Advertisement

ಪುಸ್ತಕ ಸಂಪಿಗೆ

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

read more
ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

read more
ಯಾವ ಭಾಷೆಯಲ್ಲೂ “ಎಲ್ಲವೂ” ಇರುವುದಿಲ್ಲ: ಡಾ. ಎಚ್.ಎಸ್.‌ ಸತ್ಯನಾರಾಯಣ ಬರಹ

ಯಾವ ಭಾಷೆಯಲ್ಲೂ “ಎಲ್ಲವೂ” ಇರುವುದಿಲ್ಲ: ಡಾ. ಎಚ್.ಎಸ್.‌ ಸತ್ಯನಾರಾಯಣ ಬರಹ

“ನೀನು ಇಂಗ್ಲಿಷನ್ನು ಕನ್ನಡ ಭಾಷೆಯ ಅಕ್ಷರ ಸಂಯೋಜನೆ ಜೊತೆ ಹೋಲಿಸಿ ಬರೆಯಬೇಡ. ನೀನು ಇಂಗ್ಲಿಷನ್ನು ಚೆನ್ನಾಗಿ ಕಲಿಯಬೇಕಾಗಿರುವುದು ನಿನ್ನ ಅಗತ್ಯಕ್ಕಾಗೇ ಹೊರತು ಇಂಗ್ಲಿಷಿನವರ ಅಗತ್ಯಕ್ಕಾಗಿ ಅಲ್ಲ. ನಿನಗೆ ಅದರಲ್ಲಿರುವ ಪ್ರಪಂಚದ ಜ್ಞಾನವೆಲ್ಲಾ ಬೇಕಾದರೆ ಈ ಸಬೂಬುಗಳನ್ನೆಲ್ಲಾ ಬಿಟ್ಟು ಕಷ್ಟಪಟ್ಟು ಕಲಿ‌ ಅದು ಬಿಟ್ಟು ಕನ್ನಡದಲ್ಲೇ ಎಲ್ಲಾ ಇದೆ ಎಂದು ತಿಳಿದು ಕೂಪಮಂಡೂಕ ಆಗಬೇಡ.”
ಡಾ. ಎಚ್.ಎಸ್.‌ ಸತ್ಯನಾರಾಯಣ ಅವರ “ತೇಜಸ್ವಿ ಪ್ರಸಂಗಗಳು” ಕೃತಿಯ ಕೆಲವು ಪ್ರಸಂಗಗಳು ನಿಮ್ಮ ಓದಿಗೆ

read more
ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

read more
ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ

read more
ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು

read more
ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

read more
ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

read more
ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಮೈಸೂರಿನ ರಘುಪತಿ ತಾಮ್ಹನ್‌ಕರ್ ಅವರ ಮೊದಲ ಕೃತಿ ‘ನೋಟಿನ ನಂಟು’ ಇದೇ ಭಾನುವಾರ ಅಂದರೆ ಜುಲೈ 7ರಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆಯಲ್ಲಿ ಬಿಡುಗಡೆಯಾಗಲಿದೆ. ಗಣೇಶ ಅಮೀನಗಡ ಅವರು ತಮ್ಮ ಕವಿತಾ ಪ್ರಕಾಶನದ ಮೂಲಕ ಇದನ್ನು ಪ್ರಕಟಿಸಿದ್ದಾರೆ. ಎಪ್ಪತ್ತು ವರ್ಷದ ರಘುಪತಿ ಅವರು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್. ಅವರು ತಮ್ಮ ಅನುಭವಗಳನ್ನು ಕಟ್ಟಿಕೊಟ್ಟ ಕೃತಿಯ ಒಂದು ಅಧ್ಯಾಯ ನಿಮ್ಮ ಓದಿಗಾಗಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ