Advertisement

ಅಂಕಣ

ಏನೊಂದೂ ಅರಿವಾಗದ ಅಯೋಮಯತೆಯಲ್ಲಿ: ಆಶಾ ಜಗದೀಶ್ ಅಂಕಣ

ಏನೊಂದೂ ಅರಿವಾಗದ ಅಯೋಮಯತೆಯಲ್ಲಿ: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಮನೆಯ, ಇರುವ ಪರಿಸರದ ಸೌಂದರ್ಯವನ್ನು ಹೆಚ್ಚಿಸುವ ರೀತಿಯಲ್ಲೇ ತನ್ನಿರುವಿಕೆಯಿಂದಲೇ ಆ ಪರಿಸರಕ್ಕೊಂದು ಸೌಂದರ್ಯ ದಕ್ಕುವಂತೆ ಮಾಡಬಲ್ಲವಳು. ಅದೇ ವೇಳೆ ತನ್ನ ಒಳಗಿನಲ್ಲೂ ಸೌಂದರ್ಯದ ಚಿಲುಮೆ ಬತ್ತದಿರುವಂತೆ ಕಾಪಿಟ್ಟುಕೊಳ್ಳಬಲ್ಲವಳು. ಇದೊಂದು ಮಾತು, ಯಾರಿಗಾದರೂ ಗೊತ್ತಿರಬಹುದು… ಗಂಡು ಕಟ್ಟಡವನ್ನು ಕಟ್ಟುತ್ತಾನೆ, ಹೆಣ್ಣು ಅದನ್ನು ಮನೆಯನ್ನಾಗಿ ಮಾಡುತ್ತಾಳೆ ಎಂದು.”

read more
ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”

read more
ಶಾಂತಿ ಮರದ ಬಳಿ ಜಂಗಮ ಮುಳ್ಳು ಪೊದೆ: ಮುನವ್ವರ್ ಜೋಗಿಬೆಟ್ಟು ಅಂಕಣ

ಶಾಂತಿ ಮರದ ಬಳಿ ಜಂಗಮ ಮುಳ್ಳು ಪೊದೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ನಾನು ಅಗರಿನ ಕಡೆಗೆ ತಿರುಗಿದ್ದೆ. ಇನ್ನೇನು ಹೆಜ್ಜೆ ಇಡಬೇಕೆನ್ನುವಷ್ಟರಲ್ಲಿ ಎದುರಿಗೆ ಚಲಿಸುವ ಮುಳ್ಳು ಪೊದೆ. ಹೆದರಿ ನಾನು ಹಿಂದೆ ಹೆಜ್ಜೆ ಇಡುವ ತುರಾತುರಿಯಲ್ಲಿ ಒಣ ಕಟ್ಟಿಗೆ ತುಂಡೊಂದು ಕಾಲಿಗೆ ಸಿಕ್ಕಿ ಲಟ್ಟೆಂದು ಮುರಿಯಿತು. ಸದ್ದು ಕೇಳಿದೊಡನೆ ಆ ಮುಳ್ಳು ಪೊದೆಯತ್ತ ಓಡುತ್ತಾ ಕಾಡಿನೊಳಗೆ ಅಂತರ್ಧಾನವಾಯಿತು. ಸುಮಾರು ಹೊತ್ತು ಹಾಗೆಯೇ ಕಲ್ಲಾಗಿ ನಿಂತೆ. ಮುಂದೆ ಹೋಗಲೂ ಹೆದರಿಕೆ…”

read more
ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

read more
ಯುವ ವಿಜ್ಞಾನಿಗಳ ಕತೆಗಳು:  ಡಾ.ಲಕ್ಷ್ಮಣ ವಿ.ಎ ಅಂಕಣ

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

read more
ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”

read more
ವ್ಯವಸ್ಥೆಯನ್ನೊಮ್ಮೆ ರೀಬೂಟ್ ಮಾಡಬಹುದೆ?: ಮಧುಸೂದನ್ ವೈ.ಎನ್ ಅಂಕಣ

ವ್ಯವಸ್ಥೆಯನ್ನೊಮ್ಮೆ ರೀಬೂಟ್ ಮಾಡಬಹುದೆ?: ಮಧುಸೂದನ್ ವೈ.ಎನ್ ಅಂಕಣ

“ಒಂದು ಮೊಬೈಲೋ ಲ್ಯಾಪ್ ಟಾಪೋ ಆದರೆ ರೀಬೂಟ್ ಮಾಡಿ ಸರಿಮಾಡಿಕೊಳ್ಳುವುದು ಸುಲಭ. ಅದೇ ಒಂದು ಸೈನ್ಯದ, ಸ್ಪೇಸ್ ಸ್ಟೇಷನ್ನಿನ, ಅಥವಾ ಪೇಮೆಂಟ್ ಕಂಪನಿಯ ಸಿಸ್ಟಂಗಳನ್ನು ರೀಬೂಟ್ ಮಾಡಬೇಕೆಂದರೆ ತೆರಬೇಕಾದ ಬೆಲೆ ದುಬಾರಿ! ಆ ಕ್ಷಣವನ್ನೆ ಹೊಂಚು ಹಾಕಿ ವೈರಿ ಕ್ಷಿಪಣಿ ಹಾರಿಸಬಹುದು, ಬಹುಮುಖ್ಯ ಆಸ್ಟರಾಯ್ಡ್ ಕಣ್ತಪ್ಪಿಸಿಕೊಳ್ಳಬಹುದು…”

read more
ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

“ಬೆಂಕಿ ಬಂದಾಗ ಮನೆ ತೊರೆಯುವುದಿಲ್ಲ, ಸತ್ತರೆ ಇಲ್ಲೇ ಎನ್ನುತ್ತಾ ಹಠಹಿಡಿದು ಕುರ್ಚಿ ಹಾಕಿಕೊಂಡು ಮನೆಮುಂದೆ ಕುಳಿತು ಬೆಂದುಹೋದ ಪತ್ನಿಯ ಬಗ್ಗೆ ರೋಧಿಸುತ್ತಿದ್ದ ವೃದ್ಧ, ತನ್ನ ಪುಟ್ಟ ನಾಯಿಯನ್ನ ಕಳೆದುಕೊಂಡ ಬಾಲಕಿಯ ಆಕ್ರಂದನ, ಮನೆ, ಆಸ್ತಿಪಾಸ್ತಿ, ಕುದುರೆಗಳನ್ನು ಕಳೆದುಕೊಂಡ ನಿರ್ಗತಿಕರಾದ ಆರು ಜನರಿದ್ದ ಕುಟುಂಬ, ಪ್ರವಾಹ ಬಂದಾಗ ತನ್ನ ಕಾರಿನ ಮೇಲೇರಿ ನಿಂತು ಫೋಟೋ ಹಿಡಿಯುತ್ತಾ ರೋಮಾಂಚಿತನಾದ ಯುವಕ, ಬೇರೆ ದೇಶದಿಂದ ಬಂದು ಇಲ್ಲಿ ಬದುಕುತ್ತಾ ಬಾಳುತ್ತಿದ್ದರೂ ಕೂಡ ನೆರೆ ಬಂದಾಗ ಸಹಾಯ ಮಾಡದೆ….”

read more
ತೊರೆದು ಜೀವಿಸಬಹುದೇ ನಿಮ್ಮ ಚರಣಗಳ: ಕೃಷ್ಣ ದೇವಾಂಗಮಠ ಅಂಕಣ

ತೊರೆದು ಜೀವಿಸಬಹುದೇ ನಿಮ್ಮ ಚರಣಗಳ: ಕೃಷ್ಣ ದೇವಾಂಗಮಠ ಅಂಕಣ

“ದೇಹವೇ ಮಣ್ಣು ಹಾಗಾಗಿಯೇ ಮಣ್ಣಿಂದ ಕಾಯ ಮಣ್ಣಿಂದ ಅಂತ ದಾಸರು ಹಾಡಿದ್ದು. ಅಕ್ಕಿ ಬೆಂದು ಹೇಗೆ ತನ್ನ ರೂಪ ಬದಲಿಸುತ್ತದೋ ಹಾಗೆಯೇ ಅನ್ನ ದೇಹವಾಗಿ ಮಾರ್ಪಾಡಾಗುತ್ತದೆ ಅದೇ ಪೃಥ್ವೀ ತತ್ವ. ಇನ್ನು ನಮ್ಮೊಳಗಿರುವ ನೀರು, ಹೊರಬರುವ ಮೂತ್ರ, ವೀರ್ಯ ಎಲ್ಲವೂ ಜಲ ಸ್ವರೂಪವೇ ಆಗಿದ್ದು ಅದನ್ನೇ ಜಲತತ್ವ ಅಂತಾರೆ. ಅಗ್ನಿಯಿಲ್ಲದೆ ನಾವು ತಿಂದ ಅನ್ನ ಹೊಟ್ಟೆಯಲ್ಲಿ ಅರಗುವುದಿಲ್ಲ. ನಮ್ಮೊಳಗಿನ ಜಠರಾಗ್ನಿಯೇ ತಿಂದದ್ದನ್ನು ಕರಗಿಸುವುದು. ಅದೇ ಅಗ್ನಿ ತತ್ವ. “

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ