Advertisement

ಪುಸ್ತಕ ಸಂಪಿಗೆ

ದೈನಿಕತೆಯಲ್ಲೆ ದೈವಿಕತೆ..

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

read more
ಇದ್ದಂತೆ ಇರುವ ಪದ್ಯಸದ್ಯ

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

read more
ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

read more
“ಪಲಾಯನ”ದ ಕತೆಗಳು…

“ಪಲಾಯನ”ದ ಕತೆಗಳು…

ನಿರರ್ಗಳ ನಿರೂಪಣೆ ಕರಗತವಾಗಿರುವ ಲೇಖಕಿಯ ಕತೆಗಳು ಅನಾಯಾಸವಾಗಿ ಓದಿಸಿಕೊಂಡು ಹೋಗುತ್ತವೆ. ಈ ನಿರೂಪಣೆಯ ಉತ್ಸಾಹದಿಂದ ಮುಂದುವರಿಯುವ ಲೇಖಕಿ ಕೆಲವು ಕತೆಗಳ ಅಂತ್ಯದಲ್ಲಿ ತೀರ್ಪುಗಾರಿಕೆ ಕೈಗೆತ್ತಿಕೊಳ್ಳುತ್ತಾರೆ. ಉದಾಹರಣೆಗೆ “ಸಿಂಗಾರಳ್ಳಿ ಗಣಪತಿ” “ಕಾಣೆ” ಕತೆಗಳ ಅಂತ್ಯದಲ್ಲಿ ಪಾತ್ರಗಳ ಕುರಿತ ವ್ಯಾಖ್ಯೆ. ಈ ವಾಚ್ಯತೆ ಅದುವರೆಗಿನ ಕಥನ ಶೈಲಿಯ ನವಿರುಗಾರಿಕೆಯನ್ನು ಮೊಂಡಾಗಿಸಿ ವರದಿಯ ಸ್ವರೂಪ ತಳೆಯುತ್ತದೆ. ಹಾಗೆಯೇ ಕಥನ ಪ್ರಸ್ತುತಪಡಿಸುವಲ್ಲಿ ವಿಭಿನ್ನ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವೈವಿಧ್ಯತೆ ಲಭಿಸುತ್ತದೆ.
ಶಾರದಾ ಮೂರ್ತಿ ಬರೆದ “ ಪಲಾಯನ ಮತ್ತು ಇತರೆ ಕಥೆಗಳು” ಕಥಾಸಂಕಲನದ ಕುರಿತು ಕೆ.ಆರ್. ಉಮಾದೇವಿ ಉರಾಳ ಬರಹ

read more
ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

read more
ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಪ್ರಬಂಧಕಾರರಾಗಿ ಯೋಗಿಂದ್ರರ ಅಲೆದಾಟಕ್ಕೆ ವೈಚಾರಿಕತೆಯ ನೆಲೆಗಟ್ಟು ಇರುವಂತೆ ಭಾವುಕತೆಯ ಸ್ಪರ್ಶವೂ ಇದೆ. ‘ಬೆಳಕಿನ ಹಬ್ಬಕ್ಕೆ ಊರಿಗೆ ಹೋದದ್ದು’ ಪ್ರಬಂಧ, ಏಕಕಾಲಕ್ಕೆ ಬ್ರಿಟನ್ನು ಮತ್ತು ಮರವಂತೆಯ ನಡುವೆ ಮನೋವ್ಯಾಪಾರ ಸಾಧ್ಯವಾಗಿರುವ ವಿಶಿಷ್ಟ ರಚನೆಯಿದು. ಲೇಖಕ ಊರಿನಲ್ಲಿ ಹೆಜ್ಜೆಯಿಟ್ಟಾಗ ಮುತ್ತಿಕೊಳ್ಳುವ ದೀಪಾವಳಿಯ ಸಹಸ್ರ ಸಹಸ್ರ ದೀಪಗಳಂಥ ನೆನಪುಗಳು ಪ್ರಬಂಧದಲ್ಲಿ ಬೆಳಗಿವೆ. ‘ನಮ್ಮೂರು ಕಟ್ಟುತ್ತಿರುವ ಬೆಳಕಿನ ಮನೆಯೊಳಗೆ ನಾನೂ ಅಲೆದಾಡುತ್ತಿದ್ದೇನೆ’ ಎನ್ನುವ ಪ್ರಬಂಧಕಾರರ ಅನಿಸಿಕೆ ಓದುಗನದೂ ಆಗುತ್ತದೆ.
ಯೋಗೀಂದ್ರ ಮರವಂತೆ ಪ್ರಬಂಧಗಳ ಸಂಕಲನ “ನನ್ನ ಕಿಟಕಿ”ಗೆ ರಘುನಾಥ ಚ.ಹ. ಬರೆದ ಮುನ್ನುಡಿ

read more
ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

read more
‘ಮಕ್ಕಳೇನು ಸಣ್ಣವರಲ್ಲ’: ಹಾಸ್ಯದ ಒರತೆಯ ಕೃತಿ

‘ಮಕ್ಕಳೇನು ಸಣ್ಣವರಲ್ಲ’: ಹಾಸ್ಯದ ಒರತೆಯ ಕೃತಿ

ಸಂಕಲನದ ಮೊದಲ ಕಥೆ ‘ಎಗ್ ರೈಸ್ ಮಂತ್ರಿ’ ಹಾಸ್ಯದ ಜೊತೆಗೆ ಎಚ್ಚರವನ್ನೂ ಮೂಡಿಸುತ್ತದೆ. ಶಾಲಾ ಸಂಸತ್ತಿಗೆ ನಡೆಯುವ ಚುನಾವಣೆಯಲ್ಲಿ ವಿದ್ಯಾರ್ಥಿಯೊಬ್ಬ ಮಂತ್ರಿಯಾಗುವ ಆತುರದಲ್ಲಿ ಪೊಳ್ಳು ಭರವಸೆ ನೀಡಿ, ಗೆದ್ದಮೇಲೆ ಎಗ್ ರೈಸ್ ಕೊಡಿಸಲಾಗದೇ ಇರುವ ಸ್ಥಿತಿ, ಅದನ್ನು ಪಡೆಯಲು ಪ್ರಯತ್ನಿಸುವ ಅವನ ಗೆಳೆಯರು ಮಾಡುವ ಸತತ ಪ್ರಯತ್ನ ಹಾಸ್ಯವನ್ನುಕ್ಕಿಸುತ್ತದೆ. ಇದರಲ್ಲಿ ಸತ್ಯಾಂಶವೂ ಇದೆ. ಆದರೆ ನಾಗ ‘ನನಗೆ ಅಷ್ಟು ದುಡ್ಡು ಎಲ್ಲಿಂದ ಬರತೈತಿ, ಆಗಲ್ಲ ಬೇಕಾದ್ರ ಶಾಲಿಗೆ ಒಳ್ಳೆ ಕೆಲ್ಸ ಮಾಡ್ತೇನಿ’ ಅಂತ ಹೇಳಿದ್ದು ಅವನ ಪ್ರಾಮಾಣಿಕತೆಯಾದರೆ, ಆಸೆಗೆ ಬಲಿಯಾಗಬೇಡಿ ಎಂಬುದನ್ನೂ ಕಥೆ ಸೂಚ್ಯವಾಗಿ ಹೇಳುತ್ತದೆ.
ಗುಂಡುರಾವ್ ದೇಸಾಯಿ ಬರೆದ “ಮಕ್ಕಳೇನು ಸಣ್ಣವರಲ್ಲ” ಮಕ್ಕಳ ಕಥಾ ಸಂಕನದ ಕುರಿತು ನಾಗರಾಜ ಎಂ ಹುಡೇದ ಬರಹ

read more
ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ