ಚಕ್ರವ್ಯೂಹದೊಳಗಿನ ಮಾಯಾಲೋಕ…: ಗೊರೂರು ಶಿವೇಶ್ ಬರಹ
ಕಾದಂಬರಿಯ ಕೊನೆಯಲ್ಲಿ ಆ ಕಡತ ಮುಸುಕುಧಾರಿಗಳ ಕೈಗೆಸಿಕ್ಕು ಅದರ ಮಹತ್ವ ತಿಳಿಯದ ಅವರು ನದಿನೀರಿಗೆ ಎಸೆದು ಅದು ಬಿಡಿಬಿಡಿಯಾಗಿ ಬಿದ್ದು ನೀರುಪಾಲಾಗುತ್ತದೆ. ಇದ್ದ ಒಂದು ಪ್ರತಿಯೂ ಮಾಯವಾದರೂ ಎಲ್ಲಿಯಾದರೂ ಮತ್ತೊಂದು ಪ್ರತಿಯನ್ನು ಹುಡುಕಿಯೆ ತೀರುತ್ತೇನೆ ಮತ್ತು ಅದರ ಸಹಾಯದಿಂದ ರತ್ನಮಾಲಾ ವಜ್ರವನ್ನು ಪಡೆದೆ ತೀರಬೇಕೆಂದು, ಮುಂದೆ ಅದನ್ನು ಹಂಚಿಕೊಳ್ಳಬಹುದೆಂದು ರಾಜಪ್ಪ ತಿಳಿಸಿ, ಅದಕ್ಕೆ ಮೂವರು ಒಪ್ಪಿ ಜುಗಾರಿಕ್ರಾಸ್ನ ಬಸ್ ಹತ್ತುವುದರೊಂದಿಗೆ ಕಾದಂಬರಿ ಮುಕ್ತಾಯವಾಗುತ್ತದೆ.
ನೆನ್ನೆ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ, ಅದರ ನಿಮಿತ್ತ ತೇಜಸ್ವಿಯವರ “ಜುಗಾರಿ ಕ್ರಾಸ್” ಕೃತಿಯ ಕುರಿತು ಗೊರೂರು ಶಿವೇಶ್ ಬರಹ
ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ
‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ
“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ
`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ
ಎಗ್ ರೈಸ್ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ
ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ
ಯಾವ ಭಾಷೆಯಲ್ಲೂ “ಎಲ್ಲವೂ” ಇರುವುದಿಲ್ಲ: ಡಾ. ಎಚ್.ಎಸ್. ಸತ್ಯನಾರಾಯಣ ಬರಹ
“ನೀನು ಇಂಗ್ಲಿಷನ್ನು ಕನ್ನಡ ಭಾಷೆಯ ಅಕ್ಷರ ಸಂಯೋಜನೆ ಜೊತೆ ಹೋಲಿಸಿ ಬರೆಯಬೇಡ. ನೀನು ಇಂಗ್ಲಿಷನ್ನು ಚೆನ್ನಾಗಿ ಕಲಿಯಬೇಕಾಗಿರುವುದು ನಿನ್ನ ಅಗತ್ಯಕ್ಕಾಗೇ ಹೊರತು ಇಂಗ್ಲಿಷಿನವರ ಅಗತ್ಯಕ್ಕಾಗಿ ಅಲ್ಲ. ನಿನಗೆ ಅದರಲ್ಲಿರುವ ಪ್ರಪಂಚದ ಜ್ಞಾನವೆಲ್ಲಾ ಬೇಕಾದರೆ ಈ ಸಬೂಬುಗಳನ್ನೆಲ್ಲಾ ಬಿಟ್ಟು ಕಷ್ಟಪಟ್ಟು ಕಲಿ ಅದು ಬಿಟ್ಟು ಕನ್ನಡದಲ್ಲೇ ಎಲ್ಲಾ ಇದೆ ಎಂದು ತಿಳಿದು ಕೂಪಮಂಡೂಕ ಆಗಬೇಡ.”
ಡಾ. ಎಚ್.ಎಸ್. ಸತ್ಯನಾರಾಯಣ ಅವರ “ತೇಜಸ್ವಿ ಪ್ರಸಂಗಗಳು” ಕೃತಿಯ ಕೆಲವು ಪ್ರಸಂಗಗಳು ನಿಮ್ಮ ಓದಿಗೆ
ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು
ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ
ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ
ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ
ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು
ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು
ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ
ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್ ಬರಹ









