋಗಿದ್ದೆ. ಇದ್ದಕ್ಕಿದ್ದಂತೆ ಕಾರಿನಲ್ಲಿ ತಾಪಮಾನ ಏರಿದಂತಾಯ್ತು. ಮುಖ ತಿರುಗಿಸಿದಾಗ ಆ ಕಡೆ ಕಂಡಿದ್ದು ಉದ್ದಾನುದ್ದಕ್ಕೆ ಹರಡಿಕೊಂಡು ಉರಿಯುತ್ತಿದ್ದ ಬೆಂಕಿಜ್ವಾಲೆ. ನಾನಿದ್ದ ಕಾರಿನಿಂದ ಸ್ಪಷ್ಟವಾಗಿ ಕಾಣುತ್ತಿದ್ದು, ಶಾಖದ ಅನುಭವವೂ ಚೆನ್ನಾಗಾಗುತ್ತಿತ್ತು. ಅಂದರೆ ಅಷ್ಟು ಹತ್ತಿರದಲ್ಲಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

ನಾನು ಈ ಹುಡುಗಿಗೆ “ನಿನ್ನ ಗುರುತಿನ ಚೀಟಿ ಕೊಡಮ್ಮ” ಅಂದೆ. ಅವಳು ಗಾಬರಿಯಿಂದ “ಅದು ಇಲ್ಲ ಮ್ಯಾಮ್” ಅಂದಳು. ಪಾಪ, ಅದು ಅವಳ ಕುತ್ತಿಗೆಯಲ್ಲೇ ತೂಗುತ್ತಿತ್ತು. ಈ ಘಟನೆಯು ಘಟಿಸುತ್ತಿದ್ದಾಗ ನಮ್ಮ ಕೋಣೆಯಲ್ಲೇ ಕುಳಿತಿದ್ದ ಇಂಗ್ಲಿಷ್ ಅಧ್ಯಾಪಕಿಯೊಬ್ಬರು ಮುಗುಳ್ನಗುತ್ತಾ “ಅದು ನಿನ್ನ ಮೈಮೇಲೇ ಇದೆಯಲ್ಲಮ್ಮ” ಅಂದರು. ಆದರೂ ಆ ಹುಡುಗಿಗೆ ಗುರುತಿನ ಚೀಟಿ ಅಂದರೆ ಏನೆಂದು ಗೊತ್ತಾಗಲಿಲ್ಲ. ಏನು ಒತ್ತಡ ಇತ್ತೋ ಏನೋ ಪಾಪ ಅವಳಿಗೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತನೆಯ ಬರಹ

read more
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

ನಮ್ಮ ಪುರಾಣಗಳನ್ನು ಕೆದಕುತ್ತಾ ಹೋದರೆ ಇಂತಹ ಬಹಳಷ್ಟು ಮಾದರಿಗಳು ಸಿಗಬಹುದು. ಪ್ರತಿಯೊಬ್ಬರ ಪರಿಸ್ಥಿತಿಗಳು ಪ್ರತಿಯೊಬ್ಬರ ಋಣದ ಬೇರುಗಳು ಭಿನ್ನವಾಗಿರಬಹುದು. ಆದರೆ ಧರ್ಮಸಂಕಟದ ಆ ಉತ್ಕಟ ಕ್ಷಣಗಳಲ್ಲಿ ಅವರು ತೆಗೆದುಕೊಂಡ ನಿರ್ಧಾರಗಳು ಖಂಡಿತವಾಗಿಯೂ ನಮ್ಮ ಬದುಕಿನ ಸಮಸ್ಯೆಗಳಿಗೂ ಒಂದು ದಾರಿಯನ್ನು ತೋರಿಸಬಹುದು. ಬದುಕಿನ ಅನಾಮಿಕ ತಿರುವಿನಲ್ಲಿ ಎದುರಾಗುವ ದ್ವಂದ್ವಗಳಲ್ಲಿ ಇಲ್ಲಿದ್ದು ಇಲ್ಲಿಲ್ಲ; ಅಲ್ಲಿದ್ದು ಅಲ್ಲಿಲ್ಲ ಅನ್ನುವಂತಾಗಿ ಇದು ಅಥವಾ ಅದು ಅನ್ನುವ ಆಯ್ಕೆ ಮಾಡಲೇಬೇಕಾದ ಪರಿಸ್ಥಿಗಳಲ್ಲಿ ನಮ್ಮ ಮುಂದೆ ಇವರು ಕೊಟ್ಟು ಹೋದ ಮಾದರಿಗಳಿವೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

read more
ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ

ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ

‘ನಿಮ್ಮ ಮನೆಯಲ್ಲೂ ಪಾತಿ ಮಾಡಿದಾರಾ?’ ಎಂದು ಸುಮ್ಮನೆ ಮಾತಿಗೆ ಒಮ್ಮೆ ಕೇಳಿದ್ದೆ. ‘ನಮ್ಮನೆ ಮುಂದೆ ಲಾಲ್ ಬಾಗೇ ಇದೆಯಲ್ಲ?’ ಎಂದು ಫಟ್ಟನೆ ಹೇಳಿದಾಗ ಬೆಚ್ಚಿಬೀಳುವ ಹಾಗಾಯಿತು. ಅದೊಂದು ಮಹಾವಾಕ್ಯದಂತೆ ಕೇಳಿಸಿತ್ತು. ಲಾಲ್ ಬಾಗಿನ ಎದುರು ಇರುವ ಸ್ಲಮ್ಮಿನಲ್ಲಿ ಅವರದ್ದು ಜೋಪಡಿ ವಾಸ. ಹೈದರ್ ಅಲಿ ಟಿಪ್ಪು ಸುಲ್ತಾನರು ದೇಶ ವಿದೇಶಗಳಿಂದ ತರಿಸಿ ಬೆಳೆಸಿರುವ ಅಪರೂಪದ ವೃಕ್ಷಗಳ ನಡುವೆಯೇ ಬೆಳೆಯುತ್ತಿರುವ ಮಗು ಅವಳು.
ಖ್ಯಾತ ಲೇಖಕಿ, ಅನುವಾದಕಿ ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ ಪ್ರತಿ ಬುಧವಾರಗಳಂದು ನಿಮ್ಮ ಓದಿಗೆ…

read more
ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more
ಹಿರಿಮೆ-ಗರಿಮೆ ಲೋಕದಲ್ಲಿ ಸಿಕ್ಕ ಆಸ್ಟ್ರೇಲಿಯನ್ ಹಕ್ಕಿ: ಡಾ. ವಿನತೆ ಶರ್ಮಾ ಅಂಕಣ

ಹಿರಿಮೆ-ಗರಿಮೆ ಲೋಕದಲ್ಲಿ ಸಿಕ್ಕ ಆಸ್ಟ್ರೇಲಿಯನ್ ಹಕ್ಕಿ: ಡಾ. ವಿನತೆ ಶರ್ಮಾ ಅಂಕಣ

ಕುತೂಹಲಕಾರಿ ವಿಷಯವೆಂದರೆ ಈ ವರ್ಷ ೨೦೨೫ರಲ್ಲಿ ಅಮೆರಿಕಾ ದೇಶವು ಹನ್ನೆರಡನೇ ಸ್ಥಾನಕ್ಕೆ ಇಳಿದಿದೆ. ಯು.ಎಸ್.ಎ ಪಾಸ್ಪೋರ್ಟ್ ಇರುವವರು ೧೮೦ ದೇಶಗಳಿಗೆ ವೀಸಾ ಪಡೆಯದೆ ಹೋಗಬಹುದು. ಹೆನ್ಲಿ ಸಂಸ್ಥೆಯ ಅಧ್ಯಯನದ ಪ್ರಕಾರ ೨೦೧೪ ನೇ ಇಸವಿಯಲ್ಲಿ ಅಮೆರಿಕೆಯು ಮೊಟ್ಟಮೊದಲ ಸ್ಥಾನದಲ್ಲಿದ್ದು ಪ್ರಪಂಚದ ಅತ್ಯಂತ ಪ್ರಭಾವಶಾಲಿ ಪಾಸ್‌ಪೋರ್ಟ್ ಎನ್ನುವ ಹಿರಿಮೆ, ಮಾನ್ಯತೆಯಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಕನ್ನಡದ ಡಿಜಿಟಲ್ ನವೋದಯ ಮತ್ತು ವಿಜ್ಞಾನ ಬರವಣಿಗೆ: ಎಲ್.ಜಿ.ಮೀರಾ ಅಂಕಣ

ಕನ್ನಡದ ಡಿಜಿಟಲ್ ನವೋದಯ ಮತ್ತು ವಿಜ್ಞಾನ ಬರವಣಿಗೆ: ಎಲ್.ಜಿ.ಮೀರಾ ಅಂಕಣ

ಹಲವಾರು ಲೇಖಕ-ಲೇಖಕಿಯರು ತಮ್ಮ ಕೊಡುಗೆಗಳನ್ನು ಕೊಟ್ಟಿದ್ದಾರೆ, ಕೊಡುತ್ತಿದ್ದಾರೆ. ಆದರೂ ಕರ್ನಾಟಕದ ಜನಮಾನಸದಲ್ಲಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ವಿಜ್ಞಾನದ ಅಧ್ಯಾಪಕರಲ್ಲಿ ಮತ್ತು ಸಂಶೋಧಕರಲ್ಲಿ `ವಿಜ್ಞಾನವೆಂದರೆ ಇಂಗ್ಲಿಷಿನಲ್ಲಿ ಇರುವಂಥದ್ದು, ಇರಬೇಕಾದದ್ದುʼ ಎಂಬ ಗಾಢ ಭಾವನೆ ಬೇರೂರಿದೆ. ಈ ಭಾವನೆ-ಚಿಂತನೆಯ ತಿರುಳು ಎಂದರೆ “ತೀರಾ ಗಂಭೀರ ವಿಜ್ಞಾನ ವಿಚಾರಗಳನ್ನು ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಲೇಖನಗಳನ್ನು ಕನ್ನಡದಲ್ಲಿ ಬರೆಯಲಾಗದು, ಹಾಗೆ ಬರೆಯಲು ಸೂಕ್ತ ಪದಗಳೇ ಸಿಗುವುದಿಲ್ಲ” ಎಂಬ ಅನಿಸಿಕೆ ಅಥವಾ ಪೂರ್ವಗ್ರಹ. ಇದು ವಿಜ್ಞಾನಕ್ಷೇತ್ರದ ಹಲವು ಅಧ್ಯಾಪಕರು ಮತ್ತು ವಿಜ್ಞಾನಿಗಳಲ್ಲಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ