Advertisement
ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

ಎದೆ ಬೀದಿಯ ಸಾಲುಗಳು….

ನಕ್ಷತ್ರಗಳ ತುಂಬು
ಸಂಸಾರದಲ್ಲಿ ಚಂದ್ರ
ಅನಾಥ ಮಗು

ಒಲವ ಕುಡಿಸಿದರು
ಹೃದಯದ ಬಿಕ್ಕಳಿಕೆ
ನಿಂತಿಲ್ಲ, ಬಹುಷಃ
ವಿರಹ ಕಾಡಿರಬೇಕು

ಈಗೀಗ ನಾನು
ಕವಿತೆಗಳೊಂದಿಗೆ ಜೀವಿಸುತ್ತಿದ್ದೇನೆ
ನೀನು ದುಃಖಿಸುವ ಅವಶ್ಯಕತೆಯಿಲ್ಲ

ನಿನ್ನ ನೆನಪುಗಳು ಹೂವಿನಷ್ಟು ಹಗುರವಿರಬಾರದಿತ್ತೆ
ಎದೆ ಭಾರವಾಗುವುದು
ತಪ್ಪುತ್ತಿತ್ತು

ನಿನ್ನ ಉಸಿರು ತಾಕಿದ ಗಾಳಿ ನನ್ನ ಮನೆ ಮುಂದೆ ಹಾದು ಹೋಗಲಿ
ಅದರ
ಸ್ವಾಗತಕ್ಕೆಂದೆ ನಾನು ಹೀಗೆ ಕಾದು ಕುಳಿತಿರುವೆ

ನಿನ್ನ ದಾರಿಗೆ ಬೆಳಕ ಚೆಲ್ಲಿದ್ದೇನೆ
ಈಗ
ಕತ್ತಲಿನ ಭಯವಿಲ್ಲ
ನನಗೆ

ನಿನ್ನ ನೆನಪಿನ
ಬೆಳಕಲಿ ಕಳೆದುಕೊಂಡ ಖುಷಿಯ
ಹುಡುಕುತ್ತಿದ್ದೇನೆ

ನೀನು
ಬಿಟ್ಟು ಹೋಗಿದ್ದು
ಎದೆ ತುಂಬ ನೋವು
ತುಟಿ ಮೇಲೆ ಮೌನ

ಎಷ್ಟು ತಾರೆಗಳು ಒಂದು ಮುಗಿಲಿಗೆ
ಅದೆಷ್ಟು ನೋವು ಒಮ್ಮೆ ಸೋತ ಪ್ರೀತಿಗೆ

ಗಾಳಿ ಬರೀ
ಬೀಸಿದರೆ ಪರವಾಗಿಲ್ಲ
ನಿನ್ನ ನೆನಪು
ಹೊತ್ತು ತರದಿದ್ದರೆ
ಸಾಕು

ಸಂಪೂರ್ಣ ಮರೆತು ಬಿಡಬೇಕು ಎಂದಾಗಲೆಲ್ಲ
ನೆನಪುಗಳು
ಎದೆ ಬೀದಿಗಿಳಿದು
ಪ್ರತಿಭಟನೆಗೆ ನಿಲ್ಲುತ್ತವೆ….

ಬಿದ್ದ ಹೂಗಳನ್ನು
ಆಯಬಲ್ಲೆ ನೀನು
ಒಡೆದು ಬಿದ್ದ ಹೃದಯದ
ಪಕಳೆಗಳ


ಚಳಿಗಾಲದ ಸಂಜೆ
ವಿರಹದ ‘ಕಿಡಿ’ಗಳು
ಧಗ್ಗನೆ ಹೊತ್ತಿಕೊಳ್ಳುತ್ತವೆ
ನಾನು
ಕವಿತೆ
ಬರೆದು ತಣ್ಣಗಾಗುತ್ತೇನೆ

ಅಭಿಷೇಕ್ ಬಳೆ ರಾಯಚೂರು ಜಿಲ್ಲೆಯ ಮಸರಕಲ್ ಊರಿನವರು.
ಬಿ.ಎಸ್ಸಿ, ಬಿ.ಎಡ್ ವ್ಯಾಸಂಗ ಮಾಡಿದ್ದಾರೆ
ಓದು ಮತ್ತು ಕವಿತೆ ರಚನೆ ಇವರ ಹವ್ಯಾಸಗಳು

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *


ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ