ಬಡತನದ ಘನತೆ ಮತ್ತು ದಯೆ ಧರ್ಮದ ಮೂಲ:ಶ್ರೀಹರ್ಷ ಸಾಲಿಮಠ ಅಂಕಣ
“ಬಡತನ ಎನ್ನುವುದೊಂದೇ ದೊಡ್ಡ ಅಡ್ಡಗಾಲಲ್ಲ. ಅತಿ ದೊಡ್ಡ ತೊಡರುಗಾಲಿರುವುದು ಮನುಷ್ಯನ ಘನತೆಯದ್ದು! ಇಂಡಿಯಾದಂತಹ ದೇಶಗಳಲ್ಲಿ ಆರ್ಥಿಕವಾಗಿ ಒಂದೇ ದಾರ್ಢ್ಯವಿದ್ದರೂ ಸಾಮಾಜಿಕವಾಗಿ ಅಂತಸ್ತು ಬೇರೆ. ಅವು ವೃತ್ತಿಯಾಧಾರಿತವಾಗಿರಬಹುದು, ಜಾತಿಯಾಧಾರಿತವಾಗಿರಬಹುದು, ಧರ್ಮಾಧಾರಿತವಾಗಿರಬಹುದು…. ಆಸ್ಟ್ರೇಲಿಯದಂತಹ ದೇಶಗಳಲ್ಲಿ ಆರ್ಥಿಕವಾಗಿ ಮೇಲು ಕೆಳಗುಗಳಿದ್ದರೂ ಸಾಮಾಜಿಕ ಅಂತಸ್ತು ಒಂದೇ…”
ಶ್ರೀಸಾಮಾನ್ಯರ ಹಸಿರು ಕ್ರಾಂತಿ ಕಥೆಗಳು: ವಿನತೆ ಶರ್ಮಾ ಅಂಕಣ
“ಆಕೆಯ ಮನೆಯಂಗಳದ ಕೈತೋಟದಲ್ಲಿದ್ದ ಗಿಡಮರಗಳು, ಸುಮಾರು ಹದಿನೈದು ಗೊಬ್ಬರ ಡಬ್ಬಗಳು, ಬಕೆಟ್ಟುಗಳು, ಮೂರು ಗೊಬ್ಬರ ಹುಳುಗಳ ಕೇಂದ್ರಗಳು, ಒಂದು ದೊಡ್ಡ ಇಡೀ ಬಾತ್ ಟಬ್ಬನ್ನು ಗೊಬ್ಬರ ಹುಳು ಸಾಕಾಣಿಕೆ ಕೇಂದ್ರವನ್ನಾಗಿರಿಸಿದ ಪ್ರಯತ್ನ, ಮೂಲೆಯಲ್ಲಿದ್ದ ಕೋಳಿಸಾಕಾಣಿಕೆ ಕೇಂದ್ರ ಎಲ್ಲವನ್ನೂ ನೋಡಿ ಅಬ್ಬಾಬ್ಬಾ ಎಂದೆ. ನನ್ನನ್ನು ಬೆರಗಾಗಿಸಿದ ವಿಷಯವೆಂದರೆ ಆಕೆಯ ಈ ಎಲ್ಲಾ ಪ್ರಯತ್ನಗಳಲ್ಲಿ ತೊಂಭತ್ತು ಭಾಗಕ್ಕೆ ಯಾವುದೇ ಹಣ ಹೂಡಿಕೆಯಿಲ್ಲದಿದ್ದದ್ದು….”
ಸಾಮಾನ್ಯಮೇ ಬಗೆಯೆ ಭವತ್ ಕೇಶಪಾಶ ಪ್ರಪಂಚಂ: ಆರ್. ದಿಲೀಪ್ ಕುಮಾರ್ ಅಂಕಣ
“ಹೀಗೆ ಮಾಡಿದ ಪ್ರತಿಜ್ಞೆಯನ್ನ ಕೊನೆಗಾಣಿಸಿ ಯುದ್ಧರಂಗದಲ್ಲಿ ಅವನಾಡುವ ಮಾತು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ದುಶ್ಯಾಸನನನ್ನು ಕೊಂದು ಅವಳ ಮುಡಿಯನ್ನು ಕಟ್ಟುವುದು, ಕಟ್ಟಿ ನೋಡಿ ನಗುವುದು ಇಲ್ಲಿನ ಬಹು ಮುಖ್ಯವಾದ ಭಾಗ. ಆ ಪದ್ಯವಂತೂ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಬಹು ಚರ್ಚಿತವಾಗಿದೆ. ಪಂಪನೇ ದ್ರೌಪತಿಯನ್ನು ಕಾರ್ಯ ಕಾರಣದ ಮೂಲ ಅಂಶವಾಗಿ ನಿಲ್ಲಿಸಿ ನೋಡಿರುವುದಕ್ಕೆ ಈ ಪದ್ಯ ಸಾಕ್ಷಿಯಾಗಿದೆ…”
ಶಹರದ ಗೋಡೆಗಳ ಕೆಡವುದು ಹೇಗೆ?: ರೂಪಶ್ರೀ ಕಲ್ಲಿಗನೂರ್ ಅಂಕಣ
“ಅವೆಲ್ಲ ಅಮ್ಮ ಬೆಳೆಸಿದ ಹೂಗಳು. ಮನೆಯ ಮುಂದೆ ಹೂ ಬೆಳೆಸಲು ಜಾಗವೂ ಇಲ್ಲ, ಹಿಡಿ ಮಣ್ಣೂ ಇಲ್ಲ. ಹಾಗಂತ ಅಮ್ಮ ಸುಮ್ಮನಿರೋಲ್ಲ. ಬೇರೆಯವರ ಟೆರೆಸ್ಸಿನ ಮೇಲೇ, ತನ್ನ ಗಾರ್ಡನ್ನನ್ನು ಬೆಳೆಸುತ್ತಿದ್ದಾರೆ. ಮನೆಯಹಾಗೆ ಇಷ್ಟಗಲ ಮೊಗವರಳಿಸಿಕೊಂಡು ನಿಲ್ಲುವ ಒಂದೊಂದೂ ಹೂಗಳನ್ನ ಅವಳು ಪ್ರೀತಿಯಿಂದ ನೋಡ್ತಾರೆ. ಮನೆಗೆ ಹೋದವರ ಮುಂದೆಲ್ಲ ಅದರ ಅಂದಚಂದದ ಗುಣಗಾನ ಮಾಡ್ತಾ, ಅಕಸ್ಮಾತ್ ಯಾರಾದ್ರೂ ಹೇಳದೇ ಕೇಳದೇ ಹೂಗಳನ್ನ ಕಿತ್ತುಬಿಟ್ರೆ ಮುಗೀತು…”
ಕಚ್ಚಾ ಹಾಳೆಯಂತಹ ನನ್ನ ಊರು: ಲಕ್ಷ್ಮಣ ವಿ.ಎ. ಅಂಕಣ
“ಉತ್ತರ ದಿಕ್ಕಿನ ಅಂಗಳದ ಎಡಭಾಗದಲ್ಲಿ ಎರಡು ಹಿಂಡುವ ಎಮ್ಮೆ ಮತ್ತು ಇನ್ನೊಂದು ವಯಸ್ಸಾದ ಮುರುಕುಕೋಡಿನ ಗೊಡ್ಡೆಮ್ಮೆ. ದಕ್ಷಿಣದ ಬಾಗಿಲಿನ ಹಿತ್ತಲಿನಲ್ಲಿ ಜೋಳದ ದಂಟಿನಿಂದ ಮರೆಮಾಚಿದ ಸ್ನಾನಕ್ಕೆಂದು ಮರೆಮಾಡಿದ ಎರಡಗಲದ ಒಂದು ಜಾಗ, ಸ್ನಾನದ ನೀರು ಹೋಗಿ ಇಂಗುವಲ್ಲಿ ತಿಪ್ಪೆ, ಆ ತಿಪ್ಪೆಯಲ್ಲಿ ಎಮ್ಮೆ ಆಡುಗಳ ಯಥೇಚ್ಛ ಗೊಬ್ಬರ ಇಂತಹ ಊರಿನಲ್ಲಿ ಬಹುಬೇಗ ಬೆಳೆಯುವಂತವು ಒಂದು ತಿಪ್ಪೆಗಳು ಮತ್ತು ಇನ್ನೊಂದು ಮೈ ನೆರೆದ ಹುಡುಗಿಯರು…”
ಕಪ್ಪೆಚಿಪ್ಪಿನೊಳಗೆ ಮುತ್ತಾದ ಸೋನೆಮಳೆ…: ಆಶಾ ಜಗದೀಶ್ ಅಂಕಣ
“ಇದ್ದಕ್ಕಿದ್ದಂತೆ ಅವನೆದುರು ಮತ್ತೊಂದು ಹುಡುಗ ಧುತ್ತೆಂದು ಪ್ರತ್ಯಕ್ಷನಾಗುತ್ತಾನೆ. ಅವನ ಕೈಲಿ ಅರಳಿದ ಛತ್ರಿಯಿದೆ. ಆದರವನು ಇವನ ಅಪ್ಪನಿಗೆ ಆಗದವರ ಮಗ. ಇವನು ಇನ್ನೇನು ಸುಮ್ಮನೇ ಅವನನ್ನು ಹಾದು ಹೋಗಬೇಕು… ಅಷ್ಟರೊಳಗೆ ಅವನು ಇವನ ಬಳಿ ಬರುತ್ತಾನೆ. ಇಬ್ಬರೂ ಒಂದೇ ಛತ್ರಿಯಡಿ ನಡೆಯತೊಡಗುತ್ತಾರೆ. ಇಬ್ಬರ ನಡುವೆಯೂ ಮಾತೊಂದಿಲ್ಲ. ಮಳೆ ಸುರಿಯುತ್ತಲೇ ಇದೆ. ನಾಯಿ ಮರಿಗೆ ಒರಗಿಸಿಕೊಳ್ಳುವ ಎದೆ ಸಿಕ್ಕ ಸಂಭ್ರಮ…”
ರೇಖಕ್ಕ ಕಲಿಸಿದ ಮಗ್ಗಿಯ ಲೆಕ್ಕ: ಶ್ರೀಹರ್ಷ ಸಾಲಿಮಠ ಅಂಕಣ
“ನನ್ನ ಮಗ್ಗಿಯ ಪಾಠ ಇಪ್ಪತ್ನಾಲ್ಕನ್ನೂ ಮುಟ್ಟಲಿಲ್ಲ! ಅದೆಷ್ಟು ತಿಂಗಳು ಹೀಗೆ ಆಕೆಯ ಹಿಂಬಾಲಿಸಿ ಕಳೆದಿದ್ದೆನೋ ನನಗೆ ನೆನಪಿಲ್ಲ. ಆದರೆ ನಾವು ಮನೆ ಬದಲಿಸಲಾಗಿ ಮತ್ತೆಂದೂ ರೇಖಿಯ ಭೇಟಿಯಾಗಲಿಲ್ಲ. ಈಗಲೂ ಒಮ್ಮೊಮ್ಮೆ ರೇಖಿಯಂತಹ ಪ್ರತಿಭಾವಂತೆಯ ಬಳಿ ಪಾಠ ಹೇಳಿಸಿಕೊಂಡಿದ್ದಕ್ಕೆ ಆಗಾಗ ಹೆಮ್ಮೆಯೆನಿಸುತ್ತದೆ. ಆಗ ಆಕೆ ಬದುಕಿದ್ದ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಲೆಕ್ಕ ಹಾಕಿದರೆ ಬಹುಷಃ ಹೆಚ್ಚು ಓದಿ ಕಡಿದು ಗುಡ್ಡೆ ಹಾಕಿರಲಿಕ್ಕೆ ಆಕೆಯ ಮನೆಯವರು ಬಿಟ್ಟಿರಲಿಕ್ಕಿಲ್ಲ.”
ಹೊರಾಂಗಣ ಕಲಿಕೆ ಮತ್ತು ಹೆಣ್ಣಿನ ಒಳದನಿ: ವಿನತೆ ಶರ್ಮಾ ಅಂಕಣ
“ಕೇವಲ ಹೊರಾಂಗಣ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದಲೇ ಅದೆಷ್ಟೋ ಹೆಂಗಸರ ಗಂಡು ಜೀವನಸಂಗಾತಿಗಳು ಅವರನ್ನು ಬಿಟ್ಟುಹೋದದ್ದಿದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳಿಗೆ ಧೈರ್ಯವನ್ನು ತುಂಬಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ ಕಥೆಗಳಿವೆ. ತಮ್ಮ ಖಾಸಗಿ ಜೀವನದಲ್ಲಿನ ತಮ್ಮ ಸ್ವಲಿಂಗ ಸಂಬಂಧ ಆಯ್ಕೆಯಿಂದಾಗಿ ಕೆಲವರು ಕೆಲಸದ ಸ್ಥಳದಲ್ಲಿ ತಾರತಮ್ಯಕ್ಕೊಳಗಾಗಿ, ಬೆರಳು ತೋರಿಸುವ ಮಂದಿಯ ಕೈಯಲ್ಲಿ ಅನಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಅದೆಷ್ಟು ನರಳಿದ್ದಾರೆ…”
ಅಲರ್ಗಣ್ಣೊಳ್ ಸ್ಮರಂ ಇರ್ದನಕ್ಕುಂ: ಆರ್.ದಿಲೀಪ್ ಕುಮಾರ್ ಅಂಕಣ
“ದ್ರೌಪತಿಯನ್ನು, ಸುಭದ್ರೆಯನ್ನು, ಹಿಡಿಂಬೆಯೊಂದಿಗೆ ಭೀಮನ ಸಂಬಂಧವನ್ನು ವರ್ಣಿಸುವಾಗ ಇದ್ದ ಒಂದು ಮಿತಿ ಇಲ್ಲಿ ಮೀರಿದೆ. ಕಾವ್ಯ ಸಂವಿಧಾನ ಮತ್ತು ಕಾವ್ಯದ ಬಂಧ ಅದನ್ನು ಒಪ್ಪುತ್ತದೆ. ಸುಭದ್ರೆಯನ್ನು ನೋಡಿದ ತಾಪ ಪರಿಹಾರಕ್ಕೆ ಅಂದಿನ ರಾತ್ರಿಯೇ ಅರ್ಜುನ ಊರು ಸುತ್ತುವುದು ಇಲ್ಲಿನ ಮುಖ್ಯ ಭಾಗ. ಆದರೆ ಹೋಗುವಾಗ ಅವನಿಗಷ್ಟೇ ಕಾಣುವ ವೇಶ್ಯೆಯರನ್ನು ತೋರಿಸದೆ ಓದುಗರಿಗೂ ಕಾಣಿಸುವಂತೆ ಮಾಡುವುದನ್ನು ನೋಡಿ ಪಂಪನ ರಸಿಕತೆಗೆ…”









