“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ
ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ
ಉಪ್ಪನ್ನು ಹೀರಿಕೊಂಡ ನೀರಿನಂಥ ಕತೆಗಳು: ಮುನವ್ವರ್ ಕಥಾಸಂಕಲನಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ
ಎಲ್ಲರೂ ಅರ್ಥವಾದಂತೆ ನಟಿಸುವ ಆದರೆ ನಿಜದಲ್ಲಿ ಸಂಕೀರ್ಣ ಸಮೀಕರಣದಂತಿರುವ ಬಡತನವೆನ್ನುವ ಬಾಳೆ ದಿಂಡಿನ ತಿರುಳನ್ನು ಪದರ ಪದರವಾಗಿ ಬಿಚ್ಚಿಟ್ಟು ‘ಇದು ಜಗತ್ತು, ಇದೇ ಜಗತ್ತು’ ಎಂದು ದಿಟ್ಟವಾಗಿ ಹೇಳುವ ಗಟ್ಟಿತನ ಇಲ್ಲಿನ ಹಲವು ಕಥೆಗಳಲ್ಲಿದೆ. ಬಲ್ಬಿಗೆ ಬೆಳಕನ್ನು ತಲುಪಿಸುವ ತಂತಿಯ ವಿದ್ಯುತ್ತಿನಲ್ಲೇ ಪ್ರಾಣ ತೆಗೆಯುವ ಕರೆಂಟೂ ಇದೆ. ದುರಂತವೆಂದರೆ ನಮ್ಮ ಸಮಾಜದ ಕತ್ತಲನ್ನು ಹೋಗಲಾಡಿಸಲು ಕಂಡು ಹಿಡಿದ ನಾನಾ ಕರೆಂಟುಗಳು ಇಲ್ಲಿಯ ತನಕ ಬೆಳಕು ಕೊಟ್ಟಿದ್ದಕ್ಕಿಂತ ಪ್ರಾಣ ತೆಗೆದಿದ್ದೇ ಹೆಚ್ಚು ಎನ್ನುವ ಸೂಕ್ಷ್ಮವನ್ನು ಉಪ್ಪನ್ನು ಹೀರಿಕೊಂಡ ನೀರಿನಂತೆ ಇಲ್ಲಿನ ಕಥೆಗಳು ಕರಗಿಸಿಕೊಂಡಿವೆ.
ಮುನವ್ವರ್ ಜೋಗಿಬೆಟ್ಟು ಹೊಸ ಕಥಾಸಂಕಲನ “ಟಚ್ ಮೀ ನಾಟ್”ಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ
ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಪದ್ಯಗಳು: ಕಲ್ಲೇಶ್ ಕುಂಬಾರ್ ಬರಹ
ಕವಿಯಾಗಿ ಮಾಲತಿಯವರಿಗೆ ಕತ್ತಲು ಮತ್ತು ಬೆಳಕಿನ ಕುರಿತಾಗಿ ವಿಶಿಷ್ಟವಾದ ಆಕರ್ಷಣೆಯಿದೆ ಎನ್ನಬಹುದು. ಈ ಮಾತಿಗೆ ಸಾಕ್ಷಿಯಾಗಿ ಈ ಕವನಸಂಕಲನದಲ್ಲಿ ‘ಅಜ್ಜಿ ಮತ್ತು..’ ಎಂಬ ಪದ್ಯವೊಂದಿದೆ. ಇಲ್ಲಿ, ಕತ್ತಲು–ಬೆಳಕಿನ ಆಟವನ್ನು ಕೇಂದ್ರವಾಗಿರಿಸಿಕೊಂಡು ಮನುಷ್ಯ ಬದುಕಿನ ಕ್ರಿಯೆಗಳನ್ನು ಅವರು ಶೋಧಿಸಲು ಪ್ರಯತ್ನಿಸಿದ್ದಾರೆ. ಈ ಪದ್ಯದ ಶೀರ್ಷಿಕೆಯಲ್ಲಿರುವ ‘ಅಜ್ಜಿ’ ಬೇರಾರೂ ಆಗಿರದೇ ನಮ್ಮೊಳಗಿನ ಅರಿವಿನ ಕೇಡು ಕಳೆಯಲೆಂದು ನಮ್ಮ ಎದೆಯಂಗಳದಲ್ಲಿ ಮುಡಿಸಿಟ್ಟ ಅರಿವಿನ ದೀವಿಗೆಯೇ ಆಗಿದ್ದಾಳೆ!
ಮಾಲತಿ ಗೋರೆಬೈಲ್ ಬರೆದ “ಗುಬ್ಬಿ ಲಾಟೀನು” ಕವನ ಸಂಕಲನದ ಕುರಿತು ಕಲ್ಲೇಶ್ ಕುಂಬಾರ್ ಬರಹ
ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ
ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ
ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ
ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ
ಕಲಾತ್ಮಕ ಕಟ್ಟಣೆಯ ‘ಅಸೀಮರೂಪಿ’ ಕತೆಗಳು: ರೇವಣಸಿದ್ಧಪ್ಪ ಜಿ.ಆರ್. ಬರಹ
ಯುವತಿಯೊಬ್ಬಳ ಮೆದುಳು ಅಪಘಾತದಿಂದಾಗಿ ಜರ್ಝರಿತವಾಗಿ ಬ್ರೈನ್ ಡೆಡ್ ಆಗಿ ಅವಳ ಉಸಿರು ನಿಲ್ಲುವುದು ಖಾತ್ರಿಯಾದಾಗ, ಮುದಿಯಾಗಿದ್ದ ತನ್ನ ದೇಹದಿಂದ ಆಕೆಯ ದೇಹಕ್ಕೆ ಬ್ರೈನ್ ಟ್ರಾನ್ಸ್ ಪ್ಲಾಂಟೇಷನ್ ಮಾಡುವ ಪ್ರಯೋಗಕ್ಕೆ ಒಳಗಾಗುತ್ತಾನೆ. ಮಾನಸಿಕವಾಗಿ ಗಂಡಾಗಿ, ದೈಹಿಕವಾಗಿ ಹೆಣ್ಣಾಗಿರುವ ಈತ ಒಂದು ವಿಷಮ ಗಳಿಗೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯೂ ಆಗಿಬಿಡುತ್ತಾನೆ. ಕೊನೆಗೆ ತನ್ನ ಮನೆಯವರಿಂದಲೇ ಅವಜ್ಞೆಗೆ ಈಡಾಗುತ್ತಾನೆ….
ಕಂನಾಡಿಗಾ ನಾರಾಯಣ ಬರೆದ “ಅಸೀಮರೂಪಿ” ಕಥಾ ಸಂಕಲನದ ಕುರಿತು ರೇವಣಸಿದ್ಧಪ್ಪ ಜಿ.ಆರ್. ಬರಹ
ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಅಕಳಂಕ ಚರಿತ್ರೆ: ಸುಭದ್ರಾ ಹೆಗಡೆ ಬರಹ
ಕಾದಂಬರಿಯನ್ನು ಓದುತ್ತಾ ಹೋದಂತೆ ಶೌರ್ಯ, ಸಾಹಸಕ್ಕೆ ಹೆಸರಾಗಿ ನಿಂತ ವೀರವನಿತೆ ಜೀವ ತಳೆದು ನಮ್ಮೆದುರು ನಿಲ್ಲುವಂತೆ ರಾಣಿಯ ಪಾತ್ರವನ್ನು ಅಷ್ಟು ಸೂಕ್ಷ್ಮವಾಗಿ ಹೆಣೆಯಲಾಗಿದೆ. ಜೈನ ಧರ್ಮದವಳಾದ ರಾಣಿ ಸಾಳುವ ವಂಶದ ಕೊನೆಯ ಕುಡಿ, ಸರ್ವಧರ್ಮ ಸಮನ್ವಯವನ್ನು ಸಾರಿದವಳು. ಇಲ್ಲಿ ಬರುವ ಪ್ರತಿಯೊಂದು ಪಾತ್ರವೂ, ಗುರುಗಳಾದ ಭಟ್ಟಾಕಳಂಕರು, ಪ್ರಧಾನಿಯಾದ ಸಭಾಹಿತರು, ಶಬಲೆ, ಜಿನದತ್ತ, ಸತ್ಯಾಶ್ರಯ ಇವರೆಲ್ಲರೂ ಕಳೆದುಹೋದ ಸಮೃದ್ಧವಾದ ಸಾಮ್ರಾಜ್ಯವೊಂದರ ಸಾಕ್ಷಿಯಾಗಿ ನಿಲ್ಲುತ್ತಾರೆ. ರಾಣಿಗೆ ಬೆಂಗಾವಲಾಗಿ ನಿಂತು ನಾಡ ಪ್ರೇಮವನ್ನು ತೋರಿಸುತ್ತಾರೆ.
ಗಜಾನನ ಶರ್ಮಾ ಬರೆದಿರುವ ಐತಿಹಾಸಿಕ ಕಾದಂಬರಿ ‘ಚೆನ್ನಭೈರಾದೇವಿʼ ಕುರಿತು ಸುಭದ್ರಾ ಹೆಗಡೆ ಬರಹ
ಅವ್ವಕ್ಕನೆಂಬ ಅಚ್ಚರಿ…: ಜ.ನಾ. ತೇಜಶ್ರೀ ಹೊಸ ಕಾದಂಬರಿಯ ಪುಟಗಳು
ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ
ವೈಜ್ಞಾನಿಕ ಕೌತುಕದ ಬೆರಗನ್ನು ಎಚ್ಚರಿಸುವ “ವಿಲಕ್ಷಣ ಜಲಜಾಲ”: ನಾರಾಯಣ ಯಾಜಿ
ನೀರೆನ್ನುವ ಅಪೂರ್ವ ವಸ್ತು ಈ ಪ್ರಕೃತಿಯಲ್ಲಿ ಸೃಷ್ಟಿಯ ಕಾಲದಿಂದಲೂ ಇದೆ. ಮುಂದೆಯೂ ಇರಲಿದೆ. ಆದರೆ ಅದರಗುಣಮಟ್ಟವನ್ನು ಕಾಪಾಡಿ ಬದುಕುವುದು ಮತ್ತು ಭುವಿಯ ಮೇಲಿನ ಜೀವ ಸಂಕುಲನವನ್ನು ಡೈನೋಸಾರಸ್ಗಳಂತೆ ನಾಶವಾಗಿ ಹೋಗದಂತೆ ಮಾಡುವಲ್ಲಿ ಮಾನವರ ಪಾತ್ರದ ಕುರಿತು ಅವರು ಈ ಕೃತಿಯ ಮೂಲಕ ಗಮನ ಸೆಳೆಯುತ್ತಾರೆ. ಕೃತಿಯೊಂದು ಜನರನ್ನು ತಲುಪಲು ಭಾಷೆ ಮತ್ತು ಶೈಲಿ ಬಲು ಮುಖ್ಯ. ಈ ಎರಡರಲ್ಲಿಯೂ ಸಾಗರ್ ಅವರದು ಎತ್ತಿದ ಕೈ.
ಡಾ. ಡಿ. ಎಂ. ಸಾಗರ್ ಬರೆದ “ವಿಲಕ್ಷಣ ಜಲಜಾಲ” ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ









