Advertisement

ಅಂಕಣ

ಕೊರೋನಾದ ಬಾಹುಬಂಧದಲಿ ಸಿಲುಕಿ..: ಲಕ್ಷ್ಮಣ ವಿ.ಎ. ಅಂಕಣ

ಕೊರೋನಾದ ಬಾಹುಬಂಧದಲಿ ಸಿಲುಕಿ..: ಲಕ್ಷ್ಮಣ ವಿ.ಎ. ಅಂಕಣ

“ನಾಳೆಯಿಂದ ಕೆಲಸ ಇಲ್ಲ ಕೂಲಿಯೂ ಇಲ್ಲ. ಹಾಗಿದ್ದರೆ ಊಟಕ್ಕೇನು? ಇವರನ್ನು ಕರೆ ತಂದ ಠೇಕೆದಾರನ ಫೋನ್ ನಂಬರು ಬಿಜಿ ಬರ್ತಿದೆ. ಅಳಿದುಳಿದ ಗಂಟು ಮೂಟೆ ಕಟ್ಟಿ ಇವಳೂ ದಕ್ಷಿಣ ದೆಹಲಿಯಿಂದ ಕಾನ್ಪುರಕ್ಕೆ ನಡೆದೇ ಬಿಟ್ಟಳು, ಕುಂಟುವ ಒಂದು ಮಗು ತೆವಳುವ ಇನ್ನೊಂದು ಮಗು ಕಂಕುಳಲ್ಲಿ ಒಂದು ಮಗು. ಗಂಡನಿಗೆ ಬೀಡಿ ಅಂಟಿಸುವ ಚಟ, ಆದರೆ ಬೀದಿ ಅಂಗಡಿಗಳೂ ಬಂದ್ ಆಗಿವೆ…”

read more
ಲೋಕಾಶ್ಚರ್ಯಮಂ ಮಾಡಿ ಕೊಂದುದು:    ಆರ್. ದಿಲೀಪ್ ಕುಮಾರ್ ಅಂಕಣ

ಲೋಕಾಶ್ಚರ್ಯಮಂ ಮಾಡಿ ಕೊಂದುದು: ಆರ್. ದಿಲೀಪ್ ಕುಮಾರ್ ಅಂಕಣ

“ಆದಿಪುರಾಣದ ಪ್ರಾರಂಭವನ್ನೊಮ್ಮೆ ಗಮನಿಸಿ, ಲೋಕಾಕಾರ ಕಥನದಿಂದ ಪ್ರಾರಂಭವಾಗಿ ವಿದೇಹದಲ್ಲಿ ಬಂದು ನಿಂತು ಕಥಾಭಿತ್ತಿ ಪ್ರಾರಂಭ ಆಗುತ್ತದೆ. ಇಲ್ಲಿನ ಪ್ರತಿಯೊಂದು ಭಾಗದ ನಾಯಕ ಪಾತ್ರವೂ ಶ್ರೀಮಂತರೇ, ರಾಜರೇ. ಅವರ ಸಾವಿನ ಚಿತ್ರಣವೇ ಬದುಕಿನ ಬಗೆಗೆ ಯೋಚಿಸುವ ಹಾಗೆ ಮಾಡುವಲ್ಲಿ ಚಲನೆ ಪಡೆಯುತ್ತದೆ. ಶ್ರವಣಬೆಳಗೊಳದ ನಂದಿಸೇನ ಮುನಿಯ ಶಾಸನದ….”

read more
‘ಎಲ್ಲಿ ಒಮ್ಮೆ ಹೊಡೆದು ತೋರಿಸಿ ನೋಡೋಣ?’: ಶ್ರೀಹರ್ಷ ಸಾಲಿಮಠ ಅಂಕಣ

‘ಎಲ್ಲಿ ಒಮ್ಮೆ ಹೊಡೆದು ತೋರಿಸಿ ನೋಡೋಣ?’: ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ತಂದೆಯ ಅಕ್ಷರಗಳ ಚರ್ಚೆ ನಮ್ಮ ಬಹುದೂರದ ಸಂಬಂಧಿಕರಲ್ಲೂ ಹರಡಿತ್ತು. ಒಮ್ಮೊಮ್ಮೆ ಕೆಲವರು ನನಗೆ ನಮ್ಮಪ್ಪನ ಪತ್ರಗಳನ್ನು ತೋರಿಸಿ “ನಿಮ್ಮಪ್ಪ ಏನೋ ಬರದಾನ.. ಸಲ್ಪ ಓದಿ ಹೇಳಪ್ಪಾ” ಅಂತ ಕೇಳುತ್ತಿದ್ದರು. ನಾನು ಆ ಪತ್ರದಲ್ಲಿ ಬರೆದಿರುವುದು ಕನ್ನಡವೋ ಇಂಗ್ಲೀಷೋ ಎಂದು ಗುರುತಿಸಲೇ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೆ. ನಮ್ಮ ತಂದೆ ಒಂದೊಂದು ಸಾರಿ ನನ್ನ ಕೈಲಿ ನನ್ನ ಪಕ್ಕ ಕೂತು…”

read more
ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

“ಬೇರೆಲ್ಲಾ ಪಂದ್ಯಗಳಂತೆ ಈ ಸ್ಪರ್ಧೆಯ ಕುರಿತಾಗಿ ಅನೇಕ ರೋಚಕ ಕಥೆಗಳೂ, ಸಾವುನೋವುಗಳೂ, ಸಾಧನೆಗಳೂ ಅಡಗಿವೆ. ೧೯೯೮ರ ಪಂದ್ಯದ ಸಮಯದಲ್ಲಿ ಸಂಭವಿಸಿದ ಅಸಾಧಾರಣ ತೀವ್ರ ಗಾಳಿಯಿಂದಾಗಿ ಐದು ದೋಣಿಗಳು ಮುಳುಗಿ, ಆರು ಜನ ಸತ್ತರಂತೆ. ಈ ದುರಂತದ ಕಾರಣದಿಂದ ಸ್ಪರ್ಧೆಯ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದರಂತೆ. ಈ ವಿಷಯವನ್ನು ನನ್ನ ಗೆಳತಿಯ ಗಂಡ…”

read more
ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”

read more
ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

“ರಶೀದ್ ಪುರೋಳನ್ನು ಹೊತ್ತೊಯ್ದು ಮದುವೆಯಾಗಿರುತ್ತಾನೆ ನಿಜ. ಆದರೆ ಅವಳನ್ನು ನಿಜಕ್ಕೂ ಪ್ರೀತಿಸಿರುತ್ತಾನೆ. ಅವಳೂ ಸಹ ಮೊದಮೊದಲಿಗೆ ಇದ್ದ ಬೇಸರವನ್ನು ಅವನ ಒಳ್ಳೆಯ ನಡತೆಯಿಂದಾಗಿ ಮರೆತು ಅವನಲ್ಲಿ ಒಬ್ಬ ಒಳ್ಳೆಯ ಗಂಡನನ್ನು ಕಂಡುಕೊಂಡಿರುತ್ತಾಳೆ. ಪುರೋಳ ಅಣ್ಣ ಒಮ್ಮೆ ರಶೀದನ ಹೊಲಕ್ಕೆ ದ್ವೇಷದಿಂದ ಬೆಂಕಿ ಹಾಕಿದಾಗ ರಶೀದನ ಸಂಬಂಧಿಗಳು ಅವನ ಮೇಲೆ ಕಂಪ್ಲೇಂಟ್ ಮಾಡಲು ಹೇಳುತ್ತಾರೆ.”

read more
ಕೊರೋನಾ ಎಂಬ ಸಾವಿನ ರೂಪಕ: ಲಕ್ಷ್ಮಣ ವಿ.ಎ. ಅಂಕಣ

ಕೊರೋನಾ ಎಂಬ ಸಾವಿನ ರೂಪಕ: ಲಕ್ಷ್ಮಣ ವಿ.ಎ. ಅಂಕಣ

“ನ್ಯಾಷನಲ್ ಜಿಯೋಗ್ರಾಫಿಕ್ ಚ್ಯಾನೆಲ್ ನಲ್ಲಿ ಆಫ್ರಿಕಾದ ಮಸಾಯ್ ಮಾರಾ ಕಾಡಿನಲ್ಲಿ ಹಸಿದ ಹುಲಿಗಳು ಬೇಟೆಯಾಡುವುದನ್ನು ನೀವು ನೋಡಿರಬಹುದು. ಹುಲಿ ತನ್ನ ಬೇಟೆಯನ್ನು ಬಲು ಜಾಣ್ಮೆಯಿಂದ ಅಷ್ಟೇ ಎಚ್ಚರಿಕೆಯಿಂದ ಗುಂಪಿನಲ್ಲಿರುವ ಅತಿ ದುರ್ಬಲವಾದ ಪ್ರಾಣಿಯನ್ನೇ ಆಯ್ದುಕೊಂಡಿರುತ್ತದೆ. ಕಾರಣವಿಷ್ಟೇ ಹುಲಿಗೆ ಸುಲಭವಾಗಿ ಯಾವುದೇ ಪ್ರತಿರೋಧವಿಲ್ಲದೆ ತನ್ನ ಆಹಾರ ಸಂಪಾದಿಸಬೇಕೆನ್ನುವ ಇರಾದೆಯಷ್ಟೇ..”

read more
ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ

ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ

“ಈ ಎಲ್ಲಾ ಸಮಯದಲ್ಲೂ ನನಗೆ ಎದುರಿನ ಮನೆಯವರು ಕಾಣಲಿಲ್ಲ. ಈ ಸಮಯದಲ್ಲಿ ಕರ್ಫ್ಯೂ ವಿಧಿಸಿದ್ದರು. ಗಲಾಟೆ ಅದೆಷ್ಟು ಭಯಾನಕವಾಗಿತ್ತೆಂದರೆ ಬಿಬಿಸಿ ನ್ಯೂಸ್ ನಲ್ಲೂ ದಾವಣಗೆರೆಯ ಹೆಸರು ಬಂದಿತ್ತು. ಪೋಲೀಸರು “ಕಂಡಲ್ಲಿ ಗುಂಡು” ಅಂತ ರಸ್ತೆಯಲ್ಲಿ ಕೂಗುತ್ತಾ ತಿರುಗಾಡುತ್ತಿದ್ದರು. ನಾಯಿಗಳು ಪೋಲೀಸರ ಹಿಂದೆ ಬಿದ್ದು ಬೊಗಳುತ್ತಿದ್ದವು. ಅವರು ನಾಯಿಗಳನ್ನು “ಹಚಾ.. ಹಚಾ…” ಅಂತ ಓಡಿಸುತ್ತಿದ್ದುದು ಕೇಳಿಬರುತ್ತಿತ್ತು..”

read more
ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ