Advertisement

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ…. ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು ಹಿಡಿದುಕೊಂಡು ಇನ್ನೆಲ್ಲಿಗೋ ನಡೆದು ಹೋಗುವಂತಹ ವಿಪರ್ಯಾಸಗಳು ಹಳ್ಳಿಯಲ್ಲಿ ಮಾತ್ರವೇ ನಡೆಯುತ್ತಿತ್ತು. ಇದು ಹಳ್ಳಿ ಬದುಕಿನ ನೋವಿನ ಚಿತ್ರಣ. ಕಥೆಗಾರರ ಬಾಲ್ಯವೇ ಇಲ್ಲಿನ ಕಥೆಗಳಿಗೆ ಸ್ಪೂರ್ತಿ, ಪ್ರೇರಣೆ ಕೊಟ್ಟಿರಲೂಬಹುದು. ಏಕೆಂದರೆ ಹಳ್ಳಿಯ ಬಾಲ್ಯವೆಂಬುದು ಅನುಭವಗಳನ್ನು ಮೊಗೆ ಮೊಗೆದು ಕೊಡುವ ತಾಣ.
ಮಲ್ಲಿಕಾರ್ಜುನ ತೂಲಹಳ್ಳಿ ಕಥಾ ಸಂಕಲನ “ಅಗಸ್ತ್ಯ ನಕ್ಷತ್ರ” ಕುರಿತು ಸಂಗೀತಾ ರವಿರಾಜ್‌ ಚೆಂಬು ಬರಹ

read more
ಎದೆಗೆ ಬಿದ್ದ ಕಲ್ಲು!: ಮಧು ವೈ.ಎನ್.‌ ಹೊಸ ಕಾದಂಬರಿಯ ಪುಟಗಳು

ಎದೆಗೆ ಬಿದ್ದ ಕಲ್ಲು!: ಮಧು ವೈ.ಎನ್.‌ ಹೊಸ ಕಾದಂಬರಿಯ ಪುಟಗಳು

ಅವತ್ತು ಎಗ್ಸಿಬಿಶನ್ ಇತ್ತು. ನಾವೆಲ್ಲ ಕ್ಲಾಸ್ ರೂಮಲ್ಲಿ ಮಾಡೆಲ್ ಜೋಡಿಸ್ಕೊಂಡು ನಿಂತಿದ್ವಿ. ನನ್ ಪಕ್ಕ ಹಾಸನದೋನು ಇದ್ದ. ಯೂಕಲಿಪ್ಟಸ್ ಆಯಿಲ್‌ನಿಂದ ಸೊಳ್ಳೆ ಓಡಿಸ್ತೀನಿ ಅನ್ನೊ ಪ್ರಾಜೆಕ್ಟ್ ಮಾಡ್ಕಂಡ್ ಬಂದಿದ್ದ. ಹೆದರಬೇಡಿ ಅಂಗಂದ್ರೆ ನೀಲಗಿರಿ ಎಣ್ಣೆ ಆಟೆಯಾ. ನಾನು ಇಂಗ್ಲೀಷಲ್ಲಿ ಏನೇನು ಒದರಬೇಕು ಅಂತ ಮನ್ಸಲ್ಲೆ ಮಗ್ ಹೊಡಿತಿದ್ದೆ. ಬರಂಗಿಲ್ವಲ್ಲ. ಆ ಕ್ಷಣಕ್ಕೆ ಒಳ್ಳೆ ಸಿನಿಮಾ ಸೀನ್ ತರಹ ಈ ಹುಡುಗಿ ಬಂದ್ ಬಿಡ್ತು. ಎಗ್ಸಿಬಿಶನ್ ಇದ್ದಾಗ ಸ್ಪೋರ್ಟ್ಸ್ ಇರಲ್ಲ. ಹಂಗಾಗಿ ನಾನು ಯುನಿಫಾರ್ಮಲ್ಲಿದ್ರೆ ಅದು ಟ್ರ್ಯಾಕ್ ಸೂಟಲ್ಲಿ ಮಿಂಚ್ತಾ ಇತ್ತು.
ಮಧು ವೈ.ಎನ್.‌ ಬರೆದ ಹೊಸ ಕಾದಂಬರಿ “ಕನಸೇ ಕಾಡುಮಲ್ಲಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

read more
ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

read more
‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

ಕಾವ್ಯ ಸೃಷ್ಠಿಯಲ್ಲಿ ಮಾಗುತ್ತ ಸಾಗುವುದೇ ಕವಿತೆ ಉತ್ತಮವಾಗುತ್ತ ಹೋಗುವುದರ ಲಕ್ಷಣ. ಅದು ಸಿದ್ಧಿಸಿದ್ದು ಇಲ್ಲಿಯೇ ನಮಗೆ ಸಂಕಲನದುದ್ದಕ್ಕೂ ತೋಚಿದಂತಾಗುತ್ತದೆ. ಬರೆದ ಕಾವ್ಯವೆಂಬ ಹೊರೆಯನ್ನು ಮೆಲ್ಲನೆ ಇಳಿಬಿಟ್ಟು ಹಗುರಾಗಿ, ಮತ್ತೆ ಹೊಚ್ಚ ಹೊಸ ಬಹುದೊಡ್ಡ ಹೊರೆ ಹೊತ್ತು ಮತ್ತೆ ಹಗುರಾಗುತ್ತಾರೆ ಎಂಬಂತೆ ನಮಗಿಲ್ಲಿ ಭಾಸವಾಗುತ್ತದೆ. ಪ್ರೇಮವೆನುದರ ಕುರಿತು ಹಲವು ರೀತಿಯ ಭಿನ್ನ ಭಿನ್ನ ವ್ಯಾಖ್ಯಾನಗಳು ನಮ್ಮನ್ನು ದಂಗುಬಡಿಸುತ್ತವೆ.
ನಂದಿನಿ ಹೆದ್ದುರ್ಗ ಕವನ ಸಂಕಲನ “ಒಂದು ಆದಿಮ ಪ್ರೇಮ” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

read more
ಆದಿವಾಸಿಗಳ ಜಗತ್ತು: ಸತೀಶ್‌ ತಿಪಟೂರು ಬರಹ

ಆದಿವಾಸಿಗಳ ಜಗತ್ತು: ಸತೀಶ್‌ ತಿಪಟೂರು ಬರಹ

ಇಲ್ಲಿ ನಮಗರಿವಿಲ್ಲದಂತೆ ರಂಗ ಕ್ರಿಯೆಯೊಂದು ಜರಗುತ್ತಿರುವುದನ್ನು ನಾನು ಗಮನಿಸಿದೆ. ಪ್ರತಿಯೊಂದು ತಂಡ ಅವರ ಕ್ರಿಯಾವಿಧಿ ಆಚರಣೆಗಳನ್ನು ತೋರುವಾಗ, ಕಥನಗಳನ್ನು ಹೇಳುವಾಗ, ನೃತ್ಯ ಪ್ರದರ್ಶಿಸುವಾಗ ಉಳಿದ ತಂಡದವರು ಪ್ರೇಕ್ಷಕರಾಗಿರುತ್ತಿದ್ದರು. ಇದನ್ನೆಲ್ಲ ಗಮನಿಸುತ್ತಿದ್ದ ನನಗೆ ಒಂದು ರೀತಿಯ ಕಳವಳ ಶುರುವಾಯಿತು. ಕಾಡಿನೊಳಗಿನ ಇವರ ಆಚರಣೆಯ, ಸಂಪ್ರದಾಯ, ಕ್ರಿಯಾವಿಧಿ, ನೃತ್ಯ ಸಂಭ್ರಮಗಳೆಲ್ಲವೂ ಹೊರಗೆ ನೋಡಲು ಕುತೂಹಲವೆನಿಸಿದರೂ ಶುಷ್ಕವೆನಿಸುತ್ತಿತ್ತು. ಸಂದರ್ಭಗಳಿಲ್ಲದೆ ವಾತಾವರಣವಿಲ್ಲದೆ ಭಾವನೆಗಳು ಅರಳುವುದಿಲ್ಲ. ಅನುಕರಿಸಿದರೂ ಅಣಕವೆಂಬಂತೆ ಕಾಣುತ್ತಿತ್ತು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

read more
‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

ನಾಟಕದ ಪ್ರಕ್ರಿಯೆಯಲ್ಲಿ ನಾಟಕಕಾರ, ನಿರ್ದೇಶಕ ಮುಂತಾದವರು ನಾಟಕವನ್ನು ಅವರವರ ದೃಷ್ಠಿಕೋನಗಳಲ್ಲಿ ಮಕ್ಕಳ ಮೂಲಕ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದರೆ, ಒಮ್ಮೊಮ್ಮೆ ಮಕ್ಕಳು ಅದನ್ನು ಮತ್ತೊಂದು ನೆಲೆಯಲ್ಲಿ ಕಾಣಿಸಿಬಿಡುತ್ತಾರೆ. ನಾಟಕವು ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯು ಅವರ ಮನಸುಗಳಲ್ಲಿ ಕತೆಗಳ ಬೀಜಗಳನ್ನು ಬಿತ್ತಿ ಅವರ ಕಲ್ಪನೆಗಳ ಕಾವಿನಲ್ಲಿ ಮೊಳೆಸಿ, ಬೆಳೆಸುತ್ತಾ ನಾಟಕವು ಅವರ ದೇಹ – ಧ್ವನಿಗಳನ್ನು ವ್ಯಾಪಿಸಿ ಆಕಾರ ಪಡೆದು ಅರಳಿಕೊಂಡತೆ ಆಗಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

read more
ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

read more
ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ನಾವು ತೋಟದ ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ಬಿರಬಿರನೆ ಹೆಜ್ಜೆ ಹಾಕುತ್ತಿದ್ದೆವು. ಮರಗಿಡಗಳ ನಡುವಿನ ಕಾಲು ಹಾದಿಯಲ್ಲಿ ಸ್ವಲ್ಪ ದೂರ ನಡೆದು ಪಂಪ್ ಹೌಸ್ ಬಳಿ ಅವರು ನಿಂತರು. ಮರಗಿಡಗಳ ನಡುವೆ ಏನೋ ಕಂಡಂತಾಗಿ ನಾನು ನಿಂತೆ. ನಿಧಾನವಾಗಿ ಹೆಜ್ಜೆಯಿಟ್ಟು ಮುಂದೆ ಸರಿದು ನೋಡಿದರೆ ಪ್ರಪಾತದಂತೆ ಆಳ, ಅಗಲ, ವಿಸ್ತಾರವಾದ ತುಂಗಾ ನದಿ. ಅಬ್ಬಾ! ರೋಮಾಂಚನವಾಯಿತು. ನಾವು ನದಿಯ ತಟದಲ್ಲಿ ನಿಂತಿದ್ದೆವು.
ರಂಗಕರ್ಮಿ ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಕೆಲವು ಅಧ್ಯಾಯಗಳು ಪ್ರತಿ ಶನಿವಾರ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟಗೊಳ್ಳಲಿವೆ

read more
ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

‘ಹೆಣ್ಣು’ ಇವರ ಕಥೆಗಳ ಕೇಂದ್ರವಾದರೂ ಆಕೆಯ ಸುತ್ತಲಿರುವ ಗಂಡಿನ ಮನೋಧರ್ಮವನ್ನೂ ಇವರು ಅಲಕ್ಷಿಸಿಲ್ಲ. ಮನುಷ್ಯಪ್ರಜ್ಞೆ ಕಾಲದಿಂದ ಕಾಲಕ್ಕೆ ಜಿಗಿಯುವಲ್ಲಿ, ವಿಕಸಿಸುವಲ್ಲಿ, ಅರ್ಥಪೂರ್ಣತೆಯತ್ತ ತುಡಿಯುವಲ್ಲಿ ಎದುರಿಸಿ ನಿಲ್ಲಬೇಕಾದ ಬಿಕ್ಕಟ್ಟುಗಳನ್ನು ತಮ್ಮ ಕಥೆಗಳ ಮೂಲಕ ಶೋಧಿಸುವ ಸುಧಾ ಅವರ ಲೇಖನಿ ಬದುಕಿನ ಸಕಾರಾತ್ಮಕ ಗುಣಗಳತ್ತಲೇ ಹೆಚ್ಚಾಗಿ ವಾಲುವುದರಿಂದ ಇವರ ಪಾತ್ರಗಳು ಸಂಕಟಗಳ ನಡುವೆಯೂ ಜೀವನೋತ್ಸಾಹವನ್ನು ಉಳಿಸಿಕೊಂಡು ಪುಟಿಯುತ್ತವೆ.
ಸುಧಾ ಆಡುಕಳ ಅವರ “ನೀಲಿ ಮತ್ತು ಸೇಬು” ಕಥಾ ಸಂಕಲನಕ್ಕೆ ಡಾ. ಎಚ್. ಎಸ್. ಸತ್ಯನಾರಾಯಣ ಬರೆದ ಮುನ್ನುಡಿ

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ