Advertisement

ಪುಸ್ತಕ ಸಂಪಿಗೆ

‘ಮಕ್ಕಳೇನು ಸಣ್ಣವರಲ್ಲ’: ಹಾಸ್ಯದ ಒರತೆಯ ಕೃತಿ

‘ಮಕ್ಕಳೇನು ಸಣ್ಣವರಲ್ಲ’: ಹಾಸ್ಯದ ಒರತೆಯ ಕೃತಿ

ಸಂಕಲನದ ಮೊದಲ ಕಥೆ ‘ಎಗ್ ರೈಸ್ ಮಂತ್ರಿ’ ಹಾಸ್ಯದ ಜೊತೆಗೆ ಎಚ್ಚರವನ್ನೂ ಮೂಡಿಸುತ್ತದೆ. ಶಾಲಾ ಸಂಸತ್ತಿಗೆ ನಡೆಯುವ ಚುನಾವಣೆಯಲ್ಲಿ ವಿದ್ಯಾರ್ಥಿಯೊಬ್ಬ ಮಂತ್ರಿಯಾಗುವ ಆತುರದಲ್ಲಿ ಪೊಳ್ಳು ಭರವಸೆ ನೀಡಿ, ಗೆದ್ದಮೇಲೆ ಎಗ್ ರೈಸ್ ಕೊಡಿಸಲಾಗದೇ ಇರುವ ಸ್ಥಿತಿ, ಅದನ್ನು ಪಡೆಯಲು ಪ್ರಯತ್ನಿಸುವ ಅವನ ಗೆಳೆಯರು ಮಾಡುವ ಸತತ ಪ್ರಯತ್ನ ಹಾಸ್ಯವನ್ನುಕ್ಕಿಸುತ್ತದೆ. ಇದರಲ್ಲಿ ಸತ್ಯಾಂಶವೂ ಇದೆ. ಆದರೆ ನಾಗ ‘ನನಗೆ ಅಷ್ಟು ದುಡ್ಡು ಎಲ್ಲಿಂದ ಬರತೈತಿ, ಆಗಲ್ಲ ಬೇಕಾದ್ರ ಶಾಲಿಗೆ ಒಳ್ಳೆ ಕೆಲ್ಸ ಮಾಡ್ತೇನಿ’ ಅಂತ ಹೇಳಿದ್ದು ಅವನ ಪ್ರಾಮಾಣಿಕತೆಯಾದರೆ, ಆಸೆಗೆ ಬಲಿಯಾಗಬೇಡಿ ಎಂಬುದನ್ನೂ ಕಥೆ ಸೂಚ್ಯವಾಗಿ ಹೇಳುತ್ತದೆ.
ಗುಂಡುರಾವ್ ದೇಸಾಯಿ ಬರೆದ “ಮಕ್ಕಳೇನು ಸಣ್ಣವರಲ್ಲ” ಮಕ್ಕಳ ಕಥಾ ಸಂಕನದ ಕುರಿತು ನಾಗರಾಜ ಎಂ ಹುಡೇದ ಬರಹ

read more
ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

read more
ಅಪ್ಪ ಇಲ್ಲವಾಗಿ…

ಅಪ್ಪ ಇಲ್ಲವಾಗಿ…

ದಾರಿ ಸಾಗುತ್ತಾ ನಾವು ಪೊಲೀಸ್ ಸ್ಟೇಷನ್‌ ಬಳಿ ಬಂದಾಗ “ಅದೋ ಅಲ್ಲಿ ಮುಂದೆ ಬಲಕ್ಕೆ ತಿರುಗಿ ಅಲ್ಲೇ ಮನೆ” ಅಂದೆ. ಡ್ರೈವರ್ “ಒಹ್ ಸಾರ್ ಆ ಜ್ಯೂಸು ಮಾಡ್ತಾರಲ್ಲ ಅವರ ಮನೆಹತ್ರನಾ?” ಅಂತ ಕೇಳಿದ್ದನ್ನು ಕಂಡು ನಾನು ಅವಾಕ್ಕಾದೆ! “ಹೌದು ಅವರೇ ಇವರು, ನಮ್ಮಪ್ಪ!” ಅಂದೆ. ಅವನು ಕೊಂಚ ಸುಮ್ಮನಾದಂತೆ ಕಂಡು ನಂತರ “ಹೌದು ಸಾರ್, ಅದೇ ಅನ್ಕೊಂಡೆ ಈಗ ಒಂದು ೨-೩ ವರ್ಷಗಳಿಂದ ಅಂಗಡಿ ತಗಿತಾ ಇಲ್ವಲ್ಲ ಅಂತ, ಪಾಪ ಸಾರ್” ಅಂದ.
ದರ್ಶನ್‌ ಜಯಣ್ಣ ಬರೆದ ಪ್ರಬಂಧಗಳ ಸಂಕಲನ “ಅಪ್ಪನ ರ್ಯಾಲೀಸ್‌ ಸೈಕಲ್‌” ನಿಂದ ಒಂದು ಪ್ರಬಂಧ

read more
ನೆನಪಾಗಿ ಉಳಿದ ಟ್ರೂತನ್

ನೆನಪಾಗಿ ಉಳಿದ ಟ್ರೂತನ್

ರಸ್ತೆಯುದ್ದಕ್ಕೂ ಮೊದಲು ಸಿಗುವ ಸುಧಾಳನ್ನು ಮನೆಗೆ ಸೇರಿಸಿ, ನಂತರ ಚಿತ್ರ, ಎಲ್ಲರನ್ನೂ ಬಿಟ್ಟು ನಾನು ಮತ್ತು ರೇವಿ ಕಾಲೆಳೆದುಕೊಂಡು ಇ. ಎಸ್. ಐ ಹತ್ತಿರವಿದ್ದ ಮನೆ ಸೇರುವುದರಲ್ಲಿ 6 ಕಳೆದಿರುತ್ತಿತ್ತು. ಅಷ್ಟು ಹೊತ್ತಿಗೆ ಅಮ್ಮನನ್ನೇ ತಿನ್ನುವ ಘರ್ಜಿಸುವ ಹೆಣ್ಣು ಹುಲಿಯಾಗಿರುತ್ತಿದ್ದೆ! ನಾನು ರಸ್ತೆಯ ಮೂಲೆಯಲ್ಲಿ ತಿರುಗಿದೊಡನೆ ಎಲ್ಲರೂ ಸಿನೆಮಾದಲ್ಲಿ ರೌಡಿ ಬಂದಾಗ ಗುಸುಗುಸು ಮಾತನಾಡುತ್ತ ಮೌನವಾಗುತ್ತಾರಲ್ಲ… ಹಾಗೆ ಸೈಲೆಂಟು! ಮತ್ತೆ ಜಗತ್ತಿನ ಮಕ್ಕಳೆಲ್ಲ ಶಾಲೆ ಮುಗಿಸಿದ ಎರಡು ಗಂಟೆಗಳ ನಂತರ ಮನೆ ಸೇರುತ್ತಿದ್ದ ಘೋರ ಅನ್ಯಾಯ ಅನುಭವಿಸುತ್ತಿರುವಾಗ ಅವರೆಲ್ಲ ಖುಷಿಯಾಗಿ ನಗುತ್ತ ಇರುವುದು ಏನು ಕಡಿಮೆ ಅಪರಾಧವಾ?!
ಭಾರತಿ ಬಿ.ವಿ.ಯವರ “ಈ ಪ್ರೀತಿ ಒಂಥರಾ” ಕೃತಿಯ ಒಂದು ಬರಹ ನಿಮ್ಮ ಓದಿಗೆ

read more
ಎಲ್ಲಾ ಊರು ಕಂಡಮೇಲೆ….

ಎಲ್ಲಾ ಊರು ಕಂಡಮೇಲೆ….

ಬರೀ ಅಲ್ಲಿನ ಆಡಂಬರ ಅಥವಾ ವೈಭವೋಪೇತ ನೋಟಗಳನ್ನಷ್ಟೇ ನಮಗೆ ಉಣಬಡಿಸಲು ಇಚ್ಚಿಸದ ಪ್ರಕಾಶ್‌ರವರು ತಮ್ಮ ಪ್ರವಾಸದುದ್ದಕ್ಕೂ ಆದ ಕೆಲವೊಂದು ಆಕಸ್ಮಿಕ ಅನುಭವಗಳನ್ನೂ ನಮಗೆ ತಿಳಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದು ಅವುಗಳಲ್ಲಿ ಪ್ರವಾಸಿಗಳಿಗೆ ವಸತಿ ಮಾಡಲು ಅನುಕೂಲವಾಗಿರುವ ಸ್ಟುಡಿಯೋ ಪ್ಲಾಟ್‌ಗಳ ಕುರಿತಾದ ಪರಿಚಯ ಬರಹ, ಬೆಲ್ಜಿಯಂನ ಬಸ್ಸುಗಳಲ್ಲಿನ ಶೌಚಾಲಯ ವ್ಯವಸ್ಥೆಯ ಬಗ್ಗೆ, ಚಾಕೊಲೇಟ್ ವಿಲೇಜ್‌ನಲ್ಲಿ ಸಿದ್ಧವಾಗುವ ಹೋಮ್ ಮೇಡ್ ಚಾಕೊಲೇಟ್‌ಗಳ ಸ್ವಾದದ ಬಗ್ಗೆ, ರುಚಿಯಾದ ಸಸ್ಯಾಹಾರಿ ತಿನಿಸು ಫಲಾಫೆಲ್ ಬಗ್ಗೆಯೂ ಬರೆಯುತ್ತಾರೆ.
ಪ್ರಕಾಶ್ ಕೆ ನಾಡಿಗ್ ಬರೆದ “ನಾ ಕಂಡ ಯೂರೋಪ್ ಖಂಡ” ಪ್ರವಾಸ ಕಥನದ ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

read more
ಇಷ್ಟುಕಾಲ ಒಟ್ಟಿಗಿದ್ದು….

ಇಷ್ಟುಕಾಲ ಒಟ್ಟಿಗಿದ್ದು….

ಅವಳು ಚಿಕ್ಕವಳಿದ್ದಾಗ ಎರಡು ಮೂರು ಸಲ ಈ ಕಥೆಯನ್ನು ಕೇಳಿದ್ದಳು. ಅವಳ ಅಜ್ಜನ ಅಜ್ಜನ ಅಜ್ಜನ ಅಜ್ಜನ ಮನೆಯಲ್ಲಿ ತಂದೆತಾಯಿ ಇಲ್ಲದ, ಸಂಬಂಧಿಕರ ಒಂದು ಹೆಣ್ಣು ಮಗಳಿದ್ದಳಂತೆ. ಆಶ್ರಯವಿಲ್ಲದೆ ಇವರ ಮನೆ ಸೇರಿದ್ದ ಹುಡುಗಿ ಅವಳು. ಆಗಿನ ಸಂಪ್ರದಾಯದಂತೆ ಮೈನೆರೆಯುವ ಮೊದಲು ಹೆಣ್ಣುಮಕ್ಕಳ ಮದುವೆ ಮಾಡಿಬಿಡಬೇಕು. ಹಾಗೊಂದು ವೇಳೆ ಮದುವೆಗೆ ಮೊದಲೇ ಹೆಣ್ಣು ಮಗು ನೆರೆದರೆ, ಮನೆತನಕ್ಕೆ ಕೆಟ್ಟದ್ದು ಎಂದು ಅವಳನ್ನು ಊರಾಚೆ, ಕಾಡಿನಲ್ಲಿ ಬಿಟ್ಟು ಬಂದುಬಿಡುತ್ತಿದ್ದರಂತೆ. ಆದರೆ ಅಷ್ಟು ಸುಲಭವೆ ಹೊಟ್ಟೆಯ ಕೂಸನ್ನು ಕಾಡಿನಲ್ಲಿ ಬಿಡುವುದು?
ಎನ್. ಸಂಧ್ಯಾ‌ ರಾಣಿ ಹೊಸ ಕಾದಂಬರಿ “ಇಷ್ಟುಕಾಲ ಒಟ್ಟಿಗಿದ್ದು” ಯಿಂದ ಆಯ್ದ ಭಾಗ ನಿಮ್ಮ ಓದಿಗೆ

read more
ಒಂದೊಂದು ಕತೆಯೂ ಮತ್ತೊಂದರ ಕೊಂಡಿಯೋ ಎಂಬಂಥ ಸೂಕ್ಷ್ಮ ನೇಯ್ಗೆ

ಒಂದೊಂದು ಕತೆಯೂ ಮತ್ತೊಂದರ ಕೊಂಡಿಯೋ ಎಂಬಂಥ ಸೂಕ್ಷ್ಮ ನೇಯ್ಗೆ

ಪೂರ್ಣಿಮಾ ತನ್ನ ಹುಟ್ಟೂರಿನ ನೆಲದ ಮನುಷ್ಯರನ್ನು ಕತೆಯೊಳಗೆ ತಂದಿದ್ದಾರೆ. ಬರಿಯ ಪಾತ್ರಗಳನ್ನಷ್ಟೇ ಅವರು ತಂದಿಲ್ಲ, ಅವರ ಬದುಕಿನ ಎಳೆಗಳನ್ನು ತಂದಿದ್ದಾರೆ. ಕತೆಗಾರ್ತಿ ಮಾಡಬೇಕಾದ ಕೆಲಸವಿದು. ಕತೆಯ ಮೂಲಕ ಬದುಕನ್ನು, ಭ್ರಮೆಗಳನ್ನು, ನಂಬಿಕೆಗಳನ್ನು, ಅವತಾರಗಳನ್ನು, ಆಕಸ್ಮಿಕಗಳನ್ನು, ಅರ್ಥವಂತಿಕೆಯನ್ನು ವಿವರಿಸುತ್ತಾ ಹೋಗುವುದು, ಇಷ್ಟನ್ನೂ ಪೂರ್ಣಿಮಾ ಸರಳವಾಗಿ ಮಾಡಿದ್ದಾರೆ. ಹಾಗಾಗಿ ಈ ಕತೆಗಳು ನಮ್ಮನ್ನು ಸೆಳೆಯುತ್ತವೆ.
ಪೂರ್ಣಿಮಾ ಮಾಳಗಿಮನಿ ಬರೆದ “ಡೂಡಲ್‌ ಕಥೆಗಳು” ಕೃತಿಗೆ ಗೋಪಾಲ ಕೃಷ್ಣ ಕುಂಟಿನಿ ಬರೆದ ಮುನ್ನುಡಿ

read more
ಬೇರು ಮತ್ತು ಬಿಳಲು…

ಬೇರು ಮತ್ತು ಬಿಳಲು…

ಒಮ್ಮೆ ದೊಡ್ಡಮ್ಮನಿಗೆ ಅಪರಾತ್ರಿಯಲ್ಲಿ ಎಚ್ಚರ ತಪ್ಪಿಬಿಟ್ಟಿತ್ತು. ಮನೆಯಿಡೀ ಗದ್ದಲ… ದೊಡ್ಡಪ್ಪನ ಜೋರು ಅಳು… ಮನೆಮಂದಿಯೂ ಚಡಪಡಿಸುತ್ತಿದ್ದಾರೆ. ಐದಾರು ವರ್ಷದ ನನಗೆ ಏನು ಮಾಡಲೂ ತಿಳಿಯುತ್ತಿಲ್ಲ. ಕಾಲುಗಳು ನಡುಗುತ್ತಿವೆ. ಹೊಟ್ಟೆ ಚುಳ್ ಎನ್ನುತ್ತಿದೆ. ಅಳು ಗಂಟಲಲ್ಲೆ ಸಿಕ್ಕಿ ಹಾಕಿಕೊಂಡಂಥ ಅನುಭವ. ವಿಪರೀತ ಭಯದಿಂದ ಒಳಕ್ಕೆ ಹೊರಕ್ಕೆ ಕುಣಿಯುತ್ತಾ ಕೊನೆಗೆ ಗಣಿಗೆಯ ಸಂದಿಯಲ್ಲಿ ಹೋಗಿ ನಿಂತಿದ್ದೆ. ಎಷ್ಟು ಹೊತ್ತು ನಿಂತಿದ್ದೆನೋ.. ಮುಂದೆ ಏನಾಯಿತೋ.. ಒಂದೂ ನೆನಪಿಲ್ಲ. ಅಂದು ಕೆಂಪು ಫ್ರಾಕ್ ತೊಟ್ಟಿದ್ದೆ. ಎಲ್ಲ ಅಸ್ಪಷ್ಟ ನೆನಪುಗಳು.
ಇತ್ತೀಚೆಗೆ ಬಿಡುಗಡೆಯಾದ ಆಶಾ ಜಗದೀಶ್‌ ಅವರ “ಕಾಣೆಯಾದವರು” ಲಲಿತ ಪ್ರಬಂಧಗಳ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ

read more
ಕಾಣ್ಕೆ ನೀಡುವ ಕವಿತೆಗಳು…

ಕಾಣ್ಕೆ ನೀಡುವ ಕವಿತೆಗಳು…

ಮಗುವಿನ ಮುಗ್ಧತೆಯ ಸಂಪಾದಿಸುವವರೆಗೂ ಈ ಸಾಧನೆಯ ಯಾನ ನಿರಂತರವಾಗಿ ಮುಂದುವರಿಯುತ್ತಿರಬೇಕು. ಲೋಕದ ಉಪಾಧಿಗಳ ಅಂಟಿನಿಂದ ಬಿಡುಗಡೆಯಾಗುವ ಹಾದಿಯಲ್ಲಿ ಈ ಕವಿ ದಿಟ್ಟ ಹೆಜ್ಜೆ ಇರಿಸಿದ್ದಾನೆ ಎಂಬುದು ಖುಷಿಯ ಸಂಗತಿ. ಅಲ್ಲಲ್ಲಿ ಹಳಹಳಿಕೆಯ ಧ್ವನಿಯೂ, ತಿರಸ್ಕಾರ ಭಾವವೂ, ಆಕ್ರೋಶವೂ ವ್ಯಕ್ತವಾಗಿದೆಯಾದರೂ ಅವರ ತಾತ್ವಿಕ ಹಾದಿಗೆ ಅವು ತೊಡಕಾಗಿ ಉಳಿದಿಲ್ಲ. ನಿರ್ವಾಣನಾಗುವುದರಲ್ಲಿ ಅದಮ್ಯ ಸುಖವಿದೆ ಎಂದು ಸಾರುವ ಅವರ ಕವಿತೆಗಳು ಈ ಸಂಕಲನಕ್ಕೆ ಇಟ್ಟ ಹೆಸರಿಗೆ ಅನ್ವರ್ಥವಾಗಿವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ ಡಾ.ಲೋಕೇಶ್ ಅಗಸನಕಟ್ಟೆ ಬರೆದ ಮುನ್ನುಡಿ

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ