Advertisement
ದೇವರಾಜ್ ಹುಣಸಿಕಟ್ಟಿ ಬರೆದ ಗಜಲ್

ದೇವರಾಜ್ ಹುಣಸಿಕಟ್ಟಿ ಬರೆದ ಗಜಲ್

ಸಂಕಟವನ್ನೇ ಬಸಿಯುವುದಿದೆ ಬದುಕಿನ ತುಂಬಾ…
ಸಂತಸವನ್ನೇ ಹೊಸೆಯುವುದಿದೆ ಬದುಕಿನ ತುಂಬಾ..

ಎಷ್ಟು ಕಳೆದು ಕೂಡಿದರೂ ಮುಗಿಯದು ಈ ಲೆಕ್ಕ
ಆದಷ್ಟು ಇಷ್ಟವನ್ನೇ ಹತ್ತಿಕ್ಕುವುದಿದೆ ಬದುಕಿನ ತುಂಬಾ

ಲೋಕದ ಅಳಲಿನ ಮುಂದೆ ನಮ್ಮದೆಂಥ ದುಃಖ..
ಇಷ್ಟಿಷ್ಟೇ ತಾಳ್ಮೆಯನ್ನೆ ಗುಣಿಸುವುದಿದೆ ಬದುಕಿನ ತುಂಬಾ

ಅಂಬೆಗಾಲಿಡುತ್ತಲೇ ಬರುತ್ತದೆ ಅಷ್ಟಷ್ಟೇ ನೋವು
ತುಸು ನಷ್ಟವನ್ನೇ ಹೊರುವುದಿದೆ ಬದುಕಿನ ತುಂಬಾ…

“ದೇವ “ನಿಚ್ಛೆ ಮೀರಿ ಏನಾದರೂ ನಡೆಯುವುದುಂಟೆ ಗೆಳೆಯಾ
ಹುಸಿ ನಗೆಯನ್ನೇ ಚಿಮ್ಮಿಸುವುದಿದೆ ಬದುಕಿನ ತುಂಬಾ

ದೇವರಾಜ್‌ ಹುಣಸಿಕಟ್ಟಿ ರಾಣೇಬೆನ್ನೂರಿನವರು
ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಬಿಡಿ ಚಿತ್ರಗಳು ಮತ್ತು ಇತರ ಕವಿತೆಗಳು ಇವರ ಪ್ರಕಟಿತ ಕೃತಿ
ಕವಿತೆಯ ಓದು, ಬರೆಯುವುದು ಇವರ ಹವ್ಯಾಸ

 

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *


ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ