Advertisement

ಪುಸ್ತಕ ಸಂಪಿಗೆ

ಕಾಣುತ್ತಿಲ್ಲವೇ ಅಲ್ಲಿ ಗೋದಿನಾಗರ…: ಡಾ. ಕೆ.ಬಿ. ಶ್ರೀಧರ್ ಕಾದಂಬರಿಯ ಪುಟಗಳು

ಕಾಣುತ್ತಿಲ್ಲವೇ ಅಲ್ಲಿ ಗೋದಿನಾಗರ…: ಡಾ. ಕೆ.ಬಿ. ಶ್ರೀಧರ್ ಕಾದಂಬರಿಯ ಪುಟಗಳು

ಪಲ್ಲವಿಯು ಮುಟ್ಟಿದಲ್ಲೆಲ್ಲಾ ರೋಹಿಣಿಯು ಸಡಿಲಗೊಂಡಳು. ಗಟ್ಟಿಯಾದ ಮೇಣವು ಬೆಂಕಿಯ ಕಾವಿಗೆ ಮೆತ್ತಗಾಗುವಂತೆ… ಗೌತಮನಿಗೆ ನಂಬಲಾಗಲಿಲ್ಲ, ಅರ್ಥವೂ ಆಗಲಿಲ್ಲ. ತನಗರಿಯದ ಯಾವುದೋ ಭಾಷೆಯಲ್ಲಿ ಇವರಿಬ್ಬರು ಸಂವಹಿಸುತ್ತಿದ್ದಾರೆ ಎಂದೆನಿಸಿತು. ಬಗೆಹರಿದಂತೆ ಕಂಡಿದ್ದ ಅನುಮಾನವು ಬುಗ್ಗೆಂದು ಹೊತ್ತಿಕೊಂಡಿತು. ಮೂತ್ರಕ್ಕೆ ಅವಸರವಾದಂತಾಗಿ ಬಚ್ಚಲ ಮನೆಗೆ ಓಡಿದ. ಪಲ್ಲವಿಯು ಮೆಲ್ಲಮೆಲ್ಲನೆ ರೋಹಿಣಿಯನ್ನು ನಡೆಸುತ್ತಾ ಮನೆಯೊಳಗೆ ಕರೆದುಕೊಂಡು ಬಂದು, ಸೋಫಾ ಮೇಲೆ ಕೂರಿಸಿದಳು.
ಡಾ. ಕೆ.ಬಿ. ಶ್ರೀಧರ್ ಹೊಸ ಕಾದಂಬರಿ “ಅನೂಹ್ಯ”ದ ಕೆಲವು ಪುಟಗಳು ನಿಮ್ಮ ಓದಿಗೆ

read more
ಕಾವ್ಯ ಸಂಚಾರಿಣಿ ಮಮತಾ ಸಾಗರ: ಬಾನು ಮುಷ್ತಾಕ್ ಮುನ್ನುಡಿ

ಕಾವ್ಯ ಸಂಚಾರಿಣಿ ಮಮತಾ ಸಾಗರ: ಬಾನು ಮುಷ್ತಾಕ್ ಮುನ್ನುಡಿ

ಮಮತಾ ಸಾಗರ್‌ ಭಾಷೆಯಲ್ಲಿ ಹೇಳುವುದಾದರೆ ಆಕೆಯ ಪದಸಂಚಾರದ ಲಯ, ಗತಿ, ಭಾವ, ಅರ್ಥ ವ್ಯಾಪ್ತಿ ಮತ್ತು ಭಾಷೆಯ ನಿಲ್ಲದ ಪಯಣ ಕವಿಯತ್ರಿಯಂತೆಯೆ ಆಕೆಯ ಪದಗಳು ಕೂಡ ನಿರಂತರ ಸಂಚಾರದಲ್ಲಿರುತ್ತವೆ. ಹೀಗಾಗಿ ಆಕೆಯ ಭಾವನೆ ಮತ್ತು ಭಾವತೀವ್ರತೆಗಳಿಗೆ ಜಡ್ಡು ಮತ್ತು ಜಿಡ್ಡು ಹಬ್ಬಿಲ್ಲ. ಕೆಲವೆಡೆ ಪ್ರಖರವಾಗಿ ಇಡೀ ಆಸ್ತಿತ್ವವನೆ ಕಲಕುವ ಸಾಲುಗಳು ಯರ್ರಾ ಬಿರ್ರಿ ಕಲ್ಲು ಮಳೆಗರೆದಂತೆ ಮತ್ತೊಮ್ಮೆ ಪುಷ್ಪ ವೃಷ್ಟಿಯಂತೆ ಮತ್ತೊಮೆ ತಣ್ಣಗೆ ಕರಗುವ ಮಂಜಿನ ಕಠಾರಿ ಆಳವಾಗಿ ಎದೆಗಿಳಿದಂತೆ ಕಾಡುತ್ತಲೇ ಹೋಗುತ್ತವೆ.
ಮಮತಾ ಜಿ. ಸಾಗರ ಇಲ್ಲಿಯವರೆಗಿನ ಕವಿತೆಗಳ ಸಂಕಲನ “ಪದಸಂಚಾರ”ಕ್ಕೆ ಬಾನು ಮುಷ್ತಾಕ್‌ ಬರೆದ ಮುನ್ನುಡಿ

read more
ಸೇವೆಯಲ್ಲಿ ಜೀವ ಸವೆಸುವ ಜೀವಗಳು…: ದೇವಿಕಾ ನಾಗೇಶ್‌ ಬರಹ

ಸೇವೆಯಲ್ಲಿ ಜೀವ ಸವೆಸುವ ಜೀವಗಳು…: ದೇವಿಕಾ ನಾಗೇಶ್‌ ಬರಹ

ಪ್ರತಿಯೊಂದು ಜೀವಿ ತನ್ನ ಅಸ್ತಿತ್ವದಿಂದ ವಿಶೇಷ ಅನ್ನಿಸಿಕೊಳ್ಳುವುದು ತಾನು ಮಾಡುವ ಸೇವೆಯಿಂದ ಎಂದು ನಂಬಿ ನಡೆಯುವ ಈ ಸನ್ಯಾಸಿನಿಯರು ಜಗತ್ತಿನ ಪಾಪ ತುಳಿಯುವ ಕಾಯಕ ತಮ್ಮದು ಎಂದು ನಂಬಿದವರು. ಹಾಗೆ ನೋಡಿದರೆ ಲಲ್ಲೇಶ್ವರಿ, ಅಕ್ಕಮಹಾದೇವಿ, ಮೀರಾ, ಸೂಫಿ ಸಂತ ಮಹಿಳೆಯರಾದ ಉಲೇಮ ರಬಿಯ ನಫೀಜಾ ತಮ್ಮ ಬದುಕಿನಲ್ಲಿ ಎದುರಾದ ಸಂಕಷ್ಟಗಳಿಗೆ ಮುಖಾಮುಖಿಯಾಗುತ್ತಲೇ ಜನ ಜೀವನದ ಸಂಕಷ್ಟಗಳಿಗೆ ಸ್ಪಂದಿಸುತ್ತ ಸಾಧನೆಯ ಪಥದಲ್ಲಿ ಮುನ್ನಡೆದವರು.
ಬಿ.ಎಂ. ರೋಹಿಣಿ ಹಾಗೂ ಮೋಲಿ ಮಿರಾಂದ ಬರೆದ “ಧರ್ಮ ಭಗಿನಿಯರು” ಕೃತಿಯ ಕುರಿತು ದೇವಿಕಾ ನಾಗೇಶ್‌ ಬರಹ

read more
ಪ್ರಯಾಣ-ಪ್ರವಾಸದಲ್ಲಿ ಓದಬೇಕೆ?: ಕೆ. ಸತ್ಯನಾರಾಯಣ ಹೊಸ ಕೃತಿಯ ಒಂದು ಬರಹ

ಪ್ರಯಾಣ-ಪ್ರವಾಸದಲ್ಲಿ ಓದಬೇಕೆ?: ಕೆ. ಸತ್ಯನಾರಾಯಣ ಹೊಸ ಕೃತಿಯ ಒಂದು ಬರಹ

ಪ್ರವಾಸ-ಪ್ರಯಾಣದಲ್ಲಿ ಸಹಪ್ರಯಾಣಿಕರು ನಮ್ಮ ಓದಿನ ರೀತಿಯನ್ನು ಪ್ರಭಾವಿಸುತ್ತಾರೆ. ಅಲ್ಲದೆ, ಪ್ರವಾಸ-ಪ್ರಯಾಣದ ಉದ್ದೇಶ, ಓದುವುದೇನಲ್ಲ. ರೈಲಿನಲ್ಲಾಗಲಿ, ವಿಮಾನದಲ್ಲಾಗಲಿ ನಿಮಗೆ ಊಟಕ್ಕೆ, ನಿದ್ದೆಗೆ, ಶೌಚಕ್ಕೆ ವ್ಯವಸ್ಥೆ, ಅನುಕೂಲ ಮಾಡಿಕೊಡಬಹುದೇ ಹೊರತು ಓದಿಗಲ್ಲ. ನೀವು ಓದುವುದರಿಂದ ಎಷ್ಟೋ ಸಲ ಸಹಪ್ರಯಾಣಿಕರಿಗೆ ತೊಂದರೆಯೂ ಆಗಬಹುದು. ನಿಮ್ಮನ್ನು ಒಬ್ಬ ವಿಚಿತ್ರ ಪ್ರಾಣಿಯೆಂದು ಕೂಡ ಪರಿಗಣಿಸಬಹುದು.
ಕತೆಗಾರ ಕೆ. ಸತ್ಯನಾರಾಯಣ ಬರೆದ “ಓದುವವರೆಲ್ಲ ಓದುಗರೆಲ್ಲ-ಹಾಗಾದರೆ?” ಹೊಸ ಕೃತಿಯ ಒಂದು ಬರಹ ನಿಮ್ಮ ಓದಿಗೆ

read more
ಬೇರಿನಿಂದ ಬೆಳಕಿಗೆ: ಮಿತ್ರಾ ವೆಂಕಟ್ರಾಜ ಅನುವಾದಿತ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

ಬೇರಿನಿಂದ ಬೆಳಕಿಗೆ: ಮಿತ್ರಾ ವೆಂಕಟ್ರಾಜ ಅನುವಾದಿತ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

‘ಒಂದು ಪುರಾತನ ನೆಲದಲ್ಲಿʼ ಕೃತಿ ಭಾರತ ಮತ್ತು ಈಜಿಪ್ಟ್‌ನಂತಹ ಎರಡು ಪುರಾತನ ನೆಲದ ಸಂಸ್ಕೃತಿಯ ತಾಯಿ ಬೇರುಗಳ ಸಂಶೋಧನೆಯ ಅತ್ಯುನ್ನತ ದಾಖಲೆಯಾಗಿದೆ. ಕಳೆದ ಆರು ಶತಮಾನಗಳಿಂದ ವಿಸ್ಮೃತಿಯೆಡೆಗೆ ದಾಪುಗಾಲಿಡುತ್ತಿರುವ ಕಡಲ ತೀರದ ಕೆಲವು ಮುಖ್ಯ ವ್ಯಾಪಾರ ಕೇಂದ್ರಗಳಲ್ಲಿನ, ಜನಜೀವನದ, ಸಾಂಸ್ಕೃತಿಕ ಸಾಮಾಜಿಕ ಬದುಕಿನ ಚಿತ್ರಣವನ್ನು ಪಾತ್ರಗಳ ಮೂಲಕ ಕಟ್ಟಿಕೊಡುವ ಇಲ್ಲಿನ ಕ್ರಮ ವಿನೂತನವಾಗಿದೆ.
ಹಿರಿಯ ಕಾದಂಬರಿಕಾರ್ತಿ ಮಿತ್ರಾ ವೆಂಕಟರಾಜ್ ಅನುವಾದಿಸಿರುವ ‘ಒಂದು ಪುರಾತನ ನೆಲದಲ್ಲಿʼ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

read more
ವೈದ್ಯರ ಬದುಕಿನ ಪಡಿಪಾಟಲ ಕನ್ನಡಿ: ಕೊಟ್ರೇಶ್ ಅರಸೀಕೆರೆ ಬರಹ

ವೈದ್ಯರ ಬದುಕಿನ ಪಡಿಪಾಟಲ ಕನ್ನಡಿ: ಕೊಟ್ರೇಶ್ ಅರಸೀಕೆರೆ ಬರಹ

ಇಡೀ ಕಾದಂಬರಿ, ಒಬ್ಬ ಪ್ರಾಮಾಣಿಕ ವೈದ್ಯ ದೇಶ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿದ್ದಾಗಲೂ ಹೇಗೆ ಭ್ರಷ್ಟ ವ್ಯವಸ್ಥೆಗೆ ಬಲಿಯಾಗುತ್ತಾನೆ ಎನ್ನುವ ಕರಾಳ ಕಥನ. ಕೋವಿಡ್ ಕಾಲದಲ್ಲಿ ಸರ್ಕಾರದ ವ್ಯವಸ್ಥೆ ಮೇಲೆ ಆ ಸಮಯದಲ್ಲಿ ಚಾಲ್ತಿಯಲ್ಲಿದ್ದ ಶ್ರೀ ಸಾಮಾನ್ಯನ ಎಲ್ಲ ಆರೋಪಗಳೂ ಸತ್ಯವೆಂದು ಬಿಂಬಿಸುತ್ತದೆ. ವೈದ್ಯಕೀಯ ವ್ಯವಸ್ಥೆಯ ಭ್ರಷ್ಟತೆ ಹೇಗೆ ಲಕ್ಷಾಂತರ ಜನರ ಜೀವನ, ಜೀವದ ಜತೆ ಆಟವಾಡಿದ ಕರಾಳ ಕಥೆಯೇ ಈ ಕಾದಂಬರಿ.
ಡಾ. ಲಕ್ಷ್ಮಣ ವಿ.ಎ. ಕಾದಂಬರಿ ‘ಪಿ. ಎಚ್. ಸಿ ಕವಲುಗುಡ್ಡ’ ಕುರಿತು ಕೊಟ್ರೇಶ್ ಅರಸೀಕೆರೆ ಬರಹ

read more
ಆವರಣ ಭಂಗ ಮಾಡಿಸುವ “ಪರಿಸರದ ಒಡನಾಟ”: ನಾರಾಯಣ ಯಾಜಿ ಬರಹ

ಆವರಣ ಭಂಗ ಮಾಡಿಸುವ “ಪರಿಸರದ ಒಡನಾಟ”: ನಾರಾಯಣ ಯಾಜಿ ಬರಹ

ಯಾವುದೋ ಕಾಲದಲ್ಲಿ ‘ಮುದ್ದಳ’ ಎನ್ನುವ ಸಾಮಂತನಾಳಿದ ಈ ಊರಿನಲ್ಲಿ ಆತನ ನೆನಪು ಮರೆಯಾಗಿದೆ. ಆತನ ಅರಮನೆ ಇದೆ ಎನ್ನುವ ಜಾಗ ಅಸ್ಪಷ್ಟವಾಗಿ ಇದೆ. ಹಳ್ಳಿಗರ ಭಿತ್ತಿಯಲ್ಲಿ ಮಾಸಲು ತೊಡಗಿರುವ ಆ ಗುತ್ತುಗಳ ವಿಚಾರವನ್ನು ಹೇಳುತ್ತಲೇ, ತನ್ನ ಬಾಲ್ಯದ ಪರಿಸರದಲ್ಲಿ ಇದೀಗ ಮರೆಯಾಗುತ್ತಿರುವ ಹಳೆಯ ಕಾಡು, ಕರಡ ಹುಲ್ಲಿನ ಬೇಣ, ಒಳ್ಳೆ ಹಾವು, ವಿಷದ ಹಾವುಗಳೊಡನೆಯ ಬದುಕೆಲ್ಲವನ್ನೂ ಆಧುನಿಕ ಬದುಕು, ನಿಧಾನಕ್ಕೆ ಕಸಿಯತೊಡಗಿವೆ ಎನ್ನುವ ನೋವನ್ನು ಪರೋಕ್ಷವಾಗಿ ಲೇಖಕರು ತೋಡಿಕೊಳ್ಳುತ್ತಿದ್ದಾರೆ.
ಶಶಿಧರ ಹಾಲಾಡಿಯವರ “ಪರಿಸರದ ಒಡನಾಟ”ಕೃತಿಯ ಕುರಿತು ನಾರಾಯಣ ಯಾಜಿ ಬರಹ

read more
ನಿತ್ಯ ಜಂಜಡದ ಸಣ್ಣ ಪುಟ್ಟ ಸಂಗತಿಗಳಲ್ಲಿ ಕತೆಗಳ ಹುಡುಕಾಟ: ಎಚ್ ಆರ್ ರಮೇಶ್‌ ಬರಹ

ನಿತ್ಯ ಜಂಜಡದ ಸಣ್ಣ ಪುಟ್ಟ ಸಂಗತಿಗಳಲ್ಲಿ ಕತೆಗಳ ಹುಡುಕಾಟ: ಎಚ್ ಆರ್ ರಮೇಶ್‌ ಬರಹ

ಇಲ್ಲಿನ ಎಲ್ಲ ಕತೆಗಳ ಹಿಂದಿನ ಕಾಳಜಿ ಮನುಷ್ಯ ಎದುರಿಸುತ್ತಿರುವ ಬಿಕ್ಕಟ್ಟು, ಹಾಗೂ, ಮಾನಸಿಕವಾಗಿ ಉಸಿರುಗಟ್ಟಿಕೊಂಡು ಬಿದ್ದು ಒದ್ದಾಡುತ್ತಿರುವ ಇಕ್ಕಟ್ಟುಗಳಿಂದ ಪಾರಾಗಿ ಹಸನಾದ ಬದುಕನ್ನು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರ ಚಿತ್ರಣಗಳನ್ನು ಭಾಷೆಯಲ್ಲಿ ರೂಪಕಗಳಾಗಿ ಹಿಡಿದಿಡುವುದಾಗಿದೆ. ತಮ್ಮ ಮೊದಲ ಪ್ರಯತ್ನದಲ್ಲಿಯೇ ಶೃತಿ ಬಿ. ಆರ್ ಅವರು ತಮ್ಮೀ ಕತೆಗಳ ಮುಖೇನ ಹೊಸ ಸಾಧ್ಯತೆಗಳನ್ನು ನಿರೀಕ್ಷೆಗಳನ್ನು ಇಟ್ಟುಕೊಳ್ಳುವಂತೆ ಮಾಡಿದ್ದಾರೆ.
ಶೃತಿ ಬಿ.ಆರ್. ಕಥಾ ಸಂಕಲನ “ಎಲ್ಲೆಗಳ ದಾಟಿದವಳು” ಕುರಿತು ಎಚ್.ಆರ್.‌ ರಮೇಶ್‌ ಬರಹ

read more
ಭೂಮಾನುಭೂತಿಯ ಬರಹಗಳು: ನಾರಾಯಣ ಯಾಜಿ ಕೃತಿಯ ಕುರಿತ ಹರೀಶ್‌ ಕೇರ ಮುನ್ನುಡಿ

ಭೂಮಾನುಭೂತಿಯ ಬರಹಗಳು: ನಾರಾಯಣ ಯಾಜಿ ಕೃತಿಯ ಕುರಿತ ಹರೀಶ್‌ ಕೇರ ಮುನ್ನುಡಿ

ಈ ಬರಹಗಳು ಆಕಾಶ ಹಾಗೂ ಭೂಮಿಯ ನಡುವೆ ಸಲೀಸಾಗಿ ಯಾನ ಕೈಗೊಳ್ಳುತ್ತವೆ. ಪುರಾಣೇತಿಹಾಸಗಳ ಕ್ಲಾಸಿಕ್‌ ಸಾಹಿತ್ಯಗಳ ಆಕಾಶ ತತ್ವಗಳ ಜೊತೆಜೊತೆಗೇ ನಮ್ಮಂಥ ಸಾಮಾನ್ಯ ಮಾನವರ ನೆಲಕ್ಕಂಟಿದ ಬದುಕಿನ ಭೂಮಿ ತತ್ವವೂ ಹದವಾಗಿ ಬೆರೆತುಕೊಂಡಿವೆ. ಮಹಾತ್ಮ ಗಾಂಧಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಇರುವ ಲೇಖನಗಳು ಈ ಕೃತಿಯ ಪ್ರಮುಖ ಲೇಖನಗಳಲ್ಲಿ ಕೆಲವು. ಇವು ನಮ್ಮ ಐತಿಹಾಸಿಕ ನೆಲೆಗಟ್ಟಿನಲ್ಲಿ ಈ ಅದ್ವಿತೀಯ ಪುರುಷರ ಆದರ್ಶಗಳು ಕಾಣ್ಕೆಗಳು ಹೇಗಿದ್ದವು ಎಂಬುದರ ನಿಡುನೋಟವನ್ನು ನೀಡುತ್ತವೆ.
ನಾರಾಯಣ ಯಾಜಿ ಹೊಸ ಕೃತಿ “ಧವಳ ಧಾರಿಣಿ”ಗೆ ಹರೀಶ್‌ ಕೇರ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ