Advertisement

ಪುಸ್ತಕ ಸಂಪಿಗೆ

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

read more
ಖಂಡವಿದೆಕೋ.. ಮಾಂಸವಿದೆಕೋ…: ಶ್ರೀಧರ ಪತ್ತಾರ ಬರಹ

ಖಂಡವಿದೆಕೋ.. ಮಾಂಸವಿದೆಕೋ…: ಶ್ರೀಧರ ಪತ್ತಾರ ಬರಹ

ಸಮಯ ಸರಿಯಾಗಿತ್ತು ಹಾಗಾಗಲಿಲ್ಲ. ಒಂದು ವೇಳೆ ನಾನು ಶಸ್ತ್ರಪ್ರಹಾರಕ್ಕೆ ಅಣಿಯಾದೆನೆಂದಿಟ್ಟುಕೊಳ್ಳಿ. ಅದುವರೆಗೂ ಕದಲದೇ ನಿಂತಿದ್ದ ನನ್ನ ಅನಿರೀಕ್ಷಿತ ದೇಹಚಲನೆ ಕಂಡು ಹುಲಿಗೆ ವಿಚಲಿತವಾದಂತೆನ್ನಿಸಿ ಅದು ಅಕ್ಷರಶಃ ಕೆರಳುತ್ತಿತ್ತು. ನಾನು ಗನ್ನು ಮೇಲಕ್ಕೆತ್ತಿ ಹೊಡೆಯಬೇಕೆಂದು ಹಂಚಿಕೆ ಹಾಕುವಾಗಲೇ ಅದು ಠಣ್ ಎಂದು ಒಂದೇ ನೆಗೆತಕ್ಕೆ ನಮ್ಮ ಮೇಲೆರಗಿ ಸಿಕ್ಕವರ ಕತ್ತು ಹಿಸುಕಿ ಕರುಳು ಬಗೆದಿರುತ್ತಿತ್ತು. ಕ್ಷಣಮಾತ್ರದಲ್ಲೇ ಈ ಅಚಾತುರ್ಯ ಸಂಭವಿಸುವ ಸಾಧ್ಯತೆಯಿತ್ತು. ನಾನು ಗನ್ನು ಚಲಾಯಿಸುವ ಗೋಜಿಗೆ ಹೋಗದಿದ್ದುದೆ ಸರಿಯಾಯ್ತು.
ಶ್ರೀಧರ ಪತ್ತಾರ ಅನುಭವ ಕಥನ “ಕಾಟಿಹಳ್ಳದ ತಿರುವು” ಕೃತಿಯ ಒಂದು ಬರಹ ನಿಮ್ಮ ಓದಿಗೆ

read more
ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ಚಂದನ್ ಮತೊಂದು ಭಾರತವನ್ನು ಅವಲೋಕಿಸುತ್ತಿರುವುದೇ ದಮನಿತರ ದೃಷ್ಟಿಕೋನದಿಂದ. ಅಂಚಿನ ಸಂಗತಿಗಳನ್ನು ಮುಖ್ಯ ವಾಹಿನಿಗೆ ತಂದಿರಿಸಿ ನಿರೂಪಿಸುವುದೇ ಸಾಂಸ್ಕೃತವಾಗಿ ಮಹತ್ವದ್ದು. ದಲಿತ ಕವಿ ಸಿದ್ದಲಿಂಗಯ್ಯನವರ ಆತ್ಮಕಥನವ ಕಂಡಂತೆಯೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗೆಗೂ, ನಾಲ್ವಡಿ ಕೃಷ್ಣ ರಾಜೇಂದ್ರ ಅವರ ಬಗೆಗೂ ಟಿಪ್ಪು ಸುಲ್ತಾನ್ ಬಗೆಗೂ ಸಮಾನವಾಗಿ ನೋಡುವ ಪರಿಯು ಗಮನಾರ್ಹವಾಗಿದೆ. ಯು.ಆರ್. ಅನಂತಮೂರ್ತಿ ಅವರು ಆತ್ಯಂತಿಕ ಪ್ರಭೆಯ ಲೇಖಕರು. ಅವರ ಮೂಲಕ ಭಾರತವನ್ನು ಚಂದನ್ ಭಾವಿಸುತ್ತಾರೆ.
ಚಂದನ್‌ ಗೌಡ ಹೊಸ ಕೃತಿ “ಅನದರ್‌ ಇಂಡಿಯಾ” ಕೃತಿಯ ಕುರಿತು ಮೊಗಳ್ಳಿ ಗಣೇಶ್‌ ಬರಹ

read more
ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು: ಡಾ. ವಿನತೆ ಶರ್ಮ

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು: ಡಾ. ವಿನತೆ ಶರ್ಮ

ಮೊದಲನೇ ಪ್ರಾಪಂಚಿಕ ಮಹಾಯುದ್ಧದಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯನ್ ಸೈನಿಕರಲ್ಲಿ ಮೂಲನಿವಾಸಿಗಳೂ ಇದ್ದರು. ಆದರೆ ಯುದ್ಧದ ನಂತರ ದೇಶದ ಸರಕಾರಗಳು ಅವರ ಹೆಸರನ್ನು ನೆನಪಿಸಿಕೊಳ್ಳುವ ಪ್ರಯತ್ನವನ್ನು ಮಾಡಲಿಲ್ಲ. ಆಸ್ಟ್ರೇಲಿಯನ್ ಬಿಳಿ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಎಲ್ಲಾ ರೀತಿಯ ಬಿರುದುಗಳು ಮತ್ತು ಸೌಲಭ್ಯ, ಸೌಕರ್ಯಗಳು ಲಭಿಸಿದವು. ಎರಡನೇ ಮಹಾಯುದ್ಧದ ನಂತರವೂ ಇದೇ ಕತೆಯಾಗಿದ್ದು ಈ ಬಾರಿ ಯುದ್ಧದಲ್ಲಿ ಭಾಗವಹಿಸಿದ್ದ ಮೂಲನಿವಾಸಿಗಳ ಹೆಸರುಗಳನ್ನೂ ಮಾತ್ರ ದಾಖಲಿಸಲಾಗಿತ್ತು.
ಡಾ. ವಿನತೆ ಶರ್ಮ ಹೊಸ ಕೃತಿ “ಅಬೊರಿಜಿನಲ್‌ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್‌”ಯಿಂದ ಒಂದು ಬರಹ ನಿಮ್ಮ ಓದಿಗೆ

read more
ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

read more
ಎರೆನೆತ್ತಿ ಎಂಬ ಬಾಲ್ಯಕಾಲದ ನಿಗೂಢಗಳು….: ಎಸ್.ಗಂಗಾಧರಯ್ಯ

ಎರೆನೆತ್ತಿ ಎಂಬ ಬಾಲ್ಯಕಾಲದ ನಿಗೂಢಗಳು….: ಎಸ್.ಗಂಗಾಧರಯ್ಯ

ಹಿಂಗೆ ಪ್ರಾಣಿಗಳ ಕಾಟದ ಜೊತೆಗೆ ಎರೆನೆತ್ತಿಯ ಕಾಡಿನೊಳಕ್ಕೆ ಆಗಾಗ ದೂರದ ಊರುಗಳಿಂದ ದರೋಡೆಕೋರರು ಬಂದು ಸೇರಿಕೊಂಡುಬಿಡುತ್ತಿದ್ದರಂತೆ. ಆಗ ಅಪ್ಪಿತಪ್ಪಿಯೂ ಸುತ್ತಲ ಹಳ್ಳಿಗಳ ಜನರು ಅತ್ತ ಸುಳಿಯುತ್ತಿರಲಿಲ್ಲವಂತೆ. ಪೊಲೀಸರಿಗೆ ದೂರು ಕೊಟ್ಟರೂ ಅತ್ತ ಹೋಗಲು ಅವರೂ ಹಿಂಜರಿಯುತ್ತಿದ್ದರಂತೆ. ಸುತ್ತಮುತ್ತಲ ಹಳ್ಳಿಗಳಲ್ಲಿ ಸಾಕಷ್ಟು ಕಳ್ಳತನ ಮಾಡಿದ ಮೇಲೆ ಆ ದರೋಡೆಕೋರರು ಅವರಾಗಿಯೇ ಜಾಗ ಖಾಲಿ ಮಾಡುತ್ತಿದ್ದರಂತೆ. ಎರೆನೆತ್ತಿಯ ಬಗ್ಗೆ ಇಂಥ ಪುಕಾರುಗಳನ್ನು ನನ್ನ ಅಜ್ಜನಷ್ಟೇ ಅಲ್ಲ ಊರಿನ ಹಲವು ಹಿರಿಯ ತಲೆಗಳು ಹೇಳುತ್ತಿದ್ದುದರಿಂದ ಅದು ನನ್ನಂಥವರೊಳಗೆ ಒಂದು ನಿಗೂಢ ಲೋಕವಾಗಿ ಉಳಿದುಬಿಟ್ಟಿತ್ತು.
ಕಥೆಗಾರ ಎಸ್.‌ ಗಂಗಾಧರಯ್ಯ ಅವರ ಈತನಕದ ಕತೆಗಳ ಸಂಕಲನ “ಎರೆನೆತ್ತಿ”ಗೆ ಅವರೇ ಬರೆದ ಮಾತುಗಳು ಇಲ್ಲಿವೆ

read more
ಕಲ್ಯಾಣಕ್ರಾಂತಿ: ಡಾ. ಲತಾ ಗುತ್ತಿ ಕಾದಂಬರಿಯ ಪುಟಗಳು

ಕಲ್ಯಾಣಕ್ರಾಂತಿ: ಡಾ. ಲತಾ ಗುತ್ತಿ ಕಾದಂಬರಿಯ ಪುಟಗಳು

ಬೆಳಗಿನ ಜಾವ ಕಣ್ಣುಬಿಟ್ಟಾಗ ಎಲ್ಲೆಲ್ಲೂ ಜಾತ್ರೆಯದೇ ಆದ ಒಂದು ಬೆಡಗಿನ ಸೊಬಗು. ತಣ್ಣನೆಯ ಗಾಳಿ-ಪಕ್ಷಿಗಳ ಕಲರವ. ಸೂರ್ಯೋದಯ. ದೇವಸ್ಥಾನದ ಆವರಣದಿಂದ ಕೇಳಿಬರುವ ಶರಣರ ವಚನಗಳ ಹಾಡುಗಳು. ಸುತ್ತೆಲ್ಲ ಹಸಿರು ಗಿಡಮರಗಳಿಂದ ತುಂಬಿದ ತಂಪಾದ ಸ್ಥಳದಲ್ಲಿ ಚೆನ್ನಬಸವಣ್ಣನ ದೇವಸ್ಥಾನ ದೂರ ದಿಂದಲೇ ಕಂಗೊಳಿಸುತ್ತದೆ. ಎತ್ತರದ ಗೋಪುರದಲ್ಲಿ ಶಿವಶರಣರ ಶಿಲ್ಪ ಕೃತಿಗಳು. ಅವರವರ ವೃತ್ತಿಗೆ ತಕ್ಕಂತೆ ಕೆತ್ತನೆಗಳಿವೆ. ೧೨ನೆಯ ಶತಮಾನದ ಶರಣರೆಲ್ಲ ಕಣ್ಣಿಗೆ ಕಟ್ಟುವಂತೆ ಕಾಣುತ್ತಾರೆ. ದೇವಸ್ಥಾನ ತಳಿರು ತೋರಣಗಳಿಂದ ಶೋಭಿತಗೊಂಡಿದೆ.
ಡಾ. ಲತಾ ಗುತ್ತಿ ಹೊಸ ಕಾದಂಬರಿ “ಚದುರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

read more
ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಕವಿತೆ ಬರೆಯುತ್ತಿದ್ದಳು. ಸರಳವಾದ ಪದದ ಅರ್ಥ-ಅದನ್ನು ತರಗತಿಯಲ್ಲೂ ಕೇಳಬಹುದಿತ್ತು- ಕೇಳಿಕೊಂಡು ಸ್ಟಾಫ್‌ರೂಮಿಗೆ ಬರುತ್ತಿದ್ದಳು. ಸಹೋದ್ಯೋಗಿಗಳು `ನೀನೇ ಹುಡುಗಿ ತರಹ ನಾಚ್ಕೊತೀ ಯಲ್ಲೋ’ ಎಂದು ಛೇಡಿಸುತ್ತಿದ್ದರು. ಬದುಕಿನ ಬಗ್ಗೆ ಭವಿಷ್ಯದ ಬಗ್ಗೆ ಚಿಂತನೆ ಹೊಣೆಗಾರಿಕೆ ಇಲ್ಲದೆ ಹುಟ್ಟಿದ ಎಳಸು ಆಕರ್ಷಣೆಗಳವು. ಆದರೂ ಒಬ್ಬಾಕೆಯ ದೊಡ್ಡ ಕಣ್ಣುಗಳ ಮುಖ ಚಿತ್ತದಲ್ಲಿ ಉಳಿದುಬಿಟ್ಟಿದೆ. ಚೆಲ್ಲು ವರ್ತನೆಯ ಆಕೆ, ಕನ್ನಡದಲ್ಲಿ ಭಯಂಕರ ಕಾಗುಣಿತ ತಪ್ಪು ಮಾಡುತ್ತಿದ್ದಳು. ಚೆಲುವನ್ನು ಕೊಟ್ಟು ಬುದ್ಧಿಯನ್ನು ಕೊಡದ ವಿಧಿಯನ್ನು ಬೈದುಕೊಂಡು, ಭಾಷಾ ದೋಷಗಳನ್ನು ಉದಾರವಾಗಿ ತಿದ್ದುತ್ತಿದ್ದೆ.
ಡಾ. ರಹಮತ್‌ ತರೀಕೆರೆಯವರ ಆತ್ಮಕಥನ “ಕುಲುಮೆ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

read more
ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು‌’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ