Advertisement

ಪ್ರವಾಸ

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

read more
ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ

ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ

ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ  ಇತಿಹಾಸವನ್ನೂ ಅರಿಯುವ ಕುತೂಹಲ  ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.

read more
ನೂರು ಕಲ್ಲುಗಳಲ್ಲಿ ಒಂದು ಮುತ್ತು ಹುಡುಕುವ ಬಿರ್ಜು ಮಹಾರಾಜ್

ನೂರು ಕಲ್ಲುಗಳಲ್ಲಿ ಒಂದು ಮುತ್ತು ಹುಡುಕುವ ಬಿರ್ಜು ಮಹಾರಾಜ್

ಸಿನೆಮಾ ರಂಗಕ್ಕೆ ಹೋಗಬೇಡ ಎಂದ ತಾಯಿಯ ಮಾತನ್ನು ಪಕ್ಕಕ್ಕಿಟ್ಟು ಮುಂಬೈಗೆ ಬಂದಾಗ ಜೇಬಿನಲ್ಲಿ ಕಿರುಗಾಸು ಇಲ್ಲದ ಬಿರ್ಜು ಮಹಾರಾಜ್ ಮಾಧುರಿ ದೀಕ್ಷಿತ್ ರಿಂದ ಹಿಡಿದು  ದೀಪಿಕಾಳವರೆಗೂ ನೂರಕ್ಕೂ ಹೆಚ್ಚು ಸಿನೆಮಾಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಆದರೂ ಪ್ರೀತಿ ಮಾಡುವುದು ಮಾತ್ರ ಕಮಲಹಾಸನ್‌ನನ್ನು. ವಿಶ್ವರೂಪಂ ಸಿನೆಮಾ ಸಮಯದಲ್ಲಿ ‘ಆತ ತರಬೇತಿ ಸಮಯದಲ್ಲಿ ನೃತ್ಯ ಮಾಡುತ್ತಿದ್ದನ್ನು ನೋಡಿ ಎಷ್ಟೋ ಬಾರಿ ನಾನೇ ನರ್ತಿಸುತ್ತಿದ್ದೇನೆ ಎನ್ನಿಸಿಬಿಡುತ್ತಿತ್ತು’ ಎನ್ನುವಾಗ ಬಿರ್ಜು ಅವರ ಉಸಿರಿನಲ್ಲಿ ಜೀವ ಆಡಿದಂತೆನಿಸಿತು.

read more
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ

ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ

ಸದಾ ಹೊಸ ನೋಟವನ್ನು ಕೊಡುವ ಪ್ರವಾಸವೆಂದರೆ ಎಲ್ಲರಿಗೂ ಇಷ್ಟ. ಬೆಟ್ಟಗಳನ್ನು ಏರುವುದು, ಹೊಸ ಜನರ ಭೇಟಿ ಮಾಡುವುದು,  ವಿವಿಧ ಪ್ರದೇಶಗಳ ಹಿನ್ನೆಲೆ ಅರಿಯುವುದೆಂದರೆ ಅಂಜಲಿ ರಾಮಣ್ಣ ಅವರಿಗಿಷ್ಟ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿಯಾಗಿ, ಮಹಿಳಾ ಹಕ್ಕುಗಳ ಬಗ್ಗೆ ನಿಖರವಾದ ನಿಲುವುಗಳನ್ನು ಹೇಳಬಲ್ಲ ಅವರು, ತಮ್ಮ ಸೂಕ್ಷ್ಮ ಒಳನೋಟಗಳನ್ನು ‘ಫ್ಯಾಮಿಲಿ ಕೋರ್ಟ್ ಕಲಿಕೆ’ ಎಂಬ ಶೀರ್ಷಿಕೆಯಡಿ ಮಂಡಿಸುವುದುಂಟು. 

read more
ಮಥುರಾ ನಗರಿಯಲ್ಲೊಂದು ಭಾವಯಾನ

ಮಥುರಾ ನಗರಿಯಲ್ಲೊಂದು ಭಾವಯಾನ

ವ್ರಜ ಪರಿಕ್ರಮದಲ್ಲಿ ದೀರ್ಘ ಮತ್ತು ಚುಟುಕಾದ ಎರಡು ರೀತಿಯ ಪರಿಕ್ರಮಗಳಿವೆ. ಚಿಕ್ಕಮಟ್ಟದ ಪರಿಕ್ರಮದಲ್ಲಿ ಮಥುರೆಯ ಮುಖ್ಯ ದೇಗುಲ ಮತ್ತು ಪುಣ್ಯಸ್ಥಾನಗಳಿಗೆ ಭೇಟಿ ನೀಡುವುದಷ್ಟೇ ಸೇರಿದೆ. ದೀರ್ಘ ಪರಿಕ್ರಮದಲ್ಲಿ ನಂದಗಾವ್ ಮತ್ತು ಬರ್ಸಾನಾಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುವುದು ಸೇರಿದೆ. ನಾವೆಲ್ಲ ಕೆಲವೇ ದಿನಗಳ ರಜೆಯಲ್ಲಿ ಮಥುರೆಯನ್ನು ಕ್ಷಿಪ್ರವಾಗಿ ನೋಡಿ ಬರುವವರ ಸಾಲಿಗೆ ಸೇರಿದವರು. ಮಥುರಾ ಯಾತ್ರೆಯ ಕುರಿತ ತಮ್ಮ ಅನುಭವಗಳನ್ನು ಪ್ರಿಯಾ ಭಟ್ ಕಲ್ಲಬ್ಬೆ ಅವರು ಇಲ್ಲಿ ದಾಖಲಿಸಿದ್ದಾರೆ. 

read more
ಅಚಲ ಸೇತು ಬರೆದ ‘ಕೀವೀ ನಾಡಿನ ಪ್ರವಾಸ ಕಥನ’

ಅಚಲ ಸೇತು ಬರೆದ ‘ಕೀವೀ ನಾಡಿನ ಪ್ರವಾಸ ಕಥನ’

ಮುಗಿಲು ಮುಟ್ಟುವ ಬಂಡೆಗಳಿಂದ ಧುಮ್ಮಿಕ್ಕುವ ಬಿಳಿಯ ಜಲರಾಶಿಯನ್ನು ನೋಡುತ್ತಾ ಟಾಸ್ಮನ್ ಸಮುದ್ರದವರೆಗೆ ನೌಕಾ ವಿಹಾರ ಮಾಡುತ್ತ ಸಾಗಬಹುದು. ಅಚ್ಚರಿಯ ಸಂಗತಿಯೆಂದರೆ ಖಾರಿಯ ಉಪ್ಪು ನೀರಿನ ಕೆಳ ಪದರದ ಮೇಲೆ ಸುಮಾರು ಹತ್ತು ಅಡಿಗಳಷ್ಟು ಸಿಹಿ ನೀರಿನ ಪದರ ಸದಾ ಕಾಲ ಶೇಖರಣೆಯಾಗಿರುತ್ತದೆ. ಮೇಲಿನ ಮಳೆ ಕಾಡುಗಳಿಂದ ರೆಂಬೆ ಕೊಂಬೆಗಳ ಸಾರವನ್ನು ಹೊತ್ತು ತರುವ ಕಲಗಚ್ಚಿನಂತಹ ಈ…”

read more
ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

read more
ಮಾಯದಂತಹ ಒಂದು ಮಧ್ಯಾಹ್ನದ ಮಳೆ

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

read more
ಉಕ್ಕಿನ ಮಹಿಳೆ ಹವ್ವಾ ತಾತ

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ